ನಾವು ಸಮಯವನ್ನು ಉಪಕರಣವನ್ನಾಗಿ ಬಳಸಿಕೊಳ್ಳಬೇಕು, ಊರುಗೋಲಾಗಿ ಅಲ್ಲ.

— ಜಾನ್ ಕೆನಡಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಬಾಲ್ಯ

ಆ ಕಾಲ ಒಂದಿತ್ತು ...

ಆ ಕಾಲ ಒಂದಿತ್ತು...


ದಿವ್ಯವಾಗಿತ್ತು!


ಬಾಲ್ಯ ಅದಾಗಿತ್ತು 


ಕಲ್ಲು ಹೂವಾಗಿತ್ತು


ನೀರು ಅಮೃತವಾಗಿತ್ತು


ನೆಲವೂ ನಾಕವು ನಗುವ ಕಾಲ ಅದಾಗಿತ್ತು !!!


 


ವಿ.ಸೂ. ಓದುಗರೆ ನಾನು ತಿಳಿದ ಪ್ರಕಾರ ನಾಕವು ಅಂದ್ರೆ ಆಕಾಶ (ದಯವಿಟ್ಟು ತಪ್ಪಾಗಿದಲ್ಲಿ ಕ್ಷಮಿಸಿ!!!)

ಸಿಲ್ಲಿ ಕನಸುಗಳೆಂಬ ಸಣ್ಣ ಸೇತುವೆಗಳು

ಒಮ್ಮೊಮ್ಮೆ ನೆನಪಿಸಿಕೊಂಡರೆ ಅಚ್ಚರಿಯಾಗುತ್ತದೆ: ನಾವೆಲ್ಲ ಎಂತೆಂಥ ಅನಾಹುತಕಾರಿ ಘಟ್ಟಗಳನ್ನು ದಾಟಿ ಬಂದಿರುತ್ತೇವಲ್ವೆ?

ಬಾಲ್ಯದಲ್ಲಿ ಚಿತ್ರವಿಚಿತ್ರ ಆಸೆಗಳಿರುತ್ತವೆ. ಅವತ್ತಿನ ಮಟ್ಟಿಗೆ ಅವೇ ದೊಡ್ಡವು. ಬಲು ಪಸಂದಾಗಿರುವಂಥವು. ಚಿಕ್ಕವನಿದ್ದಾಗ, ನಮ್ಮೂರಿನ ಹಿಟ್ಟಿನ ಗಿರಣಿಗೆ ನಿಯಮಿತವಾಗಿ ಹೋಗುತ್ತಿದ್ದೆ, ಜೋಳ ಬೀಸಿಕೊಂಡು ಬರಲು. ಅದೇ ಮುಖ್ಯ ಆಹಾರ ನಮಗೆ. ತೀರಾ ಕುಳ್ಳನಾಗಿದ್ದ ನನಗೆ, ಎತ್ತರದಲ್ಲಿದ್ದ ಹಿಟ್ಟು ಬೀಸುವ ಯಂತ್ರದ ಬಾಯಿಗೆ ಜೋಳದ ಬುಟ್ಟಿ ಎತ್ತಿ ಸುರುವಲು ಆಗುತ್ತಿರಲಿಲ್ಲ. ಗಿರಣಿಯ ಕೆಲಸಗಾರ, ನನ್ನ ತಲೆ ಮೇಲಿನ ಬುಟ್ಟಿ ಎತ್ತಿ, ಜೋಳ ಸುರುವಿ ಬುಟ್ಟಿಯನ್ನು ವಾಪಸ್‌ ಕೊಡುತ್ತಿದ್ದ. ಆಗ ಕೆಲ ಗಾಲಿಗಳನ್ನು ತಿರುವಿದ ಕೂಡಲೇ ಯಂತ್ರದ ಸದ್ದು ಬದಲಾಗಿ, ಇದ್ದಕ್ಕಿದ್ದಂತೆ ಹಿಟ್ಟು ಬುಟ್ಟಿಯಲ್ಲಿ ಬೀಳಲು ಶುರುವಾಗುತ್ತಿತ್ತು.

ನನಗೆ ಅದು ಬಹಳ ಕೌತುಕದ ಸಂಗತಿಯಾಗಿತ್ತು. ಯಂತ್ರದ ಬಾಯಿಂದ ಜೋಳ ಅದರ ಹೊಟ್ಟೆಗೆ ಹೇಗೆ ಹೋಗುತ್ತದೆ ಎಂಬುದನ್ನು ನೋಡುವ ಆಸೆ ನನ್ನದು. ಆದರೆ, ಗಿರಣಿಯವ ನನ್ನನ್ನು ಬಿಡುತ್ತಿರಲಿಲ್ಲ. ಅಲ್ಲದೇ, ಜೋಳ ಮುಗಿಯುತ್ತ ಬಂತು ಎಂಬುದು ಅವನಿಗೆ ಹೇಗೆ ಗೊತ್ತಾಗುತ್ತದೆ ಎಂಬುದನ್ನು ತಿಳಿಯುವ ಕುತೂಹಲವೂ ಸಾಕಷ್ಟಿತ್ತು. ಎಷ್ಟೇ ಪ್ರಯತ್ನಿಸಿದರೂ, ಆತ ಹೇಳುತ್ತಿರಲಿಲ್ಲ. ’ಅದಕ್ಕೆಲ್ಲ ತಲೆ ಬೇಕಾಗುತ್ತದೆ’ ಎಂದು ತನ್ನ ತಲೆ ಮುಟ್ಟಿ ನಗುತ್ತಿದ್ದ.

ಆಗ ನನ್ನ ದೊಡ್ಡ ಕನಸೆಂದರೆ, ಗಿರಣಿಯಲ್ಲಿ ಹಿಟ್ಟು ಬೀಸುವ ಕೆಲಸ ಮಾಡಬೇಕೆಂಬುದು. ದೊಡ್ಡವನಾದಾಗ, ಹಿಟ್ಟು ಬೀಸುವ ಕೆಲಸ ಮಾಡಬೇಕು. ಆಗ, ನನ್ನಂಥ ಚಿಕ್ಕಮಕ್ಕಳಿಗೆ ಗಿರಣಿ ಕೆಲಸ ಮಾಡುವುದನ್ನು ತೋರಿಸಿ ಅವರ ಅಚ್ಚರಿ ಗಮನಿಸಬೇಕೆಂಬ ವಿಚಿತ್ರ ಆಸೆ ಹುಟ್ಟಿತ್ತು. ನಾನು ಹೈಸ್ಕೂಲು ಮುಗಿಸುವವರೆಗೂ ಈ ಆಸೆ ಇತ್ತೆಂಬುದನ್ನು ಇವತ್ತು ನೆನೆದರೆ ನಗು ಬರುತ್ತದೆ.  ಮುಂದೆ ಓದಿ »

ಬೆರಳ್ಹಿಡಿದು ಜಗವ ತೋರಿಸಿದಾತ...ಅಪ್ಪ!

ಸಾವಿರ ಸವಾಲುಗಳ ದಾಟಿಸಿದ ತಂದೆ...

ಆತ ನಮ್ಮ ಬಾಲ್ಯದ ಹೀರೊ. ಅಮ್ಮನ ಮಡಿಲಿನಿಂದ ಕೆಳಗಿಳಿದು ನಡೆಯಲು ಕಲಿತಾಗಿನಿಂದ ಆತ ನಮ್ಮ ಪಾಲಿನ ದೊಡ್ಡ ಭರವಸೆ. ಸಹಪಾಠಿಗಳೊಂದಿಗೆ ಜಗಳವಾದಾಗ, ನಾವು ದೂರು ಹೇಳಿದ್ದು ಆತನಿಗೆ. ಮೊದಲ ಮಿಠಾಯಿ ಕೊಡಿಸಿದ್ದು ಆತನೇ. ಬೆದರಿದಾಗ ಎತ್ತಿಕೊಂಡು ಸಂತೈಸಿದ, ಭರವಸೆ ತುಂಬಿದ ಮೊದಲ ವ್ಯಕ್ತಿ ಆತ. ಬಾಲ್ಯದ ನೂರೆಂಟು ನೆನಪುಗಳನ್ನು ಸಮೃದ್ಧವಾಗಿಸಿದ ಆತ ನಮ್ಮ ಅಪ್ಪ. ಆತ ಎಲ್ಲ ಕಡೆ ಸಿಗುತ್ತಾನೆ. ಪಾರ್ಕ್‌‌ಗಳಲ್ಲಿ, ಬಸ್‌ಸ್ಟಾಪ್‌ಗಳಲ್ಲಿ, ಶಾಲೆಯ ಗೇಟಿನ ಹೊರಗೆ, ಅಂಗಡಿ ಎದುರು- ಎಲ್ಲೆಲ್ಲಿ ಮಕ್ಕಳು ಕಾಣುತ್ತಾರೋ ಅಲ್ಲೆಲ್ಲ ಆತನೂ ಇರುತ್ತಾನೆ. ಕಂಡದ್ದನ್ನೆಲ್ಲ ಕೊಡಿಸು ಎಂದು ಕೈಚಾಚುವ ಮಕ್ಕಳಿಗೆ ಪ್ರೀತಿಯಿಂದ ತಿಳಿ ಹೇಳುತ್ತ, ಚೆನ್ನಾಗಿವೆ ಅನಿಸಿದ್ದನ್ನು ಕೊಡಿಸುತ್ತ, ಮಕ್ಕಳು ಖುಷಿಯಿಂದ ಕೇಕೆ ಹಾಕುವಾಗ ಸದ್ದಿಲ್ಲದೇ ತೃಪ್ತಿಯಿಂದ ನಗುತ್ತಾನೆ.  ಮುಂದೆ ಓದಿ »

ಮಳೆ ಎಂದರೆ ಬಾಲ್ಯದ ನೆನಪು ಕಣಾ...

ಮಳೆಯಲ್ಲಿ ನೆನೆವ ನೆನಪುಗಳು...

ಮುಂಗಾರು ಶುರುವಾಗಿದೆ. ಜೊತೆಗೆ, ನೆನಪುಗಳ ಮಳೆಯೂ.  ಮುಂದೆ ಓದಿ »

ಮರೆತೇನೆಂದರೆ ಮರೆಯಲಿ ಹ್ಯಾಂಗ...?

ಬೆಂಗಳೂರಿನ ಬಾಲಗಂಗಾಧರ ಸ್ವಾಮೀಜಿ ಮೇಲ್ಸೇತುವೆ

’ಬಿಸಿಲು ಬಲಿಯುತ್ತಿದೆ’

ಹಾಗಂದುಕೊಂಡೇ ಪ್ರತಿ ದಿನ ಮಧ್ಯಾಹ್ನದ ಹೊತ್ತು ಸ್ಕೂಟಿ ಏರುತ್ತೇನೆ. ಮಗಳನ್ನು ಶಾಲೆಯಿಂದ ಕರೆ ತಂದಾಗಿರುತ್ತದೆ. ಲಘು ಊಟವೂ ಮುಗಿದಿರುತ್ತದೆ. ಸುದ್ದಿ ವಿಷಯಕ್ಕೆ ಸಂಬಂಧಿಸಿದಂತೆ ಇವತ್ತು ಅಂತಹ ಬೆಳವಣಿಗೆಗಳೇನೂ ಆಗಿಲ್ಲ ಅಂತ ಅಂದುಕೊಳ್ಳುತ್ತ ಸ್ಕೂಟಿ ಚಲಿಸುವಾಗ, ಬಿಸಿ ಗಾಳಿ ಮುಖಕ್ಕೆ ರಾಚುತ್ತದೆ.  ಮುಂದೆ ಓದಿ »

ಪತ ಪತ ಗುಡ್ಡೆ ಮತ್ತು ಅದರ ಜತೆಗೆ ನೆನಪಾದದ್ದು.

ಹೆಸರು ಕೇಳ್ದಾಗ್ಲೇ ನಂಗೆ ನಗು ಬರುತ್ತೆ. ಯಾಕಂದ್ರೆ ಅದ್ರ ಹಿಂದಿರೋ ಕತೆ ನಂಗೆ ಗೊತ್ತಲ್ವಾ. ನಿಮ್ಗೂ ಹೇಳ್ತೀನಿ.

ನಾನು ಒಂದು-ಎರಡು ವರ್ಷದ ಚಿಕ್ಕ - ಪುಟ್ಟ - ತುಂಟ ಹುಡುಗಿಯಾಗಿದ್ದಾಗಿನ ಕತೆ. ನಂಗೆ ಇದು ನಿಜಾನಾ ಅಂತ ನೆನಪಿಲ್ಲ. ಆದ್ರೆ ಅಮ್ಮ ಕೆಲವೊಮ್ಮೆ ನೆನಪಿಸ್ತಾರೆ.

1979-80ರ ಹೊತ್ತಿಗೆ ನಾವಿದ್ದದ್ದು ಮಂಗಳೂರಿನ ಕೊಟ್ಟಾರ ಕ್ರಾಸ್ ಬಳಿ. ಅದು ನನ್ನ ದೊಡ್ಡಮ್ಮನ ಮನೆಗೂ ಹತ್ರ. ದೊಡ್ಡಮ್ಮ ಅಂದ್ರೆ ನನ್ನ ಅಜ್ಜಿ. ಯಾಕೆ ಅಜ್ಜಿಯನ್ನು ದೊಡ್ಡಮ್ಮ ಅಂತ ಕರೀತಿದ್ನೋ ಗೊತ್ತಿಲ್ಲ. ಬಹುಶಃ, ಆಕೆ ಆಗ ಅಜ್ಜಿ ತರಹ ಕಾಣಿಸ್ತಾ ಇರ್ಲಿಲ್ವೇನೋ. ದೊಡ್ಡಮ್ಮನ ಮನೆ ಕತೆಗಳೂ ಚೆನ್ನಾಗಿವೆ. ಇನ್ನೊಂದ್ಸಲ ಹೇಳ್ತೀನಿ. ಈಗ ಪತ ಪತ ಗುಡ್ಡೆ ಹತ್ತೋಣ.

ನಮ್ಮ ಹಳೇ ಮನೆ ಇದ್ದ ಜಾಗದಿಂದ ಸ್ವಲ್ಪವೇ ದೂರದಲ್ಲಿ ಈ ಪತ ಪತ ಗುಡ್ಡೆ ಇದ್ದದ್ದು. ಗುಡ್ಡ ಅಂದ್ರೆ ಅಂಥ ದೊಡ್ಡ ಗುಡ್ಡೆ ಏನಲ್ಲ. ಈಗ ಏನಾದ್ರೂ ಈ ಗುಡ್ಡೆ ನೋಡಿದ್ರೆ.... ಇದಾ.... ಗುಡ್ಡೆ ಅಂತ ಅನ್ನಿಸುತ್ತೆ. 25-30 ವರ್ಷಗಳ ಹಿಂದೆ ಅಲ್ಲಿ ಮನೇನೂ ಇರ್ಲಿಲ್ಲ. ರಸ್ತೆ ಕೂಡಾ ಇರ್ಲಿಲ್ಲ. ಖಾಲಿ ಜಾಗ ಇತ್ತು. ಈಗ ರಾಷ್ಟ್ರೀಯ ಹೆದ್ದಾರಿ 17 ಪಕ್ಕದಲ್ಲೇ ಇದೆ.  ಮುಂದೆ ಓದಿ »

ನೆನಪು ಚಿಗುರುವ ಸಮಯ

ಇವತ್ತು ಬೆಂಗಳೂರಿನಲ್ಲಿ ಹದವಾದ ಮಳೆ ಬಿತ್ತು.

ನಾನು, ರೇಖಾ ಹಾಗೂ ಮಗಳು ಗೌರಿ ಮನೆಯ ದೊಡ್ಡ ಗೇಟಿನ ಸರಳಿಗೆ ಮುಖವಾನಿಸಿಕೊಂಡು ನಿಂತು, ಸಣ್ಣಗೆ ಬೀಳುತ್ತಿದ್ದ ಮಳೆ ನೋಡಿದೆವು. ಡಾಂಬರ್‌ ಬಳಿದುಕೊಂಡು ಚೆಂದವಾದ ರಸ್ತೆಯಲ್ಲಿ, ಹಳದಿ ದೀಪದ ಪ್ರತಿಫಲನ. ಅದು ರಂಗಸ್ಥಳವೇನೋ ಎಂಬಂತೆ ಮಳೆ ಹನಿಗಳು ಉಲ್ಲಾಸದಿಂದ ಸಿಡಿದು, ಚದುರಿ ಮಾಯವಾಗುತ್ತಿದ್ದ ಅಪೂರ್ವ ದೃಶ್ಯವನ್ನು ಗೌರಿ ತನ್ನ ಪುಟ್ಟ ಮನಸ್ಸಿನ ಕುತೂಹಲದಿಂದ ನೋಡಿದಳು.

ನನಗೆ ಊರು ನೆನಪಾಯಿತು.

ಮೇ ತಿಂಗಳಿನ ಈ ದಿನಗಳಲ್ಲಿ ಕೊಪ್ಪಳ ತಾಲ್ಲೂಕಿನ ನನ್ನೂರು ಅಳವಂಡಿಯಲ್ಲಿ ಕಡು ಬೇಸಿಗೆ. ಫೆಬ್ರುವರಿ ತಿಂಗಳಿಂದಲೇ ಚುಚ್ಚತೊಡಗುವ ಬಿಸಿಲಿಗೆ ಮಾರ್ಚ್‌ ತಿಂಗಳ ಹೊತ್ತಿಗೆ ತುಂಬು ಪ್ರಾಯ. ಏಪ್ರಿಲ್‌-ಮೇ ತಿಂಗಳಲ್ಲಂತೂ ಕಡು ಬೇಸಿಗೆ. ಎಂಥಾ ಮಳೆಯನ್ನೂ ಮೊಗೆದು ಕುಡಿದು ಮತ್ತೆ ಒಣಗಿ ನಿಲ್ಲುವ ಬಿಸಿಲ ಬಯಲುಗಳು. ಕಾಲಿನ ಮೀನಖಂಡದವರೆಗೂ ನುಂಗಬಲ್ಲ, ಕಪ್ಪು ಮಣ್ಣಿನ ಬಿರುಕುಗಳು. ಮಸಾರಿ (ಕೆಂಪು) ಹೊಲದ ಬೆಣಚುಕಲ್ಲುಗಳು ಕಾಯ್ದು ಹೆಂಚಿನಂತೆ ಧಗಿಸುತ್ತವೆ. ನಮ್ಮ ಬಡಬಾಲ್ಯದ ಬರಿಗಾಲನ್ನು ಅವು ಅದೆಷ್ಟು ಸಾರಿ ಸುಟ್ಟು ಬೊಬ್ಬೆ ಏಳಿಸಿದ್ದವೋ!  ಮುಂದೆ ಓದಿ »

ಬಾಲ್ಯದ ನಂಟಿನ ನೆನಪು

ಈ ದಿನ ಅದೇಕೋ ಆಫೀಸಿಗೆ ಬರುವಾಗ ಜನರೇ ಇಲ್ಲ ಅನಿಸಿತು. ಸಾಗುತ್ತಾ ಮುನ್ನಡೆದೆ. ಒಂದು ಕಡೆ ಸಿಗ್ನಲಿನಲ್ಲಿ ನಿಂತಿರುವಾಗ, ಠಪ್ಪ್ ಅಂತ ತಲೆಗೇರಿಸಿದ್ದ ಹೆಲ್ಮೆಟ್ಟಿನ ಮೇಲೆ ಅದೇನೋ ಬಿತ್ತು. ತಲೆ ಎತ್ತಿನೋಡಿದೆ ತುಂಬಾ ಸಂತೋಷವಾಯಿತು. ನನ್ನ ಬಾಲ್ಯದಲ್ಲಿ ತುಂಬಾ ಅಂದರೆ ತುಂಬಾ ಅಂಟಿಕೊಂಡಿದ್ದ ಮರ ಇದು. ನನಗೆ ಟ್ರಾಫಿಕ್ಕಿನಲ್ಲಿದ್ದಷ್ಟು ಹೊತ್ತು ಹಿನ್ನೆಪ್ಪು(ನಾಸ್ಟಾಲ್ಜಿಯಾ) ಕಾಡಹತ್ತಿತು. ಕೈಲಿದ್ದ ಮೊಬೈಲಿನ ಕ್ಯಾಮೆರಾದಲ್ಲಿ ಮರದ ಒರೆಯಂಚುಗಳನ್ನು ಕ್ಲಿಕ್ಕಿದೆ.  ಮುಂದೆ ಓದಿ »

ತುಡಿತ

ತುಡಿತ

ಅಕ್ಕ, ನೆನಪಿದಯೇ ನಮ್ಮ ಬಾಲ್ಯದ ದಿನಗಳು?
ಇಬ್ಬರೂ ಒಟ್ಟಿಗೆ ಆಡುತ್ತಾ, ಬೀಳುತ್ತಾ, ಜಗಳವಾಡಿದ ಕ್ಷಣಗಳು.
ಆ ದಿನಗಳ ಮಧುರತೆ, ಸಂತೋಷ ಇಂದು ದೊರಕೀತೆ?
ಮರಳಿ ಹೋಗೋಣವೆ, ಆ ಗತಿಸಿದ ದಿನಗಳ ಬಳಿಗೆ
ಕಿತ್ತು ತರೋಣವೆ ನಮ್ಮೆಲ್ಲಾ ಹರುಷವನ್ನು...

ಅಕ್ಕ, ನೆನಪಿದಯಾ, ನಾವಿಬ್ಬರು ಅಪ್ಪನಿಂದ ಒದೆ ತಿಂದದ್ದು,  ಮುಂದೆ ಓದಿ »

Syndicate content