“ವೃತ್ತಿಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ, ಪ್ರವೃತ್ತಿಯಲ್ಲಿ ಕವಿ, ಸಾಹಿತಿ, ನಾಟಕಕಾರ, ಹಾಡುಗಾರ ಶ್ರೀ ಹಾ ಮ ಸತೀಶರ ಗಝಲ್ ಸಂಕಲನ ‘ಪ್ರಕೃತಿ' ಪ್ರೀತಿ ಬದುಕು ಸಂಕಲನಕ್ಕೆ ನನ್ನ ಅನುಭವದ ಒಂದೆರಡು ಸಾಲುಗಳನ್ನು ಬರೆಯಲು ಸಂತಸಪಡುತ್ತೇನೆ. ನಾನು ಕಂಡ ಹಾಗೆ ಸತೀಶರು ಸಾಹಿತ್ಯ ಪ್ರಪಂಚದ ದೈತ್ಯ ಪ್ರತಿಭೆ, ಎಲೆಯ ಮರೆಯ ಕಾಯಿ ಎನ್ನಬಹುದು. ‘ಆಡು ಮುಟ್ಟದ ಸೊಪ್ಪಿಲ್ಲ’ ಎನ್ನುವ ಮಾತಿನಂತೆ ಸಾಹಿತ್ಯದಲ್ಲಿ ಕೈಯಾಡಿಸದ ಕ್ಷೇತ್ರವಿಲ್ಲ. ಯಾವುದೇ ಕನ್ನಡ ಪಂಡಿತರಿಗೆ ಕಡಿಮೆಯಿಲ್ಲದ ಸಾಹಿತ್ಯ ಜ್ಞಾನ ಹೊಂದಿದ ಅಜ್ಞಾತ ಕವಿ. ‘ಕೇಳಿ ಪಡೆಯುವ ಮನೋಭಾವ ಒಲ್ಲದ ಹೃದಯ' ಮಾತು ನೇರ ಇರಬಹುದು. ಇರತಕ್ಕದ್ದು ಸಹ. ಅಗತ್ಯವಿರುವಲ್ಲಿ ನ್ಯಾಯವಿರುವಲ್ಲಿ ಬಾಗುವೆ ಎನ್ನುವ ಕವಿ.
‘ಗಝಲ್' ಒಂದು…