ಮುಕುರಂ ಕೈಯೊಳಿರಲ್ಕೆ ನೀರ ನೆಳಲೇಕೈ ಕಾಮಧೇನಿರ್ದುಮೂ |
ಟಕೆ ಗೊಡ್ಡಾಕಳನಾಳ್ವರೇ ಗುಣಯುತರ್ ಪಾಲುಂಡು ಮೇಲುಂಬರೇ ||
ಶುಕನೋದಿಂಗುರೆ ಚೆಲ್ವೆ ಕಾಕರವ ರಂಭಾನೃತ್ಯಕಂ ಡೊಂಬರೇ |
ಸಖರಿಂದುನ್ನತ ವಸ್ತುವೇ ಹರ ಹರಾ ಶ್ರೀ ಚೆನ್ನಸೋಮೇಶ್ವರಾ ||

ಮುಕುರ - ಕನ್ನಡಿ, ಕಾಮಧೇನು - ಕೇಳಿದುದನ್ನು ಕೊಡುವ ದೇವಲೋಕದ ಆಕಳು, ಕಾಕರವ - ಕಾಗೆಯ ಕೂಗು.

— ೧೨ನೇ ಶತಮಾತದಲ್ಲಿದ್ದ ಪಾಲ್ಕುರಿಕೆ ಸೋಮ(*) ಎಂಬ ಕವಿ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ರಾಮವರ್ಮ

ಪ್ರಿನ್ಸ್ ರಾಮ ವರ್ಮ


ಪ್ರಿನ್ಸ್ ರಾಮ ವರ್ಮ ಸಂಗೀತಾಸಕ್ತರಿಗೆ ಪರಿಚಿತ ಹೆಸರು. ರಾಮವರ್ಮ ಹಾಡುಗಾರಿಕೆ ಮತ್ತು ವೀಣಾ ವಾದನದಲ್ಲಿ ವಿದ್ವಾಂಸರು. ವಿಕಿಪೀಡಿಯ ದಲ್ಲಿ ಹೇಳುವಂತೆ ಅವರು ’ರಾಜ ಮನೆತನದಲ್ಲೊಬ್ಬ ಸಂಗೀತಗಾರ ಮತ್ತು ಸಂಗೀತಲೋಕಕ್ಕೊಬ್ಬ ರಾಜ!’.
 ಮುಂದೆ ಓದಿ »

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಷಷ್ಟಿ

ಆಗಲೇ ಹಬ್ಬದ ಅರ್ಧದಷ್ಟು ದಿನಗಳು ಕಳೆದಾಗಿದೆ. ಸಂಗೀತದ ವಿಷಯ ಮಾತಾಡುತ್ತ ಹೋದರೆ, ನನಗೆ ನಿಲ್ಲಿಸುವುದಕ್ಕೇ ತಿಳಿಯುವುದಿಲ್ಲ ಅನ್ನಿಸುತ್ತೆ! ಯಾವಾಗಲೂ ಯಾವುದರ ಬಗ್ಗೆ ಬರೆಯಬೇಕೆಂದೇ ತಿಳಿಯದೇ ಹೋಗುತ್ತೆ. ಏಕಂದರೆ ಹೇಳಿದಷ್ಟೂ ಮುಗಿಯುವಂತಿಲ್ಲವಲ್ಲ ಸಂಗೀತ ಸಾಗರ?

ಚಲಿಸದ ಸಾಗರ ಅಂತೊಂದು ಸಿನೆಮಾ ಬಂದಿತ್ತು - ನಾನು ನೋಡಿರಲಿಲ್ಲ. ಬಹುಶಃ ನದಿಗಳು ಹರಿಯುತ್ತವೆ, ಸಮುದ್ರ ಇದ್ದಲ್ಲೇ ಇರುತ್ತೆ ಎನ್ನುವುದು ಅದರ ಒಳಗಿನ ಭಾವ ಇರಬಹುದು. ಆದರೆ, ಈ ಸಂಗೀತ ಸಾಗರ ನಿಜವಾಗಿ ಬದಲಾಗುತ್ತ ಹೋಗುತ್ತಿರುತ್ತದೆ. ಹಾಗಾಗಿ ನಮ್ಮ ಸಂಗೀತದ ಕೆಲವು ಅಂಶಗಳು ಸಾವಿರಾರು ವರ್ಷಗಳಿಂದ ಹಾಗೇ ಉಳಿದಿವೆಯಾದರೂ, ಮತ್ತೆ ಕೆಲವು ವಿಷಯಗಳು ಬದಲಾಗುತ್ತ ಹೋಗಿವೆ ಅನ್ನುವುದು ಬಲ್ಲವರ ಮಾತು.

ಸಂಗೀತದಲ್ಲಿ ಒಂದು ರಾಗ ಕೇಳಲು ಹಿತವಾಗಿರಬೇಕಾದರೆ, ಐದು ಸ್ವರಗಳಾದರೂ ಇರಬೇಕು - ಇಲ್ಲದಿದ್ದರೆ ಅದು ಸೊಗಸುವುದಿಲ್ಲ ಅನ್ನುವ ನಂಬಿಕೆ ಇತ್ತು. ಅದನ್ನು ಬುಡಮೇಲು ಮಾಡಿದವರು ೨೦ ನೇ ಶತಮಾನದ ಒಬ್ಬ ಮಹಾನ್ ಕಲಾವಿದರಾದ ಡಾ.ಬಾಲಮುರಳಿಕೃಷ್ಣ ಅವರು. ಒಮ್ಮೆ ಯಾವುದೋ ಲಹರಿಯಲ್ಲಿ ಹಾಡಿಕೊಳ್ಳುತ್ತಿದ್ದರಂತೆ - ಆಮೇಲೆ ಗಮನಿಸಿ ನೋಡಲು ಅದರಲ್ಲಿ ನಾಕೇ ಸ್ವರಗಳಿದ್ದುದ್ದನ್ನು ಕಂಡು, ಆ ರಾಗಕ್ಕೆ ಲವಂಗಿ ಎನ್ನುವ ಹೆಸರಿಟ್ಟು, ಒಂದು ಕೃತಿಯನ್ನು ರಚಿಸಿದರು. ಆನಂತರ, ಇದೇ ದಾರಿಯಲ್ಲಿ ಹೆಚ್ಚು ಪ್ರಯೋಗಗಳನ್ನು ಮಾಡಿ, ಇನ್ನೂ ಕೆಲವು ಅದೇ ಬಗೆಯ ರಾಗಗಳನ್ನೂ, ಅವುಗಳಲ್ಲಿ ರಚನೆಯನ್ನೂ ಮಾಡಿದ್ದಾರೆ.  ಮುಂದೆ ಓದಿ »

Syndicate content