ನನಗೆ ನಿನ್ನೆ ಒಂದು ಇ-ಮೇಲ್ ಬಂತು...
ಓಪನ್ ಮಾಡಿ ನೋಡಿದಾಗ ಗೊತ್ತಾಯ್ತು, ಅದು ಬರಿ ಒಂದು ಮೇಲ್ ಅಲ್ಲ. ಒಂದು ಇ-ಮೇಲ್ ಸರಣಿ. ಒಬ್ಬ ಉತ್ತರ ಭಾರತೀಯ ಬರೆದಿರೋ ಮೇಲ್ ಮತ್ತು ಅದಕ್ಕೆ ತುಂಬ ಜನರ ಪ್ರತಿಕ್ರಿಯೆ ಹಾಗು ಒಬ್ಬ ದಕ್ಷಿಣ ಭಾರತೀಯನ ಜವಾಬು. ಅದನ್ನು ಈ ಲಿಂಕ್ ನಲ್ಲಿ ಓದಿ..
http://varunbhat.wor...
ಇಂದು ಈ ಗೀತೆಯನ್ನು ಕೇಳುತಿದ್ದೆ. ಆಹಾ ಕೇಳಲು ಕರ್ಣಾನಂದ.
'ಹಂಸಲೇಖ' ಅವರ ಲೇಖನಿಯಿಂದ ಮೂಡಿಬಂದಿರುವ ಈ ಗೀತೆಯನ್ನೊಮ್ಮೆ ನೋಡಿ.
ಕವಿ ಮನಸಿನಲ್ಲಿ ಭವ್ಯ ಭಾರತದ ಚಿತ್ರಣ ಬಿಡಿಸಿಟ್ಟಿದ್ದಾರೆ ಹ್ಯಾಟ್ಸ್ ಆಪ್ ಟು ಹಂಸಲೇಖ.
"ಒಂದು ಬಾಣ ಪಕ್ಷಿಗೆ ತಾಕಿದರೆ
ರಾಮಾಯಣ ಕಾವ್ಯ ಹರಿಯುವುದು
ಒಂದು ಹೆಣ್ಣು ನೊಂದು ಕೂಗಿದರೆ
ಮಹಾಭಾರತ ಕಥನ ಕೇಳುವುದು
ಕೆಲವರಿರುತ್ತಾರೆ,ಅವರ ಕೈಯಲ್ಲಿ ಮಾಡಲಾಗದ ಕೆಲಸಕ್ಕೆಲ್ಲ ದೇಶವನ್ನೇ ಬೈಯ್ಯುವವರು, ನನ್ನ ಒಬ್ಬ ಗೆಳೆಯ ಇದ್ದಾನೆ, ಅವನಿಗೆ ಹೇಳಿದ ಟೈಮ್ಗೆ ಬರೋ ಅಭ್ಯಾಸನೆ ಇಲ್ಲ, ಕೇಳಿದ್ರೆ
"ನೋಡಮ್ಮ ,ನಾವ್ ಎಷ್ಟೇ ಆದ್ರೂ 'ಇಂಡಿಯನ್ಸ್' ನಾವ್ ಹಿಂಗೆ ಬರೋದು ಅಂತಾನೆ'.