ಕರ್ಮ ಮಾರ್ಗ ಪ್ರಕೃತಿ ಪರಾಯಣ, ಜ್ಞಾನಮಾರ್ಗ ಆತ್ಮ ಪರಾಯಣ ಮತ್ತು ಭಕ್ತಿಮಾರ್ಗ ಪ್ರಭು ಪರಾಯಣವಾಗಿರುತ್ತದೆ.

— ವಿನೋಬಾ ಭಾವೆ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಪದ್ಮಚರಣ್

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ

ಇವತ್ತು ನವರಾತ್ರಿಯ ಏಳನೇ ದಿನ. ಮತ್ತೆ ಇವತ್ತೇ ಹೆಚ್ಚು ಜನರ ಮನೆಯಲ್ಲಿ ಸರಸ್ವತೀ ಪೂಜೆ ಕೂಡ. ಕೆಲವರು ಮಹಾನವಮಿಯ ಆಯುಧಪೂಜೆಯ ದಿನ ಸರಸ್ವತೀ ಪೂಜೆ ಮಾಡುವುದೂ ಉಂಟು.ಸರಸ್ವತಿ ಎಂದರೆ ನನಗೆ ನೆನಪಾಗುವುದು ಶೃಂಗೇರಿಯ ಶಾರದೆ. ಅದೆಂತಹ ಪ್ರಶಾಂತ ಸ್ಥಳ? ಅಲ್ಲಿ ದಸರೆಯ ಸಮಯದಲ್ಲಿ ನಡೆಯುವುವ ಪೂಜೆಗಳೂ ಹೆಚ್ಚಾಯದ್ದೇ. ಮಳಗಾಲ ಮುಗಿಯುತ್ತ ಬಂದಿರುವುದರಿಂದ ತಿಳಿಯಾಗಿ ಹರಿಯುವ ತುಂಗೆ. ಅದಕ್ಕೇ ಇರಬೇಕು ಶೃಂಗೇರಿಯ ಶಾರದೆಯ ಮೇಲಿರುವ ಸಂಗೀತ ರಚನೆಗಳಿಗೂ ಕೊರತೆ ಇಲ್ಲ.

ಕೆಲವು ಪ್ರಸಿದ್ಧ ಸರಸ್ವತೀ ಸ್ತುತಿಗಳನ್ನು ಕನ್ನಡಕ್ಕೆ(ಭಾವಾನುವಾದದಲ್ಲಿ) ತಂದಿರುವೆ. ಓದಿ, ನಂತರ ಹಾಡು ಕೇಳಬಹುದು. ಅಲ್ಲವೇ?

ಸರಸತಿಯೆ ತಲೆಬಾಗುವೆನು ಮನದಾಸೆಗಳನೀವಳೆ
ಅರಿವಿನಾಸೆಯೆನಗಿರಲು ಹರಸು ಕೈಗೂಡುತಿರಲೆಂದು  ಮುಂದೆ ಓದಿ »

Syndicate content