ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ. ವಿ. ಜಿ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಮುತ್ತಯ್ಯ ಭಾಗವತರು

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಪಾಡ್ಯ

ಮೊನ್ನೆ ಶನಿವಾರ ಒಂದು ಸೊಗಸಾದ ಸಂಗೀತ ಕಚೇರಿಗೆ ಹೋಗುವ ಅವಕಾಶ ದೊರೆತಿತ್ತು. ಒಂದು ಒಳ್ಳೇ ಉದ್ದೇಶಕ್ಕಾಗಿ ಆಯೋಜಿತವಾಗಿದ್ದ ಕಾರ್ಯಕ್ರಮ ಅದು. ಹಾಡುಗಾರ್ತಿ ಹಾಡಲು ಕರ್ನಾಟಕದ ವಾಗ್ಗೇಯಕಾರ ರಚನೆಗಳನ್ನೇ ಆಯ್ದಿದ್ದರು. ಮೈಸೂರು ಸಂಗೀತದ ಒಂದು ಪ್ರಮುಖ ಕೇಂದ್ರವಾದ್ದರಿಂದ ಮೈಸೂರಿನ ವಾಗ್ಗೇಯಕಾರರ ರಚನೆಗಳೇ ಅದರಲ್ಲಿ ಹೆಚ್ಚಾಗಿದ್ದರಲ್ಲಿ ಆಶ್ಚರ್ಯವೇನಿಲ್ಲ.

ಅವರು ಹಾಡಿದ ರಚನೆಗಳಲ್ಲಿ ಮೊದಲ ರಚನೆಯನ್ನು ನವರಾತ್ರಿಯ ಮೊದಲ ದಿನವಾದ ಇಂದು ನಿಮಗೆ ಕೇಳಿಸೋಣ ಎನ್ನಿಸಿತು. ಅದಕ್ಕೆ ಎರಡು ಮೂರು ಕಾರಣಗಳಿವೆ. ಒಂದು ದಸರ ಅಂದರೆ ಮೈಸೂರು, ಮೈಸೂರು ಅಂದರೆ ದಸರಾ ಅನ್ನಿಸುವ ಈ ನವರಾತ್ರಿ ಹಬ್ಬದಲ್ಲಿ, ಮೈಸೂರಿನಲ್ಲಿ ರಚನೆಯಾದ ಇದು ಒಳ್ಳೇ ಆರಂಭವನ್ನು ತರುತ್ತೆ ಎನ್ನುವುದು. ಎರಡನೆಯದು, ಸಂಗೀತ ಕಚೇರಿಯನ್ನು ವರ್ಣದೊಂದಿಗೆ ಆರಂಭಿಸಿದಾಗ ಅದು ಸೊಗಸುತ್ತೆಂಬ ನಂಬಿಕೆಯಂತೆ, ಈ ಹಾಡನ್ನು ಕೇಳುತ್ತ ನವರಾತ್ರಿ ಹಬ್ಬವೂ ಎಲ್ಲರಿಗೂ ಸೊಗಸಲಿ ಎನ್ನುವುದು ನನ್ನ ಆಸೆ. ಮೂರನೆಯ ವಿಷಯಕ್ಕೆ
ಮತ್ತೆ ಬರುವೆ.  ಮುಂದೆ ಓದಿ »

Syndicate content