ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಕಾವೇರಿ

ನವರಾತ್ರಿಯ ಏಳನೇ ದಿನ

October 18, 2007 - 10:48pm — hamsanandi

ಇವತ್ತು ನವರಾತ್ರಿಯ ಏಳನೇ ದಿನ. ಈ ದಿನ ತಲಕಾವೇರಿಯಲ್ಲಿ ತೀರ್ಥೋದ್ಭವವಾಗುವ ತುಲಾ ಸಂಕ್ರಮಣವೂ ಹೌದು. ನೃಪತುಂಗನ ಕಾಲದಿಂದಲೂ, ಕನ್ನಡನಾಡು ಕಾವೇರಿಯಿಂದ ಗೋದಾವರಿಯವರೆಗೆ ಎಂಬ ಹೇಳಿಕೆ ಇದೆ. ಕಾವೇರಿ ಕನ್ನಡಿಗರಿಗೆ, ಅದರಲ್ಲೂ ದಕ್ಷಿಣ ಕರ್ನಾಟಕದ ಭಾಗದವರಿಗೆ ಜೀವನದಿ ಎಂಬುದರಲ್ಲಿ ಎರಡುಮಾತಿಲ್ಲ. ಕಾವೇರಿ ಮತ್ತೆ ಅದಕ್ಕೆ ಸೇರಿಕೊಳ್ಳುವ ನದಿಗಳಾದ ಹೇಮಾವತಿ, ಲಕ್ಷ್ಮಣತೀರ್ಥ, ಶಿಂಷಾ, ಅರ್ಕಾವತಿ, ಕಣ್ವಾ, ಹಾರಂಗಿ ಮೊದಲಾದುವು ಮೈಸೂರು,ಹಾಸನ,ಕೊಡಗು, ಮಂಡ್ಯ, ತುಮಕೂರು, ಚಿಕ್ಕಮಗಳೂರು,ಬೆಂಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳ ಬಹುಪಾಲು ಭೂಮಿಗೆ ನೀರುಣಿಸುತ್ತವೆ. ಇಂತಹ ಮಹಾತಾಯಿ ಕಾವೇರಿಗೆ ಇಂದು ಮೊದಲು ನಮಿಸೋಣ.

ಇವತ್ತು ಈ ಮೊದಲ ಆರು ದಿನಕ್ಕಿಂತ ಸ್ವಲ್ಪ ಬೇರೆ. ಬೇರೆ ಸಂಗೀತಗಾರರು ಹಾಡಿದ, ದೇವಿಯ ಬಗ್ಗೆಯ ರಚನೆಯ ಕೊಂಡಿಗಳನ್ನು ಕೊಡುವ ಬದಲು ಇವತ್ತು ಒಂದು ಬದಲಾವಣೆ ಮಾಡಿದ್ದೇನೆ. ಕನ್ನಡದ ಮೂರು ಕವಿಗಳು ಸರಸ್ವತಿಯ ಬಗ್ಗೆ ಮಾಡಿರುವ ಸ್ತುತಿಯನ್ನು, ಹವ್ಯಾಸಿ ಸಂಗೀತಾಭ್ಯಾಸಿಯೊಬ್ಬರ ಕಂಠದಲ್ಲಿ ಕೇಳಿಸುವೆ. ಇದಕ್ಕೆ ಕಾರಣ, ಕನ್ನಡಕ್ಕೂ-ಕಾವೇರಿಗೂ ಇರುವ ಬಿಡಿಸದ ನಂಟು. ಹಾಗಾಗಿ, ಕಾವೇರಿ ಸಂಕ್ರಮಣದ ದಿನ ಒಂದಲ್ಲ, ಮೂರು ಕನ್ನಡ ರಚನೆಗಳು ಇವತ್ತು ಇಲ್ಲಿ ಕೇಳಿ ಬರುತ್ತಿವೆ. ಇವಕ್ಕೆ ಹಿನ್ನಲೆ ವಾದ್ಯಗಳ ಅಲಂಕಾರವಿಲ್ಲ. ಆದರೂ ಪರವಾಗಿಲ್ಲ, ಎನ್ನುವ ಭಾವನೆ ನನ್ನದು.

ಮೊದಲಿಗೆ ಕನ್ನಡದ ಮೊದಲ ಕಾವ್ಯ ಕವಿರಾಜ ಮಾರ್ಗದಿಂದ ಆಯ್ದ ಸರಸ್ವತೀ ಸ್ತುತಿಯಾದ ಒಂದು ಕಂದಪದ್ಯ:

ಶ್ರೀ ವಿಶದವರ್ಣೆ ಮಧುರಾ

ರಾವೋಚಿತೆ ಚತುರ ರುಚಿರ ಪದರಚನೆ ಚಿರಂ

ದೇವಿ ಸರಸ್ವತಿ ಹಂಸೀ

ಭಾವದಿ ಕೂರ್ತು ನೆಲೆಗೊಳ್ಗೆ ಮನ್ಮಾನಸದೊಳ್  ಮುಂದೆ ಓದಿ »

  • ಕನ್ನಡ
  • ಕಾವೇರಿ
  • ಜ್ಞಾನವಾಹಿನಿ
  • ದಸರ
  • ಮೈಸೂರು
  • ಸಂಗೀತ
~.~
  • hamsanandi ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 637 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ತಿರುವೈಯ್ಯಾರು ಮತ್ತು ಮಿಶನ್ ಸ್ಯಾನ್ ಹೊಸೆ

June 16, 2007 - 1:19am — hamsanandi

ಕನ್ನಡ ನಾಡಿನ ಜೀವನದಿ ಕಾವೇರಿ. ಹಾಗೇ ಮುಂದೆ ಹೋಗಿ, ಅದು ತಮಿಳುನಾಡಿಗೂ ಜೀವನದಿಯಾಗಿ ಹರಿಯುತ್ತಾಳೆ. ನಮಗಾದರೂ, ಕಾವೇರಿ ಅಲ್ಲದೆ, ತುಂಗೆ, ಭದ್ರೆ, ಕೃಷ್ಣೆ, ಕಾಳಿಯರ ಕೃಪೆ ತಕ್ಕಮಟ್ಟಿಗಿದೆ. ಆದರೆ, ತಮಿಳುನಾಡಿನಲ್ಲಿ, ಕಾವೇರಿ(ಮತ್ತು ಅದಕ್ಕೆ ಸೇರುವ ಹೊಳೆಗಳನ್ನು ಬಿಟ್ಟು) ಬೇರೆ ಪ್ರಮುಖವಾದ ನದೀಜಾಲವಿಲ್ಲ. ಹಾಗಾಗಿ, ತಮಿಳರು ನಮ್ಮಂತೆಯೇ ಕಾವೇರಿಯನ್ನು ಬಹಳ ಗೌರವದಿಂದ ಕಾಣುತ್ತಾರೆ.

 

ಮೊದಲಿಗೆ ಒಂದು ವಿಷಯದ ಬಗ್ಗೆ ಹೇಳಿಬಿಡುತ್ತೇನೆ. ಇದು ಕಾವೇರಿ ಜಲವಿವಾದದ ಪ್ರಶ್ನೆಯ ಬಗ್ಗೆಯ ಬರಹವಲ್ಲ Smiling ನನ್ನ ಉದ್ದೇಶವೇ ಬೇರೆ. ಎಲ್ಲ ನದಿಗಳೂ ಸಾಮಾನ್ಯ ಸಮುದ್ರ ಸೇರುವ ಬಳಿ ಕವಲೊಡೆದು, ಹಲವು ಭಾಗಗಳಾಗುತ್ತವೆ. ಕಾವೇರಿಯೂ ಇದಕ್ಕೆ ಹೊರತಲ್ಲ. ತಮಿಳುನಾಡಿನ ತಿರುಚ್ಚಿರಾಪಳ್ಳಿಯ ಬಳಿ ಕಾವೇರಿ ಐದು ಭಾಗಗಳಾಗಿ ಒಡೆಯುತ್ತಾಳೆ. ಈ ಶಾಖೆಗಳಿಗೆ ಕಾವೇರಿ, ವೆಣ್ಣಾರ್, ವೆಟ್ಟಾರ್, ಕೊಡಮುರುಟಿ ಮತ್ತು ಕೊಲ್ಲಿಡಮ್ ಎಂದು ಹೆಸರಾಗುತ್ತದೆ. ಇಲ್ಲಿ ಒಂದು ವಿಷಯ ಹೇಳಬೇಕು. ವೆಣ್ಣಾರ್, ವೆಟ್ಟಾರ್ ಎಂಬಲ್ಲಿ ಬರುವ ರ ಕಾರ, ಹಳೆಗನ್ನಡದ ಶಕಟರೇಫ; (ನನಗೆ ಅದನ್ನು ಇಲ್ಲಿ ಬರೆಯಬೇಕೆಂದು ತಿಳಿಯದು). ಮತ್ತೆ, ಈ ಪದಗಳು ರ್ ಎನ್ನುವ ವ್ಯಂಜನದಿಂದ ಕೊನೆಯಾಗಿಲ್ಲ. ಬದಲಿಗೆ, ಅರ್ಧ ಉಕಾರದಲ್ಲಿ ಮುಗಿಯುತ್ತವೆ. (ಈ ರೀತಿಯ ಉಕಾರ ಇರುವ ಪದ ನೆನಪಿಗೆ ಬರುತ್ತಿಲ್ಲ). ಕನ್ನಡದ ಆರು, ಮಗು, ನಗು ಮೊದಲಾದ ಪದಗಳಲ್ಲಿ ಬರುವ ಪೂರ್ಣ ಉಕಾರವನ್ನು ಉಪಯೋಗಿಸದೇ ಹೇಳಿದರೆ ಹೇಗಿರುತ್ತೋ ಆ ರೀತಿ ಇರಬೇಕು ತಮಿಳಿನಲ್ಲಿ ಪದದ ಕೊನೆಗೆ ಬರುವ ಉಕಾರಗಳ ಉಚ್ಚಾರ. ಇನ್ನೂ ಹೇಳಬೇಕೆಂದರೆ ವೆಣ್ಣಾರು ಅನ್ನುವ ಪದವನ್ನು ವೆಣ್ಣಾಋ ಎನ್ನುವ ರೀತಿಯಲ್ಲಿ ಉಚ್ಚರಿಸಿದರೆ, ಮೂಲಕ್ಕೆ ಹತ್ತಿರವಾಗುತ್ತದೆ.  ಮುಂದೆ ಓದಿ »

  • ಕಾವೇರಿ
  • ಚರಿತ್ರೆ
  • ಸಂಗೀತ
~.~
  • hamsanandi ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 389 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು


ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator