21
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ತ್ಯಾಗರಾಜ

ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

January 6, 2008 - 7:48am
hamsanandi

ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ ರಾಜ್ಯಕ್ಕೂ ರಾಜನಾಗಲಿಲ್ಲ. ಎಲ್ಲವನ್ನೂ ’ತ್ಯಾಗ’ ಮಾಡಿದರೂ, ಸಂಗೀತ ಪ್ರಪಂಚಕ್ಕೇ ರಾಜರಾಗಿ ಮೆರೆದರು.

ಹೌದು. ತ್ಯಾಗರಾಜರ ದೇಹಾಂತ್ಯ ಆದದ್ದು ೧೮೪೭ರ ಜನವರಿ ಆರರಂದು. ಆ ದಿನ ಪುಷ್ಯ ಬಹುಳ ಪಂಚಮಿ. ಪುರಂದರ ದಾಸರನ್ನು ಮನಸಲ್ಲೇ ಗುರುವಾಗಿ ನಿಲಿಸಿಕೊಂಡ ತ್ಯಾಗರಾಜರು ದಾಸರ ಆರಾಧನೆಯ ತಿಂಗಳಾದ ಪುಷ್ಯ ಮಾಸದಲ್ಲೇ ದೇಹತ್ಯಾಗ ಮಾಡಿದ್ದು ಕಾಕತಾಳೀಯವಿರಬಹುದು. ಆದರೆ, ಪುರಂದರ ದಾಸರ ರಚನೆಗಳಿಗೂ, ತ್ಯಾಗರಾಜರ ರಚನೆಗಳಲ್ಲೂ ಇರುವ ಹೋಲಿಕೆ ಕಾಕತಾಳೀಯವೇ? ಅಥವಾ, ದಾಸರ ಸಾಹಿತ್ಯ ತ್ಯಾಗರಾಜರ ಮೇಲೆ ಮಾಡಿದ ಪ್ರಭಾವದ ಪರಿಣಾಮವೇ? ಅಥವಾ ಮಹಾತ್ಮರ ಮನಗಳು ಒಂದೇ ತೆರದಲ್ಲಿ ಯೋಚಿಸುವುವೇ?

(ಚಿತ್ರ: http://www.karnatik.com/ ಕೃಪೆ) Read more about ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ವೆಂಕಟಾಚಲ ನಿಲಯಂ ವೈಕುಂಠ ಪುರವಾಸಂ - (ಸಿಂಧು ಭೈರವಿ : ಭಾಗ ಎರಡು)

May 1, 2008 - 11:15pm
hamsanandi

ಕೆಲವು ದಿನಗಳ ಹಿಂದೆ ಸಿಂಧು ಭೈರವಿ ರಾಗದ ಬಗ್ಗೆ ಒಂದು ಅಸಂಬದ್ಧ ಪೀಠಿಕೆ ಬರೆದಿದ್ದೆ. ನಂತರ, ಕೇಳಿಸಬಹುದಾದ ಕೆಲವು ಒಳ್ಳೆ ಉದಾಹರಣೆಗಳಿಗೆ ಹುಡುಕುತ್ತಿದ್ದೆ. ನಾನು ಹುಡುಕುತ್ತಿದ್ದ ಕೆಲವು ಉತ್ತಮ ಗೀತೆಗಳು ಸಿಕ್ಕಲಿಲ್ಲವಾದ್ದರಿಂದ ಏನು ಮಾಡಲೆಂದು ಯೋಚಿಸುತ್ತಿದ್ದಾಗ, ನೋಡಿಸಿ-ಕೇಳಿಸುವ ಇನ್ನೊಂದಷ್ಟು ಹಾಡುಗಳು ದೊರೆತವು. ಸರಿ ಮತ್ತೆ, ತಡವೇಕೆ?

ಸಿಂಧುಭೈರವಿ ಅನ್ನುವುದು ದಕ್ಷಿಣಾದಿ(ಕರ್ನಾಟಕ) ಹಾಗೂ ಉತ್ತರಾದಿ(ಹಿಂದೂಸ್ತಾನಿ)ಸಂಗೀತ ಎರಡರಲ್ಲೂ ಪ್ರಚಾರದಲ್ಲಿರುವ ರಾಗ. ಹಿಂದೂಸ್ತಾನಿ ಪದ್ಧತಿಯಲ್ಲಿ ಇದಕ್ಕೆ ಭೈರವಿ ಎಂದರೆ, ಕರ್ನಾಟಕ ಸಂಗೀತದಲ್ಲಿ ಸಿಂಧೂಭೈರವಿ ಎನ್ನುತ್ತಾರೆ. ಕರ್ನಾಟಕ ಸಂಗೀತಕ್ಕೆ ಇದು ಹಿಂದೂಸ್ತಾನಿಯಿಂದಲೇ ಬಂದಿದೆ ಎನ್ನುವುದನ್ನು ನೀವು ಈ ಬರಹದಲ್ಲಿ ಕೊಟ್ಟಿರುವ ಕೆಲವು ಉದಾಹರಣೆಗಳನ್ನು ಕೇಳಿದಾಗ ನಿಮಗೆ ಅರಿವಾಗುತ್ತೆ. ಈ ಬರಹದ ಮಟ್ಟಿಗೆ, ನಾನು ಭೈರವಿ ಎಂದಾಗಲೂ, ಸಿಂಧೂಭೈರವಿ ಎಂದಾಗಲೂ ಒಂದೇ ರಾಗದ ಬಗ್ಗೆಯೇ ಹೇಳುತ್ತಿದ್ದೇನೆ ಎಂದುಕೊಳ್ಳಿ. (ಕರ್ನಾಟಕ ಸಂಗೀತದಲ್ಲಿ ಬೇರೊಂದು ಭೈರವಿ ಇದೆ - ಅದೂ ಒಂದು ಮಹಾನ್ ರಾಗವೇ. ಅದರ ವಿಷಯ ಈಗ ಬೇಡ.)

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಏನೀ ಮಹಾನಂದವೇ? ಓ ಭಾಮಿನಿ!

September 26, 2008 - 5:24am
hamsanandi

ಕೆಲವು ದಿನಗಳ ಹಿಂದೆ 'ಭಾಮೆಯ ನೋಡಲು ತಾ ಬಂದ' ಅನ್ನೋ ಬರಹದಲ್ಲಿ ಹಿಂದೋಳ ರಾಗದ ಬಗ್ಗೆ ಸ್ವಲ್ಪ ಹೇಳಿದ್ದೆ. ಇವತ್ತು ಇನ್ನೊಂದು ಸ್ವಲ್ಪ ಮುಂದುವರೆಸೋಣವೇ?

ಹಿಂದೋಳದಲ್ಲಿ ಬೇಕಾದಷ್ಟು ಚಿತ್ರಗೀತೆಗಳಿವೆ ಅಂತ ಹೇಳಿದ್ದೆ. ಕಳೆದ ಬರಹಗಳಲ್ಲಿ ಇಲ್ಲದೇ ಇರೋ ಕೆಲವು ಒಳ್ಳೇ ಉದಾಹರಣೆಗಳು ಅಂದರೆ, ರಾಜ್‍ಕುಮಾರ್ ಮತ್ತೆ ವಾಣಿ ಜಯರಾಂ ಅವರು ಹಾಡಿರೋ ಶ್ರಾವಣ ಬಂತು ಚಿತ್ರದ ಬಾನಿನ ಅಂಚಿಂದ ಬಂದೆ ಅನ್ನೋ ಹಾಡು; ಹಾಗೇನೇ ಮಲಯಮಾರುತ ಚಿತ್ರದಲ್ಲಿ ಏಸುದಾಸ್ ಅವರು ಹಾಡಿರೋ ನಟನವಿಶಾರದ ನಟಶೇಖರ ಅನ್ನೋ ಗೀತೆ; ಮತ್ತೆ ರವಿಚಂದ್ರನ್ ಅವರು ನಟಿಸಿರೋ ಒಂದು ಚಿತ್ರ (ಹೆಸರು ಮರೆತಿದ್ದೇನೆ)ದಲ್ಲಿನ ನೀನು ನೀನೇ ಅಲ್ಲಿ ನಾನು ನಾನೇ ಅನ್ನೋ ಹಾಡು - ಇಂತಹವುಗಳನ್ನ ನೆನೆಯಬಹುದು.

ನಾನು ಮೊದಲೇ ಹೇಳಿದಂತೆ, ಹಿಂದೋಳ ರಾಗದಲ್ಲಿ ಬರುವುದು ಐದು ಸ್ವರಗಳು ಮಾತ್ರ. ಷಡ್ಜ, ಸಾಧಾರಣ ಗಾಂಧಾರ, ಶುದ್ಧ ಮಧ್ಯಮ, ಶುದ್ಧ ಧೈವತ ಮತ್ತು ಕೈಶಿಕಿ ನಿಷಾದ. ಇದನ್ನು ಕರ್ನಾಟಕ ಸಂಗೀತ ಲಿಪಿಯಲ್ಲಿ ಹೀಗೆ ಸೂಚಿಸುವುದು ರೂಢಿ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 1 (1 vote)
To prevent automated spam submissions leave this field empty.

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಬಿದಿಗೆ

September 30, 2008 - 10:45pm
hamsanandi

ನೆನ್ನೆ ನವರಾತ್ರಿ ಆರಂಭವಾಯಿತು. ಹೆಣ್ಣುಮಕ್ಕಳಿರೋ ಮನೆಯಲ್ಲಿ ಗೊಂಬೆಗಳನ್ನ ಅಟ್ಟ, ಪೆಟ್ಟಿಗೆ - ಎಲ್ಲೆಲ್ಲಿ ಜೋಪಾನ ಮಾಡಿಟ್ಟಿದ್ರೋ, ಅಲ್ಲಿಂದ ತೆಗೆದು ಜೋಡಿಸೋ ಕೆಲಸ. ಬಹುಶ: ಗೊಂಬೆಗಳಿಗೂ ವರ್ಷ ಪೂರ್ತಿ ಒಳಗೇ ಕುಳಿತು ಜಡ್ಡುಗಟ್ಟಿರುತ್ತೋ ಏನೋ. ಆದಕ್ಕೆ ಹೊರಬಂದ ತಕ್ಷಣ ಗಾಳಿ ಕುಡಿದು ಕಳೆಕಳೆಯಾಗಿಬಿಡುತ್ತವೆ!

ನವರಾತ್ರಿ ಎಂದರೆ ಅಲ್ಲಲ್ಲಿ ಸಂಗೀತೋತ್ಸವಗಳು ನಡೆಯುವುದು ರೂಢಿ. ಅದೇ ಕಾರಣಕ್ಕೆ ಹೋದಬಾರಿಯಂತೆ ನಾನೂ ಸಂಗೀತದ ಬಗ್ಗೆಯೇ ಬರೆಯತೊಡಗಿದ್ದೇನೆ. ಇವತ್ತು ನನ್ನ ಮನಸ್ಸಿಗೆ ಬಂದ ಕೃತಿ ತ್ಯಾಗರಾಜರ ’ಗತಿ ನೀವನಿ’ ಎನ್ನುವ ತೋಡಿ ರಾಗದ ರಚನೆ.

ತ್ಯಾಗರಾಜರ ಘನರಾಗ ಪಂಚರತ್ನ ಕೃತಿಗಳು ಬಹಳ ಪ್ರಖ್ಯಾತ ರಚನೆಗಳು - ಅದರಲ್ಲೂ ಕೊನೆಯ ಪಂಚರತ್ನ ಕೃತಿಯಾದ ಎಂದರೋ ಮಹಾನುಭಾವುಲು ಎನ್ನುವುದಂತೂ ಸಂಗೀತವನ್ನು ಅಷ್ಟಾಗಿ ಕೇಳಿ ತಿಳಿಯದವರಿಗೂ ಗೊತ್ತಿರುವುದುಂಟು. ಆದರೆ, ಈ ಪಂಚರತ್ನ ಕೃತಿಗಳಲ್ಲದೇ, ಇನ್ನೂ ಕೆಲವು ಗುಂಪು-ರಚನೆಗಳನ್ನೂ ತ್ಯಾಗರಾಜರು ರಚಿಸಿದ್ದಾರೆ. ಆವುಗಳಲ್ಲಿ ಲಾಲ್ಗುಡಿ ಪಂಚರತ್ನ ಎಂಬ ಗುಂಪೂ ಒಂದು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ತ್ಯಾಗರಾಜ ಮತ್ತು ಪಾಶ್ಚಾತ್ಯ ಸಂಗೀತ

January 5, 2009 - 11:50pm
hamsanandi
ತ್ಯಾಗರಾಜರು ಸಮಾಧಿ ಹೊಂದಿದ್ದು ೧೭೪೭ರ ಜನವರಿ ೬ರಂದು. ಅವರ ನೆನಕೆಯಲ್ಲಿ ಈ ಕಿರುಬರಹ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಆರ್ ಕೆ ಶ್ರೀಕಂಠನ್ ಅವರೊಂದಿಗೊಂದು ಮಾತುಕತೆ - ತ್ಯಾಗರಾಜ ಆರಾಧನೆಯ ವಿಶೇಷ

January 15, 2009 - 12:08am
hamsanandi

(ಪರದೇಶಿಗಳಾಗಿರೋದ್ರಲ್ಲಿ, ಅಂದ್ರೆ ಹೊಟ್ಟೆಬಟ್ಟೆಗಾಗಿ ನಮ್ಮೂರಲ್ದೇ ಬೇರೆ ಊರಿನಲ್ಲಿ ನೆಲೆ ನಿಂತಾಗ ಅದರಿಂದ ಒಂದು ಒಳ್ಳೇ ಪರಿಣಾಮ ಕೂಡ ಇದೆ. ನಮ್ಮೂರಲ್ಲಿ ಖ್ಯಾತರಾದ ನಟರೋ, ಕಲಾವಿದರೋ, ಯಾರಾದರೂ ನಾವಿದ್ದಲ್ಲಿಗೆ ಬಂದಾಗ ಅವರನ್ನು ಸುಲಭವಾಗಿ ಭೇಟಿ ಮಾಡಬಹುದು. ಮಾತಾಡಬಹುದು. ನಮ್ಮೂರಲ್ಲೇ ಇದ್ದರೆ ಅದು, ಅಸಾಧ್ಯವಲ್ಲದಿದ್ದರೂ ಸ್ವಲ್ಪ ಕಷ್ಟವೇನೋ ಅನ್ನಿಸುತ್ತೆ. ಅದೇ ಕಾರಣಕ್ಕೋ ಏನೋ, ನನಗೂ ಎಷ್ಟೋ ಹೆಸರುವಾಸಿಯಾದವರನ್ನು ನೋಡಿ ಮಾತಾಡಿಸೋ, ಇನ್ನೂ ಹೆಚ್ಚು ಅಂದ್ರೆ ಅವರನ್ನೊಮ್ಮೆ ಮನೆಗೆ ಕರೆದು ಸತ್ಕರಿಸುವ ಭಾಗ್ಯವೂ ಕಳೆದ ಕೆಲವು ವರ್ಷಗಳಲ್ಲಿ ದಕ್ಕಿದೆ .

ಜನವರಿ ೧೫, ೨೦೦೯ ರಂದು ಪುಷ್ಯ ಬಹುಳ ಪಂಚಮಿ. ತ್ಯಾಗರಾಜರ ಆರಾಧನೆ. ಅವತ್ತಿಗೆ ಸರಿಯಾಗಿ, ತ್ಯಾಗರಾಜರ ನೇರ ಶಿಷ್ಯಪರಂಪರೆಗೆ ಸೇರಿದ, ಹಿರಿಯ ವಿದ್ವಾಂಸರಾದ ಸಂಗೀತ ಕಲಾನಿಧಿ ಡಾ.ಆರ್.ಕೆ. ಶ್ರೀಕಂಠನ್ ಮತ್ತು ಅವರ ಮಗ ಸಂಗೀತ ವಿದ್ವಾಂಸರಾದ ಆರ್.ಕೆ. ರಮಾಕಾಂತ್ ಅವರೊಡನೆ (ಮೇ ೨೦೦೮ ರಲ್ಲಿ ಅವರು ಕ್ಯಾಲಿಫೋರ್ನಿಯಾಗೆ ಭೇಟಿ ಕೊಟ್ಟಿದ್ದಾಗ) ನಾನು ಗೆಳೆಯರೊಬ್ಬರೊಡನೆ ಕೂಡಿ ನಡೆಸಿದ ಸಂದರ್ಶನದ ಸಾರಾಂಶವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಹಳಸಂತೋಷವಾಗುತ್ತಿದೆ.
Read more about ಆರ್ ಕೆ ಶ್ರೀಕಂಠನ್ ಅವರೊಂದಿಗೊಂದು ಮಾತುಕತೆ - ತ್ಯಾಗರಾಜ ಆರಾಧನೆಯ ವಿಶೇಷ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಏತಕವತಾರವನೆತ್ತಿದೆಯೋ?

April 13, 2009 - 11:44am
hamsanandi

ಇವತ್ತು ಒಂದು ಒಳ್ಳೇ ಸಂಗೀತ ಕಚೇರಿಗೆ ಹೋಗಿದ್ದೆ. ಟಿ.ಎಮ್.ಕೃಷ್ಣ ಅವರ ಹಾಡುಗಾರಿಕೆ.ಪಕ್ಕವಾದ್ಯದಲ್ಲಿ ನಾಗೈ ಶ್ರೀರಾಮ್ ಮತ್ತು ಪ್ರೊ.ತಿರುಚಿ ಶಂಕರನ್. ಅಂದ್ಮೇಲೆ ಹೇಳಬೇಕಾದ್ದೇ ಇಲ್ಲ. Read more about ಏತಕವತಾರವನೆತ್ತಿದೆಯೋ?

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಅಮೃತವರ್ಷಿಣಿ

May 20, 2009 - 12:31am
hamsanandi
ಸ್ವಲ್ಪ ದಿವಸಗಳ ಹಿಂದೆ ಉದಯ ಟೀವೀನಲ್ಲಿ ಈಚೆಗೆ ತೆರೆಕಂಡ ಒಂದು ಸಿನಿಮಾ ತಂಡದವರ ಜೊತೆ ಮುಖಾಮುಖಿ ಮಾತುಕತೆ ಬರ್ತಾ ಇತ್ತು. ನಿರೂಪಕಿ ನಡುವೆ ಈಗ ಒಂದು ಹಾಡು ಕೇಳೋಣ್ವಾ ಅಂತ ಒಂದು ಹಾಡು ಹಾಕಿದರು. ಆ ಹಾಡು ನನಗಂತೂ ಕೂಡಲೆ ಹಿಡಿಸಿಬಿಡ್ತು.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.7 (3 votes)
To prevent automated spam submissions leave this field empty.

ಹುಟ್ಟು ಹಬ್ಬದ ದಿನ

May 4, 2010 - 5:13am
hamsanandi

ಇವತ್ತು ಏಟಿಎಮ್ ಗೆ ದುಡ್ಡು ತೆಗೆಯಲು ಹೋದರೆ ಕಿಸೆಯಲ್ಲಿ ಎಟಿಎಮ್ ಕಾರ್ಡೇ ಕಾಣಲಿಲ್ಲ. ಎಲ್ಲಿ ಮರೆತಿರುವೆ ಗೊತ್ತಾಗದೆ ಒಂದು ಸಲ ಮನೆಯಲ್ಲೂ ಹುಡುಕಿದ್ದಾಯ್ತು. ಅಲ್ಲೂ ಕಾಣಲಿಲ್ಲ. ನೆನ್ನೆ-ಮೊನ್ನೆ ತಾನೇ ಉಪಯೋಗಿಸಿದ್ದೂ ನೆನಪಿಗೆ ಬಂತು. ಕೂಡಲೆ ಆನ್-ಲೈನ್ ರೆಕಾರ್ಡ್ ನೋಡಿದರೆ, ದೇವರ ದಯ, ಯಾವುದೇ ಅನುಮಾನ ಹುಟ್ಟುವಂತಹ ಎಂಟ್ರೀ ಕಾಣಲಿಲ್ಲ. ಹೇಗೇ ಇರಲಿ, ಒಮ್ಮೆ ಬ್ಯಾಂಕಿಗೆ ಹೋಗಿ ಹೊಸ ಎಟಿಎಮ್ ಕಾರ್ಡ್ ತೆಗೆದುಕೊಳ್ಳೋಣ ಅಂತ ಹೋದೆ.

ಸರಿ ಎಲ್ಲ ವಿವರಗಳನ್ನು ಕೊಟ್ಟಮೇಲೆ, ಕೌಂಟರ್ನಲ್ಲಿದ್ದಾಕೆ ಮಾಡಬೇಕಿದ್ದ ಸಹಾಯ ಮಾಡಿ ಮುಗಿಸಿ "ಹುಟ್ಟು ಹಬ್ಬದ ಶುಭಾಶಯಗಳು! ನಾಳೆಗೆ ಏನು ವಿಶೇಷ?" ಅಂದಳು. ನಾಳೆ ಹುಟ್ಟುಹಬ್ಬ ಆಚರಿಸುವ ಯಾವುದೇ ಯೋಚನೆಯಿಲ್ಲದ ನಾನು :) ಒಂದು ಕ್ಷಣ ತಬ್ಬಿಬ್ಬಾದರೂ, "ಥ್ಯಾಂಕ್ಸ್" ಹೇಳಿ ಜಾಗ ಖಾಲಿ ಮಾಡಿದೆ. Read more about ಹುಟ್ಟು ಹಬ್ಬದ ದಿನ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4 (2 votes)
To prevent automated spam submissions leave this field empty.

ಕೃಷ್ಣಾಷ್ಟಮಿಯಲ್ಲಿಷ್ಟು ಕೃಷ್ಣ ಸ್ಮರಣೆ

September 1, 2010 - 10:21pm
hamsanandi

ಪ್ರತೀ ವರ್ಷ ಅಂದ್ಕೋತೀನಿ ಕೃಷ್ಣಾಷ್ಟಮಿಯ ಹೊತ್ತಿಗೆ ಒಂದು ಒಳ್ಳೇ ಬರಹ ಬರೀಬೇಕು - ಹರಿದಾಸರು ಕಂಡ ಕೃಷ್ಣನ ಬಗ್ಗೆ ಅಂತ. ಆ ಬಗ್ಗೆ ನೂರಾರು ಜನ ಬರ್ದಿದಾರೆ ಅಂದ್ರಾ? ಹೌದು. ಬರೆದಿದ್ರೇನಂತೆ. ನನ್ನ ಹಾಡು ನನ್ನದು -  ನನ್ನ ಮಾತು ನನ್ನದು - ನನ್ನ ನೋಟ ನನ್ನದು - ನನ್ನ ಧಾಟಿ ನನ್ನದು ಅಂತ ಅಂದ್ಕೊಳೋದಪ್ಪ! ಆದ್ರೆ ಯಾಕೋ ಕೃಷ್ಣನಿಗೆ ಅದರ ಮೇಲೆ ಮನಸ್ಸಿಲ್ಲ ಅನ್ಸತ್ತೆ. ಯಾಕಂದ್ರೆ ಎಂತೆಂತಹವರೋ ಅವನ ಬಗ್ಗೆ ಹಾಡಿಬಿಟ್ಟಿರೋವಾಗ ನನ್ನ ನಾಕು ಸಾಲು ಇದ್ರೇನಂತೆ ಇಲ್ದಿದ್ರೇನಂತೆ ಅಂತಲೇ ಇರಬೇಕು, ಎರಡು ಮೂರು ವರ್ಷದಿಂದ ನೋಡ್ತಿದೀನಿ, ಈ ಗೋಕುಲಾಷ್ಟಮಿ ಬರೋ ಹೊತ್ತಿಗೇ ಇನ್ನೇನೋ ಜರೂರಾದ ಕೆಲಸವೋ ಮತ್ತೊಂದೋ ಅಂಟ್ಕೊಳತ್ತೆ. ಅಂತೂ ಇಂತೂ ಕುಂತೀ ಮಕ್ಕಳಿಗೆ ರಾಜ್ಯವಿಲ್ಲ ಅನ್ನೋ ತರಹ.

  Read more about ಕೃಷ್ಣಾಷ್ಟಮಿಯಲ್ಲಿಷ್ಟು ಕೃಷ್ಣ ಸ್ಮರಣೆ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.3 (3 votes)
To prevent automated spam submissions leave this field empty.

ದಯ ತೋರಲಿದುವೆ ವೇಳೆಯು, ದಾಶರಥಿ!

September 30, 2010 - 11:43am
hamsanandi

ದಯ ತೋರಲಿದುವೆ ವೇಳೆಯು, ದಾಶರಥೀ ||

 

ಜಗದ ಬವಣೆಯೆಂಬಾನಯ
ಸಿಂಗದೊಲು ನೀನಳಿಸುವೆ


ಜಗದಯ್ಯ ಆ ಬೊಮ್ಮನಿಗು
ಸೊಗಸಿನಲೆ ತೊಡಕಿಳಿಸಿಹ ನೀ || ದಯ ತೋರಲಿದುವೆ ವೇಳೆಯು! ||

 

ಮುನ್ನ ನೀ ಕೊಟ್ಟಾಣತಿಯನು
ಮನಸಾರೆ ನಿದಾನದಲಿ ನಾ
ಸನ್ನಡತೆಯಲಿ ಪಾಲಿಸಿರಲು ಈ
-ಗೆನ್ನ ಬಳಿಸಾರಿ ಈ ತ್ಯಾಗರಾಜನಿಗೆ || ದಯ ತೋರಲಿದುವೆ ವೇಳೆಯು! ||

 

-ಹಂಸಾನಂದಿ

 

(ತ್ಯಾಗರಾಜರ ಗಾನವಾರಿಧಿ ರಾಗದ, ’ದಯಜೂಚುಟಕಿದಿ ವೇಳರಾ’ ಎಂಬ ರಚನೆಯ ಅನುವಾದ ) Read more about ದಯ ತೋರಲಿದುವೆ ವೇಳೆಯು, ದಾಶರಥಿ!

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಮಾರವೈರಿ ರಮಣಿ

August 30, 2011 - 2:01am
hamsanandi

 ನಾಡಿದ್ದು ಗೌರಿ ಹಬ್ಬ. ಗೌರಿಯ ಹಬ್ಬಕ್ಕೆ ಮುನ್ನುಡಿಯಾಗಿ ಗೌರಿಯ ಮೇಲಿನ ಒಂದು ಸೊಗಸಾದ ರಚನೆಯನ್ನು ಕೇಳುಗರೊಂದಿಗೆ ಹಂಚಿಕೊಳ್ಳೋಣವೆನ್ನಿಸಿ ಈ ಚುಟುಕಾದ ಬರಹ. 

ನನಗೆ ಇವತ್ತು ನೆನಪಾದ್ದು ತ್ಯಾಗರಾಜರದ್ದು ಎನ್ನಲಾದ, ನಾಸಿಕಾಭೂಷಣಿ ರಾಗದ, ರೂಪಕತಾಳದ ಮಾರವೈರಿ ರಮಣಿ ಎನ್ನುವ ರಚನೆ. ಮೊದಲು ಸಾಹಿತ್ಯವನ್ನು ಓದಿ. 

ಪಲ್ಲವಿ: 
ಮಾರವೈರಿ ರಮಣಿ ಮಂಜು ಭಾಷಿಣೀ ||ಮಾರವೈರಿ|| 

ಅನುಪಲ್ಲವಿ: 
ಕ್ರೂರ ದಾನವೇಭವಾರಣಾರೀ ಶ್ರೀಗೌರೀ ||ಮಾರವೈರಿ|| 

ಚರಣ: 
ಕರ್ಮಬಂಧವಾರಣ ನಿಷ್ಕಾಮಚಿತ್ತ ವರದೇ 
ಧರ್ಮವರ್ಧನೀ ಸದಾ ವದನಹಾಸೇ ಶುಭಫಲದೇ ||ಮಾರವೈರಿ|| 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4 (3 votes)
To prevent automated spam submissions leave this field empty.

ತ್ಯಾಗರಾಜನೆಂಬ ರಾಗರಾಜ

January 15, 2012 - 4:14am
hamsanandi

ಐದುಹೊಳೆಯೂರಿನಲಿ* ಇದ್ದನವ ಮಹನೀಯ
ಹೆಸರವನದಾಗಿತ್ತು ತ್ಯಾಗರಾಜ;
ಬಗೆಬಗೆಯ ರಾಗದಲಿ ನೂರಾರು ರಚನೆಗಳ
ಮಾಡಿ ಇತ್ತಿಹನೆಮಗೆ ಯೋಗಿ ರಾಜ!

ತ್ಯಾಗರಾಜ ವಿರಾಗಿಯೇಕಾದೆ ಹೇಳು
ನೀ ನಾಗಿರಲು ರಸಿಕ ಮನವಾಳ್ವ ರಾಜ;
ಭೋಗಗಳ* ಬೇಡೆನುತ ನಿಲೆನಿಂತೆ ಹಾಡುತ್ತ
ರಾಗಗಳ ನೀ ನಿಜದಿ ರಾಗ ರಾಜ!

-ಹಂಸಾನಂದಿ

ಕೊ: ಐದುಹೊಳೆಯೂರು = ತ್ಯಾಗರಾಜರು ಬದುಕಿ ಬಾಳಿದ ತಿರುವೈಯಾರು

ಕೊ.ಕೊ: ಶರಭೋಜಿ ಮಹಾರಾಜ ತಂಜಾವೂರಿನ ಆಸ್ಥಾನವಿದ್ವಾಂಸರಾರಿರಬೇಕೆಂಬ ಆಹ್ವಾನವಿತ್ತರೂ, ತ್ಯಾಗರಾಜರು ಅದನ್ನು ಬೇಡವೆಂದೆಣಿಸಿ, ತಿರುವೈಯ್ಯಾರಿನಲ್ಲೇ ನೆಲೆ ನಿಂತರು Read more about ತ್ಯಾಗರಾಜನೆಂಬ ರಾಗರಾಜ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.
ಸರಣಿ: 
Subscribe to ತ್ಯಾಗರಾಜ