ನಾಟ್ಯಗುರುವಿಗೊಂದು ನಮನ
June 30, 2010 - 3:03am
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ:
ಪೊಂಗೊಳಲ ರಂಧ್ರಗಳ
ಚೆಂಬೆರಳ ತುದಿಗಳಲಿ
ಮುಚ್ಚುತಾ ತೆರೆಯುತಿಹನ
ತಿರುತಿರುಗಿ ಮರಮರಳಿ
ತನ್ನುಸಿರ ಗಾಳಿಯನು
ಕೊಳಲಿನಲಿ ತುಂಬುವವನ
ಅರಳಿದ ತಾವರೆಯ
ಹೋಲುವಾ ಕಂಗಳಿಹ
ಚೆಂದದಾ ನಿಲುವಿನವನ
ವಂದಿಸುವೆ ನಾನೀಗ
ಬೃಂದಾವನದಿ ನಲಿವ
ನಂದಗೋಪನ ಕಂದನ
ಅಂಗುಲ್ಯಗ್ರೈಃ ಅರುಣಕಿರಣೈಃ ಮುಕ್ತಸಂರುದ್ಧರಂಧ್ರಂ Read more about ನಂದನ ಕಂದನಿಗೆ
ಒಳಗೆ ನುಗ್ಗುತ ದಟ್ಟ ಕಾಡಿನ
ಕೊಳಗಳೊಳಗಡೆ ಮುಳುಗಿ ಪರ್ವತ
ಗಳನು ಏರುತ ಹುಡುಕುತಿರುವರು ಹೂವ ಕೊಯ್ಯಲಿಕೆ;
ತಿಳಿವೆ ಕಾಣದ ಜಡಮತಿಗಳಿವು
ತಿಳಿಯರಯ್ಯೋ ಮನದ ಕೊಳದಲ-
ರಳಿಹ ಕಮಲವ ಮುಡಿಸೆ ಶಿವನಿಗೆ ಬಹಳ ಮೆಚ್ಚಿಗೆಯು!
ಸಂಸ್ಕೃತ ಮೂಲ (ಆದಿಶಂಕರಾಚಾರ್ಯರ ಶಿವಾನಂದಲಹರಿ, ಶ್ಲೋಕ ೯):
ಗಭೀರೇ ಕಾಸಾರೇ ವಿಶತಿ ವಿಜನೇ ಘೋರವಿಪಿನೇ
ವಿಶಾಲೇ ಶೈಲೇ ಚ ಭ್ರಮತಿ ಕುಸುಮಾರ್ಥಂ ಜಡಮತಿಃ
ಸಮರ್ಪ್ಯೈಕಂ ಚೇತಃ ಸರಸಿಜಮುಮಾನಾಥ ಭವತೇ
ಸುಖೇನಾವಸ್ಥಾತುಂ ಜನ ಇಹ ನ ಜಾನಾತಿ ಕಿಮಿಹೋ ||
-ಹಂಸಾನಂದಿ Read more about ಶಿವನ ಪೂಜೆಯ ಹೂ