ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಪುರಂದರ ದಾಸ

ಗಂಡ-ಹೆಂಡಿರು ಮತ್ತು ಪುರಂದರ ದಾಸರು

July 2, 2008 - 11:37pm — hamsanandi

ನೀವು ಏನು ಬೇಕಾದ್ರೂ ಹೇಳಿ, ಪುರಂದರ ದಾಸರು ಅಂದ್ರೆ ನಂಗಿಷ್ಟ. ವ್ಯಾಸೋಚ್ಛಿಷ್ಟಂ ಜಗತ್ಸರ್ವಂ ಅನ್ನೋ ಮಾತಿದೆ. ಅಂದ್ರೆ, ವ್ಯಾಸರು ಹೇಳಿ ಬಿಟ್ಟುಳಿದದ್ದೇ ಈ ಜಗತ್ತಲ್ಲಿರೋದೆಲ್ಲ ಅಂತ. ಮಹಾಭಾರತ ಬರೆಯೋದಲ್ದೆ, ವೇದಗಳನ್ನ ನಾಕು ಪಾಲು ಮಾಡಿ ವಿಂಗಡಿಸಿದ್ದೇ ವ್ಯಾಸರು, ಮತ್ತೆ ಹದಿನೆಂಟು ಪುರಾಣಗಳನ್ನೂ ಬರ್ದಿದ್ದೂ ಅವರೇ ಅಂತ ನಂಬಿಕೆ ಇದೆಯಲ್ಲ. ನನಗೆ ಬಿಡಿ - ವೇದ ಓದಿದರೆ ನೇರವಾಗಿ ಅರ್ಥವಾಗೋಲ್ಲ. ಪುರಾಣ ಓದೋದಕ್ಕೆ ವೇಳೆ ಸಾಲದು. ಅದಕ್ಕೇ ನಾನು ’ದಾಸೋಚ್ಛಿಷ್ಟಂ ಜಗತ್ಸರ್ವಂ’ ಅಂದ್ಕೊಂಡ್ಬಿಡ್ತೀನಿ. ಯಾಕೆ ಅಂತೀರಾ? ’ದಾಸರೆಂದರೆ ಪುರಂದರ ದಾಸರಯ್ಯ” ಅನ್ನೋ ಮಾತನ್ನ ಅವರ ಗುರುಗಳೇ ಹೇಳಿಬಿಟ್ಟಿರೋದ್ರಿಂದ, ಈ ದಾಸರು ಯಾರು ಅಂತ ನಾನು ಬಿಡಿಸಿ ಹೇಳ್ಬೇಕಿಲ್ಲ. ಅಲ್ವಾ?

ಪುರಂದರ ದಾಸರು ಬರ್ದಿರೋದೆಲ್ಲ ಕನ್ನಡದಲ್ಲಿ. ಓದಿದ್ರೆ, ನನಗೆ ಅರ್ಥವಾಗೋದೇನೂ ಕಷ್ಟವಿಲ್ಲ. ಅಲ್ದೆ, ಅವ್ರೇನೂ ಸರ್ಗದ ಮೇಲೆ ಸರ್ಗ ಕವಿತೆ  ಹೊಸೆದಂತ ಕಾಳಿದಾಸನ ಹಾಗೆ ದೊಡ್ಡ ದೊಡ್ಡ ಕಾವ್ಯಗಳನ್ನೂ ಬರೆದಿಲ್ಲ. ಅದು ಬಿಡಿ ಕುಮಾರವ್ಯಾಸ ಹರಿಹರ ರಾಘವಾಂಕ ರತ್ನಾಕರವರ್ಣಿಯರ ಹಾಗೆ ಸಾಂಗತ್ಯ ರಗಳೆ  ಷಟ್ಪದಿಯ ಗೊಡವೆಗೂ ಅವರು ಹೋಗಿಲ್ಲ. ಏನಿದ್ರೂ ಅವರು ಬರೆದಿರೋದು ಸಣ್ಣ ಸಣ್ಣ ಹಾಡುಗಳು. ಒಂದು ಓದಿದ್ಮೇಲೆ ಇನ್ನೊಂದು ಇದನ್ನೇ ಓದ್ಬೇಕು ಅನ್ನೋದಕ್ಕೆ ಅಲ್ಯಾವ ಕಥೇನೂ ಇರೋದಿಲ್ಲ. ಅಲ್ದೆ ಸರಿಸುಮಾರು ಅರ್ಥವಾಗ್ದಿರೋ ಪದಗಳೂ ಅಲ್ಲೊಂದು ಇಲ್ಲೊಂದು ಹೊರತು ನಾನೇನೂ ಪಕ್ದಲ್ಲಿ ನಿಘಂಟು ಇಟ್ಕೊಂಡು ಕೂರ್ಬೇಕಾಗಿಲ್ಲ. ಇದೇಕಾರಣಕ್ಕೆ ಆದಾದಾಗ ಒಂದೊಂದು ಹೊಸ ಹಾಡನ್ನ ಓದಿ ನೋಡೋದು ಅಂದ್ರೆ ನನಗಂತೂ ಬಹಳ ಹಿಡಿಸುತ್ತೆ.  ಮುಂದೆ ಓದಿ »

  • ಉಪ್ಪಿನಕಾಯಿ
  • ತಿಂಡಿ ತಿನಿಸು
  • ಪುರಂದರ ದಾಸ
  • ಲಲಿತ ಪ್ರಬಂಧ
  • ಸಂಡಿಗೆ
  • ಹಪ್ಪಳ
  • ಹರಟೆ
~.~
  • hamsanandi ರವರ ಬ್ಲಾಗ್
  • 17 ಪ್ರತಿಕ್ರಿಯೆಗಳು
  • 522 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವೆಂಕಟಾಚಲ ನಿಲಯಂ ವೈಕುಂಠ ಪುರವಾಸಂ - (ಸಿಂಧು ಭೈರವಿ : ಭಾಗ ಎರಡು)

May 1, 2008 - 11:15pm — hamsanandi

ಕೆಲವು ದಿನಗಳ ಹಿಂದೆ ಸಿಂಧು ಭೈರವಿ ರಾಗದ ಬಗ್ಗೆ ಒಂದು ಅಸಂಬದ್ಧ ಪೀಠಿಕೆ ಬರೆದಿದ್ದೆ. ನಂತರ, ಕೇಳಿಸಬಹುದಾದ ಕೆಲವು ಒಳ್ಳೆ ಉದಾಹರಣೆಗಳಿಗೆ ಹುಡುಕುತ್ತಿದ್ದೆ. ನಾನು ಹುಡುಕುತ್ತಿದ್ದ ಕೆಲವು ಉತ್ತಮ ಗೀತೆಗಳು ಸಿಕ್ಕಲಿಲ್ಲವಾದ್ದರಿಂದ ಏನು ಮಾಡಲೆಂದು ಯೋಚಿಸುತ್ತಿದ್ದಾಗ, ನೋಡಿಸಿ-ಕೇಳಿಸುವ ಇನ್ನೊಂದಷ್ಟು ಹಾಡುಗಳು ದೊರೆತವು. ಸರಿ ಮತ್ತೆ, ತಡವೇಕೆ?

ಸಿಂಧುಭೈರವಿ ಅನ್ನುವುದು ದಕ್ಷಿಣಾದಿ(ಕರ್ನಾಟಕ) ಹಾಗೂ ಉತ್ತರಾದಿ(ಹಿಂದೂಸ್ತಾನಿ)ಸಂಗೀತ ಎರಡರಲ್ಲೂ ಪ್ರಚಾರದಲ್ಲಿರುವ ರಾಗ. ಹಿಂದೂಸ್ತಾನಿ ಪದ್ಧತಿಯಲ್ಲಿ ಇದಕ್ಕೆ ಭೈರವಿ ಎಂದರೆ, ಕರ್ನಾಟಕ ಸಂಗೀತದಲ್ಲಿ ಸಿಂಧೂಭೈರವಿ ಎನ್ನುತ್ತಾರೆ. ಕರ್ನಾಟಕ ಸಂಗೀತಕ್ಕೆ ಇದು ಹಿಂದೂಸ್ತಾನಿಯಿಂದಲೇ ಬಂದಿದೆ ಎನ್ನುವುದನ್ನು ನೀವು ಈ ಬರಹದಲ್ಲಿ ಕೊಟ್ಟಿರುವ ಕೆಲವು ಉದಾಹರಣೆಗಳನ್ನು ಕೇಳಿದಾಗ ನಿಮಗೆ ಅರಿವಾಗುತ್ತೆ. ಈ ಬರಹದ ಮಟ್ಟಿಗೆ, ನಾನು ಭೈರವಿ ಎಂದಾಗಲೂ, ಸಿಂಧೂಭೈರವಿ ಎಂದಾಗಲೂ ಒಂದೇ ರಾಗದ ಬಗ್ಗೆಯೇ ಹೇಳುತ್ತಿದ್ದೇನೆ ಎಂದುಕೊಳ್ಳಿ. (ಕರ್ನಾಟಕ ಸಂಗೀತದಲ್ಲಿ ಬೇರೊಂದು ಭೈರವಿ ಇದೆ - ಅದೂ ಒಂದು ಮಹಾನ್ ರಾಗವೇ. ಅದರ ವಿಷಯ ಈಗ ಬೇಡ.)  ಮುಂದೆ ಓದಿ »

  • ತ್ಯಾಗರಾಜ
  • ಪುರಂದರ ದಾಸ
  • ಸಂಗೀತ
  • ಸ್ವಾತಿ ತಿರುನಾಳ್
  • ಹಿಂದೂಸ್ತಾನಿ
~.~
  • hamsanandi ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 772 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

January 6, 2008 - 7:48am — hamsanandi

ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ ರಾಜ್ಯಕ್ಕೂ ರಾಜನಾಗಲಿಲ್ಲ. ಎಲ್ಲವನ್ನೂ ’ತ್ಯಾಗ’ ಮಾಡಿದರೂ, ಸಂಗೀತ ಪ್ರಪಂಚಕ್ಕೇ ರಾಜರಾಗಿ ಮೆರೆದರು.

ಹೌದು. ತ್ಯಾಗರಾಜರ ದೇಹಾಂತ್ಯ ಆದದ್ದು ೧೮೪೭ರ ಜನವರಿ ಆರರಂದು. ಆ ದಿನ ಪುಷ್ಯ ಬಹುಳ ಪಂಚಮಿ. ಪುರಂದರ ದಾಸರನ್ನು ಮನಸಲ್ಲೇ ಗುರುವಾಗಿ ನಿಲಿಸಿಕೊಂಡ ತ್ಯಾಗರಾಜರು ದಾಸರ ಆರಾಧನೆಯ ತಿಂಗಳಾದ ಪುಷ್ಯ ಮಾಸದಲ್ಲೇ ದೇಹತ್ಯಾಗ ಮಾಡಿದ್ದು ಕಾಕತಾಳೀಯವಿರಬಹುದು. ಆದರೆ, ಪುರಂದರ ದಾಸರ ರಚನೆಗಳಿಗೂ, ತ್ಯಾಗರಾಜರ ರಚನೆಗಳಲ್ಲೂ ಇರುವ ಹೋಲಿಕೆ ಕಾಕತಾಳೀಯವೇ? ಅಥವಾ, ದಾಸರ ಸಾಹಿತ್ಯ ತ್ಯಾಗರಾಜರ ಮೇಲೆ ಮಾಡಿದ ಪ್ರಭಾವದ ಪರಿಣಾಮವೇ? ಅಥವಾ ಮಹಾತ್ಮರ ಮನಗಳು ಒಂದೇ ತೆರದಲ್ಲಿ ಯೋಚಿಸುವುವೇ?

(ಚಿತ್ರ: http://www.karnatik.com/ ಕೃಪೆ)  ಮುಂದೆ ಓದಿ »

  • ಅನುವಾದ
  • ಕರ್ನಾಟಕ ಸಂಗೀತ
  • ಜ್ಞಾನವಾಹಿನಿ
  • ತ್ಯಾಗರಾಜ
  • ಪುರಂದರ ದಾಸ
~.~
  • hamsanandi ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 550 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಅಂಗಳದೊಳಗೆ ಬೆಳದಿಂಗಳು ತುಂಬಿತು

December 14, 2007 - 1:25pm — hamsanandi

ಕೆಲವು ದಿನಗಳ ಹಿಂದೆ ಸಂಪದದ ಗೆಳೆಯರೊಬ್ಬರು ಜಾವಳಿ ಅಂದರೇನು ಅಂತ ಕೇಳಿದ್ದರು . ಮೊದಲೆ ಹೇಳಿಬಿಡುವೆ - ಜಾವಳಿಗೂ ಜವಳಿಗೂ ಅರ್ಥಾತ್ ಸಂಬಂಧ ಇಲ್ಲ ಅಂತ. ಜಾವಳಿ ಜವಳಿ ಏನೂ ಅವಳಿ-ಜವಳಿ ಪದಗಳಲ್ಲ. ಆದರೆ ಪದ ಜಾವಳಿ ಸುಮಾರು ಅವಳಿ ಜವಳಿ ಅಂದ್ರೂ ತಪ್ಪಿಲ್ಲ.  ಮುಂದೆ ಓದಿ »

  • ಕರ್ನಾಟಕ ಸಂಗೀತ
  • ಜಾವಳಿ
  • ಪದ
  • ಪುರಂದರ ದಾಸ
  • ಬೆಂಗಳೂರು ನಾಗರತ್ನಮ್ಮ
  • ಹರಟೆ
~.~
  • hamsanandi ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 301 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮುಳ್ಳು ಕೊನೆಯ ಮೇಲೆ ಮೂರು ಕೆರೆಯ ಕಟ್ಟಿ ..... (ಮತ್ತೊಂದು ಒಗಟಿನ ಪದ)

May 2, 2007 - 2:31am — hamsanandi

ಕೆಲದಿನಗಳ ಹಿಂದೆ ಪುರಂದರದಾಸರ ಸುಲಭವಲ್ಲವೋ ಎನ್ನುವ ಕೃತಿಯ ಬಗ್ಗೆ ಬರೆದಿದ್ದೆ. ಸುನಿಲ್ ಅವರು ಅದಕ್ಕೆ ಚೆನ್ನಾಗೆ ವ್ಯಾಖ್ಯಾನ ಕೂಡ ಮಾಡಿದ್ದರು. ಇವತ್ತು ಪುರಂದರ ದಾಸರದ್ದೇ ಇನ್ನೊಂದು ದೇವರನಾಮ. ಸುಲಭವಲ್ಲವೋ  ಮಹದಾನಂದ ಎನ್ನುವ ರಚನೆ ನನಗೆ ಸ್ವಲ್ಪವಾದರೂ ಅರ್ಥವಾಗಿತ್ತು. ಆದರೆ, ಇದು ಪೂರ್ತಿ ಒಗಟಾಗಿದೆ!  ಮುಂದೆ ಓದಿ »

  • ಒಗಟು
  • ದಾಸ ಸಾಹಿತ್ಯ
  • ಪುರಂದರ ದಾಸ
  • ಸಮಸ್ಯೆ
~.~
  • hamsanandi ರವರ ಬ್ಲಾಗ್
  • 8 ಪ್ರತಿಕ್ರಿಯೆಗಳು
  • 622 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • anupkumart
    ಉ: ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
    September 5, 2008 - 9:57am
  • anil.ramesh
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 9:40am
  • anil.ramesh
    ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
    September 5, 2008 - 9:37am
  • Sunil Jayaprakash
    ಉ: ಗಣಪನ ಗಂಡಾಂತರಗಳು ಅನೇಕ
    September 5, 2008 - 9:27am
  • Sunil Jayaprakash
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 8:54am
  • Sunil Jayaprakash
    ಉ: ’ಕೊಲಂಬಿಯ ಪೋಸ್ಟ್ ಆಫೀಸ್’
    September 5, 2008 - 8:53am
  • savithasr
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 8:00am
  • savithasr
    ಉ: ವಿನಾಯಕನ ಇ-ಮೇಲ್!
    September 5, 2008 - 7:48am
  • skakkilaya
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 7:39am
  • hpn
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 3:11am
ಇನ್ನಷ್ಟು


ಮೂರಿಟ್ಟರಾರಕ್ಕು | ಆರು ಹನ್ನೆರಡಕ್ಕು |
ಹೇರುವ ಗೊಡ್ಡು ಹಯನಕ್ಕು ಗುರುಕರುಣ |
ತೋರುವ ದಿನಕೆ ಸರ್ವಜ್ಞ

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator