ವೈಯಕ್ತಿಕ
ಇವತ್ತು ಅಳಬಾರದು
August 1, 2008 - 12:35am — pallavi.dharwadಇವತ್ತು ಅಳಬಾರದು.
ಯಾರು ಹೇಳಿದರು, ಕಣ್ಗಳಿರುವುದೇ ಅಳಲೆಂದು. ಅದು ಸುಳ್ಳು. ಕಣ್ಗಳಿರುವುದು ನೋಡಲು. ಅಷ್ಟೇ.
ನೋಡಿದ ನಂತರ ಏನಾಗುತ್ತದೆ? ಅದು ಮನಸ್ಸಿನಲ್ಲಿ ದಾಖಲಾಗುತ್ತದೆ. ಸುಳ್ಳು, ಅದು ಮೆದುಳಲ್ಲಿ ದಾಖಲಾಗುತ್ತದೆ.
ಮುಂದೆ?
ಮೆದುಳು ಆ ದಾಖಲೆಯನ್ನು ಇನ್ಯಾವುದೋ ನೆನಪುಗಳೊಂದಿಗೆ ತಳುಕು ಹಾಕುತ್ತದೆ. ಅಲ್ಲೊಂದು ಪ್ರತಿಕ್ರಿಯೆ ಹುಟ್ಟುತ್ತದೆ. ಆ ಪ್ರತಿಕ್ರಿಯೆಗೆ ಇನ್ಯಾವುದೋ ಸೇರಿಕೊಂಡು ಭಾವನೆಯನ್ನು ನಿರ್ಮಿಸುತ್ತದೆ. ಮುಂದೆ ಓದಿ »

ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ!
June 17, 2008 - 4:56pm — pallavi.dharwadಮಾಧ್ಯಮ ಎತ್ತ ಹೋಗುತ್ತಿದೆ? ಮುಂದೆ ಓದಿ »

ನೆನಪು ಚಿಗುರುವ ಸಮಯ
May 26, 2008 - 12:29pm — Chamarajಇವತ್ತು ಬೆಂಗಳೂರಿನಲ್ಲಿ ಹದವಾದ ಮಳೆ ಬಿತ್ತು.
ನಾನು, ರೇಖಾ ಹಾಗೂ ಮಗಳು ಗೌರಿ ಮನೆಯ ದೊಡ್ಡ ಗೇಟಿನ ಸರಳಿಗೆ ಮುಖವಾನಿಸಿಕೊಂಡು ನಿಂತು, ಸಣ್ಣಗೆ ಬೀಳುತ್ತಿದ್ದ ಮಳೆ ನೋಡಿದೆವು. ಡಾಂಬರ್ ಬಳಿದುಕೊಂಡು ಚೆಂದವಾದ ರಸ್ತೆಯಲ್ಲಿ, ಹಳದಿ ದೀಪದ ಪ್ರತಿಫಲನ. ಅದು ರಂಗಸ್ಥಳವೇನೋ ಎಂಬಂತೆ ಮಳೆ ಹನಿಗಳು ಉಲ್ಲಾಸದಿಂದ ಸಿಡಿದು, ಚದುರಿ ಮಾಯವಾಗುತ್ತಿದ್ದ ಅಪೂರ್ವ ದೃಶ್ಯವನ್ನು ಗೌರಿ ತನ್ನ ಪುಟ್ಟ ಮನಸ್ಸಿನ ಕುತೂಹಲದಿಂದ ನೋಡಿದಳು.
ನನಗೆ ಊರು ನೆನಪಾಯಿತು.
ಮೇ ತಿಂಗಳಿನ ಈ ದಿನಗಳಲ್ಲಿ ಕೊಪ್ಪಳ ತಾಲ್ಲೂಕಿನ ನನ್ನೂರು ಅಳವಂಡಿಯಲ್ಲಿ ಕಡು ಬೇಸಿಗೆ. ಫೆಬ್ರುವರಿ ತಿಂಗಳಿಂದಲೇ ಚುಚ್ಚತೊಡಗುವ ಬಿಸಿಲಿಗೆ ಮಾರ್ಚ್ ತಿಂಗಳ ಹೊತ್ತಿಗೆ ತುಂಬು ಪ್ರಾಯ. ಏಪ್ರಿಲ್-ಮೇ ತಿಂಗಳಲ್ಲಂತೂ ಕಡು ಬೇಸಿಗೆ. ಎಂಥಾ ಮಳೆಯನ್ನೂ ಮೊಗೆದು ಕುಡಿದು ಮತ್ತೆ ಒಣಗಿ ನಿಲ್ಲುವ ಬಿಸಿಲ ಬಯಲುಗಳು. ಕಾಲಿನ ಮೀನಖಂಡದವರೆಗೂ ನುಂಗಬಲ್ಲ, ಕಪ್ಪು ಮಣ್ಣಿನ ಬಿರುಕುಗಳು. ಮಸಾರಿ (ಕೆಂಪು) ಹೊಲದ ಬೆಣಚುಕಲ್ಲುಗಳು ಕಾಯ್ದು ಹೆಂಚಿನಂತೆ ಧಗಿಸುತ್ತವೆ. ನಮ್ಮ ಬಡಬಾಲ್ಯದ ಬರಿಗಾಲನ್ನು ಅವು ಅದೆಷ್ಟು ಸಾರಿ ಸುಟ್ಟು ಬೊಬ್ಬೆ ಏಳಿಸಿದ್ದವೋ! ಮುಂದೆ ಓದಿ »

ಏಕೆ ಹೀಗೆ ಅನಿಸುತ್ತದೆಯೋ!
May 20, 2008 - 4:10pm — pallavi.dharwadಬೆಳ್ಳಂಬೆಳಿಗ್ಗೆ ವಾಕಿಂಗ್ ಹೋದಾಗ, ಸುತ್ತ ಮುತ್ತ ತುಂಬಿರುವ ಶಾಂತಿ, ನಿರಾಳತೆ, ಸೊಬಗನ್ನು ನೋಡಿ ನಿಮಗೆ ಏನು ಅನ್ನಿಸುತ್ತದೆ? ಮುಂದೆ ಓದಿ »






RSS: