ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ತ್ಯಾಗರಾಜ

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಬಿದಿಗೆ

September 30, 2008 - 10:45pm — hamsanandi

ನೆನ್ನೆ ನವರಾತ್ರಿ ಆರಂಭವಾಯಿತು. ಹೆಣ್ಣುಮಕ್ಕಳಿರೋ ಮನೆಯಲ್ಲಿ ಗೊಂಬೆಗಳನ್ನ ಅಟ್ಟ, ಪೆಟ್ಟಿಗೆ - ಎಲ್ಲೆಲ್ಲಿ ಜೋಪಾನ ಮಾಡಿಟ್ಟಿದ್ರೋ, ಅಲ್ಲಿಂದ ತೆಗೆದು ಜೋಡಿಸೋ ಕೆಲಸ. ಬಹುಶ: ಗೊಂಬೆಗಳಿಗೂ ವರ್ಷ ಪೂರ್ತಿ ಒಳಗೇ ಕುಳಿತು ಜಡ್ಡುಗಟ್ಟಿರುತ್ತೋ ಏನೋ. ಆದಕ್ಕೆ ಹೊರಬಂದ ತಕ್ಷಣ ಗಾಳಿ ಕುಡಿದು ಕಳೆಕಳೆಯಾಗಿಬಿಡುತ್ತವೆ!

ನವರಾತ್ರಿ ಎಂದರೆ ಅಲ್ಲಲ್ಲಿ ಸಂಗೀತೋತ್ಸವಗಳು ನಡೆಯುವುದು ರೂಢಿ. ಅದೇ ಕಾರಣಕ್ಕೆ ಹೋದಬಾರಿಯಂತೆ ನಾನೂ ಸಂಗೀತದ ಬಗ್ಗೆಯೇ ಬರೆಯತೊಡಗಿದ್ದೇನೆ. ಇವತ್ತು ನನ್ನ ಮನಸ್ಸಿಗೆ ಬಂದ ಕೃತಿ ತ್ಯಾಗರಾಜರ ’ಗತಿ ನೀವನಿ’ ಎನ್ನುವ ತೋಡಿ ರಾಗದ ರಚನೆ.

ತ್ಯಾಗರಾಜರ ಘನರಾಗ ಪಂಚರತ್ನ ಕೃತಿಗಳು ಬಹಳ ಪ್ರಖ್ಯಾತ ರಚನೆಗಳು - ಅದರಲ್ಲೂ ಕೊನೆಯ ಪಂಚರತ್ನ ಕೃತಿಯಾದ ಎಂದರೋ ಮಹಾನುಭಾವುಲು ಎನ್ನುವುದಂತೂ ಸಂಗೀತವನ್ನು ಅಷ್ಟಾಗಿ ಕೇಳಿ ತಿಳಿಯದವರಿಗೂ ಗೊತ್ತಿರುವುದುಂಟು. ಆದರೆ, ಈ ಪಂಚರತ್ನ ಕೃತಿಗಳಲ್ಲದೇ, ಇನ್ನೂ ಕೆಲವು ಗುಂಪು-ರಚನೆಗಳನ್ನೂ ತ್ಯಾಗರಾಜರು ರಚಿಸಿದ್ದಾರೆ. ಆವುಗಳಲ್ಲಿ ಲಾಲ್ಗುಡಿ ಪಂಚರತ್ನ ಎಂಬ ಗುಂಪೂ ಒಂದು.  ಮುಂದೆ ಓದಿ »

  • ಕರ್ನಾಟಕ ಸಂಗೀತ
  • ತ್ಯಾಗರಾಜ
  • ನವರಾತ್ರಿ
  • ಪಂಚರತ್ನ
  • ಲಾಲ್ಗುಡಿ
  • ಶ್ರೀಮತಿ
~.~
  • hamsanandi ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 180 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಏನೀ ಮಹಾನಂದವೇ? ಓ ಭಾಮಿನಿ!

September 26, 2008 - 5:24am — hamsanandi

ಕೆಲವು ದಿನಗಳ ಹಿಂದೆ 'ಭಾಮೆಯ ನೋಡಲು ತಾ ಬಂದ' ಅನ್ನೋ ಬರಹದಲ್ಲಿ ಹಿಂದೋಳ ರಾಗದ ಬಗ್ಗೆ ಸ್ವಲ್ಪ ಹೇಳಿದ್ದೆ. ಇವತ್ತು ಇನ್ನೊಂದು ಸ್ವಲ್ಪ ಮುಂದುವರೆಸೋಣವೇ?

ಹಿಂದೋಳದಲ್ಲಿ ಬೇಕಾದಷ್ಟು ಚಿತ್ರಗೀತೆಗಳಿವೆ ಅಂತ ಹೇಳಿದ್ದೆ. ಕಳೆದ ಬರಹಗಳಲ್ಲಿ ಇಲ್ಲದೇ ಇರೋ ಕೆಲವು ಒಳ್ಳೇ ಉದಾಹರಣೆಗಳು ಅಂದರೆ, ರಾಜ್‍ಕುಮಾರ್ ಮತ್ತೆ ವಾಣಿ ಜಯರಾಂ ಅವರು ಹಾಡಿರೋ ಶ್ರಾವಣ ಬಂತು ಚಿತ್ರದ ಬಾನಿನ ಅಂಚಿಂದ ಬಂದೆ ಅನ್ನೋ ಹಾಡು; ಹಾಗೇನೇ ಮಲಯಮಾರುತ ಚಿತ್ರದಲ್ಲಿ ಏಸುದಾಸ್ ಅವರು ಹಾಡಿರೋ ನಟನವಿಶಾರದ ನಟಶೇಖರ ಅನ್ನೋ ಗೀತೆ; ಮತ್ತೆ ರವಿಚಂದ್ರನ್ ಅವರು ನಟಿಸಿರೋ ಒಂದು ಚಿತ್ರ (ಹೆಸರು ಮರೆತಿದ್ದೇನೆ)ದಲ್ಲಿನ ನೀನು ನೀನೇ ಅಲ್ಲಿ ನಾನು ನಾನೇ ಅನ್ನೋ ಹಾಡು - ಇಂತಹವುಗಳನ್ನ ನೆನೆಯಬಹುದು.

ನಾನು ಮೊದಲೇ ಹೇಳಿದಂತೆ, ಹಿಂದೋಳ ರಾಗದಲ್ಲಿ ಬರುವುದು ಐದು ಸ್ವರಗಳು ಮಾತ್ರ. ಷಡ್ಜ, ಸಾಧಾರಣ ಗಾಂಧಾರ, ಶುದ್ಧ ಮಧ್ಯಮ, ಶುದ್ಧ ಧೈವತ ಮತ್ತು ಕೈಶಿಕಿ ನಿಷಾದ. ಇದನ್ನು ಕರ್ನಾಟಕ ಸಂಗೀತ ಲಿಪಿಯಲ್ಲಿ ಹೀಗೆ ಸೂಚಿಸುವುದು ರೂಢಿ.  ಮುಂದೆ ಓದಿ »

  • ಕರ್ನಾಟಕ ಸಂಗೀತ
  • ಡಿವಿಜಿ
  • ತ್ಯಾಗರಾಜ
  • ನಾಗವಲ್ಲಿ
  • ಬಾಲಮುರಳಿಕೃಷ್ಣ
  • ವಿದ್ಯಾಭೂಷಣ
  • ಸಂಗೀತ
  • ಹಿಂದೋಳ
~.~
  • hamsanandi ರವರ ಬ್ಲಾಗ್
  • 10 ಪ್ರತಿಕ್ರಿಯೆಗಳು
  • 280 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವೆಂಕಟಾಚಲ ನಿಲಯಂ ವೈಕುಂಠ ಪುರವಾಸಂ - (ಸಿಂಧು ಭೈರವಿ : ಭಾಗ ಎರಡು)

May 1, 2008 - 11:15pm — hamsanandi

ಕೆಲವು ದಿನಗಳ ಹಿಂದೆ ಸಿಂಧು ಭೈರವಿ ರಾಗದ ಬಗ್ಗೆ ಒಂದು ಅಸಂಬದ್ಧ ಪೀಠಿಕೆ ಬರೆದಿದ್ದೆ. ನಂತರ, ಕೇಳಿಸಬಹುದಾದ ಕೆಲವು ಒಳ್ಳೆ ಉದಾಹರಣೆಗಳಿಗೆ ಹುಡುಕುತ್ತಿದ್ದೆ. ನಾನು ಹುಡುಕುತ್ತಿದ್ದ ಕೆಲವು ಉತ್ತಮ ಗೀತೆಗಳು ಸಿಕ್ಕಲಿಲ್ಲವಾದ್ದರಿಂದ ಏನು ಮಾಡಲೆಂದು ಯೋಚಿಸುತ್ತಿದ್ದಾಗ, ನೋಡಿಸಿ-ಕೇಳಿಸುವ ಇನ್ನೊಂದಷ್ಟು ಹಾಡುಗಳು ದೊರೆತವು. ಸರಿ ಮತ್ತೆ, ತಡವೇಕೆ?

ಸಿಂಧುಭೈರವಿ ಅನ್ನುವುದು ದಕ್ಷಿಣಾದಿ(ಕರ್ನಾಟಕ) ಹಾಗೂ ಉತ್ತರಾದಿ(ಹಿಂದೂಸ್ತಾನಿ)ಸಂಗೀತ ಎರಡರಲ್ಲೂ ಪ್ರಚಾರದಲ್ಲಿರುವ ರಾಗ. ಹಿಂದೂಸ್ತಾನಿ ಪದ್ಧತಿಯಲ್ಲಿ ಇದಕ್ಕೆ ಭೈರವಿ ಎಂದರೆ, ಕರ್ನಾಟಕ ಸಂಗೀತದಲ್ಲಿ ಸಿಂಧೂಭೈರವಿ ಎನ್ನುತ್ತಾರೆ. ಕರ್ನಾಟಕ ಸಂಗೀತಕ್ಕೆ ಇದು ಹಿಂದೂಸ್ತಾನಿಯಿಂದಲೇ ಬಂದಿದೆ ಎನ್ನುವುದನ್ನು ನೀವು ಈ ಬರಹದಲ್ಲಿ ಕೊಟ್ಟಿರುವ ಕೆಲವು ಉದಾಹರಣೆಗಳನ್ನು ಕೇಳಿದಾಗ ನಿಮಗೆ ಅರಿವಾಗುತ್ತೆ. ಈ ಬರಹದ ಮಟ್ಟಿಗೆ, ನಾನು ಭೈರವಿ ಎಂದಾಗಲೂ, ಸಿಂಧೂಭೈರವಿ ಎಂದಾಗಲೂ ಒಂದೇ ರಾಗದ ಬಗ್ಗೆಯೇ ಹೇಳುತ್ತಿದ್ದೇನೆ ಎಂದುಕೊಳ್ಳಿ. (ಕರ್ನಾಟಕ ಸಂಗೀತದಲ್ಲಿ ಬೇರೊಂದು ಭೈರವಿ ಇದೆ - ಅದೂ ಒಂದು ಮಹಾನ್ ರಾಗವೇ. ಅದರ ವಿಷಯ ಈಗ ಬೇಡ.)  ಮುಂದೆ ಓದಿ »

  • ತ್ಯಾಗರಾಜ
  • ಪುರಂದರ ದಾಸ
  • ಸಂಗೀತ
  • ಸ್ವಾತಿ ತಿರುನಾಳ್
  • ಹಿಂದೂಸ್ತಾನಿ
~.~
  • hamsanandi ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 801 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

January 6, 2008 - 7:48am — hamsanandi

ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ ರಾಜ್ಯಕ್ಕೂ ರಾಜನಾಗಲಿಲ್ಲ. ಎಲ್ಲವನ್ನೂ ’ತ್ಯಾಗ’ ಮಾಡಿದರೂ, ಸಂಗೀತ ಪ್ರಪಂಚಕ್ಕೇ ರಾಜರಾಗಿ ಮೆರೆದರು.

ಹೌದು. ತ್ಯಾಗರಾಜರ ದೇಹಾಂತ್ಯ ಆದದ್ದು ೧೮೪೭ರ ಜನವರಿ ಆರರಂದು. ಆ ದಿನ ಪುಷ್ಯ ಬಹುಳ ಪಂಚಮಿ. ಪುರಂದರ ದಾಸರನ್ನು ಮನಸಲ್ಲೇ ಗುರುವಾಗಿ ನಿಲಿಸಿಕೊಂಡ ತ್ಯಾಗರಾಜರು ದಾಸರ ಆರಾಧನೆಯ ತಿಂಗಳಾದ ಪುಷ್ಯ ಮಾಸದಲ್ಲೇ ದೇಹತ್ಯಾಗ ಮಾಡಿದ್ದು ಕಾಕತಾಳೀಯವಿರಬಹುದು. ಆದರೆ, ಪುರಂದರ ದಾಸರ ರಚನೆಗಳಿಗೂ, ತ್ಯಾಗರಾಜರ ರಚನೆಗಳಲ್ಲೂ ಇರುವ ಹೋಲಿಕೆ ಕಾಕತಾಳೀಯವೇ? ಅಥವಾ, ದಾಸರ ಸಾಹಿತ್ಯ ತ್ಯಾಗರಾಜರ ಮೇಲೆ ಮಾಡಿದ ಪ್ರಭಾವದ ಪರಿಣಾಮವೇ? ಅಥವಾ ಮಹಾತ್ಮರ ಮನಗಳು ಒಂದೇ ತೆರದಲ್ಲಿ ಯೋಚಿಸುವುವೇ?

(ಚಿತ್ರ: http://www.karnatik.com/ ಕೃಪೆ)  ಮುಂದೆ ಓದಿ »

  • ಅನುವಾದ
  • ಕರ್ನಾಟಕ ಸಂಗೀತ
  • ಜ್ಞಾನವಾಹಿನಿ
  • ತ್ಯಾಗರಾಜ
  • ಪುರಂದರ ದಾಸ
~.~
  • hamsanandi ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 585 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 7, 2008 - 10:02am
  • amrith
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 7, 2008 - 9:58am
  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 7, 2008 - 9:45am
  • mahesha
    ಉ: ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
    October 7, 2008 - 9:45am
  • srinivasps
    ಉ: ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
    October 7, 2008 - 9:16am
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 8:48am
  • mahesha
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 8:45am
  • savithasr
    ಉ: ಗಾಂಧೀಸ್ಮರಣೆ
    October 7, 2008 - 8:28am
  • Sunil Jayaprakash
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 8:01am
  • shylaswamy
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
    October 7, 2008 - 7:58am
ಇನ್ನಷ್ಟು


ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನ ಮಾಡಬಾರದು. ಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿ ಹೋಗುವ ಬದಲು ಆ ಮನುಷ್ಯನ ಬಳಿ ಸೇರುತ್ತೇವೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator