ಮುಕ್ತ ಮನಸ್ಸು ಖಾಲಿ ಆಕಾಶದಂತೆ. ಹೊರಗಡೆ ವಿಶಾಲ ಮತ್ತು ಒಳಗಡೆ ಶೂನ್ಯ. ಅದರಲ್ಲಿ ಅಂಟುತನ ಇಲ್ಲವೇ ಇಲ್ಲ.

— ವಿನೋಬಾ ಭಾವೆ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಕನವರಿಕೆ

ಕನಸು ಕಾಣಬಾರದು ಅಂದುಕೊಳ್ಳುತ್ತ...

ಮತ್ತೆ ಮತ್ತೆ ಕೀಬೋರ್ಡ್‌ ಮುಟ್ಟುತ್ತೇನೆ. ಸುಮ್ಮನಾಗುತ್ತೇನೆ.

ಕಳೆದ ಕೆಲ ದಿನಗಳಿಂದ ಇದು ಹೀಗೇ ನಡೆದುಕೊಂಡು ಬರುತ್ತಿದೆ. ಏನೋ ಬರೆಯಬೇಕೆಂದು ಅಂದುಕೊಳ್ಳುತ್ತೇನೆ. ಎಳೆಯೊಂದು ಮನದ ಮೂಲೆಯಲ್ಲಿ ಕಾಣುತ್ತದೆ. ಮೆತ್ತಗೇ ಹಿಡಿದೆಳೆದರೆ, ಸೊಗಸಾದ ನೇಯ್ಗೆ ಬಂದೀತು ಅಂದುಕೊಳ್ಳುತ್ತೇನೆ. ಅಷ್ಟೊತ್ತಿಗೆ ಮತ್ತೇನೋ ನೆನಪಾಗುತ್ತದೆ. ಎಳೆ ಅಲ್ಲೇ ಒಣಗಿ ಹೋಗುತ್ತದೆ.

ಏಕೆ ಹೀಗಾಗುತ್ತದೆ?

ಮನಸ್ಸಿನ ಯೋಚನೆಯ ಒಂದು ಎಳೆ ಎಂತೆಂಥ ಕನಸುಗಳನ್ನು ತಂದಿಡುತ್ತದೆ ಎಂಬುದನ್ನು ಖುದ್ದು ಅನುಭವಿಸಿದವ ನಾನು. ಎಳೆ ಎಂಬುದು ಮಗುವಿನಂತೆ. ಅದರ ಸಾಧ್ಯತೆಗಳು ಅಪಾರ. ಅದನ್ನು ಬೆಳೆಸಬೇಕಾದ ಜವಾಬ್ದಾರಿಯೂ ಅಷ್ಟೇ ದೊಡ್ಡದು. ಮೊಳಕೆಯೊಡೆದ ಪ್ರತಿಯೊಂದು ಬೀಜಕ್ಕೂ ಪೂರ್ತಿ ಮರವಾಗುವ ಎಲ್ಲ ಸಾಧ್ಯತೆಗಳೂ ಇರುತ್ತವೆ.

ಆದರೆ, ಎಲ್ಲ ಮೊಳಕೆಗಳೂ ಮರವಾಗುವುದಿಲ್ಲ. ಬಹಳಷ್ಟು ಮೊಳಕೆಗಳು ಮುರುಟಿಹೋಗುತ್ತವೆ. ನಮ್ಮ ಬಾಲ್ಯದ ಕನಸುಗಳಂತೆ.
 ಮುಂದೆ ಓದಿ »

Syndicate content