ಎಲ್ಲ ರೀತಿಯ ಕೆಚ್ಚೆದೆಯ ಎದೆಗಾರಿಕೆಯು ಆತಂಕದ ಮುಖವಾಡವಾಗಿರುತ್ತದೆ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಅಮರಚಿತ್ರಕಥೆ

ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು

Amar Chitra Katha - Abhimanyu
ಚಿತ್ರ ಕೃಪೆ: AmarChitraKatha.com

Ajatashatru

ತನ್ನ ಹೆಸರಿಗೆ ತಕ್ಕಂತೆ ಅಮರ ಚಿತ್ರ ಕಥೆ ಇವತ್ತಿಗೂ ಭಾರತದ ಸಂಸ್ಕೃತಿಯ ಮಜಲುಗಳನ್ನು ಹೊತ್ತು ಎಂದಿನ ಕಳೆಯನ್ನು ಉಳಿಸಿಕೊಂಡಿದೆ. ಚಿಕ್ಕವನಿದ್ದಾಗ ನನಗೆ ಈ ಪುಸ್ತಕಗಳನ್ನು ಕೊಳ್ಳಲಾಗುತ್ತಿರಲಿಲ್ಲ. ಅಮ್ಮನ ಕೈಗೆ ಎಟುಕದ ಬೆಲೆ ಇರುತ್ತಿತ್ತು ಈ ಪುಸ್ತಕಗಳಿಗೆ (ಅಪ್ಪ ನನಗೆ ಎಂದಿಗೂ ಪುಸ್ತಕ ಕೊಡಿಸುವ ಗೋಜಿಗೆ ಹೋಗುತ್ತಿರಲಿಲ್ಲ). ಹೀಗಾಗಿ ಇವುಗಳು ಎಟುಕುತ್ತಿದ್ದುದು ಲೈಬ್ರೆರೀಲೆ. ಮಳೆ ಬರುತ್ತಿದ್ದರೂ ದೂರದ ಲೈಬ್ರೆರೀಗೆ ಛತ್ರಿ ಹಿಡಿದು ಅರ್ಧ ನೆಂದು ತೊಪ್ಪೆಯಾಗಿ ಹೋಗುತ್ತಿದ್ದೆ - ಅಷ್ಟೊಂದು ಹುಚ್ಚಿರುತ್ತಿತ್ತು. ಆದರೆ ನನ್ನ ಅಣ್ಣ ಅಕ್ಕನ ಮಕ್ಕಳಿಗೆ ಹೀಗಿಲ್ಲ - ನಾವೆಲ್ಲರೂ ಯಾವುದಾದರೊಂದು ಪುಸ್ತಕ ಕಂಡ ಕೂಡಲೆ ಕೊಂಡು ಮನೆಗೆ ತರುತ್ತಿರುತ್ತೇವೆ. ತಮಾಷೆಯೆಂದರೆ ನನ್ನ ಅಣ್ಣನ ಮಗನಿಗೆ ಈ ಪುಸ್ತಕ ಓದೋದಕ್ಕಿಂತ ನಿಕಲೋಡಿಯನ್ ಚ್ಯಾನಲ್ಲಿನಲ್ಲಿ ಬರೋ "ಹತ್ತೋರಿ", ಪೋಗೋ ಚ್ಯಾನಲ್ಲಿನಲ್ಲಿನ "ನಾಡ್ಡಿ", "ಮಿ. ಬೀನ್" ಮುಂತಾದವೇ ಬಲು ಇಷ್ಟ!
ಟಾಟಾ ಸ್ಕೈ ಹೊತ್ತು ತರುವ ಡಿಜಿಟಲ್ ಸಿಗ್ನಲ್ಲು ಕ್ಲಾರಿಟಿ ಇರುವ ಚೆಂದದ ಚಿತ್ರಗಳನ್ನು ಮೂಡಿಸಿ ಪುಸ್ತಕ ಓದು ಇನ್ನಷ್ಟು ದೂರ ಮಾಡಿಬಿಟ್ಟಿದೆ.  ಮುಂದೆ ಓದಿ »

'ರಾಮಾಯಣ'ದ ಆಟ ಆಡಿ...

ರಾಮಾಯಣ - ವರ್ಜಿನ್ ಕಾಮಿಕ್ಸ್
ಮಿಶ್ರಿಕೋಟಿಯವರು ಬರೆದಿರುವ ಪುಟ್ಟ ಬರಹ ತಮಸಾ ನದೀ ತೀರದಲ್ಲಿ ಓದಿ ನನಗೆ ಹಲವು ದಿನಗಳ ಹಿಂದೆ ಓದಿದ ಒಂದು ಸುದ್ದಿಯ ನೆನಪಾಯಿತು.

ರಾಮಾಯಣ ಈಗ MMO (Massively Multi-player Online game) ಆಗಿ ಹೊರಬರಲಿದೆಯಂತೆ. MMO ಎಂದರೆ ನೇರ ಅಂತರ್ಜಾಲದಲ್ಲಿ ಹಲವು ಆಟಗಾರರೊಂದಿಗೆ ಆಡಬಹುದಾದ ವಿಡಿಯೋ ಗೇಮ್. ಇದನ್ನು ಹೊರತರುತ್ತಿರುವುದು ಸೋನಿ ಕಂಪೆನಿಯಂತೆ.

ಮಿ. ಇಂಡಿಯ, ಬ್ಯಾಂಡಿಟ್ ಕ್ವೀನ್ ಹಾಗೂ ಎಲಿಝಬೆತ್ ಮುಂತಾದ ಪ್ರಮುಖ ಚಿತ್ರಗಳನ್ನು ನಿರ್ದೇಶಿಸಿದ ಶೇಖರ್ ಕಪೂರ್ ಇದರ ಹಿಂದೆ ಇದ್ದಾರಂತೆ. ಇವರು ಅದರ ಸ್ಕ್ರಿಪ್ಟ್ ಬರೆದವರು. ವರ್ಜಿನ್ ಕಾಮಿಕ್ಸ್ ಸ್ಥಾಪಿಸಿದವರಲ್ಲಿ ಇವರೂ ಒಬ್ಬರು. ವರ್ಜಿನ್ ಕಾಮಿಕ್ಸ್ ಹೋದ ವರುಷ ರಾಮಾಯಣವನ್ನು ಕಾಮಿಕ್ಸ್ ಜಗತ್ತಿಗೆ ಪಾಶ್ಚಿಮಾತ್ಯ ಜಗತ್ತಿಗೆ ಹಿಡಿಸುವ ರೀತಿಯಲ್ಲಿ ಹೊರತಂದದ್ದು ನೆನಪಿಸಿಕೊಳ್ಳಬಹುದು. ಪುಸ್ತಕ ಹಾಗೂ ಕಾಮಿಕ್ ಜಗತ್ತಿನಲ್ಲಿ ಪ್ರಖ್ಯಾತ ಹೆಸರುಗಳಾದ ದೀಪಕ್ ಚೋಪ್ರ ಹಾಗೂ ಅವರ ಮಗ ಗೋಥಮ್ (ಗೌತಮ್) ಚೋಪ್ರ ಕೂಡ ಇದರಲ್ಲಿದ್ದಾರಂತೆ (ಇವರುಗಳೂ ವರ್ಜಿನ್ ಕಾಮಿಕ್ಸ್ ಸ್ಥಾಪಕರು).  ಮುಂದೆ ಓದಿ »

Syndicate content