ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಭಾಷಾ ಶುದ್ಧಿಯ ನಟ್ಟು ಬೋಲ್ಟುಗಳು….

ನ್ನಡಕ್ಕೆ ಸಂಬಂಧಿಸಿದ ಚರ್ಚೆಗಳ ಅತಿ ದೊಡ್ಡ ಮಿತಿಯೆಂದರೆ ಅದು ಕೇವಲ ‘ಭಾಷಾ ಶುದ್ದಿ’ಯ ಇಲ್ಲವೇ ಕನ್ನಡ ಸಾಹಿತ್ಯದ ಕುರಿತ ಚರ್ಚೆಯಾಗಿಬಿಡುವುದು. ಇನ್ನೂ ಸ್ವಲ್ಪ ಸ್ಪಷ್ಟವಾಗಿ ಹೇಳಬೇಕೆಂದರೆ ಕನ್ನಡ ಭಾಷೆಯ ಒಂದು ಬಗೆಯ ಬಳಕೆಗಷ್ಟೇ ಈ ಚರ್ಚೆಗಳು ಸೀಮಿತವಾಗುವುದು. ಈ ಚೌಕಟ್ಟನ್ನು ಮೀರಿದವರು ಚರ್ಚೆಯಿಂದ ಹೊರಗುಳಿಯುತ್ತಾರೆ ಇಲ್ಲವೇ ‘ಮಡಿವಂತ’ರ ತೀವ್ರ ದಾಳಿಗೆ ಗುರಿಯಾಗುತ್ತಾರೆ. ಡಿ.ಎನ್.ಶಂಕರಭಟ್ಟರ ‘ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ’ ವಿದ್ವತ್ ವಲಯದಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿತು. ಈ ಚರ್ಚೆಗಳನ್ನು ಕನ್ನಡದ ಬಳಕೆಯ ಮಟ್ಟಕ್ಕೆ ತರುವಲ್ಲಿ ಎಲ್ಲರೂ ಸೋತರು. ಕನ್ನಡ ಬಳಸುವ ಸಾಮಾನ್ಯರನ್ನು ಬಿಟ್ಟು ಬಿಡೋಣ. ಕನ್ನಡ ಸ್ನಾತಕೋತ್ತರ ತರಗತಿಗಳಲ್ಲೂ ‘ಕನ್ನಡದ್ದೇ ವ್ಯಾಕರಣ’ ಪರಿಕಲ್ಪನೆಯ ಕುರಿತ ಚರ್ಚೆಗಳು ನಡೆಯುವುದಿಲ್ಲ. ಅಂದರೆ ನಮ್ಮ ಮಟ್ಟಿಗೆ ಕನ್ನಡದ ಕುರಿತ ಚರ್ಚೆ ಎಂಬುದು ಜೀವಂತ, ಚಲನಶೀಲ ಸಂಸ್ಕೃತಿಯೊಂದರ ಕುರಿತ ಚರ್ಚೆಯಲ್ಲ. ‘ಒಂದಾನೊಂದು ಕಾಲದಲ್ಲಿ ಏಸೊಂದು ಮುದವಿತ್ತ’ ಎಂಬ ನಾಸ್ಟಾಲ್ಜಿಯಾದಲ್ಲಿ ಮುಳುಗುವ ಚರ್ಚೆಗಳು. ಈಗ ಓ.ಎಲ್.ಎನ್. ಅವರು ಆರಂಭಿಸಿರುವ ಭಾಷಾ ಶುದ್ಧಿಗೆ ಸಂಬಂಧಿಸಿದ ಚರ್ಚೆಗೆ ಬರುತ್ತಿರುವ ಪ್ರತಿಕ್ರಿಯೆಗಳಲ್ಲಿ ಕೆಲವು ಭಾಷೆಯ ಕುರಿತ ಸೀಮಿತ ಗ್ರಹಿಕೆಯನ್ನು ಬಹಳ ಸ್ಪಷ್ಟವಾಗಿ ವ್ಯಕ್ತ ಪಡಿಸುತ್ತಿವೆ.

ಭಾಷಾ ಶುದ್ಧಿಯ ನಟ್ಟು ಬೋಲ್ಟುಗಳು….

ಕನ್ನಡಕ್ಕೆ ಸಂಬಂಧಿಸಿದ ಚರ್ಚೆಗಳ ಅತಿ ದೊಡ್ಡ ಮಿತಿಯೆಂದರೆ ಅದು ಕೇವಲ ‘ಭಾಷಾ ಶುದ್ದಿ’ಯ ಇಲ್ಲವೇ ಕನ್ನಡ ಸಾಹಿತ್ಯದ ಕುರಿತ ಚರ್ಚೆಯಾಗಿಬಿಡುವುದು. ಇನ್ನೂ ಸ್ವಲ್ಪ ಸ್ಪಷ್ಟವಾಗಿ ಹೇಳಬೇಕೆಂದರೆ ಕನ್ನಡ ಭಾಷೆಯ ಒಂದು ಬಗೆಯ ಬಳಕೆಗಷ್ಟೇ ಈ ಚರ್ಚೆಗಳು ಸೀಮಿತವಾಗುವುದು. ಈ ಚೌಕಟ್ಟನ್ನು ಮೀರಿದವರು ಚರ್ಚೆಯಿಂದ ಹೊರಗುಳಿಯುತ್ತಾರೆ ಇಲ್ಲವೇ ‘ಮಡಿವಂತ’ರ ತೀವ್ರ ದಾಳಿಗೆ ಗುರಿಯಾಗುತ್ತಾರೆ. ಡಿ.ಎನ್.ಶಂಕರಭಟ್ಟರ ‘ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ’ ವಿದ್ವತ್ ವಲಯದಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿತು. ಈ ಚರ್ಚೆಗಳನ್ನು ಕನ್ನಡದ ಬಳಕೆಯ ಮಟ್ಟಕ್ಕೆ ತರುವಲ್ಲಿ ಎಲ್ಲರೂ ಸೋತರು. ಕನ್ನಡ ಬಳಸುವ ಸಾಮಾನ್ಯರನ್ನು ಬಿಟ್ಟು ಬಿಡೋಣ. ಕನ್ನಡ ಸ್ನಾತಕೋತ್ತರ ತರಗತಿಗಳಲ್ಲೂ ‘ಕನ್ನಡದ್ದೇ ವ್ಯಾಕರಣ’ ಪರಿಕಲ್ಪನೆಯ ಕುರಿತ ಚರ್ಚೆಗಳು ನಡೆಯುವುದಿಲ್ಲ. ಅಂದರೆ ನಮ್ಮ ಮಟ್ಟಿಗೆ ಕನ್ನಡದ ಕುರಿತ ಚರ್ಚೆ ಎಂಬುದು ಜೀವಂತ, ಚಲನಶೀಲ ಸಂಸ್ಕೃತಿಯೊಂದರ ಕುರಿತ ಚರ್ಚೆಯಲ್ಲ. ‘ಒಂದಾನೊಂದು ಕಾಲದಲ್ಲಿ ಏಸೊಂದು ಮುದವಿತ್ತ’ ಎಂಬ ನಾಸ್ಟಾಲ್ಜಿಯಾದಲ್ಲಿ ಮುಳುಗುವ ಚರ್ಚೆಗಳು. ಈಗ ಓ.ಎಲ್.ಎನ್. ಅವರು ಆರಂಭಿಸಿರುವ ಭಾಷಾ ಶುದ್ಧಿಗೆ ಸಂಬಂಧಿಸಿದ ಚರ್ಚೆಗೆ ಬರುತ್ತಿರುವ ಪ್ರತಿಕ್ರಿಯೆಗಳಲ್ಲಿ ಕೆಲವು ಭಾಷೆಯ ಕುರಿತ ಸೀಮಿತ ಗ್ರಹಿಕೆಯನ್ನು ಬಹಳ ಸ್ಪಷ್ಟವಾಗಿ ವ್ಯಕ್ತ ಪಡಿಸುತ್ತಿವೆ.

ಹೊಸ ಅಂಗಿ

ನಾನು ೧೯೭೭ರಲ್ಲಿ ಹಿರಿಯೂರಿನಲ್ಲಿ ಸರ್ಕಾರಿ ಬಾಲಕರ ಕಿರಿಯರ ಪ್ರಾಥಮಿಕ ಪಾಠ ಶಾಲೆಯಲ್ಲಿ ಮೂರನೆಯ ತರಗತಿಯಲ್ಲಿ ಓದುತ್ತಿದ್ದಾಗ ಈ ಘಟನೆ ನಡೆಯಿತು. ನಮ್ಮ ಶಾಲೆಯಲ್ಲಿದ್ದಂತಹ ವಿದ್ಯಾರ್ಥಿಗಳಲ್ಲಿ ಬಹುತೇಕರು ಆರ್ಥಿಕವಾಗಿ ತೀರಾ ಹಿಂದುಳಿದ ಹಿನ್ನೆಲೆಯಿಂದ ಬಂದವರಾದ್ದರಿಮ್ದ ಎಷ್ಟೋ ಸಮಯ ಬಹಳಷ್ಟು ಜನರಿಗೆ ಬಟ್ಟೆಬರೆ ಚೆನ್ನಾಗಿರುತ್ತಿರಲಿಲ್ಲ. ನನ್ನ ಮನೆಗೆ ಹತ್ತಿರವೇ ಮನೆ ಇದ್ದ ಸಹಪಾಠಿಯೊಬ್ಬ ಪ್ರತಿದಿನ ಶಾಲೆಯಿಂದ ಹಿತಿರುಗುವಾಗ ನನ್ನನ್ನು ಬಹಳಷ್ಟು ಬಲವಂತ ಮಾಡಿ ಇಡೀ ಶಾಲೆಯಲ್ಲಿ ನನ್ನ ಬಳಿ ಮಾತ್ರ ಇದ್ದಂತಹ ಅಲ್ಯೂಮೀನಿಯಂ ಸ್ಕೂಲ್ ಟ್ರಂಕನ್ನು ಹಿಡಿದುಕೊಂಡು ಬರುತ್ತಿದ್ದ. ಅವನ ಚೀಲವನ್ನು ನಾನು ಹಿಡಿದುಕೊಳ್ಳಬೇಕಾಗುತ್ತಿತ್ತು. ತಾನು ಟ್ರಂಕನ್ನು ಹಿಡಿದುಕೊಂಡು ಬರುತ್ತಿದ್ದೇನೆ ಎನ್ನುವುದೇ ಅವನಿಗೆ ಅತ್ಯಂತ ಸಂತಸದ ವಿಷಯವಾಗಿತ್ತು!

ವಚನ ಚಿಂತನ: ೬: ಮನಸ್ಸು ಕೋತಿ

ಇನ್ನೇವೆನಿನ್ನೇವೆನಯ್ಯಾ ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು ಎನ್ನ ನಿಂದಲ್ಲಿ ನಿಲಲೀಯದು ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ ಕ್ಷಣದಲ್ಲಿಆಕಾಶಕ್ಕೆ ಐದುತ್ತಿದೆ ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ ಕೂಡಲಸಂಗಮದೇವಾ ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ ಎಂದು ನಿಮ್ಮೊಡಗೂಡುವೆನಯ್ಯಾ ಮನಸ್ಸು ಘನ ಮಾತ್ರವಲ್ಲ ಕೋತಿಯೂ ಹೌದು. ನನ್ನ ಮನಸ್ಸು ನನ್ನ ಮೇಲೆ ಮಾಡುವ ದಾಳಿ ಘನವಾದದ್ದು. ಏನು ಮಾಡಲೆಂದು ಹೊಳೆಯುತ್ತಿಲ್ಲ. ಈ ಕ್ಷಣದಲ್ಲಿ ಆಕಾಶಕ್ಕೆ ಎತ್ತಿ ಮರುಕ್ಷಣಕ್ಕೆ ನನ್ನನ್ನು ದಿಕ್ಕಾಪಾಲು ಮಾಡುತ್ತಿದೆ. ನಿಂದಲ್ಲಿ ನಿಲಲು ಆಗದಿದ್ದರೆ ಕೂಡಲಸಂಗಮನೊಡನೆ ಕೂಡುವುದು ಹೇಗೆ? ಕೋತಿ ಮನಸ್ಸಿನ ದಾಳಿ ಎಂದು ನಿಲ್ಲುತ್ತದೆ.

ದಳ್ಳುರಿ

ಅನಂತಕೃಷ್ಣನು ರೆಬೆಕಾರ ಬದುಕಿನಲ್ಲಿ ಸಂತಸ ತರಬೇಕೆಂಬ ಪ್ರಯತ್ನದಲ್ಲಿದ್ದಾಗಲೇ ಹೊತ್ತಿಕೊಂಡ ದಳ್ಳುರಿ ಎಂಥದ್ದು?

****

ಊರಿನಿಂದ ಹಣ ಬಂದಿದೆಯೇ ಎಂದು ವಿಚಾರಿಸಲು ಸತತವಾಗಿ ಐದನೇಯ ದಿನ ಬ್ಯಾಂಕಿಗೆ ಬಂದಿದ್ದೆ. ಇಂದೂ ಸಹ ಹಣ ಬಂದಿಲ್ಲವೆಂದು ತಿಳಿಯಿತು. ನಾನು ಹಿಂತಿರುಗಿ ಹೊರಡುವಾಗ ಉಳಿತಾಯವಿಭಾಗದಲ್ಲಿದ್ದ ಉದ್ಯೋಗಿ, ನನ್ನನ್ನು ಬಹಳ ದಿನಗಳಿಂದ ಗಮನಿಸಿದ್ದವರು,

ಕೋಚ್ ಬೇಕೇ?

ರಾವಣನ ಮಕ್ಕಳು ರಾಮನ ಮಕ್ಕಳಿಗೆ ಹೊಡೆದದ್ದೊಂದು ಸುದ್ದಿ ಎಂದೂ ಎಲ್ಲಿಯೂ ಹೊಡೆಸಿಕೊಳ್ಳುವ ಜಾಯಮಾನದವರೀ ನಮ್ಮ ಮಕ್ಕಳು ದಾಂಡಿಗರಾದ ರಾವಣನ ಮಕ್ಕಳ ಮುಂದೆ ಕುಬ್ಜರಾಗಿ ಲವಲೇಶವೂ ಇಲ್ಲದಂತಾದರು ರಾಮನ ಮಕ್ಕಳು ಬದಿಯ ಬೀದಿಯಲಿ ತೋರಿಸಲಾರರು ಇವರ ಪೌರುಷ ಅದೆಲ್ಲಾ ನಮ್ಮ ಮುಂದೆಯೇ ತೋರಿಸುವ ಉತ್ತರ ಕುಮಾರರಿವರು ಇವರಿಗೆ ಸಿಗುವ ಕೋಚುಗಳೆಂಥವರು ರೈಟ್ ಎಂದು ಒಬ್ಬ ಅಂದು ಬಂದ

ozimandias ಕವನದ ಅನುವಾದ

ಓಸಿಮಾಂಡಿಯಾಸ್

ದೂರದೂರಿನ ಯಾತ್ರಿಕನೊಬ್ಬ

ಪುರಾತನ ನಾಡಿಂದ ಹಿಂದಿರುಗುವಾಗ

ಕಂಡನಂತೆ ಮರಳುಗಾಡಿನ ಮಧ್ಯೆ

ಮುಂಡವಿಲ್ಲದ ಕಾಲುಗಳೆರಡು,

ಕೆಳಗೆ ಮರಳಲ್ಲಿ ಬಿದ್ದ ಮಸುಕು ಶಿರ,

ಮುಖದಲ್ಲಿ ಮುಗುಳ್ನಗೆ,

ಬಿರಿದ ತುಟಿ,

ತೋರುತಿದೆ ಗತ್ತು,

ಶಿಲ್ಪಿ ಕೈಚಳಕದ ಕಸರತ್ತು,

ಶಿಥಿಲ ಶಿಲ್ಪದ ಮೇಲೂ ಭಾವಗಳ ಬೆಳಕು,

ವಿಧಿಗೆದುರಾಗಿ ನಿಂತಿದೆಯೇನೋ ಈ ಬದುಕು:

ಕೆಳಗೊಂದು ಬಿನ್ನವತ್ತಳೆ, ಹೀಗೆ

"ಓ ಬಲಶಾಲಿಗಳೇ,

ನಾನು ಓಸಿಮಾಂಡಿಯಾಸಿಸ್, ರಾಜಾಧಿರಾಜ.

ನನ್ನ ಸಾಧನೆಗಳೆಡೆ ನೋಡಿ, ನೀವು ಹೆದರುವುದೇ ನಿಜ"

ಶಿಥಿಲ ಶಿಲ್ಪದ ಹೊರತು ಬೇರೇನೂ ಇಲ್ಲ ಅಲ್ಲಿ,

ಮಿತಿಯನರಿಯದೆ ಸುತ್ತಿ ನಿಂತ ಮರಳುಗಾಡಿನಲ್ಲಿ.