ಟೋಸ್ಟ್ ಮಾಸ್ಟರ್ಸ್
ರಾಮನವಮಿಯ ದಿನ ಬೇರೆಯದೊಂದು ಸ್ಮರಣೆ
April 19, 2008 - 6:12am — hamsanandiಕಳೆದ ಭಾನುವಾರ ರಾಮನವಮಿ ಇತ್ತು. ರಾಮ ಹುಟ್ಟಿದ ದಿನ ದಶರಥನ ಅರಮನೆಯ ಅಡುಗೆಮನೆಯಲ್ಲಿದ್ದ ದಿನಸಿ ಎಲ್ಲ ಖಾಲಿಯಾಗಿ, ಕಡೆಗೆ ಬಂದವರಿಗೆಲ್ಲ ಪಾನಕ, ನೀರುಮಜ್ಜಿಗೆ ಕೊಟ್ಟು ಕಳಿಸಿದ್ದ ಕಥೆ ಗೊತ್ತೇ ಇದೆ ಎಲ್ಲರಿಗೂ. ಅದಕ್ಕೇ ತಾನೇ, ನಾವೆಲ್ಲ ರಾಮನವಮಿಯಂದು ರಾಮನಾಮ ಸ್ಮರಣೆಯ ಜೊತೆ, ಪಾನಕ, ಮಜ್ಜಿಗೆ, ಕೋಸುಂಬರಿ ಗೊಜ್ಜವಲಕ್ಕಿ ಸೇವನೆಯ ಕಾರ್ಯಕ್ರಮವನ್ನೇ ಜೋರಾಗಿ ಇಟ್ಟುಕೊಳ್ಳುವುದು?
ರಾಮನವಮಿ ಎಂದರೆ ಅದರ ಜೊತೆಗೇ ನನಗೆ ರಾಮನವಮಿ ಸಂಗೀತೋತ್ಸವಗಳದ್ದೇ ನೆನಪು. ನನ್ನ ಶಾಲಾ-ಕಾಲೇಜು ದಿನಗಳಲ್ಲಿ ರಾಮನವಮಿ ಯಾಕಾದರೂ ಈ ಪರೀಕ್ಷೆಯ ಸಮಯದಲ್ಲಿ ಬರುತ್ತೋ ಅಂತ ಬೈದುಕೊಳ್ಳುತ್ತಿದ್ದೆ. ಯಾವಾಗಲೂ, ಒಳ್ಳೇ ಸಂಗೀತಗಾರರು ಬರುತ್ತಿದ್ದರೆ, ಅದರ ಮರುದಿನವೇ ಪರೀಕ್ಷೆ ಇದ್ದಿರಬೇಕೇ? ಹಾಗಿದ್ದರೂ, ಆದಷ್ಟೂ ತಪ್ಪಿಸದೇ ಹೋಗುತ್ತಿದ್ದವನು ನಾನು. ಅಂದಿನ ದಿನಗಳು ಚೆನ್ನಾಗಿದ್ದವು. ನಮ್ಮ ಊರಿನಲ್ಲಿ ಎಲ್ಲಿ ಸಂಗೀತ ಕಾರ್ಯಕ್ರಮ ನಡೆದರೂ, ಹತ್ತು ನಿಮಿಷಗಳೊಳಗೆ ಅಲ್ಲಿ ಹೋಗಿ ಸೇರಬಹುದಿತ್ತು. ನಾನು ಕೇಳಿದ ಹೆಚ್ಚಿನ ಕಚೇರಿಗಳು ಹೀಗೆ ರಾಮೋತ್ಸವದಲ್ಲಿ (ಅಥವಾ ಗಣೇಶೋತ್ಸವದಲ್ಲಿ) ಕೇಳಿದ್ದವೇ. ಆದರೆ, ಈಗ ಬೆಂಗಳೂರಿನಂತಹ ಊರುಗಳಲ್ಲಂತೂ ಇಂತಹದ್ದೇ ಕಡೆ ನಡೆಯುವ ಕಾರ್ಯಕ್ರಮಕ್ಕೆ ಹೋಗಬೇಕೆಂದರೆ, ಅರ್ಧ ದಿನವೆಲ್ಲ ರಸ್ತೆಯ ಮೇಲೇ ಇರಬಹುದಷ್ಟೆ. ಪುಣ್ಯಕ್ಕೆ ಎಲ್ಲಾ ಕಡೆ ಗುಡಿ ಗೋಪುರವಿದ್ದಲ್ಲೆಲ್ಲ ಒಂದಲ್ಲ ಒಂದು ಸಂಗೀತ ಕಾರ್ಯಕ್ರಮ ನಡೆಯುವುದರಿಂದ, ಆಸಕ್ತರಿಗೆ ಅಂತಹ ಖೋತಾ ಆಗಲಾರದು. ಆದರೂ, ಕೋಟೆ ಹೈಸ್ಕೂಲ್ ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾದರೆ ಆ ಸೊಗಸೇ ಬೇರೆ. ಮುಂದೆ ಓದಿ »





RSS: