ಹರೆಯ ನಿಲ್ಲುವುದೇನು?
ತನಗೆ ತಾನೇ ಸಿಂಗರಿಸಿಕೊಳ್ಳುತಿಹ ಜಾಣೆ
- Read more about ಹರೆಯ ನಿಲ್ಲುವುದೇನು?
- Log in or register to post comments
ತನಗೆ ತಾನೇ ಸಿಂಗರಿಸಿಕೊಳ್ಳುತಿಹ ಜಾಣೆ
ನೀರಿನ ಪಾತ್ರೆಗಳಾಗಿ ಜನರ ಬದುಕು ಕಟ್ಟಿಕೊಟ್ಟ ಈ ಬಾವಿಗಳು ನೀರಿಲ್ಲದೇ ದಿನಗಳು, ತಿಂಗಳುಗಳು, ವರ್ಷಗಳು ಕಳೆದಂತೆ ಈ ಬಾವಿಯಲ್ಲೇ ವಿವಿಧ ಜಾತಿಯ ಗಿಡ ಗಂಟೆಗಳು ಬೆಳೆದು ಅಕ್ಷರಶಃ ಗೂಬೆಗಳ ವಾಸಸ್ಥಾನ ಗಳಾದವು. ನಾನು ನನ್ನ ತಮ್ಮ ಬಾಲ್ಯದ ದಿನಗಳಲ್ಲಿ ಗೂಬೆಗಳ ನೋಡಲೆಂದೇ ಈ ಪಾಳು ಬಾವಿಗಳಿಗೆ ಬೇಟಿಕೊಟ್ಟು ಅವುಗಳ ಬೆಕ್ಕಿನಂತಹ ಮುಖವನ್ನು ನೋಡುವುದೇ ನಮಗೆ ಸಂಭ್ರಮವೆನಿಸುತ್ತಿತ್ತು.
ಮೈಸೂರಿನ ಇತಿಹಾಸ ಪ್ರಸಿದ್ಧ ಜಂಬೂ ಸವಾರಿಯ ನೇತೃತ್ವ ವಹಿಸಿದ್ದ ಅರ್ಜುನ ಎಂಬ ಹೆಸರಿನ ಆನೆಯ ಬಗ್ಗೆ ಮರೆಯಲಾಗದ ನೆನಪಿನ ಪುಸ್ತಕವೊಂದನ್ನು ಬರೆದಿದ್ದಾರೆ ಐತಿಚಂಡ ರಮೇಶ್ ಉತ್ತಪ್ಪ. ಅರ್ಜುನ ಎಂಬ ಆನೆಯ ಬಗ್ಗೆ ಬರೆಯುತ್ತಾ ‘ನಿನ್ನ ಮರೆಯಲೆಂತು ನಾ’ ಎಂದು ರೋಧಿಸಿದ್ದಾರೆ. ಇದಕ್ಕೆ ಎ.ಪಿ. ನಾಗೇಶ್ ಅವರ ಮುನ್ನುಡಿ ಬರಹ ಹೀಗಿದೆ; “ಎಂತಹ ಕೃತಿ..! ಓದುತ್ತಾ ಹೋದಂತೆ ಭಾವುಕನಾದೆ.. ಕಣ್ಣೀರು ತುಂಬಿ ಬಂತು..
ಮತ್ತೆ ಬಂದಿದೆ ಬಸವಣ್ಣನವರ ಜನುಮದಿನದಾಚರಣೆಯ ಸಂಭ್ರಮ. ಆದರೆ ಈ ಬಾರಿ ಮಾತ್ರ ವಿಶೇಷ - ವಿಶಿಷ್ಟ ಎನಿಸುತ್ತದೆ. ಏಕೆಂದರೆ ಎಂಟು ಶತಮಾನಗಳ ನಂತರ ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಈ ನೆಲದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ.
ಇವತ್ತು ಅಂಕಗಳೆಲ್ಲವು ಸೇರಿಕೊಂಡು ಮುಂಜಾನೆ ಸೂರ್ಯ ಹುಟ್ಟುವ ಮೊದಲೇ ಸಭೆ ಸೇರಿದ್ದವು. ಸಭೆಗೊಂದು ಕಾರಣವೂ ಇತ್ತು. ಆಗಾಗ ನೆನಪಾಗುವ ನಾವು ಈ ದಿನ ಎಲ್ಲರಿಗೂ ತುಂಬಾ ಹತ್ತಿರವಾಗುತ್ತೇವೆ. ಕೆಲವರು ನಮ್ಮನ್ನ ಕಂಡು ಸಂಭ್ರಮ ಪಡುತ್ತಾರೆ, ಕೆಲವರು ಆಶ್ಚರ್ಯ ಪಟ್ಟರೆ, ಕೆಲವರು ನೋವು ಪಡ್ತಾರೆ. ನಾವು ಎಲ್ಲರಿಗೂ ಒಂದೇ ತೆರನಾಗಿರುವುದಿಲ್ಲ.
ವಿಶ್ವದ ಅತೀ ಎತ್ತರದ ಗ್ರ್ಯಾಂಡ್ ಸ್ಟೀಮ್ ಬೋಟ್ ಗೀಸರ್: ಗ್ರ
ನನಗೆ ಜೇನು ಕೀಳುತಿದ್ದುದರಿಂದ ಅನೇಕ ತೆರನಾದ ಜೀವಕ್ಕೆ ಅಪಾಯ ಇತ್ತು. ಜೇನುನೊಣಗಳು ಕಚ್ಚುವುದು, ಕಾಡುಹಂದಿಗಳು ತಿವಿಯುವುದು, ಹಾಗೂ ಪೊದೆಗಳಲ್ಲಿ ಹಾವುಗಳು..! ಮತ್ತು ಮರಹತ್ತಿ ಜೇನು ತೆಗೆಯುವಾಗ ಜೇನಿನಧಾಳಿಗೆ ಬಂದೊದಗಬಹುದಾದ ಅಪಾಯದ ಸಾದ್ಯತೆ, ಇಳಿಯಲು ಹತ್ತಲು ಮೆಟ್ಟಿಲು ಇಲ್ಲದ ಪಾಳು ಬಾವಿಗಳಲ್ಲಿ ಇಳಿಯುತ್ತಿದ್ದು.. ಹೀಗೆ ಈ ಮೇಲೆ ತಿಳಿಸಿದವುಗಳಿಂದ ಅಪಾಯ ಇದ್ದೇ ಇತ್ತು.
ಗುಡಿಯ ಸೇರದ ಹೂವು
ಬಸವಣ್ಣ ಈ ಜಗತ್ತು ಕಂಡ ಒಬ್ಬ ಶ್ರೇಷ್ಠ ಮೌಲ್ಯಾಧಾರಿತ ದಾರ್ಶನಿಕ, ಮದ್ಯಯುಗದ ಸಾಮಾಜಿಕ ಕ್ರಾಂತಿಯ ಹರಿಕಾರ. ಭಕ್ತಿ ಮತ್ತು ಅರಿವುಗಳನ್ನು ಪ್ರತಿಪಾದಿಸಿ ಜನಸಾಮಾನ್ಯರ ಭಾಷೆಯಲ್ಲೇ ಪ್ರಬಲ ಮತ್ತು ವೈಚಾರಿಕವಾಗಿರುವ ತತ್ವಗಳನ್ನು ಬಿತ್ತಿದ ಕಾರುಣಿಕ ಮಹಾಪುರುಷ.
ಮಾನ್ಯ ಡಿ.ವಿ. ಗುಂಡಪ್ಪನವರು ನಮಗಿತ್ತಿರುವ ಬೆಲೆಕಟ್ಟಲಾಗದ ಮುಕ್ತಕಗಳ ಎರಡು ಸಂಕಲನಗಳು: “ಮಂಕುತಿಮ್ಮನ ಕಗ್ಗ” ಮತ್ತು “ಮರುಳ ಮುನಿಯನ ಕಗ್ಗ". ಎರಡನೆಯದು ಅವರ ನಿಧನಾನಂತರ ಅವರ ಆಪ್ತರ ಮುತುವರ್ಜಿಯಿಂದಾಗಿ 1984ರಲ್ಲಿ ಪ್ರಕಟವಾಯಿತು. ಇದರಲ್ಲಿಯೂ ಅವರ ಅಗಾಧ ಅಧ್ಯಯನ ಹಾಗೂ ಜೀವನಾನುಭವ ಭಟ್ಟಿಯಿಳಿಸಿ, ಪ್ರಚಂಡ ಪ್ರತಿಭೆಯ ಬಲದಿಂದ ರಚಿಸಿದ ಮುಕ್ತಕಗಳೇ ತುಂಬಿವೆ. ಇಲ್ಲಿನ 824 ಮುಕ್ತಕಗಳಲ್ಲಿ ನಮ್ಮ ಬದುಕಿನ ಬಗ್ಗೆ ಹೊಸ ಚಿಂತನೆಗಳನ್ನೂ ಒಳನೋಟಗಳನ್ನೂ ನೀಡುವ ಕೆಲವು ಮುಕ್ತಕಗಳನ್ನು ಪರಶೀಲಿಸೋಣ.
ಬೇವು ಬೆಲ್ಲಗಳುಂಡೆ ದಿನದಿನದ ನಮ್ಮೂಟ / ಪೂರ್ವಕರ್ಮದ ಫಲಿತಶೇಷದಿಂದ ಕಹಿ //
ದೈವಪ್ರಸಾದದಿಂದ ಸಿಹಿಯೀ ದ್ವಂದ್ವದಲಿ / ಆವೇಶವೇತಕೋ - ಮರುಳ ಮುನಿಯ //