ಕೋಪವೆಂಬುದು ಮೂರ್ಖತನದಲ್ಲಿ ಆರಂಭಗೊಂಡು ಪಶ್ಚಾತ್ತಾಪದಲ್ಲಿ ಅಂತ್ಯಗೊಳ್ಳುತ್ತದೆ

— ಪ್ರಚಲಿತ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಭರ್ತೃಹರಿ

ಹೆಣ್ಣುಗಳ ಸಿಂಗಾರ

ಕೊಂಕಾದ ಕುಡಿಹುಬ್ಬು ಕಡೆಗಣ್ಣುಗಳ ನೋಟ
ನಯವಾದ ಮೆಲುನುಡಿ ನಾಚಿಕೆಯ ನಸುನಗೆ
ಲೇಸಾದ ನಿಲುಮೆ ಜೊತೆಗೆ ಹಿತವಾದ ನಡಿಗೆ
ಪೆಣ್ಗಳಿಗಿವು ಸಿಂಗರವು ಮತ್ತವೇ ಆಯುಧವು!


ಸಂಸ್ಕೃತ ಮೂಲ (ಭರ್ತೃಹರಿಯ ಶೃಂಗಾರಶತಕದಿಂದ)

ಭ್ರೂ ಚಾತುರ್ಯಾಕುಂಚಿತಾಕ್ಷಾಃ ಕಟಾಕ್ಷಾಃ
ಸ್ನಿಗ್ಧಾ ವಾಚೋ ಲಜ್ಜಿತಾಶ್ಚೈವ ಹಾಸಾಃ |
ಲೀಲಾಮಂದ್ರಂ ಪ್ರಸ್ಥಿತಂ ಚ ಸ್ಥಿತಂ ಚ
ಸ್ತ್ರೀಣಾಮೇತದ್ ಭೂಷಣಂ ಚಾಯುಧಂ ಚ ||

-ಹಂಸಾನಂದಿ

ಬೇಕಿರದ ವಸ್ತುಗಳು

ಮನ್ನಿಸುವ ಗುಣವಿರಲು ಕವಚವೇಕೆ?
ಮುಂಗೋಪಕಿಂತಲು ಹಿರಿಯ ಹಗೆಯುಂಟೆ?
ಸುಡುಬೆಂಕಿಯೇಕೆ ಪುಂಡುದಾಯಾದಿಗಳಿರಲು?
ಮನವನವರಿವ ಗೆಳೆಯಗೆ ಮಿಗಿಲು ಮದ್ದಿರುವುದೇ?
ಕೇಡಿಗರು ಬಳಿಯಲಿರೆ ಹಾವಿಗೆ ಅಂಜುವರೆ?
ನೆಮ್ಮದಿಯ ತಿಳಿವಿರಲು ಹಣದ ಹಂಗೇಕೆ?
ನಾಚುವ ಮೊಗಕೆ ಬೇರೆ ಸಿಂಗರ ಬೇಕೆ?
ನಲ್ಗಬ್ಬಗಳನೋದಿ ನಲಿಯುವನು ಆಳಬಯಸುವನೆ?

ಸಂಸ್ಕೃತ ಮೂಲ (ಭರ್ತೃಹರಿಯ ನೀತಿಶತಕದಿಂದ):

ಕ್ಷಾಂತಿಶ್ಚೇದ್ಕವಚೇನ ಕಿಂ ಕಿಮರಿಭಿಃ ಕ್ರೋಧೋಸ್ತಿ ಚೇದ್ದೇಹಿನಾಂ
ಜ್ಞಾತಿಶ್ಚೇದನಲೇನ ಕಿಂ ಯದಿ ಸುಹೃದ್ದಿವ್ಯೌಷಧೈಃ ಕಿಂ ಫಲಂ |
ಕಿಂ ಸರ್ಪೈರ್ಯದಿ ದುರ್ಜನಾಃ ಕಿಮು ಧನೈರ್ವಿದ್ಯಾSನವದ್ಯಾ ಯದಿ
ವ್ರೀಡಾ ಚೇತ್ಕಿಮು ಭೂಷಣೈಃ ಸುಕವಿತಾ ಯದ್ಯಸ್ತಿ ರಾಜ್ಯೇನ ಕಿಂ ||

क्षान्तिश्चेद्कवचेन किं किमरिभि: क्रोधोऽस्ति चेद्देहिनां
ज्ञातिश्चेदनलेन किं यदि सुहृद्दिव्यौषधै: किं फलम्।
किं सर्पैर्यदि दुर्जना: किमु धनैर्विद्याऽनवद्या यदि  ಮುಂದೆ ಓದಿ »

ಸಜ್ಜನರ ಸಂಗವದು ಹೆಜ್ಜೇನ ಮೆದ್ದಂತೆ

ಜಡತೆ ನೀಗುವುದು; ಮಾತಿನಲಿ ದಿಟವ ಬೆರೆಸುವುದು;
ಹಿರಿಮೆ ಬೆಳೆಸುವುದು; ಉಳಿದ ಕೆಡುಕನಳಿಸುವುದು;
ಮನವ ನಲಿಸುವುದು; ಜೊತೆಗೆ ಹೆಸರ ಮೆರೆಸುವುದು!
ನಲ್ಗೆಳೆಯರೊಡನಾಟ ಅದೇನ ಮಾಡದೇ ಇಹುದು?

ಸಂಸ್ಕೃತ ಮೂಲ - (ಭರ್ತೃಹರಿಯ ನೀತಿಶತಕದಿಂದ)

ಜಾಡ್ಯಂ ಧಿಯೋ ಹರತಿ ಸಿಂಚತಿ ವಾಚಿ ಸತ್ಯಮ್
ಮಾನೋನ್ನತಿಂ ದಿಶತಿ ಪಾಪಮಪಾಕರೋತಿ |
ಚೇತಃ ಪ್ರಸಾದಯತಿ ದಿಕ್ಷು ತನೋತಿ ಕೀರ್ತಿಂ
ಸತ್ಸಂಗತಿ: ಕಥಯ ಕಿಂ ನ ಕರೋತಿ ಪುಂಸಾಮ್||

-ಹಂಸಾನಂದಿ

ಯೋಗಿಗಳಿಗೂ ನಿಲುಕದ್ದು

ಸುಮ್ಮನಿದ್ದರೆ ಮೂಗ - ಮಾತಾಡುವನೋ? ಬಾಯಿಬಡುಕ;
ಸೈರಣೆಯಿರುವನು ಪುಕ್ಕಲ; ಇಲ್ಲದವನ ಹುಟ್ಟೇ ಸರಿಯಿಲ್ಲ!
ಬಳಿಯಲಿರುವನು ಕಾಲ್ತೊಡಕು; ದೂರದಲಿರುವನು ತಿಳಿಗೇಡಿ
ಪರರ ಚಾಕರಿಯನಿತು ಕಠಿಣ! ಯೋಗಿಗಳಿಗೂ ನಿಲುಕೋದಿಲ್ಲ!

ಸಂಸ್ಕೃತ ಮೂಲ: (ಭರ್ತೃಹರಿಯ ನೀತಿಶತಕದಿಂದ)

ಮೌನಾನ್ಮೂಕಃ ಪ್ರವಚನಪಟುರ್ವಾಚಕೋ ಜಲ್ಪಕೋ ವಾ
ಕ್ಷಾಂತ್ಯಾ ಭೀರುರ್ಯದಿ ನ ಸಹತೇ ಪ್ರಾಯಶೋ ನಾಭಿಜಾತಃ
ಧೃಷ್ಟಃ ಪಾರ್ಶ್ವೇ ವಸತಿ ನಿಯತ ದೂರತಶ್ಚಾಪ್ರಗಲ್ಭಃ
ಸೇವಾಧರ್ಮಃ ಪರಮ ಗಹನೋ ಯೋಗಿನಾಮಪ್ಯಗಮ್ಯಃ

-ಹಂಸಾನಂದಿ

ಕೊರತೆಯಲೂ ಕಾಣುವ ಹೊಳಪು



ಒರೆಹಚ್ಚಿ ಕಿರಿದಾಗಿಸಿದ ರತುನ ಕಾಳಗದಲಿ ಪೆಟ್ಟುನು ಉಂಡು ಗೆದ್ದಿಹ ಯೋಧ
ಮದವಡಗಿದ ಆನೆ ಹಿಂಗಾರಿನಲಿ ಮಳಲದಂಡೆಯ ತೋರುತಾ ಹರಿವಹೊಳೆ
ಹುಣ್ಣಿಮೆಯ ಹಿಂದಿನಿರುಳ ಚಂದಿರ ಬೇಟದಲಿ ಬಸವಳಿದ ಹರೆಯದ ಹುಡುಗಿ
ಕೊರತೆಯಲೆ ಮೆರುಗುವರು ಕೊಡುಗೈಯಲಿ ನೀಡಿ ಸಿರಿಯಳಿದವರ ತೆರದಿ  ಮುಂದೆ ಓದಿ »

ಮಾತು ಎನ್ನುವ ಒಂದೇ ಒಡವೆ



ಹೊಳೆವ ಕಡಗಗಳು ಚಂದಿರನ ಹೊಳಪಿರುವ ಹಾರಗಳು
ಸ್ನಾನವು ಪೂಸಿರುವ ಲೇಪಗಳು ಮುಡಿದಿರುವ ಹೂವುಗಳು
ಇವು ಅಲ್ಲ ಒಡವೆಗಳು! ನಿನಗಿರಲು ನಲ್ನುಡಿಯ ನಾಲಿಗೆಯು
ಮಾತಿನೊಡವೆಯ ಮುಂದುಳಿದೊಡವೆಗಳು ಸೊರಗುವುವು

ಸಂಸ್ಕೃತ ಮೂಲ - ಭರ್ತೃಹರಿಯ ನೀತಿಶತಕದಿಂದ  ಮುಂದೆ ಓದಿ »

ಕತ್ತಿಯಲುಗಿನ ಮೇಲೆ ನಡಿಗೆ

ಗುಟ್ಟಿನಲಿ ನೀಡುವುದ ಬಂದವರ ಹದುಳದಲಿ ಕಾಣುವುದ
ಒಳಿತ ಮಾಡಿ ಮೌನದಲಿರುವುದ ಪರರ ನೆರವ ನುಡಿವುದ
ಐಸಿರಿಗರಳದ ಕಂಡವರ ತೆಗಳದೆಂತೆಂಬೀ ಕಡುಕಟ್ಟಳೆಗಳ
ಕತ್ತಿಯಲುಗಿನ ಮೇಲೆನಡೆವುದ ನೇಮಿಸಿದರಾರು ಸುಜನರಿಗೆ?

ಸಂಸ್ಕೃತ ಮೂಲ- ಭರ್ತೃಹರಿಯ ನೀತಿಶತಕದಿಂದ  ಮುಂದೆ ಓದಿ »

ಹೂ ಬಾಣ ಹಿಡಿದವಗೆ ಒಂದು ನಮನ

 

ಹರಿ ಹರ ಬೊಮ್ಮರನೂ ಚಿಗರೆಗಣ್ಣಿಯರಿಂದ
ಮೂರ್ಕಾಲ ಮನೆಕೆಲಸದಾಳುಗಳಂತಾಗಿಸಿದ
ತೋರದಿಹ ನೋಟದಲಿ ಮಾತಿನಲಿ ನಿಲುಕದಾ ದೇ
-ವರಿಗೆ ನಮಿಸುವೆನು ಹೂ ಬಾಣಗಳ ಹಿಡಿದಿಹಗೆ  ಮುಂದೆ ಓದಿ »

ಶೃಂಗಾರ ರಸಮಂಜರಿ

ಕರ್ನಾಟಕ ಸಂಗೀತ ದೇವಾಲಯಗಳಲ್ಲಿ ಬೆಳೆಯಿತು, ಅದಕ್ಕಾಗಿ ಅದು ಭಕ್ತಿ ಪ್ರಧಾನ ಮತ್ತು ರಾಜರ ಆಸ್ಥಾನಗಳಲ್ಲಿ ಬೆಳೆದ ಹಿಂದೂಸ್ತಾನಿ ಸಂಗೀತ ಶೃಂಗಾರ ರಸ ಪ್ರಧಾನ ಎಂಬ ಮಾತಿದೆ. ತುಸುಮಟ್ಟಿಗೆ ಇದು ನಿಜವೇ ಹೌದು. ಆದರೆ, ನವರಸಗಳಲ್ಲಿ ಮುಖ್ಯವಾದ ಶೃಂಗಾರವನ್ನು ನಮ್ಮ ವಾಗ್ಗೇಯಕಾರರು ಹಾಗೇನೂ ಕಡೆಗಣಿಸಿಲ್ಲ. ಕೆಲದಿನಗಳ ಮೊದಲು ಅಂಗಳದೊಳಗೆ ಬೆಳದಿಂಗಳು ತುಂಬಿತು ಎನ್ನುವ ಬರಹದಲ್ಲಿ ಪದ, ಜಾವಳಿಗಳ ಬಗ್ಗೆ ಸ್ವಲ್ಪ ಹರಟಿದ್ದೆ. ಇಷ್ಟೇ ಅಲ್ಲದೆ, ವರ್ಣಗಳು ಎನ್ನುವ ರಚನೆಗಳಲ್ಲೂ ಶೃಂಗಾರರಸವೇ ಪ್ರಧಾನ. ಆದರೆ, ಅವುಗಳಲ್ಲಿ ಸಾಹಿತ್ಯ ಗೌಣ. ಸಂಗೀತ ಮುಖ್ಯ.

ಹಿಂದಿನಿಂದಲೂ ರಸಗಳ ಪಟ್ಟಿ ಮಾಡುವಾಗ ಶೃಂಗಾರವೇ ಮೊದಲಿನದು. ಅಮರಕೋಶ ರಸಗಳನ್ನು "ಶೃಂಗಾರ ವೀರ ಕರುಣಾ ಅಧ್ಬುತ ಹಾಸ್ಯ ಭಯಾನಕಾ: ಭೀಭತ್ಸ ರೌದ್ರೋ ಚ ರಸಾ:" ಎಂದು ಎಂಟು ರಸಗಳನ್ನು ಪಟ್ಟಿಮಾಡುತ್ತದೆ. ಭರತನ ನಾಟ್ಯಶಾಸ್ತ್ರದಲ್ಲಿ, ಈ ಎಂಟರ ಜೊತೆಗೆ ಒಂಬತ್ತನೆಯದಾದ ’ಶಾಂತ’ವೆಂಬ ರಸವೂ ದೊರೆಯುತ್ತೆ. ಒಟ್ಟಿನಲ್ಲಿ ಶೃಂಗಾರವೇ ಮೊದಲ ರಸವಾಗಿತ್ತು ಎಂದು ನಾವಂದುಕೊಳ್ಳುವುದರಲ್ಲಿ ತಪ್ಪಿಲ್ಲ.  ಮುಂದೆ ಓದಿ »

Syndicate content