ಗ್ರಹಣ
ರಾಹು-ಕೇತು ಕಾಟ, ಮತ್ತು ನವಗ್ರಹ ಸ್ತೋತ್ರ
June 18, 2008 - 5:40am — hamsanandiಚಕ್ರವತ್ಪರಿವರ್ತಂತೇ ದು:ಖಾನಿ ಚ ಸುಖಾನಿ ಚ ಅನ್ನೋದು ಸಂಸ್ಕೃತದ ಪ್ರಸಿದ್ಧ ಮಾತು. ಅಂದರೆ, ಸೋವು ನಲಿವುಗಳೆರಡೂ ಚಕ್ರದಂತೆ ಮತ್ತೆ ಮತ್ತೆ ತಿರುಗಿ ತಿರುಗಿ ಮರಳಿ ಮರಳಿ ಬರುತ್ತಿರುತ್ತವೆ ಎಂದರ್ಥ. ಚಕ್ರದಂತೆ ಬರೋದು ಬರೀ ಸುಖದು:ಖಗಳು ಮಾತ್ರ ಅಲ್ಲ ಅನ್ನೋದು ಮಾತ್ರ, ಚಿಕ್ಕ ಮಕ್ಕಳಿಗೂ ಗೊತ್ತಿರೋ ಸಂಗತಿ. ಹಗಲು ರಾತ್ರಿಯ ಚಕ್ರಕ್ಕಿಂತ ಬೇಕೇ ಮರಳಿ ಮರಳಿ ಸುತ್ತುವ ಚಕ್ರ? ಅದೇ ರೀತಿ ಆಕಾಶದಲ್ಲಿ ಇನ್ನೊಂದು ಕಾಲಕಾಲಕ್ಕೆ ಮರಳಿ ಬರೋ ಚಕ್ರ ಇದೆ - ಆದರೆ ಇದು ಸಾಧಾರಣವಾಗಿ ಎಲ್ಲರಿಗೂ ತಿಳಿದಿರಲ್ಲ, ಅಷ್ಟೇ. ಇದೇ ಗ್ರಹಣ ಚಕ್ರ (Saros cycle- ಸೆರಾಸ್ ಚಕ್ರ. ಇದಕ್ಕೆ ನಮ್ಮ ದೇಶದಲ್ಲಿ, ನಮ್ಮ ಭಾಷೇಲಿ ಬೇರೆ ಹೆಸರಿದೆಯೋ ಇಲ್ಲವೋ ತಿಳಿಯದು. ಅದಕ್ಕೆ ಅರ್ಥ ಗೊತ್ತಾಗೋ ಹಾಗೆ ಗ್ರಹಣಚಕ್ರ ಅನ್ನೋ ಭಾವಾನುವಾದವನ್ನು ಮಾಡಿದೀನಿ. ತಪ್ಪಿದ್ದ್ರೆ ತಿದ್ದಿ! ತಿದ್ಕೋತೀನಿ.)
ಕೆಲವು ದಿನದ ಮೊದಲು ರಾಹು-ಕೇತು ಕಾಟ ಅಂತ ಸ್ವಲ್ಪ ಗಳಹಿದ್ದೆ.ಮತ್ತೆ ಇವತ್ತು ಅದನ್ನ ಮುಂದುವರ್ಸೋಣ ಅಂತ ..ಅಲ್ಲದೆ, ಗ್ರಹಣಚಕ್ರ ಅರ್ಥ ಆಗ್ಬೇಕಾರೆ ರಾಹು ಕೇತು ವಿಷ್ಯ ಸ್ಪಷ್ಟ ಆಗ್ಬೇಕು ಮೊದಲು.
ನಮಗೆಲ್ಲ ಸೂರ್ಯನ ಸುತ್ತ ಭೂಮಿ ಸುತ್ತೋದೂ, ಭೂಮಿ ಸುತ್ತ ಚಂದ್ರ ಸುತ್ತೋದೂ ಗೊತ್ತೇ ಇದೆ. ಆ ಮೇಲೆ, ಒಂದು ಕಾಕತಾಳೀಯವಾದ ಒಂದು ವಿಚಾರದಿಂದ ಗ್ರಹಣಗಳನ್ನು ನಾವು ನೋಡ್ತೀವಿ. ಅದೇನಂದ್ರೆ, ನಮಗೆ ಭೂಮಿಯಿಂದ ನೋಡೋವಾಗ ಸೂರ್ಯನ ಗಾತ್ರವೂ, ಚಂದ್ರನ ಗಾತ್ರವೂ ಸರಿಸುಮಾರು ಒಂದೇ. ಚಂದ್ರನಿಗಿಂದ ಸೂರ್ಯ ಸುಮಾರು ನಾನೂರರಷ್ಟು ದೊಡ್ಡವ್ನು. ಹಾಗೇ ಸುಮಾರು ನಾನೂರರಷ್ಟು ಹೆಚ್ಚು ದೂರ್ದಲ್ಲೂ ಇದಾನೆ. ಅದಕ್ಕೆ ನಮ್ಗೆ ಅಪರೂಪಕ್ಕಾದ್ರೂ ಪೂರ್ಣ ಸೂರ್ಯಗ್ರಹಣ ಕಾಣ್ಸುತ್ತೆ. ಹತ್ತು, ಇಪ್ಪತ್ತು ಚಂದ್ರಗಳಿರೋ ಗುರು, ಶನಿಗಳ ಮೇಲೆ ಈ ರೀತಿ ಗ್ರಹಣಗಳು ಕಾಣೋಲ್ಲ. ಗ್ರಹಣ ಸಾಧ್ಯವಾಗೋಕೆ ಬೇಕಾದ ಇನ್ನೊಂದು ವಿಷಯಏನೂಂದ್ರೆ, ಭೂಮಿ ಸೂರ್ಯನ ಸುತ್ತ ಸುತ್ತೋ ಪಾತಳೀನೂ,ಚಂದ್ರ ಭೂಮಿ ಸುತ್ತ ಸುತ್ತೋ ಸಮಪಾತಳೀನೂ ಸುಮಾರಾಗಿ ಒಂದೇ. ಹಾಗಾಗಿ, ಒಂದೊಂದು ಸಲ ಸೂರ್ಯ ಭೂಮಿ ನಡುವೆ ಚಂದ್ರನೂ, ಕೆಲವೊಮ್ಮೆ ಸೂರ್ಯ ಚಂದ್ರ ನಡುವೆ ಭೂಮಿಯೂ ಬರತ್ತೆ. ಆಗ ಒಂದರ ನೆರಳು ಒಂದರ ಮೇಲೆ ಬಿದ್ದು ಗ್ರಹಣ ಆಗತ್ತೆ. ಇದು ಬಿಡಿ, ಚಿಕ್ಚಿಕ್ ಮಕ್ಕಳ್ಗೂ ಗೊತ್ತಿರೋ ವಿಷ್ಯ. ಮುಂದೆ ಓದಿ »

ದೇವರಿಲ್ಲ ಎಂದ ಬುದ್ಧನೂ ದೇವರ ಅವತಾರವಾದ!
February 7, 2008 - 3:22pm — uniquesupriಅದೊಂದು ಊರು. ಅಲ್ಲೊಂದು ಪಾಳುಬಿದ್ದ ಮಠವಿರುತ್ತದೆ. ಅದರ ಸ್ವಾಮೀಜಿ ಐದು ತಲೆಮಾರುಗಳ ಹಿಂದೆಯೇ 'ತಾವು ಮಾಡುತ್ತಿರುವುದರಲ್ಲಿ ಯಾವ ಅರ್ಥವನ್ನೂ ಕಾಣದೆ' ಪೀಠಕ್ಕೆ ಉತ್ತರಾಧಿಕಾರಿಯನ್ನೂ ನೇಮಿಸದೆ ಹಿಮಾಲಯಕ್ಕೆ ಹೊರಟು ಹೋಗುತ್ತಾರೆ. ಊರ ಗೌಡರು ಹಾಗೂ ಪುರೋಹಿತರು ಸೇರಿ ಬೇರೊಬ್ಬ ಮಠಾಧಿಪತಿಯನ್ನು ತರುವ ಪ್ರಯತ್ನ ಮಾಡುತ್ತಾರೆ. ಮುಂದೆ ಓದಿ »

- uniquesupri ರವರ ಬ್ಲಾಗ್
- Login or register to post comments
- 238 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಕವಿತೆ ಅರ್ಥವಾಗೋದಿಲ್ಲ ಬಿಡಿ!
February 7, 2008 - 3:19pm — uniquesupriಮೊನ್ನೆಯೆರಡು ದಿನಗಳಿಂದ ಎಸ್.ಎಲ್.ಭೈರಪ್ಪನವರ "ಗ್ರಹಣ" ಕಾದಂಬರಿಯನ್ನು ಓದುತ್ತಿದ್ದೇನೆ. ಕಾದಂಬರಿಗಳೆಂದರೆ ಕೇವಲ ಮನರಂಜನೆಯ ಸರಕು. ಕಪೋಲ ಕಲ್ಪಿತ ಕಹಾನಿಗಳನ್ನು ಉದ್ದಕ್ಕೆ ಎಳೆದೆಳೆದು ನೂರಾರು ಪುಟಗಳಿಗೆ ವಿಸ್ತರಿಸಿದರೆ ಕಾದಂಬರಿಯಾಗುತ್ತದೆ ಎಂಬ ಭಾವ ಸಹಜವಾದದ್ದು. ಮುಂದೆ ಓದಿ »

- uniquesupri ರವರ ಬ್ಲಾಗ್
- Login or register to post comments
- 246 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: