ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ
ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ ರಾಜ್ಯಕ್ಕೂ ರಾಜನಾಗಲಿಲ್ಲ. ಎಲ್ಲವನ್ನೂ ’ತ್ಯಾಗ’ ಮಾಡಿದರೂ, ಸಂಗೀತ ಪ್ರಪಂಚಕ್ಕೇ ರಾಜರಾಗಿ ಮೆರೆದರು.
ಹೌದು. ತ್ಯಾಗರಾಜರ ದೇಹಾಂತ್ಯ ಆದದ್ದು ೧೮೪೭ರ ಜನವರಿ ಆರರಂದು. ಆ ದಿನ ಪುಷ್ಯ ಬಹುಳ ಪಂಚಮಿ. ಪುರಂದರ ದಾಸರನ್ನು ಮನಸಲ್ಲೇ ಗುರುವಾಗಿ ನಿಲಿಸಿಕೊಂಡ ತ್ಯಾಗರಾಜರು ದಾಸರ ಆರಾಧನೆಯ ತಿಂಗಳಾದ ಪುಷ್ಯ ಮಾಸದಲ್ಲೇ ದೇಹತ್ಯಾಗ ಮಾಡಿದ್ದು ಕಾಕತಾಳೀಯವಿರಬಹುದು. ಆದರೆ, ಪುರಂದರ ದಾಸರ ರಚನೆಗಳಿಗೂ, ತ್ಯಾಗರಾಜರ ರಚನೆಗಳಲ್ಲೂ ಇರುವ ಹೋಲಿಕೆ ಕಾಕತಾಳೀಯವೇ? ಅಥವಾ, ದಾಸರ ಸಾಹಿತ್ಯ ತ್ಯಾಗರಾಜರ ಮೇಲೆ ಮಾಡಿದ ಪ್ರಭಾವದ ಪರಿಣಾಮವೇ? ಅಥವಾ ಮಹಾತ್ಮರ ಮನಗಳು ಒಂದೇ ತೆರದಲ್ಲಿ ಯೋಚಿಸುವುವೇ?
(ಚಿತ್ರ: http://www.karnatik.com/ ಕೃಪೆ)
Read more about ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ




