ಯಾವಾಗಲೂ ಕೇಡುಬಗೆಯದ ಸ್ನೇಹಿತನೆಂದರೆ, ಮೌನ.

— ಕನ್‌ಫ್ಯೂಷಿಯಸ್

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ವಾಸುದೇವಾಚಾರ್ಯ

ಸಂಗೀತ ನವರಾತ್ರಿ - ವಿಜಯ ದಶಮಿ

ಚಾಮುಂಡೇಶ್ವರಿ

ಇವತ್ತು ವಿಜಯ ದಶಮಿ.ನವರಾತ್ರಿಯ ಕಡೇ ದಿನ. ಮೈಸೂರಿನಲ್ಲಿ ಜಂಬೂಸವಾರಿಯಲ್ಲಿ  ದೇವಿ ಚಾಮುಂಡೇಶ್ವರಿಯ ಮೆರವಣಿಗೆ ಹೋಗುವ ಈ ದಿನ ಕೇಳಿಸಲು ವಾಗ್ಗೇಯಕಾರ ಮೈಸೂರು ವಾಸುದೇವಾಚಾರ್ಯರ ಬಿಲಹರಿ ರಾಗದ ಶ್ರೀ ಚಾಮುಂಡೇಶ್ವರಿ ಪಾಲಯ ಮಾಂ ಎನ್ನುವ ರಚನೆ ಈ ವರ್ಷದ ಸರಣಿಗೆ ಸರಿಯಾದ ಮಂಗಳವೆಂದು ನನ್ನ ಅನಿಸಿಕೆ.

ಮೈಸೂರು ವಾಸುದೇವಾಚಾರ್ಯರು ಅವರ ಸಂಗೀತ ಪರಂಪರೆಯಂತೆ ಸಂಸ್ಕೃತ ಮತ್ತು ತೆಲುಗು ಭಾಷೆಗಳಲ್ಲೇ ಕೃತಿಗಳನ್ನು ರಚಿಸಿದವರು. ಈ ಬಿಲಹರಿ ರಾಗದ ಕೃತಿಯಂತೂ ಸೊಗಸಾದ ರಚನೆ. ವಾಸುದೇವಾಚಾರ್ಯರ ಅತೀ ಪ್ರಸಿದ್ಧ ರಚನೆಗಲ್ಲಿದೂ ಒಂದು ಎಂದು ಖಂಡಿತ ಹೇಳಬಹುದು. ಈ ಹಾಡಿನ ಸಾಹಿತ್ಯ ಹೀಗಿದೆ.

ಶ್ರೀ ಚಾಮುಂಡೇಶ್ವರಿ ಪಾಲಯ ಮಾಂ ಕೃಪಾಕರಿ ಶಂಕರಿ
ಶೃತಜನಪಾಲಿನಿ ಮಹಾಬಲಾದ್ರಿವಾಸಿನಿ ಮಹಿಷಾಸುರ ಮರ್ದಿನಿ|| ಪಲ್ಲವಿ||  ಮುಂದೆ ಓದಿ »

ಬ್ರೋಚೇವಾರೆವರುರಾ ನಿನುವಿನಾ?

ಇದೇನಿದು, ಕನ್ನಡ ಬರಹಕ್ಕೆ ತೆಲುಗು ತಲೆಬರಹವೇ ಎಂದಿರಾ? ಕಾರಣವಿದೆ. ಇಂದು ಮೇ ೨೮ -ಮೈಸೂರು ವಾಸುದೇವಾಚಾರ್ಯರು ೧೮೬೫ರಲ್ಲಿ ಇದೇ ದಿನ ಹುಟ್ಟಿದ್ದು. ಮೈಸೂರು ವಾಸುದೇವಾಚಾರ್ಯ ಎಂದ ಕೂಡಲೆ, ನನಗೆ ನೆನಪಿಗೆ ಬರುವ ಕೃತಿ ಖಮಾಚ್ ರಾಗದ ಬ್ರೋಚೇವಾರೆವರುರಾ ಎನ್ನುವ ರಚನೆ. ಕೆ.ವಿಶ್ವನಾಥರ, ಮತ್ತು ಕೆ.ವಿ.ಮಹಾದೇವನ್ ಅಂತಹವರ ದಯದಿಂದ ಸಂಗೀತದ ಪರಿಚಯ ಇಲ್ಲದವರಿಗೂ, ಶಂಕರಾಭರಣಂ ಮೊದಲಾದ ತೆಲುಗು ಸಿನೆಮಾಗಳ ಮೂಲಕ ಶಾಸ್ತ್ರೀಯ ಸಂಗೀತದ ಅಲ್ಪ ಸ್ವಲ್ಪ ಪರಿಚಯವಾದದ್ದು, ಬ್ರೋಚೇವಾರೆವರುರಾ, ಸಾಮಜವರಗಮನ ಮೊದಲಾದ ಕೃತಿಗಳು ಎಲ್ಲರ ಬಾಯಲ್ಲೂ ನಲಿದಾಡಿದ್ದು ೮೦ರ ದಶಕದ ಸಂಗತಿ.

ಮೈಸೂರು ವಾಸುದೇವಾಚಾರ್ಯರು ಕರ್ನಾಟಕ ಸಂಗೀತದ ವಾಗ್ಗೇಯಕಾರರಲ್ಲಿ ಮೊದಲಸಾಲಿನಲ್ಲಿ ನಿಲ್ಲಬಲ್ಲಂತಹವರು. ತ್ಯಾಗರಾಜಾದಿ ಸಂಗೀತ ತ್ರಿಮೂರ್ತಿಗಳ ನಂತರ ಬರಬಲ್ಲ ಹೆಸರುಗಳಲ್ಲಿ ಮೊದಲದ್ದೇ ವಾಸುದೇವಾಚಾರ್ಯರದ್ದು ಎಂದರೂ ತಪ್ಪಿಲ್ಲ. ತ್ಯಾಗರಾಜರ ಶಿಷ್ಯ ಪರಂಪರೆಯಲ್ಲಿ ಬಂದ ವಾಸುದೇವಾಚಾರ್ಯರು, ಪಟ್ಟಣಂ ಸುಬ್ರಮಣ್ಯ ಅಯ್ಯರ್ ಅವರ ಪಟ್ಟ ಶಿಷ್ಯ.

ತ್ಯಾಗರಾಜರ ರೀತಿಯಲ್ಲಿ ರಚನೆ ಮಾಡಿದ ವಾಸುದೇವಾಚಾರ್ಯರು, ತಮ್ಮ ರಚನೆಗಳಿಗೆ ತ್ಯಾಗರಾಜರಂತೆಯೇ ಆಯ್ದದ್ದು ಸಂಸ್ಕೃತ ಹಾಗೂ ತೆಲುಗು ಭಾಷೆಗಳನ್ನು. ಅಲ್ಲದೆ, ಅವರಂತೆಯೇ ವಾಸುದೇವಾಚಾರ್ಯರೂ ಸ್ವನಾಮಮುದ್ರೆಯನ್ನೇ ಉಪಯೋಗಿಸಿದರು. ತ್ಯಾಗರಾಜರ ರಚನೆಗಳಲ್ಲಿ, ತ್ಯಾಗರಾಜ ಎಂಬ ಮುದ್ರೆ ಕಂಡುಬಂದರೆ, ವಾಸುದೇವಾಚಾರ್ಯರು ವಾಸುದೇವ ಅನ್ನುವ ಅಂಕಿತವನ್ನು ಉಪಯೋಗಿಸಿದ್ದಾರೆ.  ಮುಂದೆ ಓದಿ »

Syndicate content