July 31, 2012 - 1:21pm
ಚಿಕ್ಕಂದಿನಿಂದಲೂ ನನಗು ಅದಕ್ಕೂಬಿಡಲಾರದ ನಂಟು
ಹದಿನೈದು ದಿನಕೊಮ್ಮೆ ಭೇಟಿ ಕೊಡುವ ಬಂಧು
ಎಂಥ ಪರಿಸ್ಥಿತಿಯಲ್ಲೂ ಮರ್ಯಾದೆ ತೆಗೆಯುವ ಏಕೈಕ ಸಾಧನ
ಎಲ್ಲರ ಕಾಡುವ ವೈರಿ ಅದೇ ನೆಗಡಿ
ಮಳೆ ನೀರು ಗೋಣಿ ಚೀಲವನ್ನು ತೇವ ಮಾಡುವಂತೆ
ಇದು ನನ್ನ ಕರವಸ್ತ್ರವನ್ನೆಲ್ಲಾ ಒದ್ದೆ ಮಾಡಿಬಿಡುತ್ತದೆ
ಕಣ್ಣನ್ನು ಕೆಂಪಗೆ ಮಾಡುವುದಲ್ಲದೇ
ಒಮ್ಮೊಮ್ಮೆ ಅದರಿಂದಲೂ ನೀರ ಹರಿಸುತ್ತದೆ
ಕಬ್ಬಿಣವನ್ನು ತಗ್ಗಿಸಲು ಕೆಂಡ ಬಳಸುವಂತೆ
ನನ್ನ ತಗ್ಗಿಸಲು ಇದು ಮೂಗನ್ನೆ ಕೆಂಡ ಮಾಡಿಕೊಳ್ಳುತ್ತದೆ
ಸುಡುವ ಕೆಂಡವ ತುಳಿಯಬಹುದು
ಆದರೆ ಉರಿವ ಮೂಗಿನ ಸ್ಥಿತಿ ಹೇಳತೀರದು
ನೆಗಡಿಯ ಮಹಿಮೆಯನು ಮರೆಯಾಲಾಗದು.|
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ:









ಪ್ರತಿಕ್ರಿಯೆಗಳು
ಉ: ನೆಗಡಿಯ ಮಹಿಮೆ
ಉ: ನೆಗಡಿಯ ಮಹಿಮೆ