23
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ಬುದ್ಧಿಮಾಂದ್ಯತೆ

ಇಂತಹ ಮಕ್ಕಳನ್ನು ಬೆಳೆಸುವುದು ಹೇಗೆ?

June 28, 2008 - 5:36pm
ರೇಖಾ
ನೀವೆಲ್ಲ ’ಬ್ಲ್ಯಾಕ್’ ಸಿನಿಮಾ ನೋಡಿದ್ದೀರಿ ಅಂತ ಅಂದುಕೊಂಡಿದ್ದೇನೆ. ವಿಶಿಷ್ಠಚೇತನ ಮಕ್ಕಳು ಹುಟ್ಟಿದಾಗ ತಂದೆತಾಯಿಗಳು ಮಾನಸಿಕವಾಗಿ ಕುಸಿದು ಹೋಗುತ್ತಾರೆ. ಅವರು ಬಡವರಿರಲಿ, ಶ್ರೀಮಂತರಿರಲಿ, ಓದಿದವರಿರಲಿ, ಅನಕ್ಷರಸ್ಥರಿರಲಿ- ಪ್ರತಿಕ್ರಿಯೆ ಒಂದೇ. ದೇವರು ನಮಗೆ ಹೀಗೇಕೆ ಮಾಡಿದ? ಎಂದು ದುಃಖಿಸುತ್ತಾರೆ. ಇಲ್ಲಿಂದ ಶುರುವಾಗುವ ನೋವು ಒಮ್ಮೊಮ್ಮೆ ಜೀವನ ಪರ್ಯಂತ ಮುಂದುವರೆಯುತ್ತದೆ. ಮಗುವನ್ನು ಸಹಜ ಮಗುವಂತಾಗಿಸಲು ಒಬ್ಬೊಬ್ಬರ ಪ್ರಯತ್ನವೂ ಒಂದೊಂದು ಥರ. ಡಿಗ್ರಿ ಮುಗಿದ ಕೂಡಲೇ ಮದುವೆಯಾದ, ಅದಾಗಿ ಒಂದು ವರ್ಷದಲ್ಲಿ ಹೆಣ್ಣು ಮಗುವಿನ ತಾಯಿಯಾದ ನನಗೆ, ಹುಟ್ಟಿದ ಮಗು ಸಹಜವಾಗಿಲ್ಲ ಎಂದು ಅನ್ನಿಸಿದಾಗ ಉಂಟಾದ ನೋವು ಅಷ್ಟಿಷ್ಟಲ್ಲ. ಕಳೆದ ಆರು ವರ್ಷಗಳಲ್ಲಿ ನನ್ನ ಮಗಳು ಗೌರಿ, ಹೊಸ ಜಗತ್ತನ್ನು ನಮಗೆ ತೋರಿಸಿಕೊಟ್ಟಿದ್ದಾಳೆ. ಈಗಲೂ ನಾವು ಹೊಸದನ್ನು ಕಲಿಯುತ್ತಲೇ ಇದ್ದೇವೆ. ಇದೊಂದು ನಿರಂತರ ಕಲಿಕೆ. ಆದರೆ, ಪ್ರಾರಂಭದ ನೋವನ್ನು ನಾವು ಮರೆತಿಲ್ಲ. ನನ್ನಂಥ ಲಕ್ಷಾಂತರ ತಾಯಂದಿರಿದ್ದಾರೆ. ಅವರೆಲ್ಲರ ಪ್ರಶ್ನೆಗಳು ಒಂದೇ. ಏಕೆಂದರೆ ಸಮಸ್ಯೆಯೂ ಒಂದೇ. ಇಂತಹ ಮಕ್ಕಳನ್ನು ಸಾಕುವುದು ಹೇಗೆ? ಅವರಿಗೆ ಜಗತ್ತಿನ ರೀತಿಯನ್ನು, ನಿತ್ಯದ ಕೆಲಸಗಳನ್ನು ಮಾಡಿಕೊಳ್ಳುವುದನ್ನು ಕಲಿಸುವುದು ಹೇಗೆ? ಇಂತಹ ಪ್ರಶ್ನೆಗಳ ಜೊತೆಗೆ, ಸಮಾಜ ಇಂತಹ ಮಕ್ಕಳನ್ನು ನೋಡುವ ರೀತಿಯನ್ನೂ ಜೀರ್ಣಿಸಿಕೊಂಡು ನಾವು ವಿಶಿಷ್ಠಚೇತನ ಮಗುವನ್ನು ಬೆಳೆಸಬೇಕು.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಬೆಳ್ಳಂಬೆಳಿಗ್ಗೆ ಅಪ್ಪಳಿಸಿದ ಆಘಾತ-೨ (ಊರೆಲ್ಲ ನೆಂಟರು, ಕೇರಿಯೆಲ್ಲವೂ ಬಳಗ...)

May 20, 2009 - 11:48am
Chamaraj
(ಗೌರಿಗೆ ಮೊದಲ ಸಲ ಮೂರ್ಛೆರೋಗ ಬಂದಾಗಿನ ಆಘಾತಕ್ಕೆ ಸಹೃದಯಿ ಓದುಗರು, ಮಿತ್ರರು ದೊಡ್ಡ ಸಂಖ್ಯೆಯಲ್ಲಿ ಸ್ಪಂದಿಸಿದ್ದಾರೆ. ಅವರಿಗೆಲ್ಲ ನಾನು ಮತ್ತು ನನ್ನ ಕುಟುಂಬ ಋಣಿ.) ಸರ್ವಜ್ಞನ ವಚನವೊಂದು ಪದೆ ಪದೆ ನನಗೆ ನೆನಪಾಗುತ್ತಿರುತ್ತದೆ: ಊರೆಲ್ಲ ನೆಂಟರು, ಕೇರಿಯೆಲ್ಲವೂ ಬಳಗ ಧಾರುಣಿಯೇ ಕುಲದೈವವಾಗಿರಲು ಯಾರನ್ನು ಬಿಡಲಿ| ಸರ್ವಜ್ಞ
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (3 votes)
To prevent automated spam submissions leave this field empty.
Subscribe to ಬುದ್ಧಿಮಾಂದ್ಯತೆ