ಯಾವುದು ಕಾಲದ ಕಠಿಣ ಪರೀಕ್ಷೆಯಲ್ಲೂ ಅಚಲವಾಗಿರುತ್ತದೆಯೋ ಅದೇ ಸತ್ಯ.

— ಅಲ್‌ಬರ್ಟ್ ಐನ್‌ಸ್ಟೀನ್

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಮಳೆ

ಮಳೆ ಎಂದರೆ ಬಾಲ್ಯದ ನೆನಪು ಕಣಾ...

ಮಳೆಯಲ್ಲಿ ನೆನೆವ ನೆನಪುಗಳು...

ಮುಂಗಾರು ಶುರುವಾಗಿದೆ. ಜೊತೆಗೆ, ನೆನಪುಗಳ ಮಳೆಯೂ.  ಮುಂದೆ ಓದಿ »

ಮಳೆಭೈರವ ರೋಷ

ಕದ್ದಿಂಗಳು ಕಗ್ಗತ್ತಲು ಕಾರ್ಗಾಲದ ರಾತ್ರಿ
ಸಿಡಿಲ್ಮಿಂಚಿಗೆ ನಡುಗುತ್ತಿದೆ ಪರ್ವತ ವನ ಧಾತ್ರಿ  ಮುಂದೆ ಓದಿ »

ಭಾನುವಾರದ ಮಳೆ, ಪಾಟೀಲರ ನಾಟಕ

ಜಯಲಕ್ಷ್ಮಿ ಪಾಟೀಲರು 'ನನ್ನದೊಂದು ನಾಟಕ ಇದೆ' ಎಂದು ಬರೆದದ್ದು ಸಮುದಾಯದ ಹೊಸಬರಲ್ಲಿ ಅಚ್ಚರಿ ಮೂಡಿಸಿರಲಿಕ್ಕೂ ಸಾಕು. ನಾಟಕದ ಕುರಿತು ನಡೆಸಿಕೊಡುತ್ತಿರುವವರೇ ಬರೆದು ಆಮಂತ್ರಣ ನೀಡುವುದು ಹಲವರಿಗೆ ಹೊಸತೆನಿಸಬಹುದು. ಆದರೆ ಹಲವು ವರ್ಷಗಳ ಕಾಲ ಹಲವು ಸಮುದಾಯಗಳಲ್ಲಿ ಪಾಲ್ಗೊಂಡವರಿಗೆ ಗೊತ್ತಿರುತ್ತದೆ, ಎಲ್ಲರೊಂದಿಗೆ ಬೆರೆತು ಎಲ್ಲರನ್ನೂ ಆಮಂತ್ರಿಸುವ ಈ ರೀತಿ ಸಮುದಾಯಗಳಲ್ಲಿ ಹೊಸತೇನಲ್ಲ ಎಂಬುದು. ಸಮುದಾಯದಲ್ಲಿ ಸಮಾನತೆ ಕಾಣಿಸುವ ಹಲವು ವಿಷಯಗಳಲ್ಲಿ ಇದೂ ಒಂದು.

ಅಂದು 'ನಾಟಕ ಇದೆ, ಬನ್ನಿ' ಎಂದು ಬರೆದ ಲೇಖನ ಸರಿಯಾಗಿ ಪ್ರಕಟವಾಗಿಲ್ಲವೆಂದು ಜಯಲಕ್ಷ್ಮಿಯವರು ಸಂಪರ್ಕಿಸಿದಾಗ ಅದನ್ನು ಸರಿಪಡಿಸುವುದು ಹೇಗೆಂದು ತಿಳಿಸಿ "ನಾವೂ ಬರುತ್ತೇವೆ" ಅಂದಿದ್ದೆ. "ಬರ್ತೀರಾ?" ಎಂದು ಎರಡೆರಡು ಸಾರಿ ಕೇಳಿದ್ದರು, ಇವರೆಲ್ಲ ಕಂಪ್ಯೂಟರ್ ಬಿಟ್ಟು ಹೊರಗೆ ಹೋಗುವುದೇ ನಂಬಲಾಗದು ಎಂಬಂತೆ.

ಭಾನುವಾರ ಬಂತು, ನಾಟಕ ನೋಡೋಕೆ ಹೊರಟಿದ್ದೇನೋ ಸೈ, ಆದರೆ ಎಂದಿನಂತೆ ನಮ್ಮ ಪ್ರೋಗ್ರಾಮಿನಲ್ಲಿ twists ಎಂಡ್ turnsಉ. ಅರವಿಂದ ಮೈಸೂರಿನಿಂದ ಬಂದಿದ್ದ, ಅವ ಹಿಂದಿನ ದಿನ ಫೋನ್ ಮಾಡಿ "ಶ್ರೀನಗರದಲ್ಲಿದೀನಿ, ಸಿಗೋಣ್ವ?" ಅಂದಿದ್ದ.

ದಾರಿಯುದ್ದಕ್ಕು ಮಳೆ ಬೇರೆ ಭೋರ್ ಎಂದು ಹೊಡೆಯುತ್ತಿತ್ತು. ಪಾಲನಿಗೆ "ನೀನು ಆಶ್ರಮ ಬಸ್ ಸ್ಟಾಪಿಗೆ ಬಂದುಬಿಡು" ಎಂದು ಹೇಳಿ ಘಂಟೆಗಳೇ ಆಗಿಹೋಗಿತ್ತು. ಅವ ನಾಲ್ಕೈದು ಕಾಫಿ ಕುಡಿಯುತ್ತ, ನಮಗೆ ಕಾಯುತ್ತ ತಾಳ್ಮೆಯನ್ನು ಪರೀಕ್ಷೆಗೆ ಹಚ್ಚಿದ್ದ.  ಮುಂದೆ ಓದಿ »

ಮಳೆಯ ಮರೆಯಲ್ಲಿ

ಮಳೆರಾಯನ ಆಟ ನೋಡ್ಲಿಕ್ಕೆಂದು ಹೊರಟ ನಾನು ಕಂಡದ್ದು ಮಬ್ಬಾದ ಬಾನು. ಅಲ್ಲೇ ಅಡಗಿದ್ದ ಸಣ್ಣಗಿನ ನೀರ ದನಿ ಅದರೊಡನೆ ಸುಂದರ ನೀರ ತರಂಗಗಳು. ನನ್ನ ಕ್ಯಾಮೆರಾ ಕಣ್ಣಿಗೆ ಸಿಕ್ಕ ಈ ಚಿತ್ರಣ ಕಂಡು ನನ್ನ ಮನಸ್ಸಿನಲ್ಲಿ ಏಳುತ್ತಿದೆ ಎನೋ ಒಂಥರಾ ತಳಮಳ. ಒಂದರ ಮೇಲೊಂದರಂತೆ ಬೀಳುತ್ತಿದ್ದ ಹನಿಗಳಿಂದಾದ ಆ ಕಂಪನ ಕಂಡು ಎಂಥದೋ ಒಂಥರಾ ವಿದ್ಯುತ್ ಸಂಚಾರ.

   ಮುಂದೆ ಓದಿ »

ಮಳೆಗೆ ಮುನ್ನ

ಮೈಸೂರಲ್ಲಿ ಇವತ್ತು ಮದ್ಯಾನದಿಂದ್ಲೇ ಮಳೆ ಬರೋ ಹಾಗೆ ಆಗಿತ್ತು... ವಾತಾವರಣ ಆಹ್ಲಾದಕರವಾಗಿತ್ತು...

ರೂಮಿಗೆ ಬರುವಾಗ ಮಳೆ ಶುರುವಾದರೂ ಚೆನ್ನಾಗಿರುತ್ತೆ ಅಂತ ಬೈಕ್ ಓಡಿಸುತ್ತಾ ನೆನೆದುಕೊಂಡು ಬಂದೆ... 

ಈ ಫೋಟೋ ಮಳೆ ಶುರುವಾಗುವ ಐದು ನಿಮಿಷ ಮುಂಚೆ ತೆಗೆದಿದ್ದು... :)

   ಮುಂದೆ ಓದಿ »

ನೀರು ಹರಿಯುವುದು ಕಡಲಿನ ಕಡೆಗೆ

ರೂಪ ಅವರು ಹಾಕಿದ್ದ  ಆಲದ ಮರದ ಬಿಳಲುಗಳ ಚಿತ್ರವನ್ನು ನೋಡಿದಾಗ ಏಕೋ ಈ ಸುಭಾಷಿತ ನೆನಪಾಯಿತು. ಅಥವಾ, ಇವತ್ತು ಇಲ್ಲಿ ಬೆಟ್ಟದ ಮೇಲೆ ಬೀಳುತ್ತಿರುವ ಮಂಜಿನಿಂದಲೋ? ಯಾಕೋ ಬಗೆಹರಿಯದು. ಬಿಡಿ. ಒಂದು ಒಳ್ಳೇ ಮಾತು ಹೇಳಲು ಪೀಠಿಕೆ ಬೇರೆ ಬೇಕಾ?  ಮುಂದೆ ಓದಿ »

ತಲೆನೋವು

ಇಂದು ಸಂಜೆ ಕಛೇರಿಯಿಂದ ಮನೆಗೆ ಹೊರಟಾಗ ಮಳೆ ಬರುತ್ತಿತ್ತು... ಕಾರಿನಲ್ಲಿ ಆಫೀಸ್ ಗೆ ಹೋಗಿದ್ದರಿಂದ ಮಳೆಯಲ್ಲಿ ನೆನೆಯದೆಯೇ ಮನೆಗೆ ಬಂದೆ... ಮನೆಗೆ ಬಂದ ಕೂಡಲೇ ಅಮ್ಮ "ಏನೋ, ಈ ದಿನ ಇಷ್ಟು ಬೇಗ ಮನೆಗೆ ಬಂದೆ? ಅದಕ್ಕೇ ಅನ್ಸುತ್ತೆ ಮಳೆ ಬರ್ತಾ ಇದೆ" ಅಂತ ಹೇಳಿ ನಕ್ಕರು. ನಾನು "ಹಾಗೇನಿಲ್ಲ, ಸ್ವಲ್ಪ ತಲೆ ನೋವು. ಅದಕ್ಕೆ ಬೇಗ ಬಂದೆ. ಬಿಸಿ ಬಿಸಿ ಸ್ಟ್ರಾಂಗ್ ಕಾಫಿ ಕೊಡು.  ಮುಂದೆ ಓದಿ »

ಬಿಹಾರದಲ್ಲಿ ಪ್ರವಾಹ

ಕೊಸಿನದಿಯ ರುದ್ರ ನರ್ತನಕ್ಕೆ ತುತ್ತಾಗಿ ಎಲ್ಲಿ ನೋಡಿದರು ನೀರಿನಿಂದ ಕೂಡಿದ ಬಿಹಾರ

ನೇಪಾಳ ಗಡಿಭಾಗದ ಕುಶಾದಲ್ಲಿ ಕೋಸಿ ನದಿಗೆ ಕಟ್ಟಿದ ಒಡ್ಡು ಒಡೆದ ಪರಿಣಾಮ ಕೆಲವೇ ಗಂಟೆಗಳಲ್ಲಿ ಉತ್ತರ ಬಿಹಾರದ ಐದು ಜಿಲ್ಲೆಗಳಾದ ಸುಪೌಲ್, ಅರಾರಿಯ, ಸಹರ್ಸಾ, ಮಾಧೇಪುರ ಮತ್ತು ಪುರ್ನಿಯಾ ಅಸ್ತಿತ್ವವೇ ಇಲ್ಲದಂತೆ ಜಲಾವೃತಗೊಂಡವು. ಈ ಪ್ರಾಂತಗಳು ಪ್ರತಿ ವರ್ಷ ಎದುರಿಸುತ್ತಿದ್ದ ಪ್ರವಾಹಕ್ಕಿಂತ ದುಪ್ಪಟ್ಟು ನಷ್ಟವನ್ನು ಈ ಬಾರಿಯ ವಿಪತ್ತು ತಂದೊಡ್ಡಿದೆ. ಬಿಹಾರದ ಕಣ್ಣೀರ ನದಿಯೆಂದೆ ಜನಜನಿತವಾಗಿರುವ ಕೋಸಿ ನದಿಯ ಪ್ರವಾಹದಿಂದಾಗಿ ಬಿಹಾರದ ಜನತೆ ಅಕ್ಷರಶಃ ತಮ್ಮ ಜೀವನದೊಂದಿಗೆ ಹೋರಾಟಕ್ಕಿಳಿದಿದ್ದಾರೆ. ಲಕ್ಷಾಂತರ ಮಂದಿ ಪ್ರವಾಹದಿಂದಾಗಿ ತಮ್ಮ ಮನೆಮಠ, ಕುಟುಂಬಿಕರು, ಸಂಬಂಧಿಗಳು ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಭೀಕರ ಪ್ರವಾಹದ ಪರಿಣಾಮ ಬಿಹಾರದ ಜನತೆ ತುಂಬಲಾರದ ನಷ್ಟಕ್ಕೀಡಾಗಿದ್ದಾರೆ; ಎಲ್ಲವನ್ನೂ ನೆರೆ ಕೊಚ್ಚಿಕೊಂಡು ಹೋಗಿದೆ. ಪ್ರವಾಹದ ಬಲಿಪಶುಗಳಲ್ಲಿ ಹೆಚ್ಚಿನವರು ಮಕ್ಕಳು. ಸಾವಿರಾರು ಮಕ್ಕಳು ನಿರ್ಗತಿಕರಾಗಿದ್ದಾರೆ. ನೇಪಾಳದಲ್ಲಿ ಪ್ರವಾಹ ತಡೆಗಾಗಿ ನಿರ್ಮಿಸಿದ್ದ ಮೊರಿಯು ಒಡೆದ ಕಾರಣ ಕೋಸಿ ನದಿ ಉಕ್ಕಿ ಹರಿಯುತ್ತಿದ್ದು, ಬಿಹಾರದ 16 ಜಿಲ್ಲೆಗಳು ಸಂಕಷ್ಟಕ್ಕೀಡಾಗಿವೆ.  ಮುಂದೆ ಓದಿ »

Syndicate content