ನಮಗಾದ ಆಘಾತಗಳನ್ನು ಮತ್ತು ಗಾಯಗಳನ್ನು ತಿರಸ್ಕರಿಸಿದರೆ, ಅವು ತಾವಾಗಿಯೇ ಮಾಯವಾಗುತ್ತವೆ.

— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಕೆ.ಎಸ್‌. ಅಶ್ವತ್ಥ

ಖಾಲಿಯಾದ ಮನೆಯಲ್ಲಿ ನೆನಪುಗಳ ಮೆರವಣಿಗೆ

ನೆನಪಿನ ಮತ್ತೊಂದು ಕೊಂಡಿ ಕಳಚಿತು.

ನಿರೀಕ್ಷಿತವಾಗಿದ್ದರೂ, ಕೆ.ಎಸ್‌. ಅಶ್ವತ್ಥ ಅವರ ಸಾವು ವಿಚಿತ್ರ ವ್ಯಾಕುಲತೆ ಉಂಟು ಮಾಡುತ್ತಿದೆ. ಅವರನ್ನು ನಾಯಕರನ್ನಾಗಿ ಆರಾಧಿಸದಿದ್ದರೂ, ಅದರಾಚೆಯ ಜೀವಂತ ವ್ಯಕ್ತಿಯನ್ನಾಗಿ ನಾವೆಲ್ಲ ನೋಡಿದ್ದೆವು. ಪಾತ್ರಗಳಿಗೆ ಜೀವ ತುಂಬುತ್ತಿದ್ದ ಅವರ ಪ್ರತಿಭೆಗೆ ಮಾರು ಹೋಗಿದ್ದೆವು. ಅವರು ಮುಖ್ಯ ವ್ಯಕ್ತಿಯಾಗಿ ಚರ್ಚೆಯಾಗುತ್ತಿರಲಿಲ್ಲ. ತುಂಬಿದ ಮನೆಯಲ್ಲಿ ತನ್ನ ಪಾಡಿಗೆ ತಾನು ಒಂದೆಡೆ ಕೂತ ಹಿರಿಯನಂತೆ, ನೆನಪಿನ ಅವಿಭಾಜ್ಯ ಅಂಗವಾಗಿದ್ದರು. ಈಗ ಆ ಸ್ಥಳ ಖಾಲಿ ಖಾಲಿ. ಒಂದು ಬನಿಯನ್‌, ಒಂದು ಲುಂಗಿ ಹಾಕಿಕೊಂಡ ನಮ್ರ ಮುಖದ, ವಿನಂತಿಸುವ ಕಂಗಳ ಅಶ್ವತ್ಥ ಈಗಿಲ್ಲ.

ಸುಮ್ಮನೇ ಕೂತು ನೆನಪಿಸಿಕೊಂಡರೂ ವಿವಿಧ ಪಾತ್ರಗಳ ಅಶ್ವತ್ಥ ಮುಖ ಕಣ್ಮುಂದೆ ಬರುತ್ತದೆ. ನಾನು ತುಂಬ ಇಷ್ಟಪಟ್ಟ ಸಿನಿಮಾಗಳಲ್ಲಿ ಕೆ. ಬಾಲಚಂದರ್‌ ನಿರ್ದೇಶನದ ಎರಡು ರೇಖೆಗಳು ಚಿತ್ರವೂ ಒಂದು. ಅದರಲ್ಲಿ ಅಸಹಾಯಕ ಮೇಷ್ಟ್ರ ಪಾತ್ರದಿಂದ, ನಿಷ್ಠುರ-ನಿಷ್ಕರುಣಿ ತಂದೆಯಾಗಿ ಅಶ್ವತ್ಥ ಅಭಿನಯ ಇವತ್ತಿಗೂ ಅಚ್ಚಳಿಯದಂತಿದೆ. ತನ್ನ ಮಗಳಿಗೆ ವಂಚಿಸಿ, ಅವಳ ಮಡಿಲಿಗೊಂದು ಮಗು ಕರುಣಿಸಿ, ಹೇಳದೇ ಕೇಳದೇ ಹೋಗಿ ಇನ್ನೊಂದು ಮದುವೆಯಾದ ವ್ಯಕ್ತಿಯ ಮೇಲೆ ಸೇಡು ತೀರಿಸಿಕೊಳ್ಳಲು ಯತ್ನಿಸಿದ ಪಾತ್ರವಾಗಿ ಅಶ್ವತ್ಥ ಅಭಿನಯ ಅದ್ಭುತ. ಕುವೆಂಪು ಅವರನ್ನು ಆರಾಧಿಸುವ ಮೇಷ್ಟ್ರು ಪೈಪ್‌ ಸೇದುವ ಕುಲೀನ ವರ್ಗದ ವ್ಯಕ್ತಿಯಾಗಿ ಬದಲಾಗುತ್ತಾರೆ. ವಿನಯದ ಜಾಗದಲ್ಲಿ ನಿಷ್ಠುರತೆ, ನಮ್ರತೆಯ ಸ್ಥಾನದಲ್ಲಿ ಅಂತಸ್ತಿನ ಹಮ್ಮು ಸೇರಿಕೊಳ್ಳುವ ಪರಿಯೇ ಅದ್ಭುತ.  ಮುಂದೆ ಓದಿ »

Syndicate content