20
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ಮೌನ

ಮೂಕ ಮಾತು

September 17, 2008 - 3:52pm
ಸಂಗನಗೌಡ

ನೂರೊಂದು ಮಾತೇಕೆ ಬೇಕು

ನಿನ್ನ ಕಣ್ಣ ಕಿಟಕಿಯಿಂದ ನಿನ್ನ

ಒನಪೆಲ್ಲ ತೋರುತಿರಲು.

 

ಕಟ್ಟಲಾದೀತೇ ಆ ಬೆಡಗು

ಬಿನ್ನಾಣವನು ಮಾತಲ್ಲಿ,

ಕಣ್ಣಲ್ಲೇ ಹರಿಯಲಿ ಬಿಡು,ಜಗವೇ

ಮೂಕತನದಿ ಸಾಗುತಿರಲು. Read more about ಮೂಕ ಮಾತು

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಹೊತ್ತಲ್ಲದ ಹೊತ್ತಿನಲ್ಲಿ ಹೊತ್ತಿಗೆ ತೆರೆದು...

January 21, 2009 - 8:24pm
Chamaraj

ರಾತ್ರಿಯಾಗಿದೆ.

ಎಲೆಕ್ಟ್ರಾನಿಕ್‌ ಗಡಿಯಾರವಾದ್ದರಿಂದ ಟಿಕ್‌ ಟಿಕ್‌ ಸದ್ದಿಲ್ಲ. ಡಿಜಿಟಲ್‌ ಅಂಕೆಗಳಿರುವುದರಿಂದ ಮುಳ್ಳುಗಳು ಕಾಣುವುದಿಲ್ಲ. ಗಂಟೆಗೊಮ್ಮೆ ಸಂಗೀತ ಮೊಳಗಿಸಿ, ಗಂಟೆಯ ಸದ್ದು ಹೊರಡಿಸುವುದನ್ನು ಬಿಟ್ಟರೆ ಗಡಿಯಾರ ತನ್ನ ಗಡಿ ದಾಟಿ ತೊಂದರೆ ಕೊಡುವುದಿಲ್ಲ.

ಮಕ್ಕಳು ಮಲಗಿರುತ್ತವೆ. ಮಡದಿಗೂ ಗಾಢ ನಿದ್ರೆ. ಕಚೇರಿಯ ಉದ್ವೇಗವನ್ನು ಇಳಿಸಿಕೊಳ್ಳಲು ಮೌನವಾಗಿ ಕೂತವನಿಗೆ ಕಂಪ್ಯೂಟರ್‌ ತೆರೆಯುವುದು ಏಕೋ ಬೇಸರ.

ಸ್ವಲ್ಪ ಹೊತ್ತು ಸುಮ್ಮನೇ ಕೂಡುತ್ತೇನೆ. ಸಾವಿರ ನೆನಪುಗಳು ಮುಕುರಿಕೊಳ್ಳುತ್ತವೆ. ಬಾಲ್ಯ, ಹರೆಯ, ಓದಿನ ಗುಂಗು, ಬಡತನ, ಹಳ್ಳಿ, ಬೀಸುವ ಗಾಳಿ, ಕೆಟ್ಟ ಬಿಸಿಲು, ಹಸಿವು ನೆನಪಾಗುತ್ತವೆ. ಗದಗ ಜಿಲ್ಲೆ, ರೋಣ ತಾಲ್ಲೂಕಿನ ಕೋಡಿಕೊಪ್ಪ ಎಂಬ ಹಳ್ಳಿಯಲ್ಲಿ ಕಳೆದ ಮೂರು ವರ್ಷಗಳು ಕಣ್ಮುಂದೆ ಸುಳಿಯುತ್ತವೆ. ನನ್ನ ಬದುಕು ಯಾವತ್ತೂ ಬದಲಾಗುವುದಿಲ್ಲ ಬಿಡು ಅಂತ ಅದೆಷ್ಟು ಸಾವಿರ ಸಲ ಹೇಳಿಕೊಂಡಿದ್ದೆನೋ ಅಲ್ಲಿ. ಆದರೆ, ನೋಡನೋಡುತ್ತ ಬದುಕು ಬದಲಾಗುತ್ತಲೇ ಹೋಯಿತು. ಹೌದು: Things fall apart. ಏಕೆಂದರೆ, centre can not hold.

ಪುಸ್ತಕಗಳು ಸೆಳೆಯುತ್ತವೆ. ಇದ್ದ ಷೆಲ್ಫ್‌ ತುಂಬಿದ್ದರಿಂದ, ಡಬ್ಬದಲ್ಲಿರುವ ಪುಸ್ತಕಗಳನ್ನು ಹೊರತೆಗೆಯಲೇ ಆಗಿಲ್ಲ. ಬೇಂದ್ರೆಯವರ ಬಹುತೇಕ ಕವನ ಸಂಕಲನಗಳು ಒಂದೆಡೆ ಕೂತಿವೆ. ಬೇಂದ್ರೆ ಓದುತ್ತಿದ್ದರೆ ಮನಸ್ಸು ಹರಿಯುವ ನೀರಾಗುತ್ತದೆ. ಅಲ್ಲಮಪ್ರಭು ಹೇಳಿದ್ದಾರಲ್ಲ: ಹರಿವ ನೀರಿಗೆ ಮೈಯೆಲ್ಲಾ ಕೈಕಾಲು. ಎಂಥ ಉದಾತ್ತ ವಿಚಾರ!

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಮಾತು - ಮೌನ

January 23, 2009 - 11:24pm
hpn
ಮೌನ
ಅಂದು ಮನವ ಕಾಡಿದ್ದು ಮೌನ. ಏನೂ ಹೇಳದೆ ಏನೆಲ್ಲ ಹೇಳಿಬಿಟ್ಟಿತ್ತು. ಮರೆತು ಎಂದಿನಂತೆ ದಿಶೆ ಬದಲಾಯಿಸಲು ಹೊರಟರೆ ಮತ್ತೆ ಎಳೆತಂದಿತ್ತು ತನ್ನೆಡೆಗೆ.
ಏನೋ ದುಗುಡ. ಅರ್ಥವಾಗದ್ದು ಎನಿಸುವಷ್ಟು ಒಮ್ಮೆಮ್ಮೆ. ಅರ್ಥವಾಯಿತು ಎಂದುಕೊಂಡಂತೆ ಏನೂ ಅರ್ಥವಾಗದು. ಅರ್ಥವಾದದ್ದೂ ತೇಲಿ ಹೋಯ್ತು ಕರಗಿ ಏನೂ ಉಳಿಯದಂತೆ!

ಏನೆಲ್ಲ ಹೇಳಿಹೋಗಿತ್ತು ಮೌನ! ಆದರೆ ಏನೂ ಬಿಡಿಸದೆ ಒಮ್ಮೆಲೇ ಎಲ್ಲವನ್ನೂ ಬಿಡಿಸುತ್ತ ಕಣ್ಣಮುಚ್ಚಾಲೆಯಾಡುತ್ತ ತುಡಿದಿತ್ತು ಮನದಲ್ಲಿ; ಹಿಡಿದು ತಡೆದಿತ್ತು ಮನದ ಹೊರಳು, ಎಲ್ಲೋ ಇದ್ದುಕೊಂಡು ಇನಿತು ದೂರದಲ್ಲೇ ಇರುವಂತೆ.
ಎಂದೂ ನಿಲ್ಲದ ಮನಸ್ಸಿಗೆ ಅಂದು stalemate.

ಎಲ್ಲಿದೆ ಹಾದಿ? ಎಲ್ಲಿರುವುದು ಮೌನದೊಳಿದ್ದ ಸಮನಾದ ಪ್ರಶ್ನೆ-ಉತ್ತರ - ಇವುಗಳಿಗೆ ಉತ್ತರ?
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಮೌನ ಎಂಬ ಸಮೃದ್ಧ ಭಾಷೆ

February 17, 2009 - 1:40am
Chamaraj
ಚಿಕ್ಕವನಿದ್ದಾಗ ತುಂಬ ಮಾತನಾಡುತ್ತಿದ್ದೆ. ಎಷ್ಟು ಮಾತನಾಡುತ್ತಿದ್ದೆನೆಂದರೆ, ಒಮ್ಮೊಮ್ಮೆ ಏದುಸಿರು ಬರುತ್ತಿತ್ತು. ತುಂಬ ಮಾತನಾಡುತ್ತೀ ಎಂದು ಏಟು ಕೂಡ ತಿಂದಿದ್ದೇನೆ. ಆದರೂ ಮಾತು ನಿಲ್ಲುತ್ತಿರಲಿಲ್ಲ. ಬಹುಶಃ ಹತ್ತನೇ ತರಗತಿಯ ಪರೀಕ್ಷೆಗಳ ನಂತರ ಇರಬೇಕು, ನನ್ನ ಮಾತು ಇದ್ದಕ್ಕಿದ್ದಂತೆ ಕಡಿಮೆಯಾಗತೊಡಗಿತು. ಪಿಯುಸಿ ಮುಗಿಯುವ ಹೊತ್ತಿಗೆ ಅದು ಎಷ್ಟು ಕಡಿಮೆಯಾಯಿತೆಂದರೆ, ಮಾತನಾಡಿದರೆ ನನ್ನ ಧ್ವನಿ ನನಗೇ ಅಪರಿಚಿತ ಅನಿಸುವಷ್ಟು. ಈ ಸಮಯದಲ್ಲಿಯೇ ನನಗೆ ಓದುವ ಹುಚ್ಚು ಅಂಟಿಕೊಂಡಿದ್ದು. ಮೊದಲಿನಿಂದಲೂ ಸಿಕ್ಕಿದ್ದನ್ನು ಓದುವ ಹವ್ಯಾಸವಿತ್ತಾದರೂ, ಓದಲು ಪುಸ್ತಕಗಳೇ ಸಿಗುತ್ತಿರಲಿಲ್ಲ. ಹಳ್ಳಿಯಲ್ಲಿ ಪುಸ್ತಕಗಳನ್ನು ತರುವವರೂ ಕಡಿಮೆ. ಅಪ್ಪ ಮೊದಲಿನಿಂದಲೂ ಹಿಂದಿ ಕಾದಂಬರಿಪ್ರಿಯ. ನಮಗೋ ಹಿಂದಿ ತೀರಾ ದುಬಾರಿ. ಆದರೆ, ಡಿಗ್ರಿಗೆಂದು ಗದಗ್‌ ಸೇರಿದಾಗ ಕಾಲೇಜ್‌ ಹಾಗೂ ಸಾರ್ವಜನಿಕ ಗ್ರಂಥಾಲಯಗಳು ಮನಸ್ಸು ಸೆಳೆದವು. ಕ್ಲಾಸ್‌ ತಪ್ಪಿಸಿ ಕತೆ-ಕಾದಂಬರಿ ಓದುತ್ತ ಕೂತುಬಿಡುತ್ತಿದ್ದೆ. ಹೀಗಾಗಿ ಮಾತು ಇನ್ನಷ್ಟು ಕಡಿಮೆಯಾಯಿತು. ಮಾತಿನ ಜಾಗವನ್ನು ಓದು ತುಂಬಿತು.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಮೌನವೆಂಬ ಒಡವೆ

April 1, 2009 - 2:43am
hamsanandi

ಅರಿವಿಲ್ಲದಿರುವುದ ಮುಚ್ಚಿಡಲೆಂದೇ
ಸರಸಿಜಭವ*ನು ಕೊಟ್ಟಿಹನಲ್ಲ!
ಧರಿಸುವುದೊಳಿತು ಮೌನದ ಒಡವೆಯ
ಅರಿತವರೆ ಸುತ್ತಲು ನೆರೆದಿರುವಲ್ಲಿ

ಸರಸಿಜಭವ = ತಾವರೆಯಲ್ಲಿ ಹುಟ್ಟಿದವನು, ಬ್ರಹ್ಮ

ಸಂಸ್ಕೃತ ಮೂಲ: (ಭರ್ತೃಹರಿಯ ನೀತಿಶತಕದಿಂದ) Read more about ಮೌನವೆಂಬ ಒಡವೆ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಕೊರೆತ

December 2, 2009 - 1:04pm
srinivasps

 

ಕಡಲ ಕೊರೆತಕೇನೋ
ಇಡಬಹುದು ಬಂಡೆಗಳ...
ನಿನ್ನ ಮೌನದಿಂದ
ಹೃದಯದಲುಂಟಾಗುವ ಕೊರೆತಕೆ
ಏನು ಮಾಡಲಿ, ಹೇಳೇ ಸಖೀ???

--ಶ್ರೀ

  Read more about ಕೊರೆತ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಏಕೆ ಬದಲಾದೆ ಗೆಳತಿ?

June 25, 2010 - 11:25am
srinivasps

ಕ್ಲಾಸಿನ ಮೊದಲ ಬೆಂಚಿನ ಕೊನೆಯಲ್ಲಿ
ಪಾಠವನ್ನು ಎವೆಯಿಕ್ಕದೇ ಕೇಳಿಸಿಕೊಳ್ಳುತ್ತಿದ್ದ ನಿನ್ನನಲ್ಲವೇ ಮೆಚ್ಚಿದ್ದು?
ಹತ್ತು-ಹಲವಾರು ಹುಡುಗಿಯರ ಗುಂಪಿನಲ್ಲಿ
ನಿನ್ನಿರುವು ಯಾರಿಗೂ ಅರಿವಿಗೇ ಬಾರದೇ ಇದ್ದದ್ದಕ್ಕಲ್ಲವೇ ಮೆಚ್ಚಿದ್ದು?
ನಿನ್ನೊಳಗಿನ ಜಗವನ್ನು ಬಿಟ್ಟು ಹೊರಗೆ ಬಾರದೆ ಇದ್ದ ಅಂತರ್ಮುಖಿಯನ್ನಲ್ಲವೇ ನಾ ಮೆಚ್ಚಿದ್ದು?
ನನ್ನ ಮನದ ಮಾತು ನಿನಗೆ ತಲಪುವ ಮುನ್ನ ನಿನ್ನೊಳಗಿನ ಭಾವ ಹೇಗಿತ್ತೋ ಅರಿಯೆ...
ನನ್ನ ಪ್ರೇಮದ ಒಕ್ಕಣೆಗೂ ಮೌನವಾಗೆ ಸಮ್ಮತಿಸಿದ್ದೆಯಲ್ಲವೇ?
ಅಂದಿನಿಂದಲೇ ಶುರುವಾಯ್ತು ಹೊಸ ಅಧ್ಯಾಯ...
ನೀ ಬದಲಾದೆ ಗೆಳತಿ...
ಸಮ್ಮೋಹನಗಳಿಸಿದ ಆ ಮೌನ ಮಾಯವಾಯ್ತಲ್ಲ...
ಈಗ, ನನ್ನೊಡನಿದ್ದಾಗ ನಿನ್ನಧರಕೆ ಬಿಡುವಿಲ್ಲ! Read more about ಏಕೆ ಬದಲಾದೆ ಗೆಳತಿ?

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 
Subscribe to ಮೌನ