ದೊಡ್ಡ ಕಂಪನಿಯೊಂದಕ್ಕೆ ಕೆಲಸ ಮಾಡುವುದೆಂದರೆ ರೈಲು ಪ್ರಯಾಣಮಾಡಿದಂತೆ. ನೀವು ಅರವತ್ತು ಮೈಲು ವೇಗದಲ್ಲಿದ್ದರೂ ಅಥವಾ ರೈಲು ಅರವತ್ತು ಮೈಲು ವೇಗದಲ್ಲಿದ್ದರೂ, ನೀವು ಮಾತ್ರ ಕುಳಿತಿರಲೇ ಬೇಕು.

— ಜೆ. ಪಾಲ್ ಗೆಟ್ಟಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಪುರಂದರ ದಾಸ

ಹೀಗೊಂದು ಧನ್ಯವಾದ ಸಮರ್ಪಣೆ

ಇವತ್ತು ಬೆಳಗ್ಗೆ ಶ್ರೀಕಾಂತ ಮಿಶ್ರಿಕೋಟಿಯವರು ಹರಿದಾಸ ಸಂಪದಕ್ಕೆ ನಮ್ಮ ಬಳಿ ಇದ್ದ ಎಲ್ಲ ಪುರಂದರ ದಾಸರ ರಚನೆಗಳನ್ನು ಹಾಕಿ ಆಯಿತು ಅಂತ ಹೇಳಿದಾಗ ಸಿಕ್ಕಾಪಟ್ಟೆ ಖುಷಿಯಾಯಿತು ನನಗೆ. ಶ್ರೀಕಾಂತರಿಗೂ, ಮತ್ತೆ ಈ ಕೆಲಸದಲ್ಲಿ ನೆರವಾದ ಎಲ್ಲ ಸಂಪದಿಗರಿಗೂ ನನ್ನ ಧನ್ಯವಾದಗಳು.  ಮುಂದೆ ಓದಿ »

ಹೆಂಡ್ತೀರ್ ಮಾತು ಗಂಡಂದ್ರು ಯಾಕೆ ಕೇಳ್ತಾರೆ?

ಲಕ್ಷ್ಮೀ-ನಾರಾಯಣ; ಹಳೇಬೀಡು ದೇವಾಲಯದಿಂದ. ಚಿತ್ರ: ದಿನೇಶ್ ಕನ್ನಂಬಾಡಿ ಅವರದ್ದು. ವಿಕಿಪೀಡಿಯಾದಿಂದ.

ಒಂದಿವಸ ಒಬ್ಬರು ಹೇಳ್ತಿದ್ದು ಕೇಳಿದೆ. ಗಂಡಸ್ರಿಗೆ ಮದ್ವೆ ಆಗೋ ತನಕ, ಯಾವಾಗ ಏನ್ಕೆಲ್ಸ ಮಾಡ್ಬೇಕು ಅಂತ ತಿಳೀದೆ ನೂರಿಪ್ಪತ್ತೆಂಟಕ್ಕೆ ಕೈಹಾಕ್ತಿರ್ತಾರೆ ಅಂತ.  ನಾನೂ ಮದ್ವೆ ಆಗಿರೋನೇ, ಆದ್ರೂ ನೂರಿಪ್ಪತ್ತೆಂಟು ಕೆಲಸ ಕೈಗಂಟ್ಕೊಂಡಿರತ್ತಲ್ಲ ಅಂತ ನನಗನಿಸ್ತು. ಅದಕ್ಕೇ ಅವರನ್ನ ಹಾಗೇ ಕೇಳೂ ಬಿಟ್ಟೆ.   ಮುಂದೆ ಓದಿ »

ಸುಳ್ಳೇ ನಮ್ಮನೆ ದೇವರು

ದೇವರ ಬಗ್ಗೆ ಒಂದೆರಡು ಬರಹಗಳನ್ನ -ಅನಿವಾಸಿ ಯವರದ್ದು, ವಿನಾಯಕ ಮುತಾಲಿಕರದ್ದು - ಇಲ್ಲೇ ಓದಿದೆ. ಹಿಂದೆ ಎ.ಎನ್.ಮೂರ್ತಿರಾಯರ 'ದೇವರು' ಪುಸ್ತಕವನ್ನೂ ಓದಿದ ನೆನಪಾಯಿತು. ದೇವರಿದ್ದಾನೆಯೇ ? ಇಲ್ಲವೇ? ಆದರೆ ಕಷ್ಟಕ್ಕೆ ಸಿಲುಕಿದಾಗ ಹಾಗೊಬ್ಬ ಸರ್ವಶಕ್ತ ಇದ್ದರೆ ಒಳ್ಳೆಯದೆಂದು ಅನಿಸುವುದು ಸುಳ್ಳಲ್ಲ. ಅದಕ್ಕೇ ಇರಬೇಕು 'ಕರುಣಾಳು ಬಾ ಬೆಳಕೆ ಮಸುಕಿದೀ ಮಬ್ಬಿನಲಿ ಕೈಹಿಡಿದು ನಡೆಸೆನ್ನನು' ಎಂದು ಬೇಡಿಕೊಳ್ಳುವುದು. ದೇವರನ್ನು ನಮ್ಮ, ಪರರ ಒಳ್ಳೆಯ ಗುಣದಲ್ಲಿ ಕಾಣು ಅಂತಲು ಹೇಳುತ್ತಾರೆ. ಅದೇ ತರಹ, ದೇವರು ತಾನು ಎಲ್ಲೆಲ್ಲೂ ಇರಲಾರದ್ದಕ್ಕೆಂದೇ ಅಮ್ಮಂದಿರನ್ನು ಸೃಷ್ಟಿಸಿದ ಅನ್ನುವ ಮಾತೂ ನಾವೆಲ್ಲ ಕೇಳಿರುವ್ದೇ ಆಗಿದೆ.

ಅದಿರಲಿ. ಶಿಶುವಿನಹಾಳದ ಷರೀಫರ 'ಕೋಡಗನ ಕೋಳಿ ನುಂಗಿತ್ತ' ಅನ್ನುವ ಹಾಡು ಒಂದಿಪ್ಪತ್ತು ವರ್ಷಗಳಿಂದ ಬಹಳ ಹೆಸರುವಾಸಿಯಾಗಿದೆ. ಆಗದ ಸಂಗತಿಗಳನ್ನೇ ಹೇಳುತ್ತಾ ಕೇಳುಗರನ್ನು ಗೋವಿಂದ ಗುರುವಿನ ಪಾದದ ಅಗಾಧತೆಯನ್ನು ಮನವರಿಕೆ ಮಾಡಿಕೊಡುವಂತಹ, ಒಂದು ಒಗಟಿನಂತಹ ಹಾಡಿದು. ಇಂತಹ ಹಾಡುಗಳನ್ನು ಬರೆದವರಲ್ಲಿ ಷರೀಫರು ಮೊದಲಿಗರೇನೂ ಅಲ್ಲ. ಹರಿದಾಸರು, ಶಿವಶರಣರು ಈ ರೀತಿಯ ಹಲವು ರಚನೆಗಳನ್ನ ಬರೆದಿರುವುದು ತಿಳಿದ ವಿಷಯವೇ.  ಮುಂದೆ ಓದಿ »

ಪುರಂದರ ದಾಸರ ಆರಾಧನೆ - ೨೦೦೯

ಪುಷ್ಯ ಬಹುಳ ಅಮಾವಾಸ್ಯೆ. ಜನವರಿ ೨೫, ೨೦೦೯ ಪುರಂದರದಾಸರ ಆರಾಧನೆಯ ದಿನ.  ಮುಂದೆ ಓದಿ »

ಪಿಳ್ಳಾರಿ ಗೀತೆಗಳು

ಹರಿದಾಸ ಸಂಪದದಲ್ಲಿ ಪುರಂದರದಾಸರ ಪಿಳ್ಳಾರಿಗೀತೆಗಳ ಬಗ್ಗೆ ನನ್ನ ಒಂದು ಲೇಖನ ಇದೆ. ಅದನ್ನು ಈ ಕೆಳಗಿನ ಕೊಂಡಿ ಉಪಯೋಗಿಸಿ ಓದಿರಿ.

http://haridasa.in/f...

ಗಂಡ-ಹೆಂಡಿರು ಮತ್ತು ಪುರಂದರ ದಾಸರು

ನೀವು ಏನು ಬೇಕಾದ್ರೂ ಹೇಳಿ, ಪುರಂದರ ದಾಸರು ಅಂದ್ರೆ ನಂಗಿಷ್ಟ. ವ್ಯಾಸೋಚ್ಛಿಷ್ಟಂ ಜಗತ್ಸರ್ವಂ ಅನ್ನೋ ಮಾತಿದೆ. ಅಂದ್ರೆ, ವ್ಯಾಸರು ಹೇಳಿ ಬಿಟ್ಟುಳಿದದ್ದೇ ಈ ಜಗತ್ತಲ್ಲಿರೋದೆಲ್ಲ ಅಂತ. ಮಹಾಭಾರತ ಬರೆಯೋದಲ್ದೆ, ವೇದಗಳನ್ನ ನಾಕು ಪಾಲು ಮಾಡಿ ವಿಂಗಡಿಸಿದ್ದೇ ವ್ಯಾಸರು, ಮತ್ತೆ ಹದಿನೆಂಟು ಪುರಾಣಗಳನ್ನೂ ಬರ್ದಿದ್ದೂ ಅವರೇ ಅಂತ ನಂಬಿಕೆ ಇದೆಯಲ್ಲ. ನನಗೆ ಬಿಡಿ - ವೇದ ಓದಿದರೆ ನೇರವಾಗಿ ಅರ್ಥವಾಗೋಲ್ಲ. ಪುರಾಣ ಓದೋದಕ್ಕೆ ವೇಳೆ ಸಾಲದು. ಅದಕ್ಕೇ ನಾನು ’ದಾಸೋಚ್ಛಿಷ್ಟಂ ಜಗತ್ಸರ್ವಂ’ ಅಂದ್ಕೊಂಡ್ಬಿಡ್ತೀನಿ. ಯಾಕೆ ಅಂತೀರಾ? ’ದಾಸರೆಂದರೆ ಪುರಂದರ ದಾಸರಯ್ಯ” ಅನ್ನೋ ಮಾತನ್ನ ಅವರ ಗುರುಗಳೇ ಹೇಳಿಬಿಟ್ಟಿರೋದ್ರಿಂದ, ಈ ದಾಸರು ಯಾರು ಅಂತ ನಾನು ಬಿಡಿಸಿ ಹೇಳ್ಬೇಕಿಲ್ಲ. ಅಲ್ವಾ?

ಪುರಂದರ ದಾಸರು ಬರ್ದಿರೋದೆಲ್ಲ ಕನ್ನಡದಲ್ಲಿ. ಓದಿದ್ರೆ, ನನಗೆ ಅರ್ಥವಾಗೋದೇನೂ ಕಷ್ಟವಿಲ್ಲ. ಅಲ್ದೆ, ಅವ್ರೇನೂ ಸರ್ಗದ ಮೇಲೆ ಸರ್ಗ ಕವಿತೆ  ಹೊಸೆದಂತ ಕಾಳಿದಾಸನ ಹಾಗೆ ದೊಡ್ಡ ದೊಡ್ಡ ಕಾವ್ಯಗಳನ್ನೂ ಬರೆದಿಲ್ಲ. ಅದು ಬಿಡಿ ಕುಮಾರವ್ಯಾಸ ಹರಿಹರ ರಾಘವಾಂಕ ರತ್ನಾಕರವರ್ಣಿಯರ ಹಾಗೆ ಸಾಂಗತ್ಯ ರಗಳೆ  ಷಟ್ಪದಿಯ ಗೊಡವೆಗೂ ಅವರು ಹೋಗಿಲ್ಲ. ಏನಿದ್ರೂ ಅವರು ಬರೆದಿರೋದು ಸಣ್ಣ ಸಣ್ಣ ಹಾಡುಗಳು. ಒಂದು ಓದಿದ್ಮೇಲೆ ಇನ್ನೊಂದು ಇದನ್ನೇ ಓದ್ಬೇಕು ಅನ್ನೋದಕ್ಕೆ ಅಲ್ಯಾವ ಕಥೇನೂ ಇರೋದಿಲ್ಲ. ಅಲ್ದೆ ಸರಿಸುಮಾರು ಅರ್ಥವಾಗ್ದಿರೋ ಪದಗಳೂ ಅಲ್ಲೊಂದು ಇಲ್ಲೊಂದು ಹೊರತು ನಾನೇನೂ ಪಕ್ದಲ್ಲಿ ನಿಘಂಟು ಇಟ್ಕೊಂಡು ಕೂರ್ಬೇಕಾಗಿಲ್ಲ. ಇದೇಕಾರಣಕ್ಕೆ ಆದಾದಾಗ ಒಂದೊಂದು ಹೊಸ ಹಾಡನ್ನ ಓದಿ ನೋಡೋದು ಅಂದ್ರೆ ನನಗಂತೂ ಬಹಳ ಹಿಡಿಸುತ್ತೆ.  ಮುಂದೆ ಓದಿ »

ವೆಂಕಟಾಚಲ ನಿಲಯಂ ವೈಕುಂಠ ಪುರವಾಸಂ - (ಸಿಂಧು ಭೈರವಿ : ಭಾಗ ಎರಡು)

ಕೆಲವು ದಿನಗಳ ಹಿಂದೆ ಸಿಂಧು ಭೈರವಿ ರಾಗದ ಬಗ್ಗೆ ಒಂದು ಅಸಂಬದ್ಧ ಪೀಠಿಕೆ ಬರೆದಿದ್ದೆ. ನಂತರ, ಕೇಳಿಸಬಹುದಾದ ಕೆಲವು ಒಳ್ಳೆ ಉದಾಹರಣೆಗಳಿಗೆ ಹುಡುಕುತ್ತಿದ್ದೆ. ನಾನು ಹುಡುಕುತ್ತಿದ್ದ ಕೆಲವು ಉತ್ತಮ ಗೀತೆಗಳು ಸಿಕ್ಕಲಿಲ್ಲವಾದ್ದರಿಂದ ಏನು ಮಾಡಲೆಂದು ಯೋಚಿಸುತ್ತಿದ್ದಾಗ, ನೋಡಿಸಿ-ಕೇಳಿಸುವ ಇನ್ನೊಂದಷ್ಟು ಹಾಡುಗಳು ದೊರೆತವು. ಸರಿ ಮತ್ತೆ, ತಡವೇಕೆ?

ಸಿಂಧುಭೈರವಿ ಅನ್ನುವುದು ದಕ್ಷಿಣಾದಿ(ಕರ್ನಾಟಕ) ಹಾಗೂ ಉತ್ತರಾದಿ(ಹಿಂದೂಸ್ತಾನಿ)ಸಂಗೀತ ಎರಡರಲ್ಲೂ ಪ್ರಚಾರದಲ್ಲಿರುವ ರಾಗ. ಹಿಂದೂಸ್ತಾನಿ ಪದ್ಧತಿಯಲ್ಲಿ ಇದಕ್ಕೆ ಭೈರವಿ ಎಂದರೆ, ಕರ್ನಾಟಕ ಸಂಗೀತದಲ್ಲಿ ಸಿಂಧೂಭೈರವಿ ಎನ್ನುತ್ತಾರೆ. ಕರ್ನಾಟಕ ಸಂಗೀತಕ್ಕೆ ಇದು ಹಿಂದೂಸ್ತಾನಿಯಿಂದಲೇ ಬಂದಿದೆ ಎನ್ನುವುದನ್ನು ನೀವು ಈ ಬರಹದಲ್ಲಿ ಕೊಟ್ಟಿರುವ ಕೆಲವು ಉದಾಹರಣೆಗಳನ್ನು ಕೇಳಿದಾಗ ನಿಮಗೆ ಅರಿವಾಗುತ್ತೆ. ಈ ಬರಹದ ಮಟ್ಟಿಗೆ, ನಾನು ಭೈರವಿ ಎಂದಾಗಲೂ, ಸಿಂಧೂಭೈರವಿ ಎಂದಾಗಲೂ ಒಂದೇ ರಾಗದ ಬಗ್ಗೆಯೇ ಹೇಳುತ್ತಿದ್ದೇನೆ ಎಂದುಕೊಳ್ಳಿ. (ಕರ್ನಾಟಕ ಸಂಗೀತದಲ್ಲಿ ಬೇರೊಂದು ಭೈರವಿ ಇದೆ - ಅದೂ ಒಂದು ಮಹಾನ್ ರಾಗವೇ. ಅದರ ವಿಷಯ ಈಗ ಬೇಡ.)  ಮುಂದೆ ಓದಿ »

ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ ರಾಜ್ಯಕ್ಕೂ ರಾಜನಾಗಲಿಲ್ಲ. ಎಲ್ಲವನ್ನೂ ’ತ್ಯಾಗ’ ಮಾಡಿದರೂ, ಸಂಗೀತ ಪ್ರಪಂಚಕ್ಕೇ ರಾಜರಾಗಿ ಮೆರೆದರು.

ಹೌದು. ತ್ಯಾಗರಾಜರ ದೇಹಾಂತ್ಯ ಆದದ್ದು ೧೮೪೭ರ ಜನವರಿ ಆರರಂದು. ಆ ದಿನ ಪುಷ್ಯ ಬಹುಳ ಪಂಚಮಿ. ಪುರಂದರ ದಾಸರನ್ನು ಮನಸಲ್ಲೇ ಗುರುವಾಗಿ ನಿಲಿಸಿಕೊಂಡ ತ್ಯಾಗರಾಜರು ದಾಸರ ಆರಾಧನೆಯ ತಿಂಗಳಾದ ಪುಷ್ಯ ಮಾಸದಲ್ಲೇ ದೇಹತ್ಯಾಗ ಮಾಡಿದ್ದು ಕಾಕತಾಳೀಯವಿರಬಹುದು. ಆದರೆ, ಪುರಂದರ ದಾಸರ ರಚನೆಗಳಿಗೂ, ತ್ಯಾಗರಾಜರ ರಚನೆಗಳಲ್ಲೂ ಇರುವ ಹೋಲಿಕೆ ಕಾಕತಾಳೀಯವೇ? ಅಥವಾ, ದಾಸರ ಸಾಹಿತ್ಯ ತ್ಯಾಗರಾಜರ ಮೇಲೆ ಮಾಡಿದ ಪ್ರಭಾವದ ಪರಿಣಾಮವೇ? ಅಥವಾ ಮಹಾತ್ಮರ ಮನಗಳು ಒಂದೇ ತೆರದಲ್ಲಿ ಯೋಚಿಸುವುವೇ?

(ಚಿತ್ರ: http://www.karnatik.com/ ಕೃಪೆ)  ಮುಂದೆ ಓದಿ »

ಅಂಗಳದೊಳಗೆ ಬೆಳದಿಂಗಳು ತುಂಬಿತು

ಕೆಲವು ದಿನಗಳ ಹಿಂದೆ ಸಂಪದದ ಗೆಳೆಯರೊಬ್ಬರು ಜಾವಳಿ ಅಂದರೇನು ಅಂತ ಕೇಳಿದ್ದರು . ಮೊದಲೆ ಹೇಳಿಬಿಡುವೆ - ಜಾವಳಿಗೂ ಜವಳಿಗೂ ಅರ್ಥಾತ್ ಸಂಬಂಧ ಇಲ್ಲ ಅಂತ. ಜಾವಳಿ ಜವಳಿ ಏನೂ ಅವಳಿ-ಜವಳಿ ಪದಗಳಲ್ಲ. ಆದರೆ ಪದ ಜಾವಳಿ ಸುಮಾರು ಅವಳಿ ಜವಳಿ ಅಂದ್ರೂ ತಪ್ಪಿಲ್ಲ.  ಮುಂದೆ ಓದಿ »

ಮುಳ್ಳು ಕೊನೆಯ ಮೇಲೆ ಮೂರು ಕೆರೆಯ ಕಟ್ಟಿ ..... (ಮತ್ತೊಂದು ಒಗಟಿನ ಪದ)

ಕೆಲದಿನಗಳ ಹಿಂದೆ ಪುರಂದರದಾಸರ ಸುಲಭವಲ್ಲವೋ ಎನ್ನುವ ಕೃತಿಯ ಬಗ್ಗೆ ಬರೆದಿದ್ದೆ. ಸುನಿಲ್ ಅವರು ಅದಕ್ಕೆ ಚೆನ್ನಾಗೆ ವ್ಯಾಖ್ಯಾನ ಕೂಡ ಮಾಡಿದ್ದರು. ಇವತ್ತು ಪುರಂದರ ದಾಸರದ್ದೇ ಇನ್ನೊಂದು ದೇವರನಾಮ. ಸುಲಭವಲ್ಲವೋ  ಮಹದಾನಂದ ಎನ್ನುವ ರಚನೆ ನನಗೆ ಸ್ವಲ್ಪವಾದರೂ ಅರ್ಥವಾಗಿತ್ತು. ಆದರೆ, ಇದು ಪೂರ್ತಿ ಒಗಟಾಗಿದೆ!  ಮುಂದೆ ಓದಿ »

Syndicate content