ಎಲ್ಲ ರೀತಿಯ ಕೆಚ್ಚೆದೆಯ ಎದೆಗಾರಿಕೆಯು ಆತಂಕದ ಮುಖವಾಡವಾಗಿರುತ್ತದೆ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಸಾಹಿತ್ಯ ಸಮ್ಮೇಳನ

ಮೂರು ಮಹಾಜಾತ್ರೆಗಳು

mel_020209_sidda15.jpg

ಮೊದಲನೆಯದು ಸಿದ್ಧಗಂಗೆಯ ಯತಿಗಳ ಶತಮಾನೋತ್ಸವ. ಉಳುವಿಯ ನಂತರ ನನಗೆ ಅತ್ಯಂತ ಇಷ್ಟವಾದ ತಾಣ ಸಿದ್ಧಗಂಗಾ ಕ್ಷೇತ್ರ. ಸಿದ್ದಗಂಗಾ ಶ್ರೀಗಳ ಮುಂಜಾನೆಯ ಪೂಜೆಯನ್ನು ನೋಡಲೂ ಪುಣ್ಯ ಬೇಕು ಎನ್ನುತಾರೆ. ಆ ಪ್ರಕಾರ ಪುಣ್ಯವಂತ ನಾನು. ಬೆಳಿಗ್ಗೆ ನಾಲ್ಕು ಗಂಟೆಗೆ ಶುರುವಾಗುತ್ತದೆ ಇಷ್ಟಲಿಂಗ ಪೂಜೆ. ನಮಗೆ (ಸಾಮಾನ್ಯ ಜನರಿಗೆ) ಸುಮಾರು ನಾಲ್ಕು ಮುಕ್ಕಾಲಿಗೆ ಒಳಪ್ರವೇಶ.  ಮುಂದೆ ಓದಿ »

೭೫ನೇ ಕನ್ನಡ ಸಾಹಿತ್ಯ ಸಮ್ಮೇಳನ

ಎಲ್. ಬಸವರಾಜು

ಕನ್ನಡಿಗರೇ

ನಮ್ಮ ಹೆಮ್ಮೆಯ ಕರ್ನಾಟಕದಲ್ಲಿ ಕೋಟೆ ಕೊತ್ತಲುಗಳಿಂದ ಕೂಡಿರುವ ಮದಕರಿನಾಯಕ ಹಾಗೂ ವೀರವನಿತೆ ಒನಕೆ ಓಬವ್ವನ ಹೆಸರುಗಳ ಹೇಳಿದಂತೆ ನೆನಪಾಗುವ ಚಿತ್ರದುರ್ಗದಲ್ಲಿ ೭೫ನೇ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ ೨೯ರಂದೇ ಪ್ರಾರಂಭವಾಗಬೇಕಿತ್ತು, ಆದರೆ ರಾಷ್ಟ್ರಪತಿ ವೆಂಕಟರಾಮನರ ನಿಧನದಿಂದಾಗಿ ಪೆಬ್ರವರಿ ೪ ರಿಂದ ಪ್ರಾರಂಭವಾಗಲಿದೆ.  ಮುಂದೆ ಓದಿ »

ಅರೆ ಇದು ನಾನು ಅಂದು ಕಂಡ ಚಿತ್ರದುರ್ಗನಾ !

ಚಿತ್ರದುರ್ಗದ ಆಕರ್ಷಕ ಕೋಟೆಯ ಭಾಗ (ಕೃಪೆ: http://www.chitharadurga.com)

ಅರೆ ಇದು ನಾನು ಅಂದು ಕಂಡ ಚಿತ್ರದುರ್ಗನಾ!

ಹೌದು ಮೊನ್ನೆ ಸೋಮವಾರ(19/01/2009) ಚಿತ್ರದುರ್ಗ ಬಸ್‌ ನಿಲ್ದಾಣದ ಬಳಿ ಬಂದಾಗ. ನನ್ನ ಮನಸ್ಸು ಫ್ಲಾಶ್‌ ಬ್ಯಾಕ್ ಹೋಗಿತ್ತು.

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಜನಿಸಿ, ಅಲ್ಲೇ ಪ್ಲಸ್‌ ೨ ತನಕ ಶಿಕ್ಷಣ ಪಡೆದ ನನಗೆ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೋಮ ಪದವಿ ಶಿಕ್ಷಣ ಕೊಟ್ಟಿದ್ದು ಕರ್ನಾಟಕ. ಗಡಿನಾಡ ಕನ್ನಡಿಗರು ಎನಿಸಿಕೊಂಡಿದ್ದಾಗಿದೆ. ಹಾಗಾಗಿ ಅಲ್ಲಿ ಕೆಲಸ ಖಾತ್ರಿ ಇಲ್ಲ. ಇನ್ನೇನು ಅನ್ನೋ ಹೊತ್ತಿಗೆ ಕರಾವಳಿಯ ನಂ.೧ ಕನ್ನಡ ದೈನಿಕ ಉದಯವಾಣಿ ನನ್ನ ಕೈ ಬೀಸಿ ಕರೆದಿತ್ತು. ಹಾಗೆ ಉದಯವಾಣಿಯಲ್ಲಿ ವೃತ್ತಿ ಜೀವನದ ಎರಡನೇ ಇನ್ನಿಂಗ್ಸ್‌ ಪ್ರಾರಂಭಿಸಿದ್ದೆ. ಪದವಿ ಶಿಕ್ಷಣ ಪಡೆಯುತ್ತಿದ್ದಾಗ ಎಂದೋ ಚಿತ್ರದುರ್ಗಕ್ಕೆ ಹೋಗಬೇಕು ಎಂಬ ಕನಸು ಕಂಡಿದ್ದೆ. ಅಲ್ಲಿ ಇತಿಹಾಸ ಕೇಳಿದ್ದರಿಂದಲೇ ಇರಬೇಕು. ಅದು ಹೀಗೆ ನನಸಾಗತ್ತೆ ಅಂತ ಊಹಿಸಿ ಕೂಡಾ ಇರಲಿಲ್ಲ. ಅಂಥದ್ದೊಂದು ಅವಕಾಶ ನೀಡಿತ್ತು ಕರ್ನಾಟಕದ ನಂ.೧ ದಿನ ಪತ್ರಿಕೆ.

ಅದು ೨೦೦೫ರ ಜುಲೈ ೨೧ರ ಸಂಜೆ ೫.೩೦ರ ಸಮಯ. ಇನ್ನೇನು ಸೂರ್ಯ ಕಂತುವ ಆ ಹೊತ್ತು. ಬಾನು ಕೆಂಪಾಗಿತ್ತು. ಅಂತಹ ಸುಂದರ ಸಂಜೆಯಲ್ಲಿ ಚಿತ್ರದುರ್ಗಕ್ಕೆ ಕಾಲಿರಿಸಿದ ಆ ಕ್ಷಣ.  ಮುಂದೆ ಓದಿ »

ದಾವಣಗೆರೆ ಜಿಲ್ಲಾ ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ದಾವಣಗೆರೆ ವತಿಯಿಂದ ದಿನಾಂಕ ೨೩,೨೪ ರಂದು ದಾವಣಗೆರೆ ಜಿಲ್ಲಾ  ಮುಂದೆ ಓದಿ »

Syndicate content