ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಸುಭಾಷಿತ ಜ್ಞಾನವಾಹಿನಿ

ಕೆಲವು ಸುಭಾಷಿತಗಳು

March 3, 2007 - 6:58am — hamsanandi

ನಾನು ರೂಪಾಂತರಿಸಿದ (ಭಾಷಾಂತರ ಎನ್ನುವುದಕ್ಕಿಂತ ಇದು ಉತ್ತಮ ಪದವೇನೋ ಎಂಬುದು ನನ್ನ ಭಾವನೆ) ಕೆಲವು ಸಂಸ್ಕೃತ ಸುಭಾಷಿತಗಳು ಇಲ್ಲಿವೆ. ಓದಿ ನೋಡಿ, ಏನೆನಿಸಿತೋ ತಿಳಿಸಿ; ಕೆಲವು ಮೂಲ ಶ್ಲೋಕಗಳನ್ನೂ, ಕನ್ನಡ ಲಿಪಿಯಲ್ಲೇ ಸೇರಿಸಿದ್ದೇನೆ. ಇದು ದೇವನಾಗರಿಯಲ್ಲಿದ್ದರೆ ಒಳಿತೇನು? ತಿಳಿಸಿ. ಮಿಕ್ಕ ಶ್ಲೋಕಗಳನ್ನೂ ಒಂದೊಂದಾಗಿ ಸೇರಿಸುತ್ತೇನೆ.

----------------------------------------------------------------------------------------- 

ಉದ್ಯಮೇ ನ್ ಹಿ ಸಿದ್ಧ್ಯಂತಿ ಕಾರ್ಯಾಣಿ ನ  ಮನೋರಥೈಃ|

ನ  ಹಿ ಸುಪ್ತಸ್ಯ ಸಿಂಹಸ್ಯ ಪ್ರವಿಸಂತಿ ಮುಕೇ ಮೃಗಾಃ||                                              

ಮನಕೆ ಬಂದ ಮಾತ್ರಕೆ
ಕಾರ್ಯಗತವಾದೀತೇ ?
ಮಲಗಿದ ಸಿಂಹದ ಬಾಯಿಗೆ
ಜಿಂಕೆ ಬಂದು ಬಿದ್ದೀತೇ ?
------------------------------------------------------------
ದಾನಂ ಭೋಗೋ ನಾಶಸ್ತಿಸ್ರೋ ಗತಯೋ ಭವಂತಿ ವಿತ್ತಸ್ಯ |                                                          ಯೋ ನ ದದಾತಿ ನ ಭುಂಕ್ತ್ತೇ ತಸ್ಯ ತೃತೀಯಾ ಗತಿರ್ಭವತಿ||

ಅನುಭವಿಸು ಇಲ್ಲ ದಾನ ಕೊಡು ಅಥವ
ವಿನಾಶವೆಂದು ಹಣಕಿದೆ ಮೂರು ಗತಿ
ಒಂದನೆಯದು ಎರಡನೆಯದೂ ಮಾಡದೆ
ಹೋದರೆ ಮೂರನೆ ಗತಿಯೇ ಪ್ರಾಪ್ತಿ
------------------------------------------------------------
ಇರಲಿ ಆಸಕ್ತಿ ಸಾಹಿತ್ಯ ಸಂಗೀತ
ಅಥವಾ ಇನ್ನಾವುದೋ ಕಲೆಯ ಮೇಲೆ
ಇಲ್ಲದೆ ಹೋದರೆ ಅವ ಪಶುವೇ ಸರಿ
ಬಾಲ ಕೊಂಬು ಎರಡಿಲ್ಲದೆಲೆ!
ಹುಲ್ಲನು ತಿನ್ನದೇ ಜೀವಿಸಬಲ್ಲವ
-ನೆಂಬುದೆ ಪುಣ್ಯ ಪ್ರಾಣಿಗಳಿಗೆ!

------------------------------------------------------------
ನೀಚರಿಗೆ ಮಾಡಿದುಪಕಾರ
ಆಗೇ ಆಗುವುದು ಅಪಕಾರ
ಹಾವಿಗೆ ಕುಡಿಸಿದ ಹಾಲು ಸಹ
ಆಗುವುದಲ್ಲವೆ ಘೋರ ವಿಷ
---------------------------------------------------------------
ಗುಣಗಳ ಗುಂಪಲಿ ಒಂದೇ ಕೊರತೆ
ಚಂದ್ರನ ಬೆಳಕಲಿ ಕಲೆಯಂತೆ
ಮುಚ್ಚೀತೆಂದ ಕವಿ ತಾ ಕಾಣನು
ಲೋಕದ ನಿಜರೂಪದ ಮೋರೆ;
ಸಾವಿರ ಗುಣಗಳ ಮುಚ್ಚಿ ಹಾಕದೆ
ಬಡತನವೆಂಬೊಂದು ಕೊರೆ ?

----------------------------------------------------------------

ಕಮಲೇ ಕಮಲೋತ್ಪತ್ತಿಃ ಶ್ರೂಯತೇ ನ ಚ ದೃಶ್ಯತೇ

ಬಾಲೇ ತವ ಮುಖಾಂಬೋಜೇ ದೃಶ್ಯಮಿಂದೀವರದ್ವಯಂ

ಕಮಲದಲಿ ಕಮಲ ಹುಟ್ಟಿದುದ
ಕಾಣೆನು ಕೇಳೆನು ಎನ್ನದಿರು
ಓ ಗೆಳತೀ ನಿನ್ನೀ ಮುಖಕಮಲದಲಿ
ಜನಿಸಿರಲು ಕಣ್ಣೆಂಬ ಕಮಲವೆರಡು

ಕೇಳಿರಿ ಚಿಂತೆಗೂ ಚಿತೆಗೂ
ವ್ಯತ್ಯಾಸವಂತೂ ಬರಿ ಸೊನ್ನೆ
ಸುಟ್ಟರೆ ಚಿತೆ ಹೋದವನನ್ನು
ಚಿಂತೆ ಸುಟ್ಟೀತು ಇದ್ದವನನ್ನೆ

ದುಷ್ಟರ ಜೊತೆಯಲಿ ದ್ವೇಷವು ಬೇಡ
ಮಾಡದಿರು ನೀ ಅತಿ ಪ್ರೀತಿ
ಕೆಂಡವು ಬಿಸಿಯಲಿ ಕೈಯನು ಸುಡುವುದು
ತಣಿದಿದ್ದರೆ ಆಗುವುದು ಮಸಿ

ಹಲ್ಲು ಉಗುರು ಕೂದಲು ಮನುಜರು
ಇರಬೇಕಾದಲ್ಲೆ ಶೋಭಿಪರು
ಅದಕೆಂದೇ ಉತ್ತಮ ಜನರು
ತಮ್ಮ ಸ್ಥಾನವ ಬಿಡದಿಹರು

ಚೇಳಿನ ವಿಷವದು ಬಾಲದ ಕೊಂಡಿಲಿ
ನೊಣಕ್ಕದು ಬಾಯಲ್ಲೆಲ್ಲಾ
ಹಾವಿನ ಹಲ್ಲಲಿ ತುಂಬಿದೆ ಆ ವಿಷ
ಕೆಟ್ಟವನಿಗೋ ಮೈಯಲ್ಲೆಲ್ಲಾ

ಲಕ್ಷ್ಮಿಯು ಬಳಿಯಿದ್ದವನರಿಯನು
ಪ?ರಿಗಾಗುವ ವೇದನೆ
ಭೂಮಿಯ ಭಾರವ ಹೊತ್ತಿರೆ ಶೇಷನು
ಮಲಗಿಹ ನಾರಾಯಣ ಸುಮ್ಮನೆ

ಸ್ವಯಂಪ್ರಜ್ಞೆ ಇಲ್ಲದವನಿಗೆ
ಕಲಿಕೆ ಏನು ಮಾಡೀತು ?
ಕಣ್ಣೇ ಇಲ್ಲದ ಹುಟ್ಟುಕುರುಡಗೆ
ಕನ್ನಡಿಯಿಂದೇನಾದೀತು ?

ಪ್ರಿಯವಾಕ್ಯ ಪ್ರದಾನೇನೆ ಸರ್ವೇ ತುಷ್ಯಂತಿ ಮಾನವಾಃ

ಏತದ್ ತದೈವ ವಕ್ತವ್ಯಮ್, ವಚನೇ ಕಿಮ್ ದರಿತ್ರತಾ?

ಒಳ್ಳೆಯ ಮಾತನು ಕೇಳಲು
ಎಲ್ಲರು ಸಂತಸ ಹೊಂದುವರು
ಅದಕೇ ಅಂಥಾ ಮಾತನೆ ನೀ ನುಡಿ
ಬರೀ ಮಾತಿಗೇನು ಬಡತನವು

ಕಟ್ಟಿಗೆಯಲ್ಲಿಲ್ಲ ಅವನು
ಕಲ್ಲಲಿ ಮಣ್ಣಲಿ ಅವನಿಲ್ಲ
ಮನದಲಿ ಇಹನು ಆ ಜಗದೊಡೆಯನು
ಭಾವವೆ ಎಲ್ಲಕು ಕಾರಣವು

ಕಾಕಃ ಕೃಷ್ಣಃ ಪಿಕ: ಕೃಷ್ಣಃ ಕೋ ಭೇದಃ ಪಿಕ ಕಾಕಯೋಃ?

ವಸಂತ ಕಾಲೇ ಸಂಪ್ರಾಪ್ತೇ ಕಾಕಃ ಕಾಕಃ ಪಿಕಃ ಪಿಕಃ 

ಕಾಗೆಯು ಕಪ್ಪು ಕೋಗಿಲೆ ಕಪ್ಪು
ಎಲ್ಲಿದೆ ಏನಿದೆ ವ್ಯತ್ಯಾಸ ?
ವಸಂತಕಾಲವು ಬಂದಿರೆ ತಾನು
ಆಗುವುದು ಖಂಡಿತ ಭಾಸ

-ಹಂಸಾನಂದಿ

  • ಸುಭಾಷಿತ ಜ್ಞಾನವಾಹಿನಿ
~.~
  • hamsanandi ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 594 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • sudhimail
    ಉ: ಏನಿದೇನಿದು?
    September 8, 2008 - 10:12pm
  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
ಇನ್ನಷ್ಟು


ಯಾವಾಗಲೂ ಕೇಡುಬಗೆಯದ ಸ್ನೇಹಿತನೆಂದರೆ, ಮೌನ.

— ಕನ್‌ಫ್ಯೂಷಿಯಸ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator