ಹರಟೆ
ಶ್ರೀಹರಿ ಸೊಳ್ಳೆ ಕಾಟದಿಂದ ತಪ್ಪಿಸಿಕೊಂಡಿದ್ದು ಹೇಗೆ?
ಈ ಬಾರಿಯ ವಿಚಿತ್ರಾನ್ನದಲ್ಲಿ, ಶ್ರೀವತ್ಸ ಜೋಷಿಯವರು ಸೊಳ್ಳಾಯಣ ವನ್ನು ಮುಂದಿಟ್ಟಿದ್ದಾರೆ. ರಾಮ ಇದ್ದದ್ದು ನಿಜವೋ ಸುಳ್ಳೋ, ಆದರೆ ರಾಮಾಯಣ ಇರುವುದಂತೂ ನಿಜ. ರಾಮನನ್ನು ಕಂಡವರು ಈಗ ಯಾರೂ ಇಲ್ಲ. ಆದರೆ, ಸೊಳ್ಳೆಗಳನ್ನು ಕಾಣದವರುಂಟೇ? ಇದ್ದನೋ ಇಲ್ಲವೋ ತಿಳಿಯದ ಅಂತಹ ರಾಮನಂತಹ ರಾಮನಿಗೆ, ವಾಲ್ಮೀಕಿ ೨೪೦೦೦ ಶ್ಲೋಕಗಳ ರಾಮಾಯಣವನ್ನು ರಚಿಸಿದ ಮೇಲೆ, ಸರ್ವವ್ಯಾಪಿ ಸೊಳ್ಳೆಗಳ ಮೇಲೆ್ ಒಂದು ಮಹಾಕಾವ್ಯ ಇಲ್ಲದಿದ್ದರೆ, ಒಂದು ಕಾದಂಬರಿ ಇಲ್ಲದಿದ್ದರೆ, ಒಂದು ಅಂಕಣಬರಹವನ್ನಾದರೂ ಬರೆಯಬೇಕೆಂಬ ಬಯಕೆ ಅವರದಿರಬಹುದು.
ಅದೇನೇ ಇರಲಿ. ಅವರು ಅನ್ನಮಯ್ಯ ಒಂದು ಕೀರ್ತನೆಯಲ್ಲಿ ಬೆಳಗಾಗ ಹಾವಿನ ಹೆಡೆಯೇ ಸೊಳ್ಳೆಗಳಿಂದ ಕಾಯುವ ತೆರೆ (ಸೊಳ್ಳೆ ಪರದೆ ಎನ್ನಿ) ಆಗಿರುವ ಶ್ರೀಹರಿಗೆ ಹಾಲುಣಿಸುವುದನ್ನು ನೆನೆದಿದ್ದಾರೆ. ಇದು ನಿಜವಾಗಲೂ ಒಳ್ಳೆಯ ಶೋಧವೇ. ಬೇರೆ ದಾಸರ ಪದಗಳಲ್ಲಿ ಸೊಳ್ಳೆಯ ಉಲ್ಲೇಖ ಇರಬಹುದು - ಆದರೆ ಸೊಳ್ಳೆಯ ಪರದೆಯ ವಿಷಯ ನಾನೆಂದೂ ಕಂಡದ್ದು ನೆನಪಿಲ್ಲ. ಹಾಗಿದ್ದರೆ, ಸೊಳ್ಳೆಪರದೆ ಎಂಬುದು ತೆಲುಗರ ಅವಿಷ್ಕಾರವೇ? ಇದು ಖಂಡಿತ ಯಾರಾದರೂ ಡಾಕ್ಟರೇಟ್ ತೆಗೆದುಕೊಳ್ಳಲು ಮಾಡಬಹುದಾದ ಸಂಶೋಧನಾ ವಿಷಯದಂತೆ ತೋರುತ್ತಿದೆ ನನಗೆ! ಆದರೆ ಸದ್ಯಕ್ಕೆ ನನಗೆ ಅಂತಹ ಉದ್ದೇಶವಾಗಲೀ, ಅಥವಾ ಅದನ್ನು ಕೈಗೆತ್ತಿಕೊಳ್ಳಲು ಸಮಯವಾಗಲೀ ಇಲ್ಲ. ಆದ್ದರಿಂದ, ಇಲ್ಲಿಗೇ ಬಿಟ್ಟುಬಿಡುತ್ತೇನೆ. Read more about ಶ್ರೀಹರಿ ಸೊಳ್ಳೆ ಕಾಟದಿಂದ ತಪ್ಪಿಸಿಕೊಂಡಿದ್ದು ಹೇಗೆ?
ವಕ್ರನಾದ ಶುಕ್ರ?
ಕೆಲವು ದಿನಗಳ ಹಿಂದೆ ಸವಿತೃ ಅವರು ಒಂದು ಪ್ರಶ್ನೆ ಕೇಳಿದರು. ಗ್ರಹಗಳ ವಕ್ರದೃಷ್ಟಿ ಯಾಕೆ ಬೀಳುತ್ತೆ ಅಂತ ಅವರ ಕೇಳಿಕೆ. ಅವರು ಆ ಪ್ರಶ್ನೆ ಕೇಳಿದ್ದು ನನಗೆ ಆಶ್ಚರ್ಯ ಆಯಿತು. ಯಾಕೆ ಗೊತ್ತೇ? ಗ್ರಹಗಳು ವಕ್ರವಾದರೆ, ಸೂರ್ಯನಿಗೇನು ಚಿಂತೆ ಅಲ್ಲವೇ? :) [ಸವಿತೃ, ಸವಿತಾ ಇವೆಲ್ಲ ಸೂರ್ಯನ ಹೆಸರುಗಳೇ!]. ಆಮೇಲನ್ನಿಸಿತು - ಅವರು ಹೀಗೆ ಕೇಳಿದ್ದು ಸರಿಯಾಗೇ ಇದೆ ಅಂತ. ಯಾಕಂದ್ರೆ, ಈ ಗ್ರಹಗಳು ವಕ್ರವಾಗೋದು ಈ ಬಡಪಾಯಿ ಭೂಮಿ (ಅಥವ ಇತರ ಗ್ರಹಗಳ ಮೇಲೆ) ನಿಂತೆ ನೋಡೋರಿಗೆ ಮಾತ್ರ. ಸೂರ್ಯನ ಮೇಲಿಂದ ನಿಂತು ನೋಡಿದರೆ, ವಕ್ರವಾಗೋದು ಸಾಧ್ಯವೇ ಇಲ್ಲ. ಸೂರ್ಯನ ಮೇಲೆ ನಿಂತಂತೂ ನೋಡಕ್ಕಾಗಲ್ಲ, ಇನ್ನು ಬೇರೆ ಗ್ರಹಗಳ ಮೇಲೆ ಯಾರಪ್ಪಾ ಇದಾರೆ ನಿಂತು ನೋಡಕ್ಕೆ ಅನ್ನಬೇಡಿ. ಇವತ್ತಲ್ಲದಿದ್ದರೆ ಇನ್ನೊಂದು ದಿನ ಆ ಪ್ರಯತ್ನವೂ ಯಶಸ್ಸು ಕಾಣುತ್ತೆ ಅನ್ನೋ ನಂಬಿಕೆ ನನ್ನದು.
ಶುಕ್ರನಿಗೆ ವಕ್ರದೃಷ್ಟಿ ಬೀರ್ತಾನೆ ಅನ್ನೊ (ಕು)ಖ್ಯಾತಿ ಅಷ್ಟೇನೂ ಇಲ್ಲ. ಹಾಗೆ ನೋಡಿದರೆ, ಶನಿಗೆ ಆ ಪಟ್ಟ ಸಿದ್ಧವಾಗಿಹೋಗಿದೆ. ರಾಮೇಶ್ವರಕ್ಕೆ ಹೋದ್ರೂ ಶನೀಶ್ವರ ಬಿಡ ಅನ್ನೋ ಗಾದೆ ಕೇಳಿದೀರಲ್ಲ. ಆದ್ರೆ, ನಿಜ ಹೇಳ್ಬೇಕೂಂದ್ರೆ, ಶನಿ ಅಂದ್ರೆ ಒಂದು ಪಾಪದ ಪ್ರಾಣಿ. ಬೇಡ. ಪ್ರಾಣಿ ಅಲ್ಲ. ಪಾಪದ ಗ್ರಹ ಅನ್ನೋಣ. ಅದರ ಹೆಸರಲ್ಲೇ ಅದು ಗೊತ್ತಾಗತ್ತೆ. ಅದು ನಿಜವಾಗಿ ಶನೀಶ್ವರನಲ್ಲ. ಶನೈಶ್ಚರ. ಶನೈ: ಚರತಿ ಅಯಂ ಇತಿ ಶನೈಶ್ಚರಃ. ಈ ಗ್ರಹ ನಿಧಾನವಾಗಿ(ಶನೈ:) ಹೋಗುತ್ತೆ (ಚರತಿ), ಅದಕ್ಕೆ ಅವನು ಶನೈಶ್ಚರ. ಅಷ್ಟೇ. ಆಕಾಶದಲ್ಲಿ ಯಾವುದೇ ಒಂದು ಜಾಗದಿಂದ ಹೊರಟು, ಮತ್ತೆ ಅದೇ ಜಾಗಕ್ಕೆ ಮರಳಿ ಬರೋದಕ್ಕೆ ಶನಿಗೆ ಮೂವತ್ತು ವರ್ಷ ಬೇಕು. ಅದೇ ಕೆಲಸ ಮಾಡೋದಕ್ಕೆ ಗುರುವಿಗೆ ಹನ್ನೆರಡು ವರ್ಷ ಬೇಕು. ಅಂದಹಾಗೆ, ಭಾರತದಲ್ಲಿ ಅರವತ್ತು ವರ್ಷಗಳ ಸಂವತ್ಸರ ಚಕ್ರ ಇದೆಯಲ್ಲ, ಅದು ಇವೆರಡರ ಮೇಲೇ ನಿಂತಿರೋದು. ಉದಾಹರಣೆಗೆ, ಈ ಇವತ್ತು ಶನಿ, ಗುರು ಎರಡೂ, ಆಕಾಶದಲ್ಲಿ ಒಂದಕ್ಕೊಂದಕ್ಕೆ ಹತ್ತಿರವಾಗಿ, ಎರಡೂ, ಜ್ಯೇಷ್ಟಾ ನಕ್ಷತ್ರದ ಹತ್ತಿರ ಇದೆ ಅಂತ ಇಟ್ಟುಕೊಳ್ಳಿ. (ಸುಮ್ಮನೆ ಇಟ್ಟುಕೊಳ್ಳಿ. ಯಾವ ನಕ್ಷತ್ರವಾದರೂ ಆಗಿರಬಹುದು. ಮೇಷ ವೃಷಭವೇ ಮೊದಲಾದ ರಾಶಿಚಕ್ರದಲ್ಲಿ ಅತೀ ಪ್ರಕಾಶಮಾನವಾದ ನಕ್ಷತ್ರ ಜ್ಯೇಷ್ಟಾ. ಅದಕ್ಕೇ ಅದರ ಉದಾಹರಣೆ ತೆಗೆದುಕೊಂಡೆನಷ್ಟೆ. ಇರಲಿ). ಮತ್ತೆ ಸುಮಾರು ಮೂವತ್ತು ವರ್ಷಗಳ ಬಳಿಕ ಶನಿ ಅಲ್ಲೇ ಬಂದಿರುತ್ತಾನೆ. ಹಾಗೇ ಅರವತ್ತು ವರ್ಷಗಳ ನಂತರವೂ ಅಲ್ಲೇ ಇರುತ್ತಾನೆ. ಈ ಅರವತ್ತು ವರ್ಷಗಳಲ್ಲಿ ಗುರು ಆಕಾಶದ ಸುತ್ತ ಐದು ಬಾರಿ ಪ್ರದಕ್ಷಿಣೆ ಮಾಡಿ, ಮತ್ತೆ ಜ್ಯೇಷ್ಟಾ ನಕ್ಷತ್ರದ ಬಳಿಯೇ ಬರುತ್ತಾನೆ. ಹಾಗಾಗಿ, ಪ್ರಭವ ವಿಭವ ಮೊದಲಾದ ಸಂವತ್ಸರ ಚಕ್ರ ಆಕಾಶದಲ್ಲಿ ಗುರುಶನಿಗಳು ಒಟ್ಟಿಗೆ ಕಾಣಿಸಿಕೊಳ್ಳುವ ಘಟನೆಯನ್ನಾಧರಿಸಿದೆ. ತಿಳೀತಲ್ಲ? Read more about ವಕ್ರನಾದ ಶುಕ್ರ?
ಅಂಗಳದೊಳಗೆ ಬೆಳದಿಂಗಳು ತುಂಬಿತು
ಕೆಲವು ದಿನಗಳ ಹಿಂದೆ ಸಂಪದದ ಗೆಳೆಯರೊಬ್ಬರು ಜಾವಳಿ ಅಂದರೇನು ಅಂತ ಕೇಳಿದ್ದರು . ಮೊದಲೆ ಹೇಳಿಬಿಡುವೆ - ಜಾವಳಿಗೂ ಜವಳಿಗೂ ಅರ್ಥಾತ್ ಸಂಬಂಧ ಇಲ್ಲ ಅಂತ. ಜಾವಳಿ ಜವಳಿ ಏನೂ ಅವಳಿ-ಜವಳಿ ಪದಗಳಲ್ಲ. ಆದರೆ ಪದ ಜಾವಳಿ ಸುಮಾರು ಅವಳಿ ಜವಳಿ ಅಂದ್ರೂ ತಪ್ಪಿಲ್ಲ.
Read more about ಅಂಗಳದೊಳಗೆ ಬೆಳದಿಂಗಳು ತುಂಬಿತು
Someಕ್ರಮಣದ ಪುರಾಣ - ಭಾಗ ಒಂದು
Someಕ್ರಮಣದ ಪುರಾಣ - ಭಾಗ ಎರಡು [ ಕೊನೆಯ ಭಾಗ]
(ವರ್ಷದ) ಕೊನೆಯ ಕೊಸರು
ಮೊಸರು ಕೊಂಡಾಗ ಕೊನೆಯಲ್ಲಿ ಕೊಸರು ಕೊಡೋ ರೂಢಿ ಇತ್ತು. ನಂದಿನಿ - ಆವಿನ್-ನೀಲ್ಗಿರೀಸ್ ಮೊದಲಾದ ಪ್ಯಾಕೆಟ್ ಹಾಲು ಮೊಸರುಗಳು ಬಂದು, ಕೊಸರು ಅನ್ನೋದು ಏನು ಅನ್ನೊದನ್ನೇ ಮರೆಯೋ ಹಾಗೆ ಮಾಡ್ಬಿಟ್ಟಿವೆ. ಈಚೀಚೆಗೆ, ಈ ಕೊಸರಿಗೆ ಅಡಿಟಿಪ್ಪಣಿ, ಅನ್ನೋ ಹೊಸ ಅರ್ಥ ಬಂದು ಸ್ವಲ್ಪ ಅದು ಕೆಲವೆಡೆಲ ನಲಿದಾಡ್ತಿದೆ ಅನ್ನಿ. ವರ್ಷದ ಕೊನೆಯ ಈ ದಿವಸ ಏನಾದ್ರೂ ಬರೀಬೇಕು ಅಂದ್ರೆ, ಸರಕು-ಸಮಯು ಎರಡೂ ಇರ್ಬೇಕಲ್ವ? ಇಲ್ದೇ ಇದ್ರೆ? ತೊಂದ್ರೆ ಏನಿಲ್ಲ. ಮಿಕ್ಕಿದ್-ಹಕ್ಕಿದ್ದೆಲ್ಲ ಅಕ್ಕಮ್ಮನ ಪಾಲು ಅನ್ನೋ ಗಾದೆ ಹಾಗೆ, ಏನಾದ್ರೂ ಉಳ್ದಿದೆಯಾ ನೋಡ್ಬೇಕು. ಅಷ್ಟೆ.
ಅಕ್ಕಮ್ಮ ಹಾಗಿರ್ಲಿ. ಈ ೨೦೦೭ ನೇ ವರ್ಷ ಮುಗಿಯೋ ಈ ದಿವಸ ಒಂದು ವಿಷಯ ಹೇಳ್ಬಿಡ್ತೀನಿ. ನಮ್ಮಲ್ಲಿ ಹಲವಾರು ಪಂಚಾಂಗಗಳಿವೆ (calendar). ಸೌರಮಾನ -ಚಾಂದ್ರಮಾನ-ಮುಸ್ಲಿಮ್ - ಚೈನೀಸ್ ಅಂತ. ಎಲ್ಲಾ ಪಂಚಾಂಗಗಳೂ ಆಕಾಶದ್ ಜೊತೆ ಒಂದಲ್ಲ ಒಂದ್ರೀತಿ ತಾಳೆ ಹಾಕ್ಬಿಟ್ಟೇ ಹೊಸ ವರ್ಷ ಶುರು ಮಾಡತ್ತ್ವೆ. ಆದ್ರೆ, ಈ ಜನವರಿ ಒಂದಕ್ಕೆ ಶುರುವಾಗೋ ಈ ಗ್ರಿಗೋರಿಯನ್ ಪಂಚಾಂಗ ಮಾತ್ರ, ಆ ತರಹ ಯಾವ ಕಟ್ಟೂ ಇಲ್ದೆ, ಸುಮ್ಮನೆ ಯಾವ್ದೋ ಒಂದು ದಿನದಿಂದ ಶುರುವಾಗಿಬಿಡತ್ತೆ ಹಾಳಾದ್ದು! ಇಲ್ದೇ ಇದ್ರೆ, ಹತ್ತನೆ ತಿಂಗ್ಳು ಅನ್ನೋ ಅರ್ಥ ಡಿಸೆಂಬರ್ ಅನ್ನೋ ಹೆಸರಲ್ಲೇ ಬರೋವಾಗ, ಅದು ಮುಗಿದ್ಮೇಲೆ ಬರೋ ಜನವರಿ ಮೊದಲ್ ತಿಂಗ್ಳಾಗಕ್ಕೆ ಹೇಗಾಗ್ತಿತ್ತು ಹೇಳಿ?
ನೋಡಲು ಮರೆಯದಿರಿ, ಮರೆತು ನಿರಾಶರಾಗದಿರಿ!
ಏನ್ ಗುರು ಮತ್ತು ದೆಲ್ಲಿಯ ದರ್ಬಾರು
ಶಂಖನಾದ - ಭಾಗ ಎರಡು
ಈ ಹಿಂದೆ ಸಂಪದದಲ್ಲಿ ನಾನು ಬರೆದಿದ್ದ ಬರಹವೊಂದು, ಸ್ವಲ್ಪ ವಿಸ್ತಾರದೊಂದಿಗೆ ದಟ್ಸ್ ಕನ್ನಡದಲ್ಲಿ ಪ್ರಕಟವಾಗಿದೆ:
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ.... :
http://thatskannada.oneindia.in/nri/article/2008/0802-my-wife-my-valentine.html
-ಹಂಸಾನಂದಿ
ಹೆಸರಿಲ್ಲದ್ದು ?
ಸೊಳ್ಳೆ ಬೇಟೆ :)
ಪ್ರಯೋಗ ಒಂದು
ಅನಿಸುತಿದೆ ಯಾಕೋ ಇಂದು..
ಕಟಪಯಾದಿ ಸೂತ್ರ
ಕೆಲವು ದಿನಗಳ ಹಿಂದೆ ರಮೇಶಬಳಗಂಚಿಯವರು ಒಂದು ಸಬ್ಸ್ಟಿಟ್ಯೂಷನ್ ಸೈಫರ್ ಅಮ್ಮಜಿಖಷೆಸ್ಸ ಖನಮ ಒಜಿ ಎಂಬ ಬರಹವನ್ನು ಬರೆದಿದ್ದರು. ಆಗ, ಕಟಪಯಾದಿ ಸೂತ್ರದ ಬಗ್ಗೆ ಬರೆಯಬಹುದಲ್ಲ ಅನ್ನೋ ಯೋಚನೆ ಬಂತು.
Read more about ಕಟಪಯಾದಿ ಸೂತ್ರ
ತಿರುಪತಿ ತಿಮ್ಮನೂ, ಉಡುಪಿಯ ಹೋಟೆಲೂ...
ಪ್ರಪಂಚದ ಎಲ್ಲಿಂದ ಎಲ್ಲಿಗೆ ಹೋದರೂ, ಅಲ್ಲೊಬ್ಬ ಕಾಕಾ ಟೀ ಅಂಗಡಿ ಇಟ್ಟುಕೊಂಡಿರುತ್ತಾನೆ ಅನ್ನೋದೊಂದು ಹಳೇ ನಗೆಚಟಾಕಿ. ಅರವತ್ತೊಂಬತ್ತರಲ್ಲಿ, ನೀಲ್ ಆರ್ಮ್ ಸ್ಟ್ರಾಂಗ್ ಚಂದ್ರನಮೇಲೆ ಇಳಿದಾಗ ಅಲ್ಲಿಯೂ ಒಬ್ಬ ಪ್ರತ್ಯಕ್ಷ ಆಗಿದ್ದನಂತೆ ಟೀ ಹಿಡ್ಕೊಂಡು ಎನ್ನೋ ಮಟ್ಟಿಗೆ ಇದು ಪ್ರಖ್ಯಾತ. ಇದರ ಹಿಂದೇ ಬರೋದು ಉಡುಪಿ ಹೋಟೆಲ್ ಗಳ ಸಮಾಚಾರ. ಆಡು ಮುಟ್ಟದ ಸೊಪ್ಪಿಲ್ಲ, ಅನ್ನೋ ಹಾಗೆ ಉಡುಪಿ ಹೋಟೆಲ್ ಗಳಿಲ್ಲದ ಊರೇ ಇಲ್ಲ. ಮೊದಮೊದಲು ಹೋಟೆಲ್ ನಡೆಸುವ ಆಸೆ, ಅಥವಾ ಯೋಚನೆ ಉಡುಪಿಯವರಿಗೇ ಏಕೆ ಬಂತು? ಅದನ್ನು ಯಾರಾದ್ರೂ ಉಡುಪಿ ಕಡೇವ್ರೇ ಹೇಳಬೇಕು. ಅಥವಾ ತಿಂಡಿಪೋತ ಅನ್ನೋ ಹೆಸರು ಗಳಿಸಿರೋ ಕೃಷ್ಣ ಇರೋ ಊರ್ನೋರಾದ್ರಿಂದ ಹೀಗೇನಾದ್ರೂ ಆಯ್ತಾ? ನನಗೆ ಗೊತ್ತಿಲ್ಲ. ಅಂತೂ, ಭಾರತದ ಸುಮಾರು ಹಲವು ರಾಜ್ಯಗಳಲ್ಲಿ,ಅದ್ರಲ್ಲೂ, ಮಹಾರಾಷ್ಟ್ರ, ತಮಿಳುನಾಡುಗಳಲ್ಲಿ ವಿಶೇಷವಾಗಿಯೇ ಉಡುಪಿ ಹೋಟೆಲ್ಗಳನ್ನು ಕಾಣಬಹುದು.
ಈ ಉಡುಪಿ ಹೋಟೆಲ್ ಅನ್ನೋದು ತಮಿಳ್ನಾಡಿನಲ್ಲಿ ಹೇಗೆ ಹಾಸುಹೊಕ್ಕಾಗಿದೆ ಅಂದರೆ, ಅದಕ್ಕೆ ಸಸ್ಯಾಹಾರಿ ಅಂತ ಬೇರೆಯೇ ಅರ್ಥ ಬಂದುಬಿಟ್ಟಿದೆ. ವೆಜಿಟೇರಿಯನ್ ಅಂತ ಹೇಳೋಬದಲು ಅವರು ಉಡುಪಿ ಅಂತಷ್ಟೇ ಹೇಳುತ್ತಾರೆ. ಸರವಣ ಭವನ್ (ಉಡುಪಿ) ಅನ್ನೋ ಬೋರ್ಡ್ ನಿಮಗೆ ಕಂಡ್ರೆ, ಅದು ನಡೆಸ್ತಾಇರೋದು ಉಡುಪಿಯವರಲ್ಲದೇ, ಆಂಧ್ರದವರೇ ಆಗಿದ್ದರೂ, ಅಥವಾ ಅಸ್ಸಾಮ್ ನವರೇ ಆಗಿದ್ರೂ, ಅದಕ್ಕೆ ವೆಜಿಟೇರಿಯನ್ ಅನ್ನೋದೇ ಅರ್ಥ. Read more about ತಿರುಪತಿ ತಿಮ್ಮನೂ, ಉಡುಪಿಯ ಹೋಟೆಲೂ...
ರಾಹು ಕೇತು ಕಾಟ - ಭಾಗ ೧
ನಮ್ಮಲ್ಲಿ ಅನೇಕರಿಗೆ, ಈ ಗ್ರಹಣಗಳು ಬಂತು ಅಂದ್ರೆ, ಬಹಳ ಭಯ. ಗ್ರಹಣದ ಸಮಯದಲ್ಲಿ ಏನೂ ತಿನ್ನಬಾರದು ಅನ್ನೋವರು ಒಂದಷ್ಟಾದರೆ, ಮಾಡಿಟ್ಟ ಅಡಿಗೆನೆಲ್ಲ ಎಸೆಯೋರು ಒಂದಷ್ಟು. ಇನ್ನು, ಮನೆಯಲ್ಲಾರಾದರು ಬಸುರಿ ಹೆಂಗಸಿದ್ದರಂತೂ ಸರಿಯೇ ಸರಿ. ಕಿಟಕಿ ಬಾಗಿಲು ಎಲ್ಲ ಹಾಕಿ, ಒಂಚೂರೂ ಬೆಳಕು ಮನೇ ಒಳಗೇ ಬರದೇ ಇರೋ ಹಾಗೆ ಕೂತ್ಕೊಳೋ ಸ್ಥಿತಿ. ಈಗ್ಲೇನಾರೂ ಬದ್ಲಾಗಿದ್ರೆ ನಾಕಾಣೆ. ನನ್ನ ನೆನಪುಗಳೇ ಔಟ್ ಡೇಟೆಡ್ ಅಂದ್ಕೊಂಡು ಸುಮ್ನಾಗಬೇಕಷ್ಟೆ.ಅದನಾದ್ರೂ ಇರಲಿ, ಸುಮ್ನೆ ವಿಷಯಕ್ಕೆ ಬರೋದಕ್ಕೆ ಮೊದಲೆ ನೆನಪಾದದ್ದನ್ನ ಹೇಳಿದೆ ಅಷ್ಟೆ.
೧೯೮೦, ಫೆಬ್ರವರಿ ಹದಿನಾರನೇ ತಾರೀಖು ಒಂದು ಸೂರ್ಯಗ್ರಹಣ ಆಗಿತ್ತು. ಸೂರ್ಯ ಗ್ರಹಣ ಅನ್ನೋದೇನೂ ಅಂತಹ ಅಪರೂಪದ ವಿಷಯ ಅಲ್ಲ ಆ ಸಲ. ಆದ್ರೆ, ಆ ಗ್ರಹಣ ಕರ್ನಾಟಕಕ್ಕೆ ವಿಶೇಷವಾಗಿತ್ತು. ಅಂದ್ರೆ, ಅದೊಂದು ಪೂರ್ಣಗ್ರಹಣ - ಮತ್ತೆ ಪೂರ್ಣತೆಯ ಹಾದಿ ಕರ್ನಾಟಕದಲ್ಲಿ ಹಾದುಹೋಗಿತ್ತು. ಕಾರವಾರದಿಂದ ರಾಯಚೂರಿನವರೆಗೆ ಮಧ್ಯಾಹ್ನ ಮೂರು ಗಂಟೇ ಹೊತ್ಗೆ ಸೂರ್ಯ ಪೂರ್ತಿ ಕಾಣೆಯಾಗಿದ್ದ ಒಂದು ಎರಡುಮೂರು ನಿಮಿಷ. ನನ್ನ ದುರದೃಷ್ಟ ಅಂದ್ರೆ, ನಾನು ಈ ದಾರಿಲಿ ಬರೋ ಯಾವ ಊರಲ್ಲೂ ಇರಲಿಲ್ಲ. ಆದ್ರೆ ನಮ್ಮೂರಲ್ಲೂ ಸುಮಾರು ೯೩% ಗ್ರಹಣ ಆಗಿತ್ತು. ಅದಕ್ಕೇ ಸಂತೋಷ ಪಡ್ಬೇಕಾಯ್ತು ನಾನು. ಆದ್ರೆ, ಅಲ್ಲಿಂದ ಇಪ್ಪತ್ತೆಂಟು ವರ್ಷ ಆದ್ರೂ, ೯೩% ಆಗಿರೋ ಇನ್ನೊಂದು ಗ್ರಹಣ ನನಗೆ ಸಿಕ್ಕಿಲ್ಲ ಅಂದ್ರೆ, ನಿಮಗ್ಗೊತ್ತಾಗತ್ತೆ ಈ ಗ್ರಹಣಗಳನ್ನ ಅಷ್ಟು ನಿಸೂರಾಗಿ ನೋಡ್ದೇ ಬಿಟ್ಬಿಡಬಾರದು ಅಂತ. Read more about ರಾಹು ಕೇತು ಕಾಟ - ಭಾಗ ೧
ದೆಹಲಿ ದೂದ ಹಾಗೂ ನೆನಪುಗಳು!
ಕಾಡಬೆಳದಿಂಗಳಿಗೆ ಪ್ರಶಸ್ತಿ ಬಂದ ವಿಷಯ ಹರಿ ಬರೆದಿದ್ರು. ಅದನ್ನ ಓದ್ದೆ. ಅದ್ರಲ್ಲಿ ದಟ್ಸ್ ಕನ್ನಡದಲ್ಲಿದ್ದ ವರದಿಗೂ ಕೊಂಡಿ ಹಾಕಿದ್ರು. ನಾನೂ ಹಿನ್ನಲೆ ಗಾಯನಕ್ಕೆ ಯಾರಿಗೆ ಬಂದಿದೆ ಈ ಸರ್ತಿ ಪ್ರಶಸ್ತಿ ಅಂತ ನೋಡ್ದೆ. ಪಂಜಾಬಿ ಸಿನೆಮಾದಲ್ಲಿ ಗುರುದಾಸ್ ಮಾನ್ ಗೆ ಪ್ರಶಸ್ತಿ ಬಂದಿದೆ! ಆಗ ಹಿಂದೆ ನಮಗೆಲ್ಲ ಟಿ.ವಿ. ಅಂದ್ರೆ ಬರೀ ಹಿಂದಿ ದೂರದರ್ಶನ ಆಗಿದ್ದ ಕಾಲ ನೆನಪಾಯ್ತು. ನಮ್ಮೂರಲ್ಲಿ ಟಿ.ವಿ. ಸ್ಟೇಷನ್ ಶುರುವಾದ ಹೊಸತು. ದಿನಾ ಬೆಳಗೂ ಸಂಜೆ ಬರೀ ಹಿಂದಿ ಅಷ್ಟೆ. ಭಾನುವಾರ ಮಧ್ಯಾಹ್ನ ಒಂದು ಪ್ರಾದೇಶಿಕ ಚಿತ್ರ ಅಂತ ಹಾಕೋರು. ಕನ್ನಡದ ಸರತಿ ಎರಡೋ ಮೂರೋ ತಿಂಗಳಿಗೆ ಒಮ್ಮೆ. ಆದ್ರೆ, ಅದು ಹೇಗೋ ನಮ್ಮ ಮನೆಗೆ ಟಿ.ವಿ.ತಂದ ದಿನವೇ ಕನ್ನಡ ಚಿತ್ರ ಸಂಧ್ಯಾರಾಗ ಬಂದಿತ್ತು. ಅದ್ದ್ಯಾವ್ದೋ ಶ್ರೀವಾಸ್ತವ ಅನ್ನೋ ನಿರ್ವಾಹಕಿ "ಅಬ್ ದೇಖಿಯೇ ಕನ್ನಡ್ ಚಿತ್ರ್ ಸಾಂಧ್ಯ್ ರಾಗ್" ಅಂತ ತಪ್ಪು ತಪ್ಪಾಗಿ ಉಲಿದಿದ್ದಳು. ಈ ಪ್ರಾದೇಶಿಕ ಚಿತ್ರದ ಸಾಲಿನಲ್ಲೇ ಎಷ್ಟೋ ಒಳ್ಳೆ ಮಲೆಯಾಳಮ್, ತಮಿಳು ಚಿತ್ರಗಳನ್ನೂ ನೋಡಿದ ನೆನಪಿದೆ.
ಇದಲ್ಲದೆ, ಟಿ.ವಿ.ಯಲ್ಲಿ ಕನ್ನಡ ಏನಾರೂ ಕೇಳ್ಬೇಕಂತಿದ್ರೆ, ಎರಡುವಾರಕ್ಕೊಂದು ಸಲ ರಾತ್ರಿ ೧೦:೧೦ ಕ್ಕೋ ಏನೋ ( ಅದ್ಯಾಕೆ ಈ ಸಮಯ ಇಟ್ಕೊಂಡಿದ್ರೋ ಗೊತ್ತಿಲ್ಲ, ಬೇರೆ ಭಾಷೆಯವರಿಗೆ ತಾನೇ, ತಡ ಆದ್ರೂ ಕಾಯ್ತಾರೆ ಅಂತಿರ್ಬೋದು), ಚಿತ್ರಮಾಲಾ ಅಂತ ಒಂದು ಕಾರ್ಯಕ್ರಮ. ಅದರಲ್ಲಿ ಹಿಂದಿ ಬಿಟ್ಟು ಬೇರೆಬೇರೆ ಭಾಷೆಯ ಚಿತ್ರಗೀತೆ ಹಾಕೋರು. ಒಂದು ತರಹದಲ್ಲಿ ಈ ಚಿತ್ರಗೀತೆ ಕಾರ್ಯಕ್ರಮಕ್ಕೇ ಪರವಾಗಿಲ್ಲ, ಸ್ಪೆಶಲ್ ಟ್ರೀಟ್ಮೆಂಟ್ ಅಂದ್ಕೋಬಹುದು. ಯಾಕಂದ್ರೆ, ತಿಂಗಳಿಗೋ ಎರಡು ತಿಂಗಳಿಗೋ ಬರ್ತಿದ್ದ ಶಾಸ್ತ್ರೀಯ ಸಂಗೀತ ಬರ್ತಾ ಇದ್ದದ್ದು ಇನ್ನೂ ತಡವಾಗಿ - ರಾತ್ರಿ ಹತ್ತೂ ಐವತ್ತಕ್ಕೋ ಏನೋ! Read more about ದೆಹಲಿ ದೂದ ಹಾಗೂ ನೆನಪುಗಳು!
ಹಕ್ಕಿ ಹೋಯ್ತು, ಫೋಟೋ ಬಂತು ಡುಂ ಡುಂ :)
ನಾವು ಚಿಕ್ಕವ್ರಿರೋವಾಗ ಯಾವುದೋ ಕಥೆ ಕೇಳ್ತಿದ್ದ ನೆನಪು. ಅದೇನೋ ಹೋಯ್ತು ಅದೇನೋ ಬಂತು ಡುಂ ಡುಂ ಅಂತ ಅದ್ರಲ್ಲಿ ಬರ್ತಿತ್ತು. ಹಾಳಾದ್ದು ಯಾವ ಕಥೆ ಅಂತ ನೆನಪೇ ಆಗ್ತಿಲ್ಲ ನೋಡಿ.
ಇವತ್ತು ನನ್ನ ಒಬ್ರು ಒಳ್ಳೇ ಗೆಳೆಯರೊಬ್ಬರ ಜೊತೆ ಮಾತಾಡ್ತಿದ್ದೆ. Read more about ಹಕ್ಕಿ ಹೋಯ್ತು, ಫೋಟೋ ಬಂತು ಡುಂ ಡುಂ :)
ಶುಕ್ರವಾರ, ಹದಿಮೂರನೇ ತೇದಿ...
ಇವತ್ತು ಬೆಳಗ್ಗೆ ಕೆಲಸಕ್ಕೆ ಬರ್ತಾ ರೇಡಿಯೋ ಕೇಳೋ ತನಕ ನನಗೆ ಇದು ನೆನಪಾಗಿರಲಿಲ್ಲ. ಇವತ್ತು ಹದಿಮೂರನೇ ತಾರೀಕು, ಶುಕ್ರವಾರ! ಪಶ್ಚಿಮಾರ್ಧ ಗೋಳದಲ್ಲಿ ಶುಕ್ರವಾರ ಒಳ್ಳೆಯದಿನವಲ್ಲವೆಂದೂ (ಯೇಸುವನ್ನು ಶಿಲುಬೆಗೇರಿಸಿದ್ದು ಶುಕ್ರವಾರವೇ) ಮತ್ತು ಹದಿಮೂರು ಅನ್ನೋದು ಒಳ್ಳೇ ಸಂಖ್ಯೆ ಅಲ್ಲ ( ಯಾಕಂದ್ರೆ, ಯೇಸು ಕೊನೆಯ ಸಲ ಊಟ ಮಾಡ್ದಾಗ ಅವನ ಜೊತೆ ಹನ್ನೆರಡು ಜನ ಶಿಷ್ಯರಿದ್ದರು - ಅಂದ್ರೆ, ಊಟಕ್ಕೆ ಕೂತವರು ಹದಿಮೂರು ಮಂದಿ) ಅನ್ನೋ ನಂಬಿಕೆ ಇದೆ. ಇನ್ನು ಎರಡೂ ಒಟ್ಟಿಗೆ ಸೇರಿದ್ರೆ ಕೇಳ್ಬೇಕಾ? ಡಬಲ್ ಟ್ರಬಲ್ ಅಲ್ವೇ?
ಇವತ್ತು ಸ್ಯಾನ್ ಫ್ರಾನ್ಸಿಸ್ಕೋ ನಲ್ಲಿ ಇರುವ ಎ಼ಕ಼್ಪ್ಲೊರೆಟೋರಿಯಮ್ ನಲ್ಲಿ ಇದರ ಮೇಲೆ ಒಂದು ಹೊಸ ಎಕ್ಸಿಬಿಟ್ ಶುರುವಾಗ್ತಿದೆಯಂತೆ. ನೋಡಲು ಹೋದವರು ಅಲ್ಲಿ ಏಣಿ ಅಡಿಯಲ್ಲಿ ನಡೀಬೇಕಾಗ್ಬಹುದಂತೆ, ಕನ್ನಡಿ ಒಡೀಬಹುದಂತೆ - ಒಟ್ಟ್ಟಿನಲ್ಲ್ಲಿ ಕೆಟ್ಟ ಅದೃಷ್ಟ ತರತ್ತೆ ಅಂತ ನಂಬಿಕೆ ಇರೋ ಒಟ್ಟು ಹದಿಮೂರು (!)ಕೆಲಸಗಳನ್ನ ಅಲ್ಲಿ ಮಾಡ್ಬೋದಂತೆ. ಈ ನಂಬಿಕೆಗಳಿಗೆ ಸರಿಯಾದ ಕಾರಣಗಳು ಇಲ್ಲ ಅನ್ನೋದನ್ನ ಮನದಟ್ಟು ಮಾಡೋಕ್ಕೇ ಇದನ್ನ ಮಾಡಿದಾರಂತೆ. ಇನ್ನು ಅದರ ಶುಭಾರಂಭ :) ಮಾಡೋದಕ್ಕೆ, ಹದಿಮೂರನೇ ತಾರೀಖು, ಶುಕ್ರವಾರವನ್ನ ಆಯ್ಕೆ ಮಾಡ್ಕೊಂಡಿರೋದು ತಕ್ದಾಗೇ ಇದೆ ಅನ್ನಿಸ್ತು ನಂಗೆ. Read more about ಶುಕ್ರವಾರ, ಹದಿಮೂರನೇ ತೇದಿ...
ರಾಹು-ಕೇತು ಕಾಟ, ಮತ್ತು ನವಗ್ರಹ ಸ್ತೋತ್ರ
ಚಕ್ರವತ್ಪರಿವರ್ತಂತೇ ದು:ಖಾನಿ ಚ ಸುಖಾನಿ ಚ ಅನ್ನೋದು ಸಂಸ್ಕೃತದ ಪ್ರಸಿದ್ಧ ಮಾತು. ಅಂದರೆ, ಸೋವು ನಲಿವುಗಳೆರಡೂ ಚಕ್ರದಂತೆ ಮತ್ತೆ ಮತ್ತೆ ತಿರುಗಿ ತಿರುಗಿ ಮರಳಿ ಮರಳಿ ಬರುತ್ತಿರುತ್ತವೆ ಎಂದರ್ಥ. ಚಕ್ರದಂತೆ ಬರೋದು ಬರೀ ಸುಖದು:ಖಗಳು ಮಾತ್ರ ಅಲ್ಲ ಅನ್ನೋದು ಮಾತ್ರ, ಚಿಕ್ಕ ಮಕ್ಕಳಿಗೂ ಗೊತ್ತಿರೋ ಸಂಗತಿ. ಹಗಲು ರಾತ್ರಿಯ ಚಕ್ರಕ್ಕಿಂತ ಬೇಕೇ ಮರಳಿ ಮರಳಿ ಸುತ್ತುವ ಚಕ್ರ? ಅದೇ ರೀತಿ ಆಕಾಶದಲ್ಲಿ ಇನ್ನೊಂದು ಕಾಲಕಾಲಕ್ಕೆ ಮರಳಿ ಬರೋ ಚಕ್ರ ಇದೆ - ಆದರೆ ಇದು ಸಾಧಾರಣವಾಗಿ ಎಲ್ಲರಿಗೂ ತಿಳಿದಿರಲ್ಲ, ಅಷ್ಟೇ. ಇದೇ ಗ್ರಹಣ ಚಕ್ರ (Saros cycle- ಸೆರಾಸ್ ಚಕ್ರ. ಇದಕ್ಕೆ ನಮ್ಮ ದೇಶದಲ್ಲಿ, ನಮ್ಮ ಭಾಷೇಲಿ ಬೇರೆ ಹೆಸರಿದೆಯೋ ಇಲ್ಲವೋ ತಿಳಿಯದು. ಅದಕ್ಕೆ ಅರ್ಥ ಗೊತ್ತಾಗೋ ಹಾಗೆ ಗ್ರಹಣಚಕ್ರ ಅನ್ನೋ ಭಾವಾನುವಾದವನ್ನು ಮಾಡಿದೀನಿ. ತಪ್ಪಿದ್ದ್ರೆ ತಿದ್ದಿ! ತಿದ್ಕೋತೀನಿ.)
ಕೆಲವು ದಿನದ ಮೊದಲು ರಾಹು-ಕೇತು ಕಾಟ ಅಂತ ಸ್ವಲ್ಪ ಗಳಹಿದ್ದೆ.ಮತ್ತೆ ಇವತ್ತು ಅದನ್ನ ಮುಂದುವರ್ಸೋಣ ಅಂತ ..ಅಲ್ಲದೆ, ಗ್ರಹಣಚಕ್ರ ಅರ್ಥ ಆಗ್ಬೇಕಾರೆ ರಾಹು ಕೇತು ವಿಷ್ಯ ಸ್ಪಷ್ಟ ಆಗ್ಬೇಕು ಮೊದಲು.
ನಮಗೆಲ್ಲ ಸೂರ್ಯನ ಸುತ್ತ ಭೂಮಿ ಸುತ್ತೋದೂ, ಭೂಮಿ ಸುತ್ತ ಚಂದ್ರ ಸುತ್ತೋದೂ ಗೊತ್ತೇ ಇದೆ. ಆ ಮೇಲೆ, ಒಂದು ಕಾಕತಾಳೀಯವಾದ ಒಂದು ವಿಚಾರದಿಂದ ಗ್ರಹಣಗಳನ್ನು ನಾವು ನೋಡ್ತೀವಿ. ಅದೇನಂದ್ರೆ, ನಮಗೆ ಭೂಮಿಯಿಂದ ನೋಡೋವಾಗ ಸೂರ್ಯನ ಗಾತ್ರವೂ, ಚಂದ್ರನ ಗಾತ್ರವೂ ಸರಿಸುಮಾರು ಒಂದೇ. ಚಂದ್ರನಿಗಿಂದ ಸೂರ್ಯ ಸುಮಾರು ನಾನೂರರಷ್ಟು ದೊಡ್ಡವ್ನು. ಹಾಗೇ ಸುಮಾರು ನಾನೂರರಷ್ಟು ಹೆಚ್ಚು ದೂರ್ದಲ್ಲೂ ಇದಾನೆ. ಅದಕ್ಕೆ ನಮ್ಗೆ ಅಪರೂಪಕ್ಕಾದ್ರೂ ಪೂರ್ಣ ಸೂರ್ಯಗ್ರಹಣ ಕಾಣ್ಸುತ್ತೆ. ಹತ್ತು, ಇಪ್ಪತ್ತು ಚಂದ್ರಗಳಿರೋ ಗುರು, ಶನಿಗಳ ಮೇಲೆ ಈ ರೀತಿ ಗ್ರಹಣಗಳು ಕಾಣೋಲ್ಲ. ಗ್ರಹಣ ಸಾಧ್ಯವಾಗೋಕೆ ಬೇಕಾದ ಇನ್ನೊಂದು ವಿಷಯಏನೂಂದ್ರೆ, ಭೂಮಿ ಸೂರ್ಯನ ಸುತ್ತ ಸುತ್ತೋ ಪಾತಳೀನೂ,ಚಂದ್ರ ಭೂಮಿ ಸುತ್ತ ಸುತ್ತೋ ಸಮಪಾತಳೀನೂ ಸುಮಾರಾಗಿ ಒಂದೇ. ಹಾಗಾಗಿ, ಒಂದೊಂದು ಸಲ ಸೂರ್ಯ ಭೂಮಿ ನಡುವೆ ಚಂದ್ರನೂ, ಕೆಲವೊಮ್ಮೆ ಸೂರ್ಯ ಚಂದ್ರ ನಡುವೆ ಭೂಮಿಯೂ ಬರತ್ತೆ. ಆಗ ಒಂದರ ನೆರಳು ಒಂದರ ಮೇಲೆ ಬಿದ್ದು ಗ್ರಹಣ ಆಗತ್ತೆ. ಇದು ಬಿಡಿ, ಚಿಕ್ಚಿಕ್ ಮಕ್ಕಳ್ಗೂ ಗೊತ್ತಿರೋ ವಿಷ್ಯ. Read more about ರಾಹು-ಕೇತು ಕಾಟ, ಮತ್ತು ನವಗ್ರಹ ಸ್ತೋತ್ರ
ರಾಹು-ಕೇತು ಕಾಟ, ಮತ್ತು ಗ್ರಹಣ ಚಕ್ರ
ಗಂಡ-ಹೆಂಡಿರು ಮತ್ತು ಪುರಂದರ ದಾಸರು
ನೀವು ಏನು ಬೇಕಾದ್ರೂ ಹೇಳಿ, ಪುರಂದರ ದಾಸರು ಅಂದ್ರೆ ನಂಗಿಷ್ಟ. ವ್ಯಾಸೋಚ್ಛಿಷ್ಟಂ ಜಗತ್ಸರ್ವಂ ಅನ್ನೋ ಮಾತಿದೆ. ಅಂದ್ರೆ, ವ್ಯಾಸರು ಹೇಳಿ ಬಿಟ್ಟುಳಿದದ್ದೇ ಈ ಜಗತ್ತಲ್ಲಿರೋದೆಲ್ಲ ಅಂತ. ಮಹಾಭಾರತ ಬರೆಯೋದಲ್ದೆ, ವೇದಗಳನ್ನ ನಾಕು ಪಾಲು ಮಾಡಿ ವಿಂಗಡಿಸಿದ್ದೇ ವ್ಯಾಸರು, ಮತ್ತೆ ಹದಿನೆಂಟು ಪುರಾಣಗಳನ್ನೂ ಬರ್ದಿದ್ದೂ ಅವರೇ ಅಂತ ನಂಬಿಕೆ ಇದೆಯಲ್ಲ. ನನಗೆ ಬಿಡಿ - ವೇದ ಓದಿದರೆ ನೇರವಾಗಿ ಅರ್ಥವಾಗೋಲ್ಲ. ಪುರಾಣ ಓದೋದಕ್ಕೆ ವೇಳೆ ಸಾಲದು. ಅದಕ್ಕೇ ನಾನು ’ದಾಸೋಚ್ಛಿಷ್ಟಂ ಜಗತ್ಸರ್ವಂ’ ಅಂದ್ಕೊಂಡ್ಬಿಡ್ತೀನಿ. ಯಾಕೆ ಅಂತೀರಾ? ’ದಾಸರೆಂದರೆ ಪುರಂದರ ದಾಸರಯ್ಯ” ಅನ್ನೋ ಮಾತನ್ನ ಅವರ ಗುರುಗಳೇ ಹೇಳಿಬಿಟ್ಟಿರೋದ್ರಿಂದ, ಈ ದಾಸರು ಯಾರು ಅಂತ ನಾನು ಬಿಡಿಸಿ ಹೇಳ್ಬೇಕಿಲ್ಲ. ಅಲ್ವಾ?
ಪುರಂದರ ದಾಸರು ಬರ್ದಿರೋದೆಲ್ಲ ಕನ್ನಡದಲ್ಲಿ. ಓದಿದ್ರೆ, ನನಗೆ ಅರ್ಥವಾಗೋದೇನೂ ಕಷ್ಟವಿಲ್ಲ. ಅಲ್ದೆ, ಅವ್ರೇನೂ ಸರ್ಗದ ಮೇಲೆ ಸರ್ಗ ಕವಿತೆ ಹೊಸೆದಂತ ಕಾಳಿದಾಸನ ಹಾಗೆ ದೊಡ್ಡ ದೊಡ್ಡ ಕಾವ್ಯಗಳನ್ನೂ ಬರೆದಿಲ್ಲ. ಅದು ಬಿಡಿ ಕುಮಾರವ್ಯಾಸ ಹರಿಹರ ರಾಘವಾಂಕ ರತ್ನಾಕರವರ್ಣಿಯರ ಹಾಗೆ ಸಾಂಗತ್ಯ ರಗಳೆ ಷಟ್ಪದಿಯ ಗೊಡವೆಗೂ ಅವರು ಹೋಗಿಲ್ಲ. ಏನಿದ್ರೂ ಅವರು ಬರೆದಿರೋದು ಸಣ್ಣ ಸಣ್ಣ ಹಾಡುಗಳು. ಒಂದು ಓದಿದ್ಮೇಲೆ ಇನ್ನೊಂದು ಇದನ್ನೇ ಓದ್ಬೇಕು ಅನ್ನೋದಕ್ಕೆ ಅಲ್ಯಾವ ಕಥೇನೂ ಇರೋದಿಲ್ಲ. ಅಲ್ದೆ ಸರಿಸುಮಾರು ಅರ್ಥವಾಗ್ದಿರೋ ಪದಗಳೂ ಅಲ್ಲೊಂದು ಇಲ್ಲೊಂದು ಹೊರತು ನಾನೇನೂ ಪಕ್ದಲ್ಲಿ ನಿಘಂಟು ಇಟ್ಕೊಂಡು ಕೂರ್ಬೇಕಾಗಿಲ್ಲ. ಇದೇಕಾರಣಕ್ಕೆ ಆದಾದಾಗ ಒಂದೊಂದು ಹೊಸ ಹಾಡನ್ನ ಓದಿ ನೋಡೋದು ಅಂದ್ರೆ ನನಗಂತೂ ಬಹಳ ಹಿಡಿಸುತ್ತೆ. Read more about ಗಂಡ-ಹೆಂಡಿರು ಮತ್ತು ಪುರಂದರ ದಾಸರು
ವೈದ್ಯನಾರಾಯಣಕಥೆ
ರಾಹು ಕೇತು ಕಾಟ, ಚಕ್ರವ್ಯೂಹ ಮತ್ತು ಅಭಿಮನ್ಯುವಿನ ಸಾವು
ಅಳಿಯ, ಅನಿಷ್ಟ ಮತ್ತು ಗ್ರಹಚಾರ!
"ಜಾಮಾತೋ ದಶಮಗ್ರಹಃ" ಅನ್ನೋ ಮಾತಿದೆ. ಅಂದ್ರೆ, ಅಳಿಯ ಅನ್ನೋನು ಹತ್ತನೇ ಗ್ರಹ ಅಂತ. ಪಾಪ ಯಾರೋ ಅಳಿಯನ ಕಾಟದಿಂದ ಬೆಂದೋರ ಮಾತಿರ್ಬೇಕು ಇದಂತೂ. ಆದ್ರೆ, ಏನು ಕೆಟ್ಟದಾದ್ರೂ, ಅದನ್ನ ’ಗ್ರಹಚಾರ’ - ಅಂದ್ರೆ, ಗ್ರಹಗಳ ಪ್ರಭಾವದಿಂದ ಅಂದುಬಿಡೋದೊಂದು ಕೆಟ್ಟ ರೂಢಿ ನಮ್ಮಲ್ಲಿ. :( Read more about ಅಳಿಯ, ಅನಿಷ್ಟ ಮತ್ತು ಗ್ರಹಚಾರ!
ಎಂಟರ ನಂಟು
ಕನ್ನಡ ಬರ್ದೋನು ಕೋಡಂಗಿ
ಕನ್ನಡ ಬರದೇ ಇರೋರು ಸಂಪದ ಓದೋ ಹಾಗಿಲ್ಲ. ಆದ್ರೂ ಯಾರಾದ್ರೂ ದೂರು ಕೊಟ್ಟು, ನನ್ನ ಬೆನ್ನಿಗೆ ಅವರೆಲ್ಲ ಬೀಳೋ ಮೊದಲು ಪೂರ್ತಿ ಪದ್ಯ ಕೇಳಿ :)
ಸಂಪದದಲ್ಲೆಲ್ಲ್ರೂ ಆಡೋ ಮಾತೇನು?
ವಾಲ್ಮೀಕಿ ರಾಮಾಯಣಕ್ಕೇನಾಗ್ಬೇಕು?
ಮಂಗಂಗಿನ್ನೊಂದ್ಹೆಸರ್ ಗೊತ್ತಾ?
ಕನ್ನಡ ಬರ್ದೋನು ಕೋಡಂಗಿ
Read more about ಕನ್ನಡ ಬರ್ದೋನು ಕೋಡಂಗಿ
IT - ಸಿಂಪ್ಟಮ್ಸ
2. ನೀವು ನೀರಿಗಿಂತ ಹೆಚ್ಚಾಗಿ ಕಾಫಿ ಅತ್ವ ಟೀ ಕುಡಿಯುತ್ತೀರಿ.
ಓದಿದ್ದು ಕೇಳಿದ್ದು ನೋಡಿದ್ದು-10
"ತಾಳಿ" ದವ ಬಾಳಿಯಾನು!
ಮದುವೆ ಮುಹೂರ್ತ ಹೊತ್ತಿನಲ್ಲಿ ವಿದ್ಯುತ್ ಕಡಿತವಾದರೆ? ಮುಹೂರ್ತ ಮೀರುತ್ತದೆಂದು ಅವಸರದಲ್ಲಿ ತಾಳಿ ಕಟ್ಟುವುದೇ? ಅದೂ ಸಾಮೂಹಿಕ ವಿವಾಹದಲ್ಲಿ? ವಿದ್ಯುತ್ ಬಂದಾಗ ಪಕ್ಕದಲ್ಲಿ ನಿಂತ ವಧುವನ್ನು ನೋಡಿ ವರ ಮಹಾಶಯ ಮೂರ್ಛೆ ಹೋಗುವುದೊಂದು ಬಾಕಿ! ಮದುವೆ Read more about ಓದಿದ್ದು ಕೇಳಿದ್ದು ನೋಡಿದ್ದು-10
ಸಮಹಗಲಿರುಳು
ನೆನ್ನೆ ಗೆಳೆಯರೊಡನೆ ಮಾತಾಡ್ತಾ ಹೇಳ್ದೆ - "ಇವತ್ತು ಈಕ್ವಿನಾಕ್ಸ್" ಅಂತ.
"ಹಂಗಂದ್ರೇನು" ಅಂದರು ಅವರು.
ಮತ್ತೆ ಶುದ್ಧ ಸಂಸ್ಕೃತದಲ್ಲಿ "ಇವತ್ತು ಶರದ್ ವಿಷುವ" ಅಂತ ಹೇಳ್ಬಹುದಿತ್ತು - ಅದರ ಬದಲು ಕೇಳಿದರೆ, ತಾನಾಗೇ ಅರ್ಥ ಆಗೋ ಅಂತಹ ಪದ ಯಾಕೆ ಹೇಳ್ಬಾದ್ರು ಅನ್ನಿಸಿ "ಸಮಹಗಲಿರುಳು" ಅಂದೆ.
ಪದದಲ್ಲೇ ಅರ್ಥ ಬಂತಲ್ಲ? ಅಂದ್ರೆ ಇವತ್ತು ರಾತ್ರಿ ಮತ್ತೆ ಹಗಲು ಒಂದೇ ಸಮ ಇರುತ್ತವೆ. ಬೆಂಗಳೂರು (ಅಥವಾ ಕರ್ನಾಟಕದಲ್ಲಿ ಯಾವ ಜಾಗ ಆದರೂ) ಭೂಮಧ್ಯರೇಖೆಗೆ ಬಹಳ ದೂರ ಇಲ್ಲದೇ ಇರೋದ್ರಿಂದ ಚಳಿಗಾಲಕ್ಕೂ ಬೇಸಿಗೇಗೂ ದಿನ ರಾತ್ರಿಗಳ ಅವಧಿ ತುಂಬಾ ಬದಲಾಗೋದಿಲ್ಲ. ಆದ್ರೆ, ಭೂಮಧ್ಯ ರೇಖೆಯಿಂದ ಹೆಚ್ಚು ಹೆಚ್ಚು ಉತ್ತರಕ್ಕೆ (ಅಥವಾ ದಕ್ಷಿಣಕ್ಕೆ) ಹೋದಹಾಗೆ ಕಾಲ ಬದಲಾದ ಹಾಗೆ ಹಗಲು ಹೆಚ್ಚಾಗೋದೂ, ಅಥವಾ ರಾತ್ರಿ ಹೆಚ್ಚಾಗೋದೋ ಸುಲಭವಾಗಿ ಗೊತ್ತಾಗುತ್ತೆ. Read more about ಸಮಹಗಲಿರುಳು
ಮತಾಂತರ ಏಕೆ ಬೇಕು?
ಮತಾಂತರವನ್ನು ಏಕೆ ತಡೆಯಬೇಕು?
ಕ್ರಿಕೆಟ್ ಆಡೋದ್ರಿಂದ, ಕರ್ನಾಟಕಕ್ಕೆ, ಕನ್ನಡಕ್ಕೆ ಏನು ಉಪಯೋಗ?
ಪ್ರೈಮರಿ ಶಾಲೆಯಿಂದ ಕಾಲೇಜಿನವರೆಗೆ ಕರ್ನಾಟಕದಲ್ಲಿ ಸಾವಿರಾರು ಹುಡುಗರು ( ಹುಡುಗಿಯರೂ ಕೂಡ) - ಸಾವಿರಾರು ಯಾಕೆ - ಲಕ್ಷಾಂತರ ಇರಬಹುದು ಕ್ರಿಕೆಟ್ ಆಡ್ತಾರೆ.
ಇದರಿಂದ ಕರ್ನಾಟಕಕ್ಕೆ, ಕನ್ನಡಕ್ಕೆ ಏನು ಉಪಯೋಗ ಆಗಿದೆ ಅಂತ ನಂಗೊತ್ತಿಲ್ಲ.
ನಾನು ಕ್ರಿಕೆಟ್ ಆಡಲ್ಲ. ಹಿಂದೆ ಆಡಿರೋದೂ ಕಡಿಮೆ. ನೋಡೋ ಆಸಕ್ತೀನೂ ನನಗೆ ಇಲ್ಲ. Read more about ಕ್ರಿಕೆಟ್ ಆಡೋದ್ರಿಂದ, ಕರ್ನಾಟಕಕ್ಕೆ, ಕನ್ನಡಕ್ಕೆ ಏನು ಉಪಯೋಗ?
ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
ನಾನು ಚಿಕ್ಕವನಿದ್ದಾಗ ನಮ್ಮೂರಲ್ಲಿ ನಮ್ಮನೇ ಹತ್ರ ಒಂದು ಮಂಟಪ ಇತ್ತು. ಅದನ್ನ ಕಟ್ಟಿಸಿದವರ್ಯಾರು ಅಂತ ಗೊತ್ತಿಲ್ಲ. ಅಂತೂ ದೇವ್ಸ್ಥಾನದ ಅಕ್ಕ ಪಕ್ಕ ಕೆಲವ್ಕಡೆ ಇರತ್ತಲ್ಲ ಆ ತರಹ ಮೂರು ಗೋಪುರದ ಮಂಟಪ. ಅಲ್ಯಾವ್ದೂ ದೇವಸ್ಥಾನ ಇಲ್ದಿದ್ರೂ,ಅಲ್ಲಿ ಆ ಮಂಟಪ ಯಾಕೆ ಕಟ್ಟಿದ್ರೋ? ಅಥವಾ ಮನೆ ಮಠ ಇಲ್ಲದೇ ಇರೋವ್ರಿಗೇ ಅಂತಲೇ ಯಾರಾದ್ರೂ ಪುಣ್ಯಾತ್ಮರು ಕಟ್ಟಿಸಿದ್ರೋ ಗೊತ್ತಿಲ್ಲ - ಅಂತೂ ಅಲ್ಲಿ ಪಾಪ ಭಿಕ್ಷೆ ಬೇಡಿ ಹೊಟ್ಟೆ ಹೊರೆದುಕೊಳ್ಳೋ ಎಷ್ಟೋ ಸಂಸಾರಗಳು ನೆಲೆ ನಿಂತಿದ್ರು.ಅವರಿಗೆ ವರ್ಷಕ್ಕೆ ಮುನ್ನೂರಅರವತ್ತೆರಡು ದಿನ ಆ ಮಂಟಪವೇ ಮನೆ. ಒಂದುವೇಳೆ ಮನೆಯಲ್ಲಿ ಏನೋ ಸಮಾರಂಭವೋ ಏನೋ ಆದಾಗ ಊಟ ತಿಂಡಿ ಮಿಕ್ಕರೆ ಅಲ್ಲಿಗೆ ಹೋಗಿ ಕರೆದು, ಮತ್ತೆ ಮಾಡಿದ ಅಡುಗೆಗೆ ಆಗೋ ದಂಡವನ್ನ ತಪ್ಪಿಸ್ತಿದ್ವಿ. ಒಂದೊಂದ್ಸಲ ಕಲಾಯ ಮಾಡೋ ಮನುಷ್ಯ ಬಂದರೂ ಅಲ್ಲೇ ಮಂಟಪದ ಪಕ್ಕದಲ್ಲೇ ಅವನ ಅಗ್ಗಿಷ್ಟಿಕೆ ಹೂಡ್ಕೋತಿದ್ದ. ಸುತ್ತ ಮುತ್ತಲಿನ ಮನೆಯವರೆಲ್ಲ ಅವರ ಕೊಡವೋ, ಕೊಳದಪ್ಪಲೆಯೋ, ಯಾವುದಕ್ಕಾದ್ರೂ ಕಲಾಯ ಮಾಡಿಸ್ಬೇಕಾಗಿದ್ರೆ ಅಲ್ಲಿಗೇ ತರ್ತಿದ್ರು. ಹಾಗೇನಾದ್ರೂ ಕೊಟ್ಟಾಗ, ನಾನೂ ಕಲಾಯದ ಮನುಷ್ಯ ತವರ ಕಾಸೋದು, ತಿದಿ ಒತ್ತೋದು ಇದೆಲ್ಲ ನೋಡ್ತಾ ಕೂತಿರ್ತಿದ್ದೆ. ಒಂದೊಂದು ಸಲ ಸಂಜೆ ಹೋಗಿ ಆ ಮಂಟಪದ ಹಿಂದಿನ ಬಯಲಲ್ಲಿ ಗೆಳೆಯರ ಜೊತೆ ಆಡ್ತಿದ್ದಿದ್ದೂ ಉಂಟು. Read more about ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
ಡಬಲ್ ಗೇಮ್ !
ಸೀಗೇಗುಡ್ಡದಲ್ಲೊಂದು ಕರಡಿ ಸಂಸಾರ - ಭಾಗ ೧
ಒಂದಾನೊಂದು ಕಾಲದಲ್ಲಿ ಸೀಗೆ ಗುಡ್ಡದ ತಪ್ಪಲಲ್ಲಿ ಒಂದು ಕರಡಿ ಸಂಸಾರ ವಾಸವಾಗಿತ್ತು. ಅಮ್ಮ, ಅಪ್ಪ ಮತ್ತೆ ಪುಟಾಣಿ. ಬೆಟ್ಟದ ಮೇಲೆ ಕುರುಚಲು ಕಾಡಿದ್ದರಿಂದ ಅವರ ಸಂಸಾರಕ್ಕೆ ಹಲಸಿನ ಹಣ್ಣಿಗೂ, ಜೇನುತುಪ್ಪಕ್ಕೂ ಯಾವತ್ತೂ ಕೊರತೆ ಆಗಿರ್ಲಿಲ್ಲ. ಸುತ್ತ ಮುತ್ತ ಹಳ್ಳೀ ಜನರೂ ಕೂಡ ಸೀಗೆ ಗುಡ್ಡದಲ್ಲಿ ಕರಡಿ ಸಂಸಾರ ಇರೋದು ಗೊತ್ತಿದ್ರಿಂದ ಹೆಚ್ಚಾಗಿ ಯಾರೂ ಬೆಟ್ಟದ ಮೇಲೇ ಬರೋದಾಗ್ಲಿ, ಕರಡಿಗಳಿಗೆ ತೊಂದ್ರೆ ಮಾಡೋದಾಗ್ಲಿ ಮಾಡ್ತಿರ್ಲಿಲ್ಲ.
ಪುಟಾಣಿ ಕರಡಿ ಇದೆಯಲ್ಲ, ಅದು ಬಹಳ ಚೇಷ್ಟೆ. ನಿಂತ ಕಡೆ ಕಾಲು ನಿಲ್ಲೋದಿಲ್ಲ. ಒಂದು ದಿನ ಹಾಡುಹಗಲೇ ಅಮ್ಮನ ಕಣ್ಣು ತಪ್ಪಿಸಿ ಗುಡ್ಡದ ಕೆಳಗಿರೋ ಊರಿಗೆ ಹೋಗಿಬಿಟ್ಟಿದೆ! ನಟ್ಟ ನಡು ಮಧ್ಯಾಹ್ನ. ಎಲ್ಲೋ ಮಕ್ಕಳು ಹಾಡು ಹೇಳೋದು ಕೇಳಿ ಹೋಗಿ ನೋಡತ್ತೆ, ಒಂದು ಪುಟಾಣಿ ಗುಡಿಯೊಳಗೆ ಯಾರೋ ಮಕ್ಕಳಿಗೆ ಏನೋ ಹೇಳಿಕೊಡ್ತಿದಾರೆ. ಪುಟಾಣಿ ಅಲ್ಲೇ ಕಿಟಕಿ ಹತ್ರ ಕಿವಿಇಟ್ಟು ಕೇಳತ್ತೆ. ಮೂಡಲ - ಪಡುವಲ - ಬಡಗಲ - ತೆಂಕಲ ಇವು ನಾಕು ದಿಕ್ಕುಗಳು. ಇವಕ್ಕೇ ಪೂರ್ವ ಪಶ್ಚಿಮ ಉತ್ತರ ದಕ್ಷಿಣ ಅಂತಲೂ ಅಂತಾರೆ ಅಂತ ಪೇಟ ಕಟ್ಟಿಕೊಂಡವರೊಬ್ಬ್ರು ಹೇಳ್ತಿದ್ರೆ, ಮಕ್ಕಳೂ ಅದೇ ಮಾತನ್ನೆ ತಿರುಗಿ ತಿರುಗಿ ಹೇಳ್ತಿದ್ದು ಕೇಳಿಸ್ತು. ಅಷ್ಟರಲ್ಲೇ, ಪೇಟದವರು, ಹೋಗಿ ಮಕ್ಳಾ , ಇನ್ನು ಮನೇಗೆ ಹೋಗಿ ಊಟ ಮಾಡೀ ಅಂತ ಇದ್ದಾಗ ಕರಡೀ ಮರಿಗೆ ಯಾರಾದ್ರೂ ನೋಡಿದ್ರೆ ಅಂತ ಭಯವಾಗಿ ಓಟ ಕಿತ್ತಿತು.
ಅತ್ಲಾಗಿ ಅಮ್ಮ ಕರಡೀಗೆ ಜೀವವೇ ಬಾಯಿಗೆ ಬಂದಿತ್ತು. ಮಗು ಎಲ್ಲಾದ್ರೂ ಹೋಗಿ ಏನಾದ್ರೂ ಅಪಾಯ ಮಾಡಿಕೊಂಡರೆ ಅಂತ. ವಾಪಸ್ ಬಂದ ಮಗುವಿಗೆ ಒಂದು ಕೋಪದಲ್ಲಿ ಏಟು ಕೊಟ್ಟು, ಆಮೇಲೆ ಮುದ್ದು ಮಾಡಿ, ಹಾಗೆಲ್ಲ ಮಾಡ್ಬಾರ್ದು ಮರೀ, ನಮ್ಮ ಮನೆ ಈ ಗುಡ್ಡ. ನಮ್ಮ ಮನೆಯಲ್ಲಿ ನಾವೇ ರಾಜರು. ಹೊರಗೆ ಹೋದರೆ ನಮಗೆ ಕಷ್ಟ ಅಂತ ಒಳ್ಳೇ ಮಾತಲ್ಲಿ ತಿಳೀಹೇಳಿ, ಇನ್ಯಾವತ್ತೂ ಹಾಗೆ ಹಳ್ಳೀಗೆ ಹೋಗ್ಬಾರ್ದು ಅಂತ ಮಾತು ತೊಗೋತು.
ನ್ಯುಮರಾಲಜಿ ಮೂಲಕ ನಿಮ್ಮ ನೆಚ್ಚಿನ ನಾಯಕ ಯಾರು ಅಂತ ತಿಳಿದು ಕೊಳ್ಳಿ!
ಸೀಗೇಗುಡ್ಡದಲ್ಲೊಂದು ಕರಡಿ ಸಂಸಾರ - ಭಾಗ ೨
ಮೊದಲನೇ ಭಾಗದಿಂದ ಮುಂದುವರೆದಿದೆ .....
ಮೂರು ದಿನದಿಂದ ಅಣ್ಣ ಹೇಳಿದ ವಿಚಾರ ಪುಟಾಣೀಗೆ ಕೊರೀತಾನೇ ಇತ್ತು. ಅಣ್ಣ ಬರೆದ ಹಾಗೇ ತಾನೂ ಚಿತ್ರಗಳನ್ನ ಬರೆದು ಬರೆದು ನೋಡ್ತು. ಆದ್ರೆ ಯಾಕೋ ಬಗೆ ಹರೀಲೇ ಇಲ್ಲ. ಉತ್ತರಕ್ಕೆ ಹೋಗ್ತಾ ಹೋಗ್ತಾ ಉತ್ತರ ಧ್ರುವ ಸಿಕ್ಕತ್ತೆ. ಅಲ್ಲಿ ನಮ್ಮ ದಾಯಾದಿಗಳಿದಾರಂತೆ. ಅಲ್ಲಿ ತುಂಬ ಚಳಿಯಂತೆ ಅನ್ನೋ ವಿಷಯ ಮಾತ್ರ ಮನದಟ್ಟಾಗಿತ್ತು.
ಇವತ್ತು ಕೇಳಿ ಹೇಗಾದ್ರೂ ತಿಳ್ಕೊಳ್ಲೇ ಬೇಕು ಅಂತ ಅಣ್ಣ ಅಣ್ಣನ್ನ ಇವತ್ತು ಮತ್ತೆ ಕೇಳ್ತು.
ಸರಿ. ಅಪ್ಪ ಕರಡಿ ಒಂದು ಚಿತ್ರ ಹಾಕಿ ತೋರಿಸ್ತು ಮೊದ್ಲಿಗೆ.

"ನೋಡು ಪುಟ್ಟಾ, ನಾವು ಕೂತ್ಕೊಂಡಾಗ, ನಮಗೆ ಆಕಾಶ ಒಂದು ಕವಿಚಿದ ಬಾಂಡಲೆ ಹಾಗೆ ಕಾಣತ್ತೆ. ಮತ್ತೆ ಅವತ್ತು ಬೆಟ್ಟದ ಮೇಲಿಂದ ನೋಡಿದಾಗ ಆಕಾಶ ಭೂಮಿ ಸೇರೋ ಜಾಗ ನೋಡಿದ್ದು ನೆನಪಿದೆಯಾ? ಈಗ ನೋಡು, ಸೀಗೇ ಗುಡ್ದಲ್ಲಿ, ಅಥವಾ ಮಾಲೇಕಲ್ಲಿನಲ್ಲಿ ಕಾಣೋ ದಿಕ್ಕುಗಳನ್ನು ಹೀಗೆ ತೋರ್ಸಿದೀನಿ ಚಿತ್ರದಲ್ಲಿ. ಗೊತ್ತಾಯ್ತಾ?" ಅಂತು ಅಪ್ಪ.
"ಓಹೋ, ಧ್ರುವ ನಕ್ಷತ್ರದ ಕಡೆಗೆ ಹೋದರೆ ಉತ್ತರ. ಅದಕ್ಕೆ ಎದುರುಗಡೆ ಹೋದರೆ ದಕ್ಷಿಣ. ಹಾಗೇ ದಕ್ಷಿಣದ ಕಡೆಗೆ ನಾನು ನೋಡ್ತಾ ಕೂತಿರೋ ಹಾಗೆ ಬರ್ದಿದೀರಾ ಅಲ್ವ ಅಣ್ಣ ಚಿತ್ರನಾ? ಆಗ ನನ್ ಬಲ್ಗೈ ಪಶ್ಚಿಮ, ಎಡಗೈ ಪೂರ್ವ" ಅಂತು ಪುಟಾಣಿ. Read more about ಸೀಗೇಗುಡ್ಡದಲ್ಲೊಂದು ಕರಡಿ ಸಂಸಾರ - ಭಾಗ ೨
ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
ಕೋಳೂರಿನ ತಿಮ್ಮಪ್ಪನ ನಾಮ ಪ್ರಸಂಗ
"ಈ ಜಗವೇ ಒಂದು ಕೋಕಿಯ ಮಂದಿರ ನಾವೆಲ್ಲಾ ಬರೇ ಕೋತಿಗಳಯ್ಯಾ..." ಅಂತ ತಾರಕ ಸ್ವರದಲ್ಲೇ ಯಾವಾಗ ಹಾಡುತ್ತಾ ಸಾಗಿದನೋ ನಮ್ಮ ಈ ಕಥಾ ನಾಯಕ ಕೋತಿ ಅಂದರೆ ಆವತ್ತು ಈತ ತನ್ನ ಧರ್ಮದ ಪತ್ನಿ ಕೋಕಿಯಲ್ಲಿ ಜಗಳ ಮಾಡಿಕೊಂಡಿರುತ್ತಾನೆ ಅಂತಾನೇ ಅರ್ಥ! ಆದಿನವೆಲ್ಲಾ ಈತನ ಹೊಟ್ಟೆಯಿಂದ ಬರುವುದು ಈ ಹಾಡು ಮಾತ್ರ. ಅಚ್ಚರಿ ಪಡದಿರಿ ನಿಮ್ಮ ತಲೆಯಲ್ಲಿ ಉಧ್ಭವಿಸಿದ ಪ್ರಶ್ನೆಗೆಲ್ಲಾ ನನ್ನ ಸಿಧ್ಧ ಉತ್ತರವಿದ್ದೇ ಇದೆ. ಕೋ.ತಿ. ಅಂದರೆ ಕೋಳೂರಿನ ತಿಪ್ಪಯ್ಯಗೆ ಅವನ ಪತ್ನಿಯ (ಕಿಚ್ಚವ್ವನ) ಅಣ್ಣಂದಿರು ವರದಕ್ಷಿಣೆಯಿಲ್ಲದೇ ಜಬರ್ದಸ್ತಿ ಮದುವೆ ಮಾಡಿಸಿಕೊಟ್ಟುದರಿಂದ ಅವಳು ಧರ್ಮದ ಪತ್ನಿಯೇ ಆದಳಲ್ಲ್ವಾ?. ಇನ್ನು ದಿನ ಪೂರಾ ಏನೂ ತಿನ್ನದೇ ಇದ್ದರೆ ಹೊಟ್ಟೆಯಿಂದಲ್ಲದೇ ಇನ್ನೆಲ್ಲಿಂದ ಹಾಡು ಬರುತ್ತೆ? Read more about ಕೋಳೂರಿನ ತಿಮ್ಮಪ್ಪನ ನಾಮ ಪ್ರಸಂಗ
ದಾರಿ ಯಾವುದಯ್ಯಾ ವೈಕುಂಠಕೆ?
ನನ್ನ ಕೇಳಿದ್ರೆ ’ದಾರಿಯಾವುದಯ್ಯಾ, ವೈಕುಂಠಕೆ ದಾರಿತೋರಿಸಯ್ಯ’ ಅಂತ ಕೇಳ್ಬೇಕಾಗೇ ಇಲ್ಲ. ಯಾಕಂತಂದ್ರೆ, ಸಂಸ್ಕೃತದಲ್ಲೊಂದು ಮಾತೇ ಇದೆಯಲ್ಲ? Read more about ದಾರಿ ಯಾವುದಯ್ಯಾ ವೈಕುಂಠಕೆ?
ಹೊಸವರ್ಷದ ಮುನ್ನಾದಿನ ಒಂದಷ್ಟು ಪುಡಿ ನೆನಪುಗಳು
ಮತ್ತೊಂದು ವರ್ಷ ಕಳೆದು ಹೋಯ್ತು. ಸಾಧಿಸಿದ್ದೇನಾದ್ರೂ ಉಂಟೇ ಅಂದ್ರೆ ಉತ್ತರಕ್ಕೆ ತಡಕಾಡಬೇಕು. ಅದಿರಲಿ, ಎಲ್ಲಾದನ್ನೂ ನಾವು ಯಾವುದಾದರೂ ಸಾಧನೆಗಾಗಿ ಅಂತಲೇ ಯಾಕೆ ಮಾಡ್ಬೇಕು? ನಾಕು ಜನರಿಗೆ ತೊಂದ್ರೆ ಆಗದ್ಹಾಗೆ ನಡ್ಕೊಂಡು, ಆಗೋದಾದ್ರೆ ಒಂದೋ ಎರಡೋ ಒಳ್ಳೇ ಕೆಲಸ ಮಾಡಿ, ಕಷ್ಟದಲ್ಲಿದ್ದೋರಿಗೆ ಅಯ್ಯೋ ಪಾಪ ಅಂದು ಕೈಲಾದ ಸಹಾಯ ಮಾಡಿದ್ರೆ ಸಾಕಲ್ಲಪ್ಪ? ಎತ್ತೆತ್ತರದ ಗುರಿಗಳನ್ನ ಇಟ್ಟುಕೊಂಡಿರುವವರಿಗೆ ಅದು ಸಾಕು ಅನ್ನಿಸದಿರಬಹುದು. ಆದರೆ ನನ್ನ ಮಟ್ಟಿಗೆ ಅದು ಸಾಕು. ಯಾಕಂದ್ರೆ, ಬಸವಣ್ಣೋರು ಹೇಳಿರೋದು ಕೇಳಿದ್ದೀವಲ್ಲ?
ಲೋಕದ ಡೊಂಕ ನೀವೇಕೆ ತಿದ್ದುವಿರಿ?
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ.
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ.
ಹಾಗಿದ್ದ ಮೇಲೆ, ನಮ್ಮ ನಮ್ಮ ತನು-ಮನಕ್ಕೆ ಹಿತವಾಗೋ ಕೆಲಸ ನಾವು ಮಾಡ್ಕೊಂಡು ಹೋಗ್ತಾ ಇದ್ರೆ ಸಾಕು. ಈ ವರ್ಷ ಅಂತಾ ಒಂದು ಕೆಲಸದಲ್ಲಿ ಕೈಯಿಟ್ಟ ನೆಮ್ಮದಿ ನನಗಿದೆ. ಹಿಂದೆ ಯಾವಾಗಲೋ ಒಂದು ಪೇಪರ್ ಬರೆಯೋವಾಗ ದಾಸಸಾಹಿತ್ಯ ಅಂತರ್ಜಾಲದಲ್ಲಿ ಸಿಗೋ ಹಾಗೆ ಮಾಡ್ಬೇಕು ಅನ್ನೋದು ನನ್ನ ಕನಸು ಅಂತ ಬರೆದಿದ್ದರ ನೆನಪಿದೆ. ಆದರೆ ಆ ಗಳಿಗೆಯಲ್ಲಿ ನನಗೆ ಅದಕ್ಕೆ ಯಾವರೀತಿ ತಾಂತ್ರಿಕ ಪರಿಣತಿ ಬೇಕಾಗುತ್ತೆ ಅನ್ನೋದೂ ಕೂಡ ಗೊತ್ತಿರಲಿಲ್ಲ. ಆದರೆ ಆ ಪರಿಣತಿ ನನ್ನಲ್ಲಿಲ್ಲದಿದ್ದರೂ, ಒಂದಲ್ಲ ಒಂದು ದಿವಸ ಕನಸು ನನಸು ಮಾಡಬೇಕು ಅನ್ನೋ ಆಸೆಯಂತೂ ಇತ್ತು. Read more about ಹೊಸವರ್ಷದ ಮುನ್ನಾದಿನ ಒಂದಷ್ಟು ಪುಡಿ ನೆನಪುಗಳು
ಮೂರು ತಿ೦ಗಳ ನ೦ತರ ಪುನ: ಸ೦ಪದಕ್ಕೆ.
ಹೊಸವರ್ಷಕ್ಕೊಂದಾದ್ರೂ ಬದ್ಲಾವಣೆ ಬೇಡ್ವಾ?
ಹಂಸನಾದ
ನಕ್ಷತ್ರಗಳಿಗೆ ಹೆಸರು ಕೊಟ್ಟಿರೋದು ಹೇಗೆ?
ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ
ಬಂದೆವಯ್ಯ ಗೋವಿಂದ ಶೆಟ್ಟಿ!
ನನಗೆ ದಾಸರ ರಚನೆಗಳು ಯಾಕೆ ಇಷ್ಟ ಅಂತ ಮತ್ತೆ ಮತ್ತೆ ಹೇಳೋದಿಲ್ಲ. ಎಷ್ಟೋ ಸಲ ಹೇಳಿದ್ದೀನಿ. ಆದ್ರೆ, ಒಂದೊಂದು ಹೊಳಹುಗಳನ್ನ ಕಂಡಾಗ, ಅದರ ವಿಷಯ ಹಂಚಿಕೊಳ್ಳೋಣ ಅನ್ನಿಸುತ್ತೆ.
ಒಂದಷ್ಟು ದಿನದ ಹಿಂದೆ ಪುರಂದರ ದಾಸರು ಹೇಳೋರೋ ತಿರುಪತಿ ತಿಮ್ಮಪ್ಪನ ದೋಸೆ ಹೋಟೆಲ್ ಗಳ ವಿಷಯ ಬರೆದಿದ್ದೆ.ಇವತ್ತು ಕನಕ ದಾಸರ ಒಂದುರಚನೆ. Read more about ಬಂದೆವಯ್ಯ ಗೋವಿಂದ ಶೆಟ್ಟಿ!
ವಾರದ ಕೊನೆಯಲ್ಲಿ ನನ್ನ ಓದು
ನಿನ್ನಿ ಆಸ್ಕರ್, ನಂದೂ ಎರಡು ಮಾತು...
ಸುಳ್ಳೇ ನಮ್ಮನೆ ದೇವರು
ದೇವರ ಬಗ್ಗೆ ಒಂದೆರಡು ಬರಹಗಳನ್ನ -ಅನಿವಾಸಿ ಯವರದ್ದು, ವಿನಾಯಕ ಮುತಾಲಿಕರದ್ದು - ಇಲ್ಲೇ ಓದಿದೆ. ಹಿಂದೆ ಎ.ಎನ್.ಮೂರ್ತಿರಾಯರ 'ದೇವರು' ಪುಸ್ತಕವನ್ನೂ ಓದಿದ ನೆನಪಾಯಿತು. ದೇವರಿದ್ದಾನೆಯೇ ? ಇಲ್ಲವೇ? ಆದರೆ ಕಷ್ಟಕ್ಕೆ ಸಿಲುಕಿದಾಗ ಹಾಗೊಬ್ಬ ಸರ್ವಶಕ್ತ ಇದ್ದರೆ ಒಳ್ಳೆಯದೆಂದು ಅನಿಸುವುದು ಸುಳ್ಳಲ್ಲ. ಅದಕ್ಕೇ ಇರಬೇಕು 'ಕರುಣಾಳು ಬಾ ಬೆಳಕೆ ಮಸುಕಿದೀ ಮಬ್ಬಿನಲಿ ಕೈಹಿಡಿದು ನಡೆಸೆನ್ನನು' ಎಂದು ಬೇಡಿಕೊಳ್ಳುವುದು. ದೇವರನ್ನು ನಮ್ಮ, ಪರರ ಒಳ್ಳೆಯ ಗುಣದಲ್ಲಿ ಕಾಣು ಅಂತಲು ಹೇಳುತ್ತಾರೆ. ಅದೇ ತರಹ, ದೇವರು ತಾನು ಎಲ್ಲೆಲ್ಲೂ ಇರಲಾರದ್ದಕ್ಕೆಂದೇ ಅಮ್ಮಂದಿರನ್ನು ಸೃಷ್ಟಿಸಿದ ಅನ್ನುವ ಮಾತೂ ನಾವೆಲ್ಲ ಕೇಳಿರುವ್ದೇ ಆಗಿದೆ.
ಅದಿರಲಿ. ಶಿಶುವಿನಹಾಳದ ಷರೀಫರ 'ಕೋಡಗನ ಕೋಳಿ ನುಂಗಿತ್ತ' ಅನ್ನುವ ಹಾಡು ಒಂದಿಪ್ಪತ್ತು ವರ್ಷಗಳಿಂದ ಬಹಳ ಹೆಸರುವಾಸಿಯಾಗಿದೆ. ಆಗದ ಸಂಗತಿಗಳನ್ನೇ ಹೇಳುತ್ತಾ ಕೇಳುಗರನ್ನು ಗೋವಿಂದ ಗುರುವಿನ ಪಾದದ ಅಗಾಧತೆಯನ್ನು ಮನವರಿಕೆ ಮಾಡಿಕೊಡುವಂತಹ, ಒಂದು ಒಗಟಿನಂತಹ ಹಾಡಿದು. ಇಂತಹ ಹಾಡುಗಳನ್ನು ಬರೆದವರಲ್ಲಿ ಷರೀಫರು ಮೊದಲಿಗರೇನೂ ಅಲ್ಲ. ಹರಿದಾಸರು, ಶಿವಶರಣರು ಈ ರೀತಿಯ ಹಲವು ರಚನೆಗಳನ್ನ ಬರೆದಿರುವುದು ತಿಳಿದ ವಿಷಯವೇ. Read more about ಸುಳ್ಳೇ ನಮ್ಮನೆ ದೇವರು
ಹೆಂಡ್ತೀರ್ ಮಾತು ಗಂಡಂದ್ರು ಯಾಕೆ ಕೇಳ್ತಾರೆ?
ಒಂದಿವಸ ಒಬ್ಬರು ಹೇಳ್ತಿದ್ದು ಕೇಳಿದೆ. ಗಂಡಸ್ರಿಗೆ ಮದ್ವೆ ಆಗೋ ತನಕ, ಯಾವಾಗ ಏನ್ಕೆಲ್ಸ ಮಾಡ್ಬೇಕು ಅಂತ ತಿಳೀದೆ ನೂರಿಪ್ಪತ್ತೆಂಟಕ್ಕೆ ಕೈಹಾಕ್ತಿರ್ತಾರೆ ಅಂತ. ನಾನೂ ಮದ್ವೆ ಆಗಿರೋನೇ, ಆದ್ರೂ ನೂರಿಪ್ಪತ್ತೆಂಟು ಕೆಲಸ ಕೈಗಂಟ್ಕೊಂಡಿರತ್ತಲ್ಲ ಅಂತ ನನಗನಿಸ್ತು. ಅದಕ್ಕೇ ಅವರನ್ನ ಹಾಗೇ ಕೇಳೂ ಬಿಟ್ಟೆ. Read more about ಹೆಂಡ್ತೀರ್ ಮಾತು ಗಂಡಂದ್ರು ಯಾಕೆ ಕೇಳ್ತಾರೆ?
ಮತ್ತೊಂದು ಗ್ರಹಕೂಟ
ಕನ್ನಡಕಂದರು ಚಂದ್ರ ಶುಕ್ರ ಮಂಗಳ ಯುತಿ ಮುಂದಿನ ವಾರದಲ್ಲಿ ಬರುವುದರ ಬಗ್ಗೆ ಬರೆದಿದ್ದಾರೆ. ಆದಿನದ ಆಕಾಶ ಹೇಗಿರತ್ತೆ ಅಂತ ತೋರಿಸೋಣ ಅಂತ ಈ ಬರಹ. Read more about ಮತ್ತೊಂದು ಗ್ರಹಕೂಟ
ವೋಲ್ವೊದೊಳ್ಗಣ ಜಾಪಾನ್!
ಕೊನೆ ವಾರ ತುಂಬಾ ಮುಖ್ಯ ಅನ್ನುವಂತಹ ವೈಯಕ್ತಿಕ ಕೆಲ್ಸ ಇತ್ತು. ಒಂದು ವಾರ ಪೂರ್ತಿ ಅಫೀಸಿಂದ ದೂರನೆ ಇದ್ದೆ. ನಡುವೆ ಎರಡು ದಿನ ಮೀಟಿಂಗ್ ( ಅದೂ ಕ್ಯಾನ್ಸಲ್ ಆಯ್ತು ;) ) ಅಂತ ಆಫೀಸ್ ಕಡೆ ಮುಖ ಹಾಕಿದ್ ಬಿಟ್ರೆ ನನ್ನ ರಜ ಎರಡು ವಾರ ಅಂತ ಲೆಕ್ಕಾನೆ! :)
................ Read more about ವೋಲ್ವೊದೊಳ್ಗಣ ಜಾಪಾನ್!
ಊಟದ ಸಮಯ
ಏನ್ ಜನಾನೋ ಯಪ್ಪಾ... ಊಟ ಮಾಡೋ ಟೈಮ್ ಅಲ್ಲಿ ಇಡ್ಲಿ ತಿಂತಾ ಕೂತಿದಾರೆ... ಅಂತ ಯೋಚಿಸುತ್ತಾ ಅಲ್ಲಿ ತಿನ್ನುತ್ತಾ ಕುಳಿತವ್ರನ್ನ ನೋಡ್ತಾ ವೆಜ್ ಪಾರ್ಕ್ ಒಳಗೆ ಹೋದೆ.
ಕಾಲಕೆಳಗೆ ಕವಿಗಳು
ಶವಗಾರದಲ್ಲಿ ರಾತ್ರಿ
ಶವಗಾರದಲ್ಲಿ ರಾತ್ರಿ Read more about ಶವಗಾರದಲ್ಲಿ ರಾತ್ರಿ
ಸಂಸಾರ ತಾಪತ್ರಯಗಳು
ಒಂದಷ್ಟು ದಿನಗಳಿಂದ ಏನನ್ನೂ ಹೆಚ್ಚಿಗೆ ಬರೆಯೋಕೆ ಆಗ್ತಿಲ್ಲ. ಹಾಗಂತ ನಾನೇನು ದೊಡ್ಡ ಬರಹಗಾರ ಅಂತ ಅನ್ನೋ ಭ್ರಮೆ ಏನೂ ನನ್ನನ್ನು ಆವರಿಸಿಲ್ಲ. ಆಗ ಈಗ ಏನೋ ಒಂದು ನಾಕು ನಾಲು ಬರೆದರೆ ಮನಸ್ಸಿಗೂ ಹಗುರ ಅಷ್ಟೇ. ಯಾಕೆ ಬರೀಲಿಲ್ಲ ಅಂದ್ರೆ ಅದಕ್ಕೇನು ದೊಡ್ಡ ಕಾರಣ ಇಲ್ಲ ಬಿಡಿ. ನೂರೆಂಟು ಕೆಲಸ ಕಾರ್ಯ, ಸಂಸಾರ ತಾಪತ್ರಯಗಳು ಇದ್ದಿದ್ದೇ ಅಲ್ವೇ ನನಗೂ ನಿಮಗೂ ಎಲ್ಲರಿಗೂ?
ಕಳ್ಳ ಹೊಳೆ ಮತ್ತು ಹೇಮಾವತಿ
ನಮ್ಮೂರ ಹತ್ತಿರ ಹರಿಯೋ ಯಗಚೀನ ಕಳ್ಳ ಹೊಳೆ ಅಂತಿದ್ದರಂತೆ. ಯಾಕಂದ್ರೆ, ಅದರ ಹರಿವು ಸಣ್ಣದು, ಆದರೆ, ಎಲ್ಲೋ ಇಪ್ಪತ್ತು ಮೂವತ್ತು ಮೈಲಿ ಹಿಂದೆ ಮಳೆಯಾದರೆ ಯಗಚಿಯಲ್ಲಿ ಇದ್ದಕ್ಕಿದ್ದಂತೆ ನೆರೆ ಬಂದು ಬಿಡುತ್ತಿತ್ತಂತೆ. ಅಂತಹ ಸಂದರ್ಭದಲ್ಲಿ, ಹೊಳೆಯ ಪಾತ್ರದಲ್ಲಿ ಆಟವಾಡುತ್ತಿದ್ದ ಮಕ್ಕಳು, ದನ ಕರುಗಳೆಲ್ಲ ಕೊಚ್ಚಿಕೊಂಡು ಹೋಗುತ್ತಿದ್ದವಂತೆ. ಯಾವಾಗ ನೀರು ಬರುತ್ತೆ ಅನ್ನೋದು ಗೊತ್ತಾಗದೇ, ಕಳ್ಳನ ತರಹ ಜನ ಜಾನುವಾರನ್ನೆಲ್ಲ ನುಂಗಿಕೋತಾ ಇದ್ದಿದ್ದರಿಂದಲೇ ಇದು ಕಳ್ಳ ಹೊಳೆ ಅಂತ ಹೆಸರಾಗಿತ್ತಂತೆ. ಇವೆಲ್ಲ ನಾನು ಗೊರೂರು ರಾಮಸ್ವಾಮಿ ಅಯ್ಯಂಗಾರರ ಪುಸ್ತಕದಲ್ಲಿ ಓದಿದ್ದ ವಿಷಯಗಳು.
Read more about ಕಳ್ಳ ಹೊಳೆ ಮತ್ತು ಹೇಮಾವತಿ
ಹಿತ ವಸಂತ
ವೇದ ಸುಳ್ಳಾದರೂ ಗಾದೆ ಸುಳ್ಳಲ್ಲ ಅನ್ನೋ ಗಾದೆ ನೀವು ಕೇಳೇ ಇರ್ತೀರ. ಹಾಗೇ ಒಬ್ಬರಿಗಿಂತ ಇಬ್ಬರು ಲೇಸು ಅನ್ನೋದನ್ನೂ ಕೂಡ. ಮೊದಲನೆಯದು ನಿಜವಾದರೆ, ಎರಡನೆಯದಂತೂ ನಿಜವಾಗಲೇಬೇಕಲ್ಲ! ಒಂದು ಸಮಸ್ಯೆಯನ್ನು ಬಿಡಿಸ ಹೊರಟಾಗ, ಒಬ್ಬರೇ ತಲೆ ಕೆಡಿಸ್ಕೊಳ್ಳೋದಕ್ಕಿಂದ ಇಬ್ಬರೋ ಮೂವರೋ ಸೇರಿದರೆ ವಾಸಿ ಅನ್ನೋದನ್ನ ನಾವೆಲ್ಲ ಕಂಡುಕೊಂಡೇ ಇರ್ತೀವಿ.
ಮೊನ್ನೆ ಹಾಗೇ ಆಯಿತು. ಯಾವುದೋ ಪುಸ್ತಕವನ್ನೋದುತ್ತಿದ್ದಾಗ ಅದರಲ್ಲಿ ಕಾಳಿದಾಸನ ಒಂದು ಪದ್ಯದ ಪ್ರಸ್ತಾಪ ಇತ್ತು. ಋತು ಸಂಹಾರದ (೬-೨) ಈ ಕೆಳಗಿನ ಪದ್ಯ ಓದಿದ ಕೂಡಲೆ ಮನಸ್ಸಿಗೆ ಒಮ್ಮೆಗೇ ನೆಟ್ಟುಬಿಟ್ಟಿತು. Read more about ಹಿತ ವಸಂತ





