ಭಾಷಾ ಶುದ್ಧಿಯ ನಟ್ಟು ಬೋಲ್ಟುಗಳು….
ಕನ್ನಡಕ್ಕೆ ಸಂಬಂಧಿಸಿದ ಚರ್ಚೆಗಳ ಅತಿ ದೊಡ್ಡ ಮಿತಿಯೆಂದರೆ ಅದು ಕೇವಲ ‘ಭಾಷಾ ಶುದ್ದಿ’ಯ ಇಲ್ಲವೇ ಕನ್ನಡ ಸಾಹಿತ್ಯದ ಕುರಿತ ಚರ್ಚೆಯಾಗಿಬಿಡುವುದು. ಇನ್ನೂ ಸ್ವಲ್ಪ ಸ್ಪಷ್ಟವಾಗಿ ಹೇಳಬೇಕೆಂದರೆ ಕನ್ನಡ ಭಾಷೆಯ ಒಂದು ಬಗೆಯ ಬಳಕೆಗಷ್ಟೇ ಈ ಚರ್ಚೆಗಳು ಸೀಮಿತವಾಗುವುದು. ಈ ಚೌಕಟ್ಟನ್ನು ಮೀರಿದವರು ಚರ್ಚೆಯಿಂದ ಹೊರಗುಳಿಯುತ್ತಾರೆ ಇಲ್ಲವೇ ‘ಮಡಿವಂತ’ರ ತೀವ್ರ ದಾಳಿಗೆ ಗುರಿಯಾಗುತ್ತಾರೆ. ಡಿ.ಎನ್.ಶಂಕರಭಟ್ಟರ ‘ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ’ ವಿದ್ವತ್ ವಲಯದಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿತು. ಈ ಚರ್ಚೆಗಳನ್ನು ಕನ್ನಡದ ಬಳಕೆಯ ಮಟ್ಟಕ್ಕೆ ತರುವಲ್ಲಿ ಎಲ್ಲರೂ ಸೋತರು. ಕನ್ನಡ ಬಳಸುವ ಸಾಮಾನ್ಯರನ್ನು ಬಿಟ್ಟು ಬಿಡೋಣ. ಕನ್ನಡ ಸ್ನಾತಕೋತ್ತರ ತರಗತಿಗಳಲ್ಲೂ ‘ಕನ್ನಡದ್ದೇ ವ್ಯಾಕರಣ’ ಪರಿಕಲ್ಪನೆಯ ಕುರಿತ ಚರ್ಚೆಗಳು ನಡೆಯುವುದಿಲ್ಲ. ಅಂದರೆ ನಮ್ಮ ಮಟ್ಟಿಗೆ ಕನ್ನಡದ ಕುರಿತ ಚರ್ಚೆ ಎಂಬುದು ಜೀವಂತ, ಚಲನಶೀಲ ಸಂಸ್ಕೃತಿಯೊಂದರ ಕುರಿತ ಚರ್ಚೆಯಲ್ಲ. ‘ಒಂದಾನೊಂದು ಕಾಲದಲ್ಲಿ ಏಸೊಂದು ಮುದವಿತ್ತ’ ಎಂಬ ನಾಸ್ಟಾಲ್ಜಿಯಾದಲ್ಲಿ ಮುಳುಗುವ ಚರ್ಚೆಗಳು. ಈಗ ಓ.ಎಲ್.ಎನ್. ಅವರು ಆರಂಭಿಸಿರುವ ಭಾಷಾ ಶುದ್ಧಿಗೆ ಸಂಬಂಧಿಸಿದ ಚರ್ಚೆಗೆ ಬರುತ್ತಿರುವ ಪ್ರತಿಕ್ರಿಯೆಗಳಲ್ಲಿ ಕೆಲವು ಭಾಷೆಯ ಕುರಿತ ಸೀಮಿತ ಗ್ರಹಿಕೆಯನ್ನು ಬಹಳ ಸ್ಪಷ್ಟವಾಗಿ ವ್ಯಕ್ತ ಪಡಿಸುತ್ತಿವೆ.
- Read more about ಭಾಷಾ ಶುದ್ಧಿಯ ನಟ್ಟು ಬೋಲ್ಟುಗಳು….
- 1 comment
- Log in or register to post comments