ನಾವು ಸಮಯವನ್ನು ಉಪಕರಣವನ್ನಾಗಿ ಬಳಸಿಕೊಳ್ಳಬೇಕು, ಊರುಗೋಲಾಗಿ ಅಲ್ಲ.

— ಜಾನ್ ಕೆನಡಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಅಪ್ಪ

ಬೆರಳ್ಹಿಡಿದು ಜಗವ ತೋರಿಸಿದಾತ...ಅಪ್ಪ!

ಸಾವಿರ ಸವಾಲುಗಳ ದಾಟಿಸಿದ ತಂದೆ...

ಆತ ನಮ್ಮ ಬಾಲ್ಯದ ಹೀರೊ. ಅಮ್ಮನ ಮಡಿಲಿನಿಂದ ಕೆಳಗಿಳಿದು ನಡೆಯಲು ಕಲಿತಾಗಿನಿಂದ ಆತ ನಮ್ಮ ಪಾಲಿನ ದೊಡ್ಡ ಭರವಸೆ. ಸಹಪಾಠಿಗಳೊಂದಿಗೆ ಜಗಳವಾದಾಗ, ನಾವು ದೂರು ಹೇಳಿದ್ದು ಆತನಿಗೆ. ಮೊದಲ ಮಿಠಾಯಿ ಕೊಡಿಸಿದ್ದು ಆತನೇ. ಬೆದರಿದಾಗ ಎತ್ತಿಕೊಂಡು ಸಂತೈಸಿದ, ಭರವಸೆ ತುಂಬಿದ ಮೊದಲ ವ್ಯಕ್ತಿ ಆತ. ಬಾಲ್ಯದ ನೂರೆಂಟು ನೆನಪುಗಳನ್ನು ಸಮೃದ್ಧವಾಗಿಸಿದ ಆತ ನಮ್ಮ ಅಪ್ಪ. ಆತ ಎಲ್ಲ ಕಡೆ ಸಿಗುತ್ತಾನೆ. ಪಾರ್ಕ್‌‌ಗಳಲ್ಲಿ, ಬಸ್‌ಸ್ಟಾಪ್‌ಗಳಲ್ಲಿ, ಶಾಲೆಯ ಗೇಟಿನ ಹೊರಗೆ, ಅಂಗಡಿ ಎದುರು- ಎಲ್ಲೆಲ್ಲಿ ಮಕ್ಕಳು ಕಾಣುತ್ತಾರೋ ಅಲ್ಲೆಲ್ಲ ಆತನೂ ಇರುತ್ತಾನೆ. ಕಂಡದ್ದನ್ನೆಲ್ಲ ಕೊಡಿಸು ಎಂದು ಕೈಚಾಚುವ ಮಕ್ಕಳಿಗೆ ಪ್ರೀತಿಯಿಂದ ತಿಳಿ ಹೇಳುತ್ತ, ಚೆನ್ನಾಗಿವೆ ಅನಿಸಿದ್ದನ್ನು ಕೊಡಿಸುತ್ತ, ಮಕ್ಕಳು ಖುಷಿಯಿಂದ ಕೇಕೆ ಹಾಕುವಾಗ ಸದ್ದಿಲ್ಲದೇ ತೃಪ್ತಿಯಿಂದ ನಗುತ್ತಾನೆ.  ಮುಂದೆ ಓದಿ »

Syndicate content