19
June
2013

ಗೌರಿ

ಬದುಕೇ, ನಿನಗೊಂದು ಥ್ಯಾಂಕ್ಸ್‌

October 8, 2008 - 3:29pm
Chamaraj
ಎರಡು ದಿನ ಯೋಗಾಸನ, ವ್ಯಾಯಾಮ ಬಿಟ್ಟರೆ ಮನಸ್ಸಿಗೆ ಏನೋ ತಹತಹ. ಛೇ, ಹೀಗಾದರೆ, ಕ್ರಮೇಣ ನಾನು ಸೋಮಾರಿಯಾಗುತ್ತೇನೆ. ನಸುಕಿನಲ್ಲಿ ಏಳಲು ಆಗುವುದಿಲ್ಲ. ಆರೋಗ್ಯ ಕೆಡುತ್ತದೆ. ತಿಂದು ತಿಂದು ಡುಮ್ಮಣ್ಣನಾಗುತ್ತೇನೆ ಎಂದು ಅಂದುಕೊಂಡು, ಹೆದರಿಸಿ, ಹದ ಮೀರಿದ ದಿನಚರಿಯನ್ನು ಮತ್ತೆ ಹಳಿಗೆ ಹತ್ತಿಸುತ್ತೇನೆ. ಊಟ ಮಾಡುವಾಗಲೂ ಅಷ್ಟೇ. ಮೊದಲಿನಿಂದ ಸರಳ ಆಹಾರ ಇಷ್ಟ.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಪ್ರಾರ್ಥಿಸಲೊಂದು ಬೇರೆಯದೇ ಬಗೆ :)

October 14, 2008 - 12:02am
hamsanandi

ಅಯ್ಯೋ ಗಣೇಶ! ಯಾಕೋ ನೀನಳುವೆ? ನನ್ನ ಕಿವಿಗಳನ್ನೆಳೀತಿದಾನೆ ನೋಡಮ್ಮ!
ಯಾಕೋ ಸ್ಕಂದ? ಯಾಕೀ ಚೇಷ್ಟೆ? ಅವನು ಯಾಕೆ ಮುಂಚೆ ನನ್ನ ಕಣ್ಣೆಣಿಸಿದ್ದು?
ಆನೇ ಮೊಗದವನೇ! ಇದು ಸರಿಯೇನೋ? ನನ್ನ ಮೂಗನ್ನಳೆದಿದ್ದವನೇ ತಾನೇ?
ಇದಕೇಳುತಲೇನೂ ತೋಚದೆ ಹುಸಿಕೋಪವತೋರಿದ ಗೌರಿಯೆ ಕಾಯಲೆಮ್ಮೆಲ್ಲರನ್ನು!


ಸಂಸ್ಕೃತ ಮೂಲ ಹೀಗಿದೆ: Read more about ಪ್ರಾರ್ಥಿಸಲೊಂದು ಬೇರೆಯದೇ ಬಗೆ :)

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಬೆಳ್ಳಂಬೆಳಿಗ್ಗೆ ಅಪ್ಪಳಿಸಿದ ಆಘಾತ-೧

April 5, 2009 - 9:52am
Chamaraj
ಅದು ಮಾರ್ಚ್‌ ತಿಂಗಳ ಮೂರನೇ ವಾರದ ಕೊನೆ. ಎಂದಿನಂತೆ ನಸುಕಿನಲ್ಲಿ ಎದ್ದು ಕಂಪ್ಯೂಟರ್‌ ಮುಂದೆ ಪತ್ರಿಕೆಗಳ ಅಂತರ್ಜಾಲ ತಾಣಗಳನ್ನು ಹುಡುಕಿ ಓದುತ್ತ, ನೋಟ್ಸ್‌ ಮಾಡಿಕೊಳ್ಳುತ್ತಾ ಕೂತಿದ್ದೆ. ಸಮಯ ಆಗಲೇ ಆರೂ ಕಾಲು. ಇನ್ನೊಂದು ಹದಿನೈದು ನಿಮಿಷ ಸಮಯ. ಮಕ್ಕಳು ಏಳುತ್ತವೆ. ಅವರ ಮುಖ ತೊಳೆದು, ಒಂದಿಷ್ಟು ಹಾಲು ಕುಡಿಸಿಕೊಂಡು ವಾಕಿಂಗ್‌ ಹೋಗುವುದು ರೂಢಿ. ಮತ್ತೈದು ನಿಮಿಷದಲ್ಲಿ ಚಿಕ್ಕವಳು ಎದ್ದಳು. ರೇಖಾ ಅವಳನ್ನು ರೆಡಿ ಮಾಡುವಷ್ಟರಲ್ಲಿ ದೊಡ್ಡ ಮಗಳು ಗೌರಿ ಕೂಡ ಎದ್ದು ಕೂತಳು. ಹಾಗೇ ಬಿಟ್ಟರೆ ಹಾಸಿಗೆಯಲ್ಲೇ ಸೂಸೂ ಮಾಡುತ್ತಾಳೆಂದು ಅವಳನ್ನು ಎಬ್ಬಿಸಿದ ರೇಖಾ ಬಾತ್‌ರೂಮಿನ ಕಡೆ ನಡೆಸಿಕೊಂಡು ಬಂದಳು. ಏಕೋ ಗೌರಿ ನಡೆಯಲು ಹಠ ಮಾಡಿದಳು. ಅದು ಹಳೆಯ ಅಭ್ಯಾಸ. ಬಾತ್‌ರೂಮಿನ ನೆಲ ತಂಪಗಿರುತ್ತದೆ. ಎದ್ದ ಕೂಡಲೇ ಕಾಲು ನೆನೆಸಿಕೊಳ್ಳಲು ಆಕೆ ಇಷ್ಟಪಡುವುದಿಲ್ಲ.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಬೆಳ್ಳಂಬೆಳಿಗ್ಗೆ ಅಪ್ಪಳಿಸಿದ ಆಘಾತ-೨ (ಊರೆಲ್ಲ ನೆಂಟರು, ಕೇರಿಯೆಲ್ಲವೂ ಬಳಗ...)

May 20, 2009 - 11:48am
Chamaraj
(ಗೌರಿಗೆ ಮೊದಲ ಸಲ ಮೂರ್ಛೆರೋಗ ಬಂದಾಗಿನ ಆಘಾತಕ್ಕೆ ಸಹೃದಯಿ ಓದುಗರು, ಮಿತ್ರರು ದೊಡ್ಡ ಸಂಖ್ಯೆಯಲ್ಲಿ ಸ್ಪಂದಿಸಿದ್ದಾರೆ. ಅವರಿಗೆಲ್ಲ ನಾನು ಮತ್ತು ನನ್ನ ಕುಟುಂಬ ಋಣಿ.) ಸರ್ವಜ್ಞನ ವಚನವೊಂದು ಪದೆ ಪದೆ ನನಗೆ ನೆನಪಾಗುತ್ತಿರುತ್ತದೆ: ಊರೆಲ್ಲ ನೆಂಟರು, ಕೇರಿಯೆಲ್ಲವೂ ಬಳಗ ಧಾರುಣಿಯೇ ಕುಲದೈವವಾಗಿರಲು ಯಾರನ್ನು ಬಿಡಲಿ| ಸರ್ವಜ್ಞ
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (3 votes)
To prevent automated spam submissions leave this field empty.

ಅವತ್ತಿನಿಂದ ನಾವು ಪ್ರಬುದ್ಧರಾಗತೊಡಗಿದೆವು...

November 24, 2009 - 5:36pm
Chamaraj

ಏಪ್ರಿಲ್‌ಗೆ ಏಳು ವರ್ಷಗಳಾದವು.

ಕಳೆದ ಏಳು ವರ್ಷಗಳಲ್ಲಿ ಬದುಕು ನಮ್ಮನ್ನು ಅವಶ್ಯಕತೆಗಿಂತ ಹೆಚ್ಚು ಪ್ರಬುದ್ಧರನ್ನಾಗಿಸಿದೆ. ಮಾಗಿಸಿದೆ. ಪೀಡಿಸಿದೆ. ಎಂದೂ ಮರೆಯದ ಪಾಠಗಳನ್ನು ಕಲಿಸಿದೆ.

ಇವೆಲ್ಲಕ್ಕಿಂತ ಹೆಚ್ಚಿನ ಪಾಠಗಳನ್ನು ನಮ್ಮ ಏಳು ವರ್ಷದ ಮಗಳು ಗೌರಿ ಕಲಿಸಿದ್ದಾಳೆ. ಇನ್ನೂ ಕಲಿಸುತ್ತಲೇ ಇದ್ದಾಳೆ. Read more about ಅವತ್ತಿನಿಂದ ನಾವು ಪ್ರಬುದ್ಧರಾಗತೊಡಗಿದೆವು...

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (5 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಗೌರಿಯ ಗುಟ್ಟು

April 29, 2010 - 1:59am
hamsanandi

"ಬೆವೆತಿಹೆಯೇಕೆ ಹೀಗೆ ನಲ್ಲೆ?" "ಉರಿಯಿಹುದಲ್ಲ ನಿನ್ನ ಕಣ್ಗಳಲೆ "
"ನಡುಕವೇಕೆ ತಿಂಗಳಮೊಗದವಳೆ?" "ಕೊರಳ ಹಾವಿನ ಅಂಜಿಕೆ"
"ದೇವಿ, ಮೈನವಿರೆದ್ದಿದೆಯಲ್ಲ?" "ಗಂಗೆಯ ತುಂತುರಿನಿಂದ"
ಇಂತು ಸಂಗಾತಿಯಲಿ ಇಂಗಿತವ ಮುಚ್ಚಿಡುವ ಗೌರಿ ಕಾಯಲೆಮ್ಮನ್ನು!

ಸಂಸ್ಕೃತ ಮೂಲ: (ಸುಭಾಷಿತ ರತ್ನಕೋಶದಿಂದ)

ಸ್ವೇದಸ್ತೇ ಕಥಮೀದೃಶಃ ಪ್ರಿಯತಮೇ ತ್ವನ್ನೇತ್ರವಹ್ನೇರ್ವಿಭೋ
ಕಸ್ಮಾದ್ವೇಪಿತಮೇತಾದಿಂದು ವದನೇ ಭೋಗೀಂದ್ರಭೀತೇರ್ಭವ ।
ರೋಮಾಂಚಃ ಕಥಮೇಶ ದೇವಿ ಭಗವನ್ ಗಂಗಾಂಭಸಾಂ ಶೀಕರೈಃ
ಇತ್ಥಂ ಭರ್ತಾರಿ ಭಾವಗೋಪನಪರಾ ಗೌರೀ ಚಿರಂ ಪಾತು ವಃ ॥


स्वॆदस्तॆ कथमीदृशः प्रियतमॆ त्वन्नॆत्रवह्नॆर्विभॊ Read more about ಗೌರಿಯ ಗುಟ್ಟು

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಸರಣಿ: 

ಗಾನ ವನ ಮಯೂರಿ

April 6, 2011 - 11:34pm
hamsanandi

ಇವತ್ತು (ಏಪ್ರಿಲ್ ೬,೨೦೧೧)  ಸಂಗೀತಪ್ರೇಮಿಗಳನ್ನು ಅಗಲಿದ ಸಂಗೀತ ಕಲಾಚಾರ್ಯ ಶ್ರೀಮತಿ ಕಲ್ಪಕಂ ಸ್ವಾಮಿನಾಥನ್ (೧೯೨೨-೨೦೧೧) ಮುತ್ತುಸ್ವಾಮಿ ದೀಕ್ಷಿತರ ಶಿಷ್ಯ ಪರಂಪರೆಯ ಒಂದು ಮುಖ್ಯ ಕೊಂಡಿ.ಇವತ್ತು ಅವರು ಸಂಗೀತ ಪ್ರೇಮಿಗಳ ಜೊತೆ ಇಲ್ಲದಿರಬಹುದು. ಆದರೆ, ಅವರ ಸಂಗೀತ ಇನ್ನೂ ನಮ್ಮೊಡನೆ ಇದೆ. ಮತ್ತೆ ಇನ್ನೂ ಬಹುಕಾಲ ಇರುವುದು.

ಚಿತ್ರ ಕೃಪೆ: ವಿಜಯ್ ಶರ್ಮ Picture Courtesy: Vijay Sarma

ಸುಮಾರು ಇಪ್ಪತ್ತು ವರ್ಷಗಳ ಹಿಂದೆ ನಾನು ಅವರ ಹೆಸರನ್ನೂ ಕೇಳಿರಲಿಲ್ಲ. ಸ್ವತಃ ನಾನೇ ಚೆನ್ನೈ ವಾಸಿಯಾಗಿ ಹದಿನೆಂಟು ತಿಂಗಳು ಕಳೆದಿದ್ದಾಗಲೂ ಒಮ್ಮೆಯೂ ಅವರ ಕಚೇರಿಯನ್ನು ಕೇಳಿರಲಿಲ್ಲ. ಎಂತಹ ದುರದೃಷ್ಟ! ನಂತರ ನನಗೆ ಅವರ ಕಚೇರಿಯನ್ನು ನೇರವಾಗಿ ಕೇಳುವ ಅವಕಾಶವೂ ಸಿಗಲೇ ಇಲ್ಲ.
Read more about ಗಾನ ವನ ಮಯೂರಿ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4 (1 vote)
To prevent automated spam submissions leave this field empty.

ಮಾರವೈರಿ ರಮಣಿ

August 30, 2011 - 2:01am
hamsanandi

 ನಾಡಿದ್ದು ಗೌರಿ ಹಬ್ಬ. ಗೌರಿಯ ಹಬ್ಬಕ್ಕೆ ಮುನ್ನುಡಿಯಾಗಿ ಗೌರಿಯ ಮೇಲಿನ ಒಂದು ಸೊಗಸಾದ ರಚನೆಯನ್ನು ಕೇಳುಗರೊಂದಿಗೆ ಹಂಚಿಕೊಳ್ಳೋಣವೆನ್ನಿಸಿ ಈ ಚುಟುಕಾದ ಬರಹ. 

ನನಗೆ ಇವತ್ತು ನೆನಪಾದ್ದು ತ್ಯಾಗರಾಜರದ್ದು ಎನ್ನಲಾದ, ನಾಸಿಕಾಭೂಷಣಿ ರಾಗದ, ರೂಪಕತಾಳದ ಮಾರವೈರಿ ರಮಣಿ ಎನ್ನುವ ರಚನೆ. ಮೊದಲು ಸಾಹಿತ್ಯವನ್ನು ಓದಿ. 

ಪಲ್ಲವಿ: 
ಮಾರವೈರಿ ರಮಣಿ ಮಂಜು ಭಾಷಿಣೀ ||ಮಾರವೈರಿ|| 

ಅನುಪಲ್ಲವಿ: 
ಕ್ರೂರ ದಾನವೇಭವಾರಣಾರೀ ಶ್ರೀಗೌರೀ ||ಮಾರವೈರಿ|| 

ಚರಣ: 
ಕರ್ಮಬಂಧವಾರಣ ನಿಷ್ಕಾಮಚಿತ್ತ ವರದೇ 
ಧರ್ಮವರ್ಧನೀ ಸದಾ ವದನಹಾಸೇ ಶುಭಫಲದೇ ||ಮಾರವೈರಿ|| 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4 (3 votes)
To prevent automated spam submissions leave this field empty.
Subscribe to ಗೌರಿ