ರಾಗ
ದೇಶ್ ರಾಗ್
August 15, 2008 - 6:42am — hamsanandi
ಅಶೋಕರು ಮಿಲೇ ಸುರ್ ಮೇರಾ ತುಮ್ಹಾರಾ ಕೇಳಿಸುತ್ತಿದ್ದಂತೆ, ದೂರದರ್ಶನದ ಮತ್ತಷ್ಟು ಹಳೆ ನೆನಪುಗಳು. ಮುಂದೆ ಓದಿ »

ಹೃದಯವೀಣೆ
January 4, 2008 - 4:17pm — arunasirigereಹೃದಯವೀಣೆ
ನೀ ಮೀಟಿದಾಗಲೆ ನಾನರಿತದ್ದು
ನನ್ನದೊಂದು ಮಿಡಿವ ಹೃದಯವೆಂದು
ಅದ್ಯಾವ ರಾಗವ ನುಡಿಸಿದೆಯೋ ನೀನಂದು
ನನ್ನೆದೆಯ ಸ್ವರಗಳಿಗೆ ಶೃತಿ ಪಲ್ಲವಿಗಳಾಗಿಹೆ ನೀನಿಂದು
ಅದೆಷ್ಟೋ ಕೈಗಳು ನುಡಿಸಲೆತ್ನಿಸಿದ ಹೃದಯವೀಣೆಯಿದು
ಯಾವ ಕೈಗಳೂ ನುಡಿಸಲಿಲ್ಲ ನೀ ನುಡಿಸಿದ ರಾಗವನೆಂದೂ
ನೀ ಮೀಟಿದ ತಂತಿಗಳು ಕಂಪಿಸಿರಲು ಇಂಪಿನಲಿ ಮುಂದೆ ಓದಿ »

- arunasirigere ರವರ ಬ್ಲಾಗ್
- Login or register to post comments
- 228 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಓಂಕಾರಿ ಕಲ್ಯಾಣಿ ಶೃಂಗೇರಿ ಸಿರಿರಾಣಿ
December 28, 2007 - 4:16am — hamsanandi
ಚಿತ್ರಗೀತೆಗಳಲ್ಲಿ ಶಾಸ್ತ್ರೀಯ ಸಂಗೀತ - ಡಾ.ರಾಜ್ ವಿಶೇಷ
July 13, 2007 - 8:50am — hamsanandiಸಾಧಾರಣವಾಗಿ ಶಾಸ್ತ್ರೀಯ ಗಾಯನ ಬಲ್ಲವರಿಗೆ, ಚಿತ್ರಗಳಲ್ಲಿ ಹಿನ್ನೆಲೆಗಾಯಕರಾಗಿ ಅಷ್ಟಾಗಿ ಯಶಸ್ಸು ಸಿಗುವುದು ಕಷ್ಟ. ಏಕೆಂದರೆ ಶಾಸ್ತ್ರೀಯ ಸಂಗೀತ ಬಯಸುವ ಕಂಠದ ಒನಪು, ಗಮಕಗಳೇ ಬೇರೆ. ಚಿತ್ರ ಸಂಗೀತಕ್ಕೆ ಬೇಕಾದ್ದೇ ಬೇರೆ. ಎಲ್ಲ ರೀತಿಯ ಹಾಡುಗಳಿಗೆ ಶಾಸ್ತ್ರೀಯ ಗಾಯಕರಿಗೆ, ತಮ್ಮ ಕಂಠವನ್ನು ಹೊಂದಿಸಿಕೊಳ್ಳುವುದೂ ಬಹಳ ಕಷ್ಟ. ಉದಾಹರಣೆಗೆ ಹೇಳುವುದಾದರೆ, ಬಾಲಮುರಳಿಕೃಷ್ಣ ಅವರು ಹಲವು ಚಿತ್ರಗೀತೆಗಳನ್ನು ಹಾಡಿರುವುದಾದರೂ, ಅವರ ಶೈಲಿ ಕೆಲವೇ ಬಗೆಯ ಹಾಡುಗಳಿಗೆ, ಸನ್ನಿವೇಶಗಳಿಗೆ ಹೊಂದಬಲ್ಲುದು. ಅದೇರೀತಿ, ಚಿತ್ರಗಳಲ್ಲಿ ಹಾಡಿ ಪರಿಶ್ರಮವಿರುವವರಿಗೆ, ಶಾಸ್ತ್ರೀಯಗಾಯನವೂ ಕಷ್ಟವೇ. ಎಸ್.ಪಿ.ಬಾಲಸುಬ್ರಮಣ್ಯಮ್, ಎಸ್.ಜಾನಕಿ ಮೊದಲಾದವರು ಎಷ್ಟೇ ಒಳ್ಳೆಯ ಗಾಯಕರಾದರೂ, ಪಕ್ಕಾ ಶಾಸ್ತ್ರ್ರೀಯ ಸಂಗೀತಕ್ಕೆ ಅವರ ಕಂಠಸಿರಿ ಅಷ್ಟಾಗಿ ಒಪ್ಪದು. ಈ ದಿಸೆಯಲ್ಲಿ ಡಾ ರಾಜ್ ಕುಮಾರ್ ಕನ್ನಡ ಚಿತ್ರರಂಗ ಕಂಡ ಅತ್ಯುತ್ತಮ ಗಾಯಕ ಎಂದರೆ ಅದರಲ್ಲಿ ಉತ್ಪ್ರೇಕ್ಷೆ ಏನೂ ಇಲ್ಲ. ಶಾಸ್ತ್ರ್ರೀಯ, ಅರೆ-ಶಾಸ್ತ್ರ್ರೀಯ, ಮತ್ತೆ ಪಕ್ಕಾ ಫಿಲ್ಮೀ ಗೀತೆಗಳನ್ನು - ಹೀಗೆ ಎಲ್ಲ ಬಗೆಯ ಹಾಡುಗಳನ್ನು ಹಾಡುವುದರಲ್ಲಿ, ಅವರಷ್ಟು ಎತ್ತಿದ ಕೈ ಯಾರೂ ಇಲ್ಲ ಎಂದು ನನ್ನ ಭಾವನೆ. ಹಾಗಾಗಿ, ಅವರು ಹಾಡಿರುವ ಕೆಲವು ಶಾಸ್ತ್ರೀಯ ಗೀತೆಗಳನ್ನು ನೆನೆಸಿಕೊಳ್ಳೋಣ ಎನ್ನಿಸಿತು. ಅದೇಕೋ, ಮ್ಯೂಸಿಕ್ ಇಂಡಿಯಾ ತಾಣ ನನಗೆ ಕೆಲಸ ಮಾಡುತ್ತಿಲ್ಲ. ಆದರೆ, ನಾನೀಗ ಹೇಳುತ್ತಿರುವುದೆಲ್ಲ ಬಹಳ ಪ್ರಸಿದ್ಧ ಗೀತೆಗಳೇ,ಎಲ್ಲರಿಗೂ ತಿಳಿದುರುವಂತಹವೇ. ನಾನು, ಅಲ್ಲಲ್ಲಿ ಅದು ಯಾವ ರಾಗ ಎಂದು ಹೇಳುತ್ತೇನೆ ಅಷ್ಟೇ. ಈದನ್ನು ಓದುತ್ತ, ಆ ಗೀತೆಗಳನ್ನು ಮೆಲುಕಿ ಹಾಕಿದರೆ, ಬಹಳ ಚೆನ್ನು! ಮುಂದೆ ಓದಿ »

ಪಿಳ್ಳಂಗೋವಿಯ ಚೆಲ್ವ ಕೃಷ್ಣನ ಎಲ್ಲಿ ನೋಡಿದಿರಿ? - (ರಾಗ ಮೋಹನ, ಭಾಗ ಐದು, ಅಂತೂ ಮುಗಿಯಿತು!)
May 12, 2007 - 5:18am — hamsanandiಮೋಹನ ಮುರಳಿಯ ಕರೆಯ ಬಗ್ಗೆ ವಿಚಿತ್ರಾನ್ನದ ಶ್ರೀವತ್ಸಜೋಷಿಯವರು ಮೊನ್ನೆ ಬರೆದಿದ್ದರು. ಆಗಲೇ ನಾನು ನನ್ನ ಮೋಹನ ರಾಗದ ಬಗ್ಗೆಯ ಟಿಪ್ಪಣಿ ಇನ್ನೂ ಮುಗಿಸಲೇ ಇಲ್ಲ ಎಂಬುದು ನೆನಪಾಯಿತು. ಇರಲಿ, ನಾನು ನನ್ನ ವಿವರಣೆ ಬರೆಯದಿದ್ದರೆ, ಮೋಹನಕ್ಕಾದ ಹಾನಿ ಏನೂ ಇಲ್ಲ. ಆದರೂ. ಸರಿಯಾದ ಮುಕ್ತಾಯಕ್ಕೆ, ಇದು ಬೇಕೆನ್ನಿಸಿತು. ಮುಂದೆ ಓದಿ »



RSS: