"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

— ಕುವೆಂಪು ('ಕನ್ನಡ ದೀಕ್ಷೆ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಬಿಲಹರಿ

ಸಂಗೀತ ನವರಾತ್ರಿ - ವಿಜಯ ದಶಮಿ

ಚಾಮುಂಡೇಶ್ವರಿ

ಇವತ್ತು ವಿಜಯ ದಶಮಿ.ನವರಾತ್ರಿಯ ಕಡೇ ದಿನ. ಮೈಸೂರಿನಲ್ಲಿ ಜಂಬೂಸವಾರಿಯಲ್ಲಿ  ದೇವಿ ಚಾಮುಂಡೇಶ್ವರಿಯ ಮೆರವಣಿಗೆ ಹೋಗುವ ಈ ದಿನ ಕೇಳಿಸಲು ವಾಗ್ಗೇಯಕಾರ ಮೈಸೂರು ವಾಸುದೇವಾಚಾರ್ಯರ ಬಿಲಹರಿ ರಾಗದ ಶ್ರೀ ಚಾಮುಂಡೇಶ್ವರಿ ಪಾಲಯ ಮಾಂ ಎನ್ನುವ ರಚನೆ ಈ ವರ್ಷದ ಸರಣಿಗೆ ಸರಿಯಾದ ಮಂಗಳವೆಂದು ನನ್ನ ಅನಿಸಿಕೆ.

ಮೈಸೂರು ವಾಸುದೇವಾಚಾರ್ಯರು ಅವರ ಸಂಗೀತ ಪರಂಪರೆಯಂತೆ ಸಂಸ್ಕೃತ ಮತ್ತು ತೆಲುಗು ಭಾಷೆಗಳಲ್ಲೇ ಕೃತಿಗಳನ್ನು ರಚಿಸಿದವರು. ಈ ಬಿಲಹರಿ ರಾಗದ ಕೃತಿಯಂತೂ ಸೊಗಸಾದ ರಚನೆ. ವಾಸುದೇವಾಚಾರ್ಯರ ಅತೀ ಪ್ರಸಿದ್ಧ ರಚನೆಗಲ್ಲಿದೂ ಒಂದು ಎಂದು ಖಂಡಿತ ಹೇಳಬಹುದು. ಈ ಹಾಡಿನ ಸಾಹಿತ್ಯ ಹೀಗಿದೆ.

ಶ್ರೀ ಚಾಮುಂಡೇಶ್ವರಿ ಪಾಲಯ ಮಾಂ ಕೃಪಾಕರಿ ಶಂಕರಿ
ಶೃತಜನಪಾಲಿನಿ ಮಹಾಬಲಾದ್ರಿವಾಸಿನಿ ಮಹಿಷಾಸುರ ಮರ್ದಿನಿ|| ಪಲ್ಲವಿ||  ಮುಂದೆ ಓದಿ »

Syndicate content