ಪುಸ್ತಕ ಸಂಪದ

  • ಉತ್ತರಕನ್ನಡದ ಹೆಸರುವಾಸಿ ಪರಿಸರ ಬರಹಗಾರ ಶಿವಾನಂದ ಕಳವೆ ಅವರ ಅಪರೂಪದ ಪುಸ್ತಕವಿದು. ಕಾಲುದಾರಿಯಲ್ಲಿ ಅಡ್ಡಾಡುವ, ಬೆಟ್ಟಗುಡ್ಡಗಳನ್ನು ಏರಿಳಿಯುವ ಶಿವಾನಂದ ಕಳವೆ ಪ್ರಾಣಿ-ಪಕ್ಷಿ-ಕೀಟಗಳಿಗೆ ದನಿ ಕೊಡುತ್ತಾರೆ.  ಗದ್ದೆತೋಟಗಳ ನಡುವೆ ನಡೆಯುತ್ತಾ, ಬೈಕ್ ಓಡಿಸುತ್ತಾ ಉತ್ತರಕನ್ನಡದ ಮೂಲೆಮೂಲೆಯ ಹಳ್ಳಿ ತಲಪುವ ಅವರು ಗುಡಿಸಲುಗಳ ಒಳಗಿರೋ ಮಾತುಗಳಿಗೆ ಧ್ವನಿಯಾಗುತ್ತಾರೆ. ಎಲ್ಲ ದನಿಗಳಿಗೂ ಅಕ್ಷರದ ರೂಪ ನೀಡಿ, ನಮ್ಮೆದುರು ಅದ್ಭುತ ಚಿತ್ತಾರ ಹರಡುತ್ತಾರೆ.

    “ಸುದ್ದಿ ಕಟ್ಟೆಗೆ ಹೆಜ್ಜೆ” ಎಂಬ ಮುನ್ನುಡಿಯಲ್ಲಿ ನಾಡಿನ ಪತ್ರಿಕೆಗಳಲ್ಲಿ ಪ್ರಕಟವಾದ ಹಳ್ಳಿಗಾಡಿನ ತನ್ನ ಆಯ್ದ ನುಡಿಚಿತ್ರಗಳ  ಹಿನ್ನೆಲೆಯನ್ನು ಶಿವಾನಂದ ಕಳವೆ ಬಿಡಿಸಿಟ್ಟ ಪರಿ ಹೀಗೆ: "ಕಾಡುಗುಡ್ಡ ಕಾಲುದಾರಿಯಲ್ಲಿ ನಡೆದು ಹೆದ್ದಾರಿಯ ಸುದ್ದಿ ಕಟ್ಟೆ ಸೇರಬೇಕಿತ್ತು.…

  • ವೃತ್ತಿಯಲ್ಲಿ ಆಯುರ್ವೇದ ವೈದ್ಯರಾಗಿರುವ ಡಾ.ಶಶಿಕಿರಣ್ ಶೆಟ್ಟಿಯವರು ಬರೆದ ಪುಟ್ಟ ಪುಟ್ಟ ಕತೆಗಳ ಸಂಗ್ರಹವೇ “ಬದುಕ ಬದಲಿಸುವ ಕತೆಗಳು". ಶಶಿಕಿರಣ್ ಇವರು ಈ ಪುಸ್ತಕದಲ್ಲಿ ತಮ್ಮ ವೃತ್ತಿ ಜೀವನದಲ್ಲಿ ಹಾದು ಹೋದ, ಸಮಾಜದಲ್ಲಿ ನಡೆಯುತ್ತಿರುವ ಮತ್ತು ತಾವು ವಿವಿದೆಡೆಗಳಿಂದ ಕೇಳಿದ ವಿಷಯಗಳನ್ನು ಕತೆಯ ರೂಪದಲ್ಲಿ ಕಟ್ಟಿಕೊಟ್ಟಿದ್ದಾರೆ. ಆ ಕತೆಗಳಿಗೆ ಪುಸ್ತಕವೆಂಬ ಚೌಕಟ್ಟು ಹಾಕಿ ಓದುಗರಿಗೆ ಉಣಬಡಿಸಲು ಹೊರಟಿದ್ದಾರೆ. ಇಲ್ಲಿರುವ ಎಲ್ಲಾ ಕತೆಗಳು ನಮ್ಮ ಸುತ್ತಮುತ್ತಲು ನಡೆಯುವಂಥದ್ದೇ. ಈ ಕಾರಣದಿಂದಲೇ ಕತೆಗಳನ್ನು ಓದುತ್ತಾ ಓದುತ್ತಾ ಅವುಗಳು ನಮಗೆ ಆಪ್ತವಾಗುತ್ತಾ ಹೋಗುತ್ತವೆ. 

    ಲೇಖಕರಾದ ಡಾ.ಶಶಿಕಿರಣ್ ಶೆಟ್ಟಿಯವರ ಬಗ್ಗೆ ಬೆನ್ನುಡಿಯಲ್ಲಿ ಪಿ.ವಿ.ಪ್ರದೀಪ್ ಕುಮಾರ್…

  • ಐತಿಹಾಸಿಕ ಕಾದಂಬರಿಗಳನ್ನು ಬರೆಯುವುದು ಒಂದು ಸಾಹಸದ ಕಥೆ. ಏಕೆಂದರೆ ಐತಿಹಾಸಿಕ ಕಾದಂಬರಿಗಳನ್ನು ಬರೆಯಲು ಹೊರಟಾಗ ನೀವು ನಿಮ್ಮ ಮನದಲ್ಲಿ ಮೂಡಿದ ಕಲ್ಪನಾ ಲಹರಿಗಳನ್ನೆಲ್ಲಾ ಅದರಲ್ಲಿ ಅಳವಡಿಸುವಂತಿಲ್ಲ. ಕಥೆಗೆ ಪೂರಕ ಎಂದು ಅನಗತ್ಯ ವಿಷಯಗಳನ್ನು ತುರುಕುವಂತಿಲ್ಲ. ಇಂತಹ ಕಾದಂಬರಿಗಳನ್ನು ಬರೆಯಲು ತಾಳ್ಮೆ, ತಿರುಗಾಟದ ಹುಚ್ಚು, ಅಧ್ಯಯನ ಪ್ರವೃತ್ತಿ ಎಲ್ಲವೂ ಅತ್ಯಂತ ಅಗತ್ಯ. ಇಂತಹ ಎಲ್ಲಾ ಗುಣಗಳನ್ನು ತುಂಬಿಕೊಂಡಿರುವ ಕನ್ನಡ ಅಪರೂಪದ ಕಾದಂಬರಿಕಾರ ಸಂತೋಷಕುಮಾರ ಮೆಹೆಂದಳೆ ಎಂದರೆ ತಪ್ಪಾಗಲಾರದು. ಏಕೆಂದರೆ ಇವರು ಈ ಹಿಂದೆ ಬರೆದಿರುವ ಕೆಲವು ಕಾದಂಬರಿಗಳನ್ನು ಓದಿದಾಗ ಆ ವಸ್ತು ವಿಷಯಗಳಲ್ಲಿ ಕೈಗೊಂಡ ಆಳವಾದ ಅಧ್ಯಯನದ ವಿಚಾರಗಳು ನಮ್ಮ ಅನುಭವಕ್ಕೆ ಬರುತ್ತದೆ.

    ಅದು…

  • ಕನ್ನಡದ ಸುಪ್ರಸಿದ್ಧ ಲೇಖಕ ಡಾ. ಸಿ.ಆರ್. ಚಂದ್ರಶೇಖರ್ ಬರೆದ ಪುಸ್ತಕವಿದು. ಅವರು ಕನ್ನಡ ಮತ್ತು ಇಂಗ್ಲಿಷಿನಲ್ಲಿ 110ಕ್ಕಿಂತ ಅಧಿಕ ಪುಸ್ತಕಗಳನ್ನು ಬರೆದವರು. ಇದರಲ್ಲಿರುವ ಸೂತ್ರಗಳನ್ನು ಅನುಸರಿಸಿ ಆರೋಗ್ಯವಂತ ವ್ಯಕ್ತಿಗಳಾಗುವುದು ನಮ್ಮ ಕೈಯಲ್ಲೇ ಇದೆ.

    ಈ ಪುಸ್ತಕದ ಮುನ್ನುಡಿಯಲ್ಲಿ ಆರೋಗ್ಯವಂತ ವ್ಯಕ್ತಿಯ ಲಕ್ಷಣಗಳನ್ನು ಅವರು ಹೀಗೆಂದು ತಿಳಿಸಿದ್ದಾರೆ: “ಒಬ್ಬ ವ್ಯಕ್ತಿ ಆರೋಗ್ಯವಂತನಾದ, ಉಪಯುಕ್ತ ಹಾಗೂ ಯಶಸ್ವೀ ವ್ಯಕ್ತಿ ಎನಿಸಿಕೊಳ್ಳಬೇಕಾದರೆ, ಬರಿಯ ದೇಹ ಗಟ್ಟಿ ಮುಟ್ಟಾಗಿದ್ದರೆ ಸಾಲದು. ಮನಸ್ಸೂ ಕೂಡ ಸದೃಢವಾಗಿ ಆರೋಗ್ಯಕರವಾಗಿರಬೇಕು. ಆರೋಗ್ಯಕರ ಮನಸ್ಸಿನ ಲಕ್ಷಣಗಳಿವು: ಸರಾಗವಾಗಿ, ಸುಸಂಸಬದ್ಧವಾಗಿ ಆಲೋಚಿಸುವುದು, ಸಮಸ್ಯೆಗಳನ್ನು ವಿಶ್ಲೇಷಿಸಿ ಪರಿಹಾರವನ್ನು ಕಂಡು ಹಿಡಿಯಲು ಯತ್ನಿಸುವುದು, ಪಂಚೇಂದ್ರಿಯಗಳ ಮೂಲಕ…

  • “ಹೂದೋಟದಲ್ಲಿ ದುರ್ದೈವಿ ಸಂಗ’ ಕವಿ ಸಂಗಪ್ಪ ನಾಗಲಾಪುರ ಅವರ ಕವನ ಸಂಕಲನ. ಈ ಪುಸ್ತಕದ ವಿಶೇಷತೆ ಎಂದರೆ ಸುಮಾರು ೫೦ ವರ್ಷಗಳ ಹಿಂದೆ ಬರೆದ ಕವನಗಳನ್ನು ಮಸ್ಕಿಯ ಅಡ್ಲಿಗಿ ಪ್ರಕಾಶನ ೨೦೨೩ ರಲ್ಲಿ ಪ್ರಕಟಿಸಿದೆ. ಈ ಕವನ ಸಂಕಲನದಲ್ಲಿ ೭೨ ಕವಿತೆಗಳಿವೆ. ಚಿಕ್ಕ ಚಿಕ್ಕ ಕವಿತೆಗಳು ಹಿಡಿದು ದೀರ್ಘ ಕವಿತೆಗಳು ಇವೆ.

    ಕವಿ ಸಂಗಪ್ಪ ನಾಗಲಾಪುರ ಅವರು ತಮ್ಮ ಯೌವನ ಕಾಲದಲ್ಲಿ ಬರೆದ ಕವಿತೆಗಳು. ಕವಿ ನಾಗಲಾಪುರ ಅವರ ಬದುಕಿನ ಸಿಹಿ ಕಹಿ ದುಃಖ ನೋವು ನಿರಾಸೆ ಪ್ರೇಮ ಸರಸ ವಿರಸ ವಿರಹ ಈ ರೀತಿಯ ಅನೇಕ ಮನೋಭಿತ್ತಿಯ ಸಂಗತಿಗಳನ್ನ ಅವರ ಕವಿ ಮನಸ್ಸು ಕಾವ್ಯದಲ್ಲಿ ಬೆಳದಿಂಗಳಂತೆ ಚೆಲ್ಲಿದೆ ಎಂದಿದ್ದಾರೆ. ಈ ಸಂಕಲನಕ್ಕೆ ಮುನ್ನುಡಿ ಬರೆದಿದ್ದಾರೆ ಲೇಖಕರಾದ ಡಾ. ಮಹಾಂತೇಶ ಪಾಟೀಲ. ಇವರು…

  • ಉದಯೋನ್ಮುಖ ಕಾದಂಬರಿಗಾರ್ತಿ ರಂಜನೀ ಕೀರ್ತಿ ಅವರ ಸಂಗೀತಾತ್ಮಕ ಥ್ರಿಲ್ಲರ್ ಕಾದಂಬರಿ ‘ಪಸಾ’ ಇತ್ತೀಚೆಗೆ ಬಿಡುಗಡೆಯಾಗಿದೆ. ಕಾದಂಬರಿಯು ಅತ್ಯಂತ ರೋಚಕವಾಗಿ ಸಾಗುತ್ತಾ, ಎಲ್ಲಿಯೂ ಬೋರ್ ಹೊಡೆಸದೇ ಮುಂದುವರಿಯುತ್ತದೆ. ಈ ಕಾದಂಬರಿಯ ಕುರಿತಾಗಿ ನಾಡಿನ ಹಿರಿಯ ಕವಿ ಎಚ್ ಎಸ್ ವೆಂಕಟೇಶಮೂರ್ತಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಮತ್ತು ಈ ಕೃತಿಗೆ ಬೆನ್ನುಡಿಯನ್ನು ಬರೆದು ಲೇಖಕಿಯ ಬೆನ್ನು ತಟ್ಟಿದ್ದಾರೆ. ಅವರು ಬೆನ್ನುಡಿಲ್ಲಿ ಬರೆದ ವಾಕ್ಯಗಳು ನಿಮ್ಮ ಓದಿಗಾಗಿ…

    ‘ಪಸಾ' ರಂಜನೀ ಕೀರ್ತಿ ಅವರ ರೋಚಕ ಕಿರು ಕಾದಂಬರಿ. ಕಥನದ ವೇಗ ಮತ್ತು ಅನಿರೀಕ್ಷಿತ ತಿರುವುಗಳು ಈ ಕೃತಿಯ ಓದನ್ನು ಒಂದು ತ್ರಿಲಿಂಗ್ ಅನುಭವವಾಗಿಸುತ್ತವೆ. ಪ್ರಖ್ಯಾತ ಶಾಸ್ತ್ರೀಯ ಸಂಗೀತ ವಿದ್ವಾಂಸ…

  • ಪ್ಲಾಸ್ಟಿಕ್ ಎಂಬ ವಸ್ತು ನಮ್ಮ ಪರಿಸರವನ್ನು ಪೆಡಂಭೂತದಂತೆ ಕಬಳಿಸುತ್ತಾ ಹೋಗುತ್ತಿದೆ. ಮಣ್ಣಿನಲ್ಲಿ, ನೀರಿನಲ್ಲಿ ಕರಗದ ಈ ಪ್ಲಾಸ್ಟಿಕ್ ನಮ್ಮ ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಮಾರಕವಾಗುವ ಎಲ್ಲಾ ಲಕ್ಷಣಗಳನ್ನು ತೋರಿಸುತ್ತಿದೆ. ಈ ಬಗ್ಗೆ ಹಲವಾರು ಕೃತಿಗಳು ಹೊರಬಂದಿದ್ದರೂ ಪ್ಲಾಸ್ಟಿಕ್ ಮಾಡುವ ಹಾನಿಯ ಬಗ್ಗೆ ಹೇಳುವುದು ಇನ್ನೂ ಉಳಿದಿದೆ. ಈ ಕೃತಿಯಲ್ಲಿ ಪ್ಲಾಸ್ಟಿಕ್ ಕಸವನ್ನು ಹೆಕ್ಕುವವರ ಬಗ್ಗೆ ಲೇಖಕಿ ಎಚ್ ಎಸ್ ಅನುಪಮಾ ಅವರು ಮಾಹಿತಿ ನೀಡುತ್ತಾ ಹೋಗಿದ್ದಾರೆ. ಅವರು ಈ ಕೃತಿಯ ಬಗ್ಗೆ ವ್ಯಕ್ತ ಪಡಿಸಿದ ಭಾವಗಳ ಆಯ್ದ ಭಾಗ ಇಲ್ಲಿದೆ. ಓದಿ…

    “ನಾವೇ ಸೃಷ್ಟಿಸಿದ ಕಸದ ಬಗೆಗೆ ನಮಗೆ ಎಷ್ಟು ಅಸಡ್ಡೆಯೆಂದರೆ ಅದನ್ನು ಮುಟ್ಟಲೂ ಅಸಹ್ಯ. ಕಸ ಎತ್ತಲೆಂದೇ ಒಂದು ಜಾತಿಯನ್ನು…

  • ಸದಾಶಿವ ಸೊರಟೂರು ಅವರ ನೂತನ ಕವನ ಸಂಕಲನ “ನಿನ್ನ ಬೆರಳು ತಾಕಿ" ಬಿಡುಗಡೆಯಾಗಿದೆ. ಭರವಸೆಯ ಕವಿಯಾಗಿರುವ ಸದಾಶಿವ ಸೊರಟೂರು ಅವರ ಈ ೧೧೮ ಪುಟಗಳ ಪುಟ್ಟ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಲಕ್ಸ್ಮಣ ವಿ ಎ. ಇವರು ತಮ್ಮ ಅನಿಸಿಕೆಯನ್ನು ವ್ಯಕ್ತ ಪಡಿಸುತ್ತಾ...‘“ನಿನ್ನ ಬೆರಳು ತಾಕಿ' ಸದಾಶಿವ ಸೊರಟೂರರ ಪ್ರೇಮ ಕವನ ಸಂಕಲನ. ಸೃಷ್ಟಿಯ ಆದಿಯಿಂದಾಗಿ ಇಲ್ಲಿಯ ತನಕ ಭಾಷೆಯ ಹಂಗಿಲ್ಲದೆ ಸಂವಹನ ಸಾಧ್ಯವಾಗಿದ್ದು ಈ ಪ್ರೇಮಕ್ಕೆ ಮಾತ್ರ. ಪ್ರೇಮ ಸರಳವೆಂದುಕೊಂಡಷ್ಟೂ ಜಟಿಲ. ಕ್ಲಿಷ್ಟಕರ ವೆಂದುಕೊಂಡಷ್ಟೂ ಸರಳ. ಇಲ್ಲಿ ಪ್ರೀತಿಯನ್ನು ಅರ್ಥಮಾಡಿಕೊಳ್ಳಲು ಹೊರಡುವುದೆಂದರೆ ಹುಚ್ಚು ಕಡಲ ಹಕ್ಕಿ ಕಡಲಿನ ಆಗಾಧತೆಯನ್ನು ಅಳೆಯಲು ಹೊರಟಂತೆ. ಕವಿತೆ ಹುಟ್ಟುವ ಮೊದಲೇ ಪ್ರೀತಿ ಇತ್ತೋ ಅಥವ ಪ್ರೀತಿ ಹುಟ್ಟವ ಮೊದಲೇ…

  • ಡಾ. ಮೀನಗುಂಡಿ ಸುಬ್ರಹ್ಮಣ್ಯ ಅವರ ಜನಪ್ರಿಯ ಪುಸ್ತಕ “ಈ ವರ್ತನೆಗಳು ನಿಮ್ಮಲ್ಲಿ ಎಷ್ಟಿವೆ?” ಅದರ 2ನೇ ಭಾಗ ಈ ಪುಸ್ತಕ. ಇದರಲ್ಲಿವೆ ಒಂಭತ್ತು ವೃತ್ತಾಂತಗಳು ಮತ್ತು ಎರಡು ಲೇಖನಗಳು: “ವಿಪಶ್ಯನ ಧ್ಯಾನ ಶಿಬಿರ - ಒಂದು ಅನುಭವ” ಮತ್ತು “ವಿಜ್ನಾನಕ್ಕೆ ಅಪಚಾರ.”

    ಹಲವರು ಮಾನಸಿಕ ಸಮಸ್ಯೆಯಿಂದ ಸಂಕಟ ಪಡುತ್ತಾ ಇರುತ್ತಾರೆ - ಒಂದೆರಡಲ್ಲ, ಹಲವಾರು ದಶಕಗಳ ಕಾಲ. ಇಲ್ಲಿನ ವೃತ್ತಾಂತಗಳನ್ನು ಓದಿದಾಗ ಅವರು ಎಷ್ಟು ಸುಲಭವಾಗಿ ತಮ್ಮ ಸಂಕಟ ಹೋಗಲಾಡಿಸಿಕೊಳ್ಳಬಹುದು ಎಂದು ಸ್ಪಷ್ಟವಾಗುತ್ತದೆ. ಅದಕ್ಕಾಗಿ, ನಮಗೆ ಹೊಟ್ಟೆನೋವು ಅಥವಾ ತಲೆನೋವು ಬಂದಾಗ ನಾವು ಡಾಕ್ಟರ್ ಬಳಿ ಹೋಗಿ ಚಿಕಿತ್ಸೆ ಪಡೆದು ಸಂಕಟದಿಂದ ಮುಕ್ತರಾಗುವಂತೆಯೇ ಮಾನಸಿಕ ಸಮಸ್ಯೆ ಇದ್ದಾಗಲೂ ಅದರಿಂದ ಮುಕ್ತರಾಗಲು ನಾವು ಸೈಕೊಥೆರಪಿಸ್ಟ್ ಬಳಿ ಹೋಗಿ ಚಿಕಿತ್ಸೆ ಪಡೆಯಬೇಕು…

  • ಯಾಕೂಬ್ ಎಸ್ ಕೊಯ್ಯೂರು ಅವರು ವೃತ್ತಿಯಲ್ಲಿ ಪ್ರೌಢ ಶಾಲೆಯಲ್ಲಿ ಗಣಿತ ವಿಷಯದ ಶಿಕ್ಷಕರು. ಮಕ್ಕಳಿಗೆ ಗಣಿತ ಯಾವಾಗಲೂ ಕಬ್ಬಿಣದ ಕಡಲೆಯೇ. ಇವರು ಕಾರ್ಯ ನಿರ್ವಹಿಸುವ ಸರಕಾರಿ ಪ್ರೌಢ ಶಾಲೆ ನಡ, ಬೆಳ್ತಂಗಡಿಯಲ್ಲಿ ಗಣಿತ ಪ್ರಯೋಗ ಶಾಲೆಯನ್ನು ನಿರ್ಮಿಸಿ, ರಾಜ್ಯದಲ್ಲೇ ಸಂಚಲನ ಮೂಡಿಸಿದ್ದಾರೆ. ಇವರ ಈ ಸೃಜನಶೀಲ ವ್ಯಕ್ತಿತ್ವವನ್ನು ಗುರುತಿಸಿ ಕೇಂದ್ರ ಸರಕಾರವು ಯಾಕೂಬ್ ಅವರಿಗೆ ೨೦೨೦ರಲ್ಲಿ ದೇಶದ ಅತ್ಯುನ್ನತ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

    ಯಾಕೂಬ್ ಅವರು ಒಬ್ಬ ಉತ್ತಮ ಶಿಕ್ಷಕರು ಮಾತ್ರವಲ್ಲ, ಪ್ರತಿಭಾವಂತ ಬರಹಗಾರರೂ ಹೌದು. ಇವರು ಬರೆದ ಲೇಖನಗಳನ್ನು ಸಂಗ್ರಹಿಸಿ “ಮೌಲ್ಯಗಳ ಹುಡುಕಾಟದಲ್ಲಿ" ಎಂಬ ಕೃತಿಯನ್ನು ಹೊರ ತಂದಿದ್ದಾರೆ. ಈ ಪುಸ್ತಕದಲ್ಲಿ ಯಾಕೂಬ್…