22
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ಬಾಣ

ಆರದ ಗಾಯ

April 24, 2009 - 11:10pm
hamsanandi

ಕೊಡಲಿಯೇಟು ಬಿದ್ದರೂ
ಮರವು ಚಿಗುರಬಹುದು;
ಅಂಬಿನೇಟು ಬಿದ್ದ ಮೇಲೂ
ಗಾಯ ಮಾಯಬಹುದು;

ಕೆಡುಕರ ಕಹಿ ನುಡಿಯ
ಘೋರ ಮಾತಿನೇಟು
ಬಿದ್ದರೆಂದೂ ಮಾಯದು
ಮನಕೆ ಆದ ಏಟು.

 

ಸಂಸ್ಕೃತ ಮೂಲ:

ಸಂರೋಹತಿ ಶರೈರ್ವಿದ್ಧಂ ವರಂ ಪರಶುನಾ ಹತಂ |
ವಾಚಾ ದುರುಕ್ತಂ ಭೀಭತ್ಸಂ ನ ಸಂರೋಹತಿ ವಾಕ್‍ಕ್ಷತಮ್ ||

-ಹಂಸಾನಂದಿ

  Read more about ಆರದ ಗಾಯ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.3 (7 votes)
To prevent automated spam submissions leave this field empty.
ಸರಣಿ: 

ಕಮ್ಮಗೋಲನ ಚತುರ ಬಿಲ್ಗಾರಿಕೆ

April 23, 2010 - 12:11pm
hamsanandi

ಹಲವು ಬಿಲ್ಲಾರರು ಇರುವರು ಜಗದಲ್ಲಿ
ಅಂಬಿನಲಿ ಒಂದನೆರಡಾಗಿ ಸೀಳುವವರು;
ಕಮ್ಮಗೋಲ*ನೋರ್ವ  ಬೇರೆತೆರದ ಬಿಲ್ಲಾಳು
ಗುರಿಯಿಟ್ಟು ಇಬ್ಬರನು ಒಂದಾಗಿಸುವವನು!

ಸಂಸ್ಕೃತ ಮೂಲ:

ಏವಸ್ತುಂ ದ್ವಿಧಾ ಕರ್ತುಮ್ ಬಹವಃ ಸಂತಿ ಧನ್ವಿನಃ ।
ಧನ್ವೀ ಸ ಮಾರ ಏವೈಕೋ ದ್ವಯೋಃ ಐಕ್ಯಃ ಕರೋತಿ ಯಃ ॥

एकवस्तुम् द्विधा कर्तुम् बहवः सन्ति धन्विनः ।
धन्वी स मार एवैको द्वयोः ऐक्यः करोति यः ॥

-ಹಂಸಾನಂದಿ
Read more about ಕಮ್ಮಗೋಲನ ಚತುರ ಬಿಲ್ಗಾರಿಕೆ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4 (2 votes)
To prevent automated spam submissions leave this field empty.

ಬಿಲ್ಲುಗಾರ್ತಿಗೆ

July 29, 2010 - 11:41pm
hamsanandi

ಚೆಲುವೆ! ನಿನ್ನಂಥ ಬಿಲ್ಗಾರ್ತಿ
ಸುಲಭದಲಿ ಕಾಣಸಿಗುವುದಿಲ್ಲ;
ಬಾಣ ಹೂಡದೆ ಬರಿ ಸೆಳೆತದಲೇ**
ಮನಸುಗಳನು ಸೀಳಿಬಿಡುವೆಯಲ್ಲ!

ಸಂಸ್ಕೃತ ಮೂಲ (ಭರ್ತೃಹರಿಯ ಶೃಂಗಾರಶತಕದಿಂದ)

ಮುಗ್ಧೇ ಧಾನುಷ್ಕತಾ ಕೇಯಮಪೂರ್ವಾ ದೃಶ್ಯತೇ ತ್ವಯಿ |
ಯದಾ ವಿಧ್ಯಸಿ ಚೇತಾಂಸಿ ಗುಣೇರೈವ ನ ಸಾಯಕೈಃ ||

-ಹಂಸಾನಂದಿ
Read more about ಬಿಲ್ಲುಗಾರ್ತಿಗೆ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.

ಮೊಂಡು ಬುದ್ಧಿಯವರು

January 28, 2011 - 12:58am
hamsanandi

ಚುರುಕು ಬುದ್ಧಿಯವರು
ಮೊನಚು ಅಂಬಿನಂತೆ;
ತುಸು ಸೋಂಕಿದರೂ
ನೇರ ಒಳ ಹೊಗುವರು.

ಮೊಂಡ ಬುದ್ಧಿಯವರೋ
ಬೀರಿದ ಕಲ್ಲಿನಂತೆ;
ಎಷ್ಟು ತಗುಲಿದರೂ
ಹೊರಗೇ ಉಳಿವರು!


ಸಂಸ್ಕೃತ ಮೂಲ (ಶಿಶುಪಾಲವಧ , ೨-೭೮) :

ಸ್ಪೃಶಂತಿ ಶರವತ್ತೀಕ್ಷ್ಣಾಃ ಸ್ತೋಕಮಂತರ್ವಿಶಂತಿ ಚ |
ಬಹುಸ್ಪೃಶಾSಪಿ ಸ್ಥೂಲೇನ ಸ್ಥೀಯತೇ ಬಹಿರಶ್ಮವತ್ ||

-ಹಂಸಾನಂದಿ Read more about ಮೊಂಡು ಬುದ್ಧಿಯವರು

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.
ಸರಣಿ: 
Subscribe to ಬಾಣ