ನಿನ್ನ ಮನಸ್ಸನ್ನಾಳು, ಇಲ್ಲದಿದ್ದರೆ ಅದು ನಿನ್ನನ್ನಾಳೀತು.

— ಹೋರೇಸ್

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಕರ್ನಾಟಕ ಸಂಗೀತ

ಏತಕವತಾರವನೆತ್ತಿದೆಯೋ?

ಇವತ್ತು ಒಂದು ಒಳ್ಳೇ ಸಂಗೀತ ಕಚೇರಿಗೆ ಹೋಗಿದ್ದೆ. ಟಿ.ಎಮ್.ಕೃಷ್ಣ ಅವರ ಹಾಡುಗಾರಿಕೆ.ಪಕ್ಕವಾದ್ಯದಲ್ಲಿ ನಾಗೈ ಶ್ರೀರಾಮ್ ಮತ್ತು ಪ್ರೊ.ತಿರುಚಿ ಶಂಕರನ್. ಅಂದ್ಮೇಲೆ ಹೇಳಬೇಕಾದ್ದೇ ಇಲ್ಲ.  ಮುಂದೆ ಓದಿ »

ರಾಗ ಅಭೇರಿ - ಮೊದಲ ಕಂತು

ಯಾವುದೇ ರಾಗಗಳ ಬಗ್ಗೆ ಬರೆದು ಬಹಳ ದಿನಗಳಾಯಿತು ಅನ್ನಿಸಿತು. ಅದಕ್ಕೇ ಇರಲಿ ಅಂತ ಅಭೇರಿ ರಾಗದ ಬಗ್ಗೆ ಶುರು ಮಾಡ್ತಿದ್ದೇನೆ.  ಮುಂದೆ ಓದಿ »

ಆರ್ ಕೆ ಶ್ರೀಕಂಠನ್ ಅವರೊಂದಿಗೊಂದು ಮಾತುಕತೆ - ತ್ಯಾಗರಾಜ ಆರಾಧನೆಯ ವಿಶೇಷ

(ಪರದೇಶಿಗಳಾಗಿರೋದ್ರಲ್ಲಿ, ಅಂದ್ರೆ ಹೊಟ್ಟೆಬಟ್ಟೆಗಾಗಿ ನಮ್ಮೂರಲ್ದೇ ಬೇರೆ ಊರಿನಲ್ಲಿ ನೆಲೆ ನಿಂತಾಗ ಅದರಿಂದ ಒಂದು ಒಳ್ಳೇ ಪರಿಣಾಮ ಕೂಡ ಇದೆ. ನಮ್ಮೂರಲ್ಲಿ ಖ್ಯಾತರಾದ ನಟರೋ, ಕಲಾವಿದರೋ, ಯಾರಾದರೂ ನಾವಿದ್ದಲ್ಲಿಗೆ ಬಂದಾಗ ಅವರನ್ನು ಸುಲಭವಾಗಿ ಭೇಟಿ ಮಾಡಬಹುದು. ಮಾತಾಡಬಹುದು. ನಮ್ಮೂರಲ್ಲೇ ಇದ್ದರೆ ಅದು, ಅಸಾಧ್ಯವಲ್ಲದಿದ್ದರೂ ಸ್ವಲ್ಪ ಕಷ್ಟವೇನೋ ಅನ್ನಿಸುತ್ತೆ. ಅದೇ ಕಾರಣಕ್ಕೋ ಏನೋ, ನನಗೂ ಎಷ್ಟೋ ಹೆಸರುವಾಸಿಯಾದವರನ್ನು ನೋಡಿ ಮಾತಾಡಿಸೋ, ಇನ್ನೂ ಹೆಚ್ಚು ಅಂದ್ರೆ ಅವರನ್ನೊಮ್ಮೆ ಮನೆಗೆ ಕರೆದು ಸತ್ಕರಿಸುವ ಭಾಗ್ಯವೂ ಕಳೆದ ಕೆಲವು ವರ್ಷಗಳಲ್ಲಿ ದಕ್ಕಿದೆ .

ಜನವರಿ ೧೫, ೨೦೦೯ ರಂದು ಪುಷ್ಯ ಬಹುಳ ಪಂಚಮಿ. ತ್ಯಾಗರಾಜರ ಆರಾಧನೆ. ಅವತ್ತಿಗೆ ಸರಿಯಾಗಿ, ತ್ಯಾಗರಾಜರ ನೇರ ಶಿಷ್ಯಪರಂಪರೆಗೆ ಸೇರಿದ, ಹಿರಿಯ ವಿದ್ವಾಂಸರಾದ ಸಂಗೀತ ಕಲಾನಿಧಿ ಡಾ.ಆರ್.ಕೆ. ಶ್ರೀಕಂಠನ್ ಮತ್ತು ಅವರ ಮಗ ಸಂಗೀತ ವಿದ್ವಾಂಸರಾದ ಆರ್.ಕೆ. ರಮಾಕಾಂತ್ ಅವರೊಡನೆ (ಮೇ ೨೦೦೮ ರಲ್ಲಿ ಅವರು ಕ್ಯಾಲಿಫೋರ್ನಿಯಾಗೆ ಭೇಟಿ ಕೊಟ್ಟಿದ್ದಾಗ) ನಾನು ಗೆಳೆಯರೊಬ್ಬರೊಡನೆ ಕೂಡಿ ನಡೆಸಿದ ಸಂದರ್ಶನದ ಸಾರಾಂಶವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಹಳಸಂತೋಷವಾಗುತ್ತಿದೆ.
 ಮುಂದೆ ಓದಿ »

ಸಂಗೀತ ನವರಾತ್ರಿ - ವಿಜಯ ದಶಮಿ

ಚಾಮುಂಡೇಶ್ವರಿ

ಇವತ್ತು ವಿಜಯ ದಶಮಿ.ನವರಾತ್ರಿಯ ಕಡೇ ದಿನ. ಮೈಸೂರಿನಲ್ಲಿ ಜಂಬೂಸವಾರಿಯಲ್ಲಿ  ದೇವಿ ಚಾಮುಂಡೇಶ್ವರಿಯ ಮೆರವಣಿಗೆ ಹೋಗುವ ಈ ದಿನ ಕೇಳಿಸಲು ವಾಗ್ಗೇಯಕಾರ ಮೈಸೂರು ವಾಸುದೇವಾಚಾರ್ಯರ ಬಿಲಹರಿ ರಾಗದ ಶ್ರೀ ಚಾಮುಂಡೇಶ್ವರಿ ಪಾಲಯ ಮಾಂ ಎನ್ನುವ ರಚನೆ ಈ ವರ್ಷದ ಸರಣಿಗೆ ಸರಿಯಾದ ಮಂಗಳವೆಂದು ನನ್ನ ಅನಿಸಿಕೆ.

ಮೈಸೂರು ವಾಸುದೇವಾಚಾರ್ಯರು ಅವರ ಸಂಗೀತ ಪರಂಪರೆಯಂತೆ ಸಂಸ್ಕೃತ ಮತ್ತು ತೆಲುಗು ಭಾಷೆಗಳಲ್ಲೇ ಕೃತಿಗಳನ್ನು ರಚಿಸಿದವರು. ಈ ಬಿಲಹರಿ ರಾಗದ ಕೃತಿಯಂತೂ ಸೊಗಸಾದ ರಚನೆ. ವಾಸುದೇವಾಚಾರ್ಯರ ಅತೀ ಪ್ರಸಿದ್ಧ ರಚನೆಗಲ್ಲಿದೂ ಒಂದು ಎಂದು ಖಂಡಿತ ಹೇಳಬಹುದು. ಈ ಹಾಡಿನ ಸಾಹಿತ್ಯ ಹೀಗಿದೆ.

ಶ್ರೀ ಚಾಮುಂಡೇಶ್ವರಿ ಪಾಲಯ ಮಾಂ ಕೃಪಾಕರಿ ಶಂಕರಿ
ಶೃತಜನಪಾಲಿನಿ ಮಹಾಬಲಾದ್ರಿವಾಸಿನಿ ಮಹಿಷಾಸುರ ಮರ್ದಿನಿ|| ಪಲ್ಲವಿ||  ಮುಂದೆ ಓದಿ »

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಚೌತಿ

ಲಲಿತಾ! ಆ ಪದವೇ ಒಂದು ಇನಿದಾದ ಹೆಸರು!

ಲಲಿತಾ! ಆ ಹೆಸರೇ ಒಂದು ಸವಿಯಾದ ನೆನಪು!!

..

..

..

..

..

(ಕ್ಷಮಿಸಿ - ನಾನು ’ಎರಡು ಕನಸು’ ಸಿನೆಮಾದಿಂದ ಹೇಳ್ತಾ ಇರೋ ಸಾಲುಗಳಲ್ಲ ಇವು!)

ದೇವಿಯ ಬೇರೆ ಹೆಸರುಗಳಾದ ಪಾರ್ವತಿ,ಶೈಲಜಾ,ಶಂಕರಿ,ಕಾಳಿ, ದುರ್ಗಾ,ಗೌರಿ ಮೀನಾಕ್ಷಿ,ವಿಶಾಲಾಕ್ಷಿ ಇಂತಹವೆಲ್ಲ ಒಂದೋ ದೇವಿಯು ಪರ್ವತರಾಜನ ಮಗಳು, ಶಿವನ ಹೆಂಡತಿ ಎನ್ನುವುದನ್ನೋ, ಅಥವಾ ಅವಳ ಬಣ್ಣವನ್ನೋ, ಕಣ್ಣನ್ನೋ ವರ್ಣಿಸುತ್ತವೆ. ಆದರೆ ಅವಳ ಎಲ್ಲ ಗುಣಗಳನ್ನೂ ಒಟ್ಟುಸೇರಿಸುವಂತಹ ಒಂದು ಹೆಸರಿದ್ದರೆ, ಅದು ಲಲಿತಾ ಎಂಬ ಹೆಸರೇ ಆಗಿರಬೇಕು.  ಮುಂದೆ ಓದಿ »

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಬಿದಿಗೆ

ನೆನ್ನೆ ನವರಾತ್ರಿ ಆರಂಭವಾಯಿತು. ಹೆಣ್ಣುಮಕ್ಕಳಿರೋ ಮನೆಯಲ್ಲಿ ಗೊಂಬೆಗಳನ್ನ ಅಟ್ಟ, ಪೆಟ್ಟಿಗೆ - ಎಲ್ಲೆಲ್ಲಿ ಜೋಪಾನ ಮಾಡಿಟ್ಟಿದ್ರೋ, ಅಲ್ಲಿಂದ ತೆಗೆದು ಜೋಡಿಸೋ ಕೆಲಸ. ಬಹುಶ: ಗೊಂಬೆಗಳಿಗೂ ವರ್ಷ ಪೂರ್ತಿ ಒಳಗೇ ಕುಳಿತು ಜಡ್ಡುಗಟ್ಟಿರುತ್ತೋ ಏನೋ. ಆದಕ್ಕೆ ಹೊರಬಂದ ತಕ್ಷಣ ಗಾಳಿ ಕುಡಿದು ಕಳೆಕಳೆಯಾಗಿಬಿಡುತ್ತವೆ!

ನವರಾತ್ರಿ ಎಂದರೆ ಅಲ್ಲಲ್ಲಿ ಸಂಗೀತೋತ್ಸವಗಳು ನಡೆಯುವುದು ರೂಢಿ. ಅದೇ ಕಾರಣಕ್ಕೆ ಹೋದಬಾರಿಯಂತೆ ನಾನೂ ಸಂಗೀತದ ಬಗ್ಗೆಯೇ ಬರೆಯತೊಡಗಿದ್ದೇನೆ. ಇವತ್ತು ನನ್ನ ಮನಸ್ಸಿಗೆ ಬಂದ ಕೃತಿ ತ್ಯಾಗರಾಜರ ’ಗತಿ ನೀವನಿ’ ಎನ್ನುವ ತೋಡಿ ರಾಗದ ರಚನೆ.

ತ್ಯಾಗರಾಜರ ಘನರಾಗ ಪಂಚರತ್ನ ಕೃತಿಗಳು ಬಹಳ ಪ್ರಖ್ಯಾತ ರಚನೆಗಳು - ಅದರಲ್ಲೂ ಕೊನೆಯ ಪಂಚರತ್ನ ಕೃತಿಯಾದ ಎಂದರೋ ಮಹಾನುಭಾವುಲು ಎನ್ನುವುದಂತೂ ಸಂಗೀತವನ್ನು ಅಷ್ಟಾಗಿ ಕೇಳಿ ತಿಳಿಯದವರಿಗೂ ಗೊತ್ತಿರುವುದುಂಟು. ಆದರೆ, ಈ ಪಂಚರತ್ನ ಕೃತಿಗಳಲ್ಲದೇ, ಇನ್ನೂ ಕೆಲವು ಗುಂಪು-ರಚನೆಗಳನ್ನೂ ತ್ಯಾಗರಾಜರು ರಚಿಸಿದ್ದಾರೆ. ಆವುಗಳಲ್ಲಿ ಲಾಲ್ಗುಡಿ ಪಂಚರತ್ನ ಎಂಬ ಗುಂಪೂ ಒಂದು.  ಮುಂದೆ ಓದಿ »

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಪಾಡ್ಯ

ಮೊನ್ನೆ ಶನಿವಾರ ಒಂದು ಸೊಗಸಾದ ಸಂಗೀತ ಕಚೇರಿಗೆ ಹೋಗುವ ಅವಕಾಶ ದೊರೆತಿತ್ತು. ಒಂದು ಒಳ್ಳೇ ಉದ್ದೇಶಕ್ಕಾಗಿ ಆಯೋಜಿತವಾಗಿದ್ದ ಕಾರ್ಯಕ್ರಮ ಅದು. ಹಾಡುಗಾರ್ತಿ ಹಾಡಲು ಕರ್ನಾಟಕದ ವಾಗ್ಗೇಯಕಾರ ರಚನೆಗಳನ್ನೇ ಆಯ್ದಿದ್ದರು. ಮೈಸೂರು ಸಂಗೀತದ ಒಂದು ಪ್ರಮುಖ ಕೇಂದ್ರವಾದ್ದರಿಂದ ಮೈಸೂರಿನ ವಾಗ್ಗೇಯಕಾರರ ರಚನೆಗಳೇ ಅದರಲ್ಲಿ ಹೆಚ್ಚಾಗಿದ್ದರಲ್ಲಿ ಆಶ್ಚರ್ಯವೇನಿಲ್ಲ.

ಅವರು ಹಾಡಿದ ರಚನೆಗಳಲ್ಲಿ ಮೊದಲ ರಚನೆಯನ್ನು ನವರಾತ್ರಿಯ ಮೊದಲ ದಿನವಾದ ಇಂದು ನಿಮಗೆ ಕೇಳಿಸೋಣ ಎನ್ನಿಸಿತು. ಅದಕ್ಕೆ ಎರಡು ಮೂರು ಕಾರಣಗಳಿವೆ. ಒಂದು ದಸರ ಅಂದರೆ ಮೈಸೂರು, ಮೈಸೂರು ಅಂದರೆ ದಸರಾ ಅನ್ನಿಸುವ ಈ ನವರಾತ್ರಿ ಹಬ್ಬದಲ್ಲಿ, ಮೈಸೂರಿನಲ್ಲಿ ರಚನೆಯಾದ ಇದು ಒಳ್ಳೇ ಆರಂಭವನ್ನು ತರುತ್ತೆ ಎನ್ನುವುದು. ಎರಡನೆಯದು, ಸಂಗೀತ ಕಚೇರಿಯನ್ನು ವರ್ಣದೊಂದಿಗೆ ಆರಂಭಿಸಿದಾಗ ಅದು ಸೊಗಸುತ್ತೆಂಬ ನಂಬಿಕೆಯಂತೆ, ಈ ಹಾಡನ್ನು ಕೇಳುತ್ತ ನವರಾತ್ರಿ ಹಬ್ಬವೂ ಎಲ್ಲರಿಗೂ ಸೊಗಸಲಿ ಎನ್ನುವುದು ನನ್ನ ಆಸೆ. ಮೂರನೆಯ ವಿಷಯಕ್ಕೆ
ಮತ್ತೆ ಬರುವೆ.  ಮುಂದೆ ಓದಿ »

ಏನೀ ಮಹಾನಂದವೇ? ಓ ಭಾಮಿನಿ!

ಕೆಲವು ದಿನಗಳ ಹಿಂದೆ 'ಭಾಮೆಯ ನೋಡಲು ತಾ ಬಂದ' ಅನ್ನೋ ಬರಹದಲ್ಲಿ ಹಿಂದೋಳ ರಾಗದ ಬಗ್ಗೆ ಸ್ವಲ್ಪ ಹೇಳಿದ್ದೆ. ಇವತ್ತು ಇನ್ನೊಂದು ಸ್ವಲ್ಪ ಮುಂದುವರೆಸೋಣವೇ?

ಹಿಂದೋಳದಲ್ಲಿ ಬೇಕಾದಷ್ಟು ಚಿತ್ರಗೀತೆಗಳಿವೆ ಅಂತ ಹೇಳಿದ್ದೆ. ಕಳೆದ ಬರಹಗಳಲ್ಲಿ ಇಲ್ಲದೇ ಇರೋ ಕೆಲವು ಒಳ್ಳೇ ಉದಾಹರಣೆಗಳು ಅಂದರೆ, ರಾಜ್‍ಕುಮಾರ್ ಮತ್ತೆ ವಾಣಿ ಜಯರಾಂ ಅವರು ಹಾಡಿರೋ ಶ್ರಾವಣ ಬಂತು ಚಿತ್ರದ ಬಾನಿನ ಅಂಚಿಂದ ಬಂದೆ ಅನ್ನೋ ಹಾಡು; ಹಾಗೇನೇ ಮಲಯಮಾರುತ ಚಿತ್ರದಲ್ಲಿ ಏಸುದಾಸ್ ಅವರು ಹಾಡಿರೋ ನಟನವಿಶಾರದ ನಟಶೇಖರ ಅನ್ನೋ ಗೀತೆ; ಮತ್ತೆ ರವಿಚಂದ್ರನ್ ಅವರು ನಟಿಸಿರೋ ಒಂದು ಚಿತ್ರ (ಹೆಸರು ಮರೆತಿದ್ದೇನೆ)ದಲ್ಲಿನ ನೀನು ನೀನೇ ಅಲ್ಲಿ ನಾನು ನಾನೇ ಅನ್ನೋ ಹಾಡು - ಇಂತಹವುಗಳನ್ನ ನೆನೆಯಬಹುದು.

ನಾನು ಮೊದಲೇ ಹೇಳಿದಂತೆ, ಹಿಂದೋಳ ರಾಗದಲ್ಲಿ ಬರುವುದು ಐದು ಸ್ವರಗಳು ಮಾತ್ರ. ಷಡ್ಜ, ಸಾಧಾರಣ ಗಾಂಧಾರ, ಶುದ್ಧ ಮಧ್ಯಮ, ಶುದ್ಧ ಧೈವತ ಮತ್ತು ಕೈಶಿಕಿ ನಿಷಾದ. ಇದನ್ನು ಕರ್ನಾಟಕ ಸಂಗೀತ ಲಿಪಿಯಲ್ಲಿ ಹೀಗೆ ಸೂಚಿಸುವುದು ರೂಢಿ.  ಮುಂದೆ ಓದಿ »

ಭಾಮೆಯ ನೋಡಲು ತಾ ಬಂದ

ಎಷ್ಟೋ ದಿನಗಳಿಂದ ಯಾವುದಾದರೂ ರಾಗದ ವಿಷಯ ಬರೆಯಬೇಕೆಂದುಕೊಳ್ಳುತ್ತಲೇ ಇದ್ದೆ. ಆದರೆ ಯಾಕೋ ಮುಂದೆ ಹೋಗುತ್ತಲೇ ಹೋಗುತ್ತಿತ್ತು. ಇವತ್ತು ಗೆಳೆಯರೊಬ್ಬರ ಜೊತೆ ಮಾತಾಡುತ್ತ ಇದ್ದಕ್ಕಿದ್ದ ಹಾಗೆ ಸ್ಕೂಲ್ ಮಾಸ್ಟರ್ ಚಿತ್ರದ ಭಾಮೆಯ ನೋಡಲು ತಾ ಬಂದ ಅನ್ನುವ ಹಾಡು ನೆನಪಿಗೆ ಬಂತು.

ಈ ಚಿತ್ರವನ್ನು ನಾನು ನೋಡಿರಲಿಲ್ಲ. ಆದರೆ ಬರೀ ಹಾಡುಗಳನ್ನ ಕೇಳಿದ್ದೆ. ಆ ಕಾಲಕ್ಕೆ ತಕ್ಕ ಹಾಗೆ ಒಳ್ಳೇ ಶಾಸ್ತ್ರೀಯ ಧಾಟಿಯ ಹಾಡುಗಳಿವೆ ಅಂತ ಗೊತ್ತಿತ್ತು. ಆದರೆ ಈಗ ಬೇಕಾದ್ದು ತೋರಿಸಲು ಸಪ್ತಾಕ್ಷರೀ ಮಂತ್ರವಿದೆಯಲ್ಲ ;) (youtube), ಅದನ್ನೇ ಜಪಿಸಿಸಿದೆ. ಸಿಕ್ಕೇಬಿಡ್ತು ಬೇಕಾದ್ದ ಹಾಡು. ಮೊದಲಿಗೆ ಹಾಡು ಕೇಳಿ, ಮತ್ತೆ ಈ ಹಾಡನ್ನು ಏಕೆ ತೆಗೆದುಕೊಂಡೆ ಅಂತ ಹೇಳುವೆ.

ಸೂಲಮಂಗಲಂ ರಾಜಲಕ್ಷ್ಮಿ ಅವರು ಹಾಡಿರೋ ಈ ಹಾಡು ಹಿಂದೋಳ ರಾಗದಲ್ಲಿದೆ. ಈ ಹಿಂದೆ ಕಲ್ಯಾಣಿ, ಮೋಹನ, ಸಿಂಧೂಬೈರವಿ ಮೊದಲಾದ ರಾಗಗಳ ಬಗ್ಗೆ ಬರೆದಿದ್ದೆ. ಹೀಗಾಗಿ, ಇನ್ನೊಂದು ಒಳ್ಳೇ ರಾಗದ ಬಗ್ಗೆ ಬರೀಬೇಕು ಅನ್ನಿಸಿದಾಗ ಹಿಂದೋಳ ರಾಗ ಸಹಜವಾದ ಒಂದು ಆಯ್ಕೆ.  ಮುಂದೆ ಓದಿ »

Syndicate content