ಒಬ್ಬನೇ ವಕೀಲ ನೂರಾರು ಬಂದೂಕುಧಾರಿ ಕಳ್ಳರಿಗಿಂತ ಹೆಚ್ಚು ಕದಿಯಬಲ್ಲ

— ಡಾನ್ ಕಾರ್ಲೋನ್, 'ಗಾಡ್ ಫಾದರ್" ಚಿತ್ರದಲ್ಲ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಜ್ಞಾನ ವಾಹಿನಿ

ಶೃಂಗಾರ ರಸಮಂಜರಿ

ಕರ್ನಾಟಕ ಸಂಗೀತ ದೇವಾಲಯಗಳಲ್ಲಿ ಬೆಳೆಯಿತು, ಅದಕ್ಕಾಗಿ ಅದು ಭಕ್ತಿ ಪ್ರಧಾನ ಮತ್ತು ರಾಜರ ಆಸ್ಥಾನಗಳಲ್ಲಿ ಬೆಳೆದ ಹಿಂದೂಸ್ತಾನಿ ಸಂಗೀತ ಶೃಂಗಾರ ರಸ ಪ್ರಧಾನ ಎಂಬ ಮಾತಿದೆ. ತುಸುಮಟ್ಟಿಗೆ ಇದು ನಿಜವೇ ಹೌದು. ಆದರೆ, ನವರಸಗಳಲ್ಲಿ ಮುಖ್ಯವಾದ ಶೃಂಗಾರವನ್ನು ನಮ್ಮ ವಾಗ್ಗೇಯಕಾರರು ಹಾಗೇನೂ ಕಡೆಗಣಿಸಿಲ್ಲ. ಕೆಲದಿನಗಳ ಮೊದಲು ಅಂಗಳದೊಳಗೆ ಬೆಳದಿಂಗಳು ತುಂಬಿತು ಎನ್ನುವ ಬರಹದಲ್ಲಿ ಪದ, ಜಾವಳಿಗಳ ಬಗ್ಗೆ ಸ್ವಲ್ಪ ಹರಟಿದ್ದೆ. ಇಷ್ಟೇ ಅಲ್ಲದೆ, ವರ್ಣಗಳು ಎನ್ನುವ ರಚನೆಗಳಲ್ಲೂ ಶೃಂಗಾರರಸವೇ ಪ್ರಧಾನ. ಆದರೆ, ಅವುಗಳಲ್ಲಿ ಸಾಹಿತ್ಯ ಗೌಣ. ಸಂಗೀತ ಮುಖ್ಯ.

ಹಿಂದಿನಿಂದಲೂ ರಸಗಳ ಪಟ್ಟಿ ಮಾಡುವಾಗ ಶೃಂಗಾರವೇ ಮೊದಲಿನದು. ಅಮರಕೋಶ ರಸಗಳನ್ನು "ಶೃಂಗಾರ ವೀರ ಕರುಣಾ ಅಧ್ಬುತ ಹಾಸ್ಯ ಭಯಾನಕಾ: ಭೀಭತ್ಸ ರೌದ್ರೋ ಚ ರಸಾ:" ಎಂದು ಎಂಟು ರಸಗಳನ್ನು ಪಟ್ಟಿಮಾಡುತ್ತದೆ. ಭರತನ ನಾಟ್ಯಶಾಸ್ತ್ರದಲ್ಲಿ, ಈ ಎಂಟರ ಜೊತೆಗೆ ಒಂಬತ್ತನೆಯದಾದ ’ಶಾಂತ’ವೆಂಬ ರಸವೂ ದೊರೆಯುತ್ತೆ. ಒಟ್ಟಿನಲ್ಲಿ ಶೃಂಗಾರವೇ ಮೊದಲ ರಸವಾಗಿತ್ತು ಎಂದು ನಾವಂದುಕೊಳ್ಳುವುದರಲ್ಲಿ ತಪ್ಪಿಲ್ಲ.  ಮುಂದೆ ಓದಿ »

Syndicate content