'ಮುದ್ರಾ ಪ್ರವೇಶ' ಎಂಬ ಕೃತಿಯು ಯೋಗಮುದ್ರಾ ವಿಜ್ಞಾನವನ್ನು, ಮುದ್ರೆಗಳನ್ನು ಅಭ್ಯಸಿಸುವ ಕ್ರಮವನ್ನು ಬಣ್ಣಿಸಿರುವ ಕೃತಿ. ಸಾಮಾನ್ಯ ಓದುಗನಿಗೂ ಅರ್ಥವಾಗುವ ರೀತಿಯಲ್ಲಿ ಬರೆದಿದ್ದಾರೆ ಕೆ ರಂಗರಾಜ ಅಯ್ಯಂಗಾರ್ ಇವರು. ಈ ಕೃತಿಯಲ್ಲಿ ಅಧ್ಯಾತ್ಮಿಕ ಮುದ್ರೆಗಳು, ಶಾಸ್ತ್ರೀಯ ಹಾಗೂ ಪೂಜಾ ಮುದ್ರೆಗಳು, ಶ್ರೀ ಗಾಯತ್ರೀ ಮುದ್ರೆಗಳು, ಚೈತನ್ಯದಾಯೀ ಮುದ್ರೆಗಳು, ದೇವತಾ ಮುದ್ರೆಗಳು, ಚಿಕಿತ್ಸಾ ಮುದ್ರೆಗಳು, ಹಠಯೋಗ ಮುದ್ರೆಗಳು, ನರ್ತನ ಮುದ್ರೆಗಳು, ತಪ್ತ ಮುದ್ರೆಗಳು ಇತ್ಯಾದಿಗಳ ಬಗ್ಗೆ ಸವಿವರ ಹಾಗೂ ಸಚಿತ್ರವಾದ ಮಾಹಿತಿಯನ್ನು ಈ ಕೃತಿಯಲ್ಲಿ ನೀಡಲಾಗಿದೆ.
ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಇದರ ಉಪಕುಲಪತಿಗಳಾದ ಡಾ. ಎಚ್ ಆರ್ ನಾಗೇಂದ್ರ ಇವರು ತಮ್ಮ ಶುಭ…