ಇಂದು ಓದಿದ ವಚನ:ಎಲ್ಲ ಹೂವೂ ಹಣ್ಣಾಗುವುದಿಲ್ಲ: ಜೇಡರ ದಾಸಿಮಯ್ಯ
ಇಂದು ಓದಿದ ವಚನ:ಗೆಲುವೋ ಸೋಲೋ ಚಿಂತೆ ಬೇಡ:ಸಗರದ ಬೊಮ್ಮಣ್ಣ
ಇಂದು ಓದಿದ ವಚನ;ಸುಖ ದುಃಖದ ನಕ್ಷತ್ರ: ಸಿದ್ಧರಾಮ
ಸುಖ ದುಃಖದ ನಕ್ಷತ್ರ
ಆಕಾಶದಲ್ಲಿ ತಾರೆಗಳು ಕಾಣಬಾರದೆಂಬಯೋಚನೆಯುಳ್ಳಡೆ ಸೂರ್ಯೋದಯಕ್ಕಯ್ಯಾ
ಆಕಾಶದಲ್ಲಿ ತಾರೆಗಳು ಕಾಣಬೇಕೆಂಬಯೋಚನೆಯುಳ್ಳಡೆ ಸೂರ್ಯಾಸ್ತಮಾನಕ್ಕಯ್ಯಾ
ಕಾಣಬಾರದು ಕಾಣಬಾರದು ಜ್ಞಾನದಲ್ಲಿ ಆನಂದಅನಾನಂದವ
ಕಾಣಬಹುದು ಕಾಣಬಹುದು ಅಜ್ಞಾನದಲ್ಲಿಸುಖದುಃಖೋಭಯದ್ವಂದ್ವವ
ಭೋ ಭೋ ಕಪಿಲಸಿದ್ಧಮಲ್ಲಿಕಾರ್ಜುನಾ ಭೋ
ಸಿದ್ಧರಾಮನ ಈ ವಚನ ನಿತ್ಯಾನುಭವದರೂಪಕವೊಂದನ್ನು ಬಳಸಿಕೊಂಡು ಜ್ಞಾನದ ಸ್ವರೂಪವನ್ನು ಹೇಳುತ್ತದೆ.
ಇಂದು ಓದಿದ ವಚನ: ಸಿದ್ಧರಾಮ: ಅರ್ಥ ಎಲ್ಲಿದೆ?
ರೇಖೆ ರೇಖೆ ಕೂಡಿದಲ್ಲಿ ಅಕ್ಷರವಾದವು
ಅಕ್ಷರಾಕ್ಷರ ಕೂಡಿದಲ್ಲಿ ಶಬ್ದವಾಯಿತ್ತು
ಶಬ್ದ ಶಬ್ದ ಕೂಡಿದಲ್ಲಿ ಗ್ರಂಥಾನ್ವಯವಾಯಿತ್ತು
ಅಕ್ಷರದಲ್ಲಿಲ್ಲ
ಶಬ್ದದಲ್ಲಿಲ್ಲ
ಗ್ರಂಥಾನ್ವಯದಲ್ಲಿಲ್ಲ
ಏನೆಂಬುದಿಲ್ಲ
ಮೊದಲೆ ಇಲ್ಲ
ಇಲ್ಲವೆಂಬುವ ಅಹುದೆಂಬುವ ಉಭಯ ಶಬ್ದಕ್ಕೆಲೋಪವಿಲ್ಲ ನೋಡಾ
ಕಪಿಲಸಿದ್ಧ ಮಲ್ಲಿಕಾರ್ಜುನ ಮಹಾಮಹಿಮನು
ಸಿದ್ಧರಾಮನ ಈ ವಚನ ಅರ್ಥದ ಮೀಮಾಂಸೆಯ ಆರಂಭಬಿಂದುವಿನಂತಿದೆ.
ಇಂದು ಓದಿದ ವಚನ: ಯಾವ ಮಾದರಿಯೂ ಇಲ್ಲ: ಸಿದ್ಧರಾಮ
ಗುರುವಿಂಗೆ ಗುರುವಿಲ್ಲ
ಲಿಂಗಕ್ಕೆ ಲಿಂಗವಿಲ್ಲ
ಜಂಗಮಕ್ಕೆ ಜಂಗಮವಿಲ್ಲ
ನನಗೆ ನಾನಿಲ್ಲ
ಕಣ್ದೆರೆದು ನೋಡುವಡೆ ಆರಿಗೆ ಆರೂ ಇಲ್ಲ
ಕಪಿಲಸಿದ್ಧಮಲ್ಲಿಕಾರ್ಜುನಾ
ಸಿದ್ಧರಾಮನ ವಚನ ಇದು.
ಮಾದರಿಗಳನ್ನು ಅನುಸರಿಸುವವರು ಹೇಳಹೆಸರಿಲ್ಲದಾಗುತ್ತಾರೆ
ಇಂದು ಓದಿದ ವಚನ: ಹೆಣ್ಣು-ದೇವರು: ಸಿದ್ಧರಾಮ
ತಾ ಮಾಡಿದ ಹೆಣ್ಣು ತನ್ನ ತಲೆಯನೇರಿತ್ತು
ತಾ ಮಾಡಿದ ಹೆಣ್ಣು ತನ್ನ ತೊಡೆಯನೇರಿತ್ತು
ತಾ ಮಾಡಿದ ಹೆಣ್ಣು ಬ್ರಹ್ಮನ ನಾಲಿಗೆಯನೇರಿತ್ತು
ತಾ ಮಾಡಿದ ಹೆಣ್ಣು ನಾರಾಯಣನ ಎದೆಯನೇರಿತ್ತು
ಅದು ಕಾರಣ ಹೆಣ್ಣು ಹೆಣ್ಣಲ್ಲ
ಹೆಣ್ಣು ರಾಕ್ಷಸಿಯಲ್ಲ
ಹೆಣ್ಣು ಪ್ರತ್ಯಕ್ಷ ಕಪಿಲಸಿದ್ಧಮಲ್ಲಿಕಾರ್ಜುನ
ನೋಡಾ
ಇಂದು ಓದಿದ ವಚನ: ಲೀಢವಾಗಿರಬಾರದು: ಸಿದ್ಧರಾಮ
ಮಾಡುವುದು ಮಾಡಲೇ ಬೇಕು
ನೋಡಿ ಮಾಡಿ ಮನದಲ್ಲಿ ಲೀಢವಾಗಿರಬಾರದು ನೋಡಾ
ಕಪಿಲಸಿದ್ಧಮಲ್ಲಿಕಾರ್ಜುನಾ
[ಲೀಢ-ನೆಕ್ಕು, ಆಸ್ವಾದಿಸು, ರುಚಿ ನೋಡು].
ಸಿದ್ಧರಾಮನ ಈ ವಚನ ವೈರಾಗ್ಯವೆಂಬ ಕಲ್ಪನೆಯ ಭಾಷ್ಯದಂತಿದೆ.
ಇಂದು ಓದಿದ ವಚನ: ನೀರಿನಂಥ ಮನಸ್ಸು: ಸಿದ್ಧರಾಮ
ನೀರ್ಗುಡಿಯಲೆಂದು ಪೋದಡೆ
ಸುಡು ಪೋಗೆಂದು ನೂಂಕಿತ್ತೆ ಜಲ
ಅದರಂತಿರಬೇಡಾ ಹಿರಿಯರ ಮನ
ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ
ನಿಮ್ಮದೊಂದು ಸಮತಾಗುಣವನ್ನನೆಂದು ಪೊದ್ದಿರ್ಪುದು ಹೇಳಾ
ಕಪಿಲಸಿದ್ಧಮಲ್ಲಿಕಾರ್ಜುನಾ
ಇಂದು ಓದಿದ ವಚನ: ಓರಂತಿಪ್ಪುದೆ ಸಮತೆ: ಸಿದ್ಧರಾಮ
ಆರು ಜರಿದವರೆನ್ನ ಮನದ ಕಾಳಿಕೆಯಕಳೆದರೆಂಬುದೆ ಸಮತೆ
ಆರು ಸ್ತೌತ್ಯವ ಮಾಡಿಹರೆನ್ನ ಜನ್ಮಜನ್ಮದ ಹಗೆಗಳೆಂಬುದೆ ಸಮತೆ
ಇಂತಿದು ಗುರುಕಾರುಣ್ಯ
ಮನವಚನಕಾಯದಲ್ಲಿ ಅವಿತತವಿಲ್ಲದಿರ್ದಡೆ Read more about ಇಂದು ಓದಿದ ವಚನ: ಓರಂತಿಪ್ಪುದೆ ಸಮತೆ: ಸಿದ್ಧರಾಮ
ಇಂದು ಓದಿದ ವಚನ: ಅಸಾಧ್ಯ: ಘಟ್ಟಿವಾಳಯ್ಯ
ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ
ಅಯ್ಯಾ
ನೆನಹಿಂಗೆ ಬಾರದುದ ಕಾಂಬುದು ಹುಸಿ
ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ
ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲನಿಲ್ಲು ಮಾಣು
ಇಂದು ಓದಿದ ವಚನ: ಘನ: ಘಟ್ಟಿವಾಳಯ್ಯ
ಭೂಮಿ ಘನವೆಂಬೆನೆ
ಪಾದಕ್ಕೊಳಗಾಯಿತ್ತು
ಗಗನ ಘನವೆಂಬೆನೆ
ಕಂಗಳಿಗೊಳಗಾಯಿತ್ತು
ಮಹವು ಘನವೆಂಬೆನೆ
ಮಾತಿಂಗೊಳಗಾಯಿತ್ತು
ಘನವೆಂಬುದಿನ್ನೆಲ್ಲಿಯದೆಲವೋ Read more about ಇಂದು ಓದಿದ ವಚನ: ಘನ: ಘಟ್ಟಿವಾಳಯ್ಯ
ಇಂದು ಓದಿದ ವಚನ: ಚಿಂತೆ ಎಂಬ ಹೂವಿನ ಗಿಡ: ಘಟ್ಟಿವಾಳಯ್ಯ
ಚಿಂತೆಯೆಂಬ ಹೂವಿನ ಗಿಡುವನು ನೋಡಿರೆ
ಹೊಲಗೇರಿಯಲಿ ಬಿತ್ತುವನೆ ನೋಡಿರೆ
ಜಲಶೇಖರನ ಉದಕರವನೆರದಡೆ
ಆಸೆಯೆಂಬ ಹೂವ ಕೊಯ್ದು ಕಾಮಂಗೇರಿಸುವೆನು
ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ Read more about ಇಂದು ಓದಿದ ವಚನ: ಚಿಂತೆ ಎಂಬ ಹೂವಿನ ಗಿಡ: ಘಟ್ಟಿವಾಳಯ್ಯ
ಕಾಲದ ಕಲಿತನ
ಕಾಲಕ್ಕೆ ತಕ್ಕಂತೆ ಕಲಿಸುವ ವಿಧಾನ ಬದಲಾದ ಬಗೆ- ಅಲ್ಲಮಪ್ರಭುವಿನ ವಚನ.
ಕೃತಯುಗದಲ್ಲಿ
ಶ್ರೀಗುರು ಶಿಷ್ಯಂಗೆ ಬಡಿದು
ಬುದ್ದಿಯ ಕಲಿಸಿದರೆ-ಆಗಲಿ ಮಹಾಪ್ರಸಾದವೆಂದೆನಯ್ಯ.
ತ್ರೇತಾಯುಗದಲ್ಲಿ
ಶ್ರೀಗುರು ಶಿಷ್ಯಂಗೆ ಬೈದು
ಬುದ್ದಿಯ ಕಲಿಸಿದರೆ-ಆಗಲಿ ಮಹಾಪ್ರಸಾದವೆಂದೆನಯ್ಯ.
ದ್ವಾಪರ ಯುಗದಲ್ಲಿ
ಶ್ರೀಗುರು ಶಿಷ್ಯಂಗೆ ಝಂಕಿಸಿ
ಬುದ್ದಿಯ ಕಲಿಸಿದರೆ-ಆಗಲಿ ಮಹಾಪ್ರಸಾದವೆಂದೆನಯ್ಯ.
ಕಲಿಯುಗದಲ್ಲಿ
ಶ್ರೀಗುರು ಶಿಷ್ಯಂಗೆ ವಂದಿಸಿ
ಬುದ್ದಿಯ ಕಲಿಸಿದರೆ-ಆಗಲಿ ಮಹಾಪ್ರಸಾದವೆಂದೆನಯ್ಯ.
ಗುಹೇಶ್ವರ,
ನಿಮ್ಮ ಕಾಲದ ಕಟ್ಟಳೆಯ ಕಲಿತನಕ್ಕೆ ನಾ ಬೆಱಗಾದೆನು. Read more about ಕಾಲದ ಕಲಿತನ




