ದಸರ
ನವರಾತ್ರಿಯ ಹತ್ತನೇ ದಿನ
October 21, 2007 - 3:05am — hamsanandiಇಂದು ನವರಾತ್ರಿಯ ಹತ್ತನೇ, ಹಾಗೂ ಕಡೆಯ ದಿವಸ. ವಿಜಯ ದಶಮಿ. ರಾಮ ರಾವಣನನ್ನು ಕೊಂದು, ವಿಜಯ ಪಡೆದ ದಿನವೆಂದೂ, ದೇವಿ ಚಾಮುಂಡೇಶ್ವರಿ ಮಹಿಷಾಸುರನನ್ನು ಸಂಹರಿಸಿದ ದಿನವೆಂದೂ ನಾವು ಈ ದಿನವನ್ನು ಆಚರಿಸುತ್ತೇವೆ. ಮುಂದೆ ಓದಿ »

ನವರಾತ್ರಿಯ ಎಂಟನೇ ದಿನ
October 19, 2007 - 10:04pm — hamsanandiಇಂದು ನವರಾತ್ರಿಯ ಎಂಟನೇ ದಿನ. ದುರ್ಗಾಷ್ಟಮಿ. ಬಂಗಾಳದಲ್ಲಿ ಇಂದು ದುರ್ಗಾ ಪೂಜೆಯ ಸಂಭ್ರಮವೋ ಸಂಭ್ರಮ. ಅಂದಹಾಗೆ, ಸಂಗೀತ ಪ್ರಪಂಚಕ್ಕೆ ಬಂದಾಗ, ಮೂರು ರಾಜ್ಯಗಳ ಹೆಸರುಗಳು ರಾಗಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅವು ಕರ್ನಾಟಕ, ಬಂಗಾಳ, ಮತ್ತು ಗುಜರಾತ್. ಇವುಗಳ ಬಗ್ಗೆ ಮತ್ತೊಮ್ಮೆ ಯಾವಾಗಲಾದರೂ ಬರೆಯುವೆ. ಮುಂದೆ ಓದಿ »

- hamsanandi ರವರ ಬ್ಲಾಗ್
- Login or register to post comments
- 500 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ನವರಾತ್ರಿಯ ಏಳನೇ ದಿನ
October 18, 2007 - 10:48pm — hamsanandiಇವತ್ತು ನವರಾತ್ರಿಯ ಏಳನೇ ದಿನ. ಈ ದಿನ ತಲಕಾವೇರಿಯಲ್ಲಿ ತೀರ್ಥೋದ್ಭವವಾಗುವ ತುಲಾ ಸಂಕ್ರಮಣವೂ ಹೌದು. ನೃಪತುಂಗನ ಕಾಲದಿಂದಲೂ, ಕನ್ನಡನಾಡು ಕಾವೇರಿಯಿಂದ ಗೋದಾವರಿಯವರೆಗೆ ಎಂಬ ಹೇಳಿಕೆ ಇದೆ. ಕಾವೇರಿ ಕನ್ನಡಿಗರಿಗೆ, ಅದರಲ್ಲೂ ದಕ್ಷಿಣ ಕರ್ನಾಟಕದ ಭಾಗದವರಿಗೆ ಜೀವನದಿ ಎಂಬುದರಲ್ಲಿ ಎರಡುಮಾತಿಲ್ಲ. ಕಾವೇರಿ ಮತ್ತೆ ಅದಕ್ಕೆ ಸೇರಿಕೊಳ್ಳುವ ನದಿಗಳಾದ ಹೇಮಾವತಿ, ಲಕ್ಷ್ಮಣತೀರ್ಥ, ಶಿಂಷಾ, ಅರ್ಕಾವತಿ, ಕಣ್ವಾ, ಹಾರಂಗಿ ಮೊದಲಾದುವು ಮೈಸೂರು,ಹಾಸನ,ಕೊಡಗು, ಮಂಡ್ಯ, ತುಮಕೂರು, ಚಿಕ್ಕಮಗಳೂರು,ಬೆಂಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳ ಬಹುಪಾಲು ಭೂಮಿಗೆ ನೀರುಣಿಸುತ್ತವೆ. ಇಂತಹ ಮಹಾತಾಯಿ ಕಾವೇರಿಗೆ ಇಂದು ಮೊದಲು ನಮಿಸೋಣ.
ಇವತ್ತು ಈ ಮೊದಲ ಆರು ದಿನಕ್ಕಿಂತ ಸ್ವಲ್ಪ ಬೇರೆ. ಬೇರೆ ಸಂಗೀತಗಾರರು ಹಾಡಿದ, ದೇವಿಯ ಬಗ್ಗೆಯ ರಚನೆಯ ಕೊಂಡಿಗಳನ್ನು ಕೊಡುವ ಬದಲು ಇವತ್ತು ಒಂದು ಬದಲಾವಣೆ ಮಾಡಿದ್ದೇನೆ. ಕನ್ನಡದ ಮೂರು ಕವಿಗಳು ಸರಸ್ವತಿಯ ಬಗ್ಗೆ ಮಾಡಿರುವ ಸ್ತುತಿಯನ್ನು, ಹವ್ಯಾಸಿ ಸಂಗೀತಾಭ್ಯಾಸಿಯೊಬ್ಬರ ಕಂಠದಲ್ಲಿ ಕೇಳಿಸುವೆ. ಇದಕ್ಕೆ ಕಾರಣ, ಕನ್ನಡಕ್ಕೂ-ಕಾವೇರಿಗೂ ಇರುವ ಬಿಡಿಸದ ನಂಟು. ಹಾಗಾಗಿ, ಕಾವೇರಿ ಸಂಕ್ರಮಣದ ದಿನ ಒಂದಲ್ಲ, ಮೂರು ಕನ್ನಡ ರಚನೆಗಳು ಇವತ್ತು ಇಲ್ಲಿ ಕೇಳಿ ಬರುತ್ತಿವೆ. ಇವಕ್ಕೆ ಹಿನ್ನಲೆ ವಾದ್ಯಗಳ ಅಲಂಕಾರವಿಲ್ಲ. ಆದರೂ ಪರವಾಗಿಲ್ಲ, ಎನ್ನುವ ಭಾವನೆ ನನ್ನದು.
ಮೊದಲಿಗೆ ಕನ್ನಡದ ಮೊದಲ ಕಾವ್ಯ ಕವಿರಾಜ ಮಾರ್ಗದಿಂದ ಆಯ್ದ ಸರಸ್ವತೀ ಸ್ತುತಿಯಾದ ಒಂದು ಕಂದಪದ್ಯ:
ಶ್ರೀ ವಿಶದವರ್ಣೆ ಮಧುರಾ
ರಾವೋಚಿತೆ ಚತುರ ರುಚಿರ ಪದರಚನೆ ಚಿರಂ
ದೇವಿ ಸರಸ್ವತಿ ಹಂಸೀ
ಭಾವದಿ ಕೂರ್ತು ನೆಲೆಗೊಳ್ಗೆ ಮನ್ಮಾನಸದೊಳ್ ಮುಂದೆ ಓದಿ »

ನವರಾತ್ರಿಯ ಆರನೇ ದಿನ
October 18, 2007 - 3:07am — hamsanandiಈ ದಿವಸ ನವರಾತ್ರಿಯ ಆರನೇ ದಿನ. ಹತ್ತುದಿನಗಳ ಹಬ್ಬದಲ್ಲಿ, ಅರ್ಧಭಾಗ ಕಳೆದಿದೆ. ಕೆಲವರು ಸರಸ್ವತೀ ಪೂಜೆಯನ್ನು
ನವರಾತ್ರಿಯ ಒಂಬತ್ತನೇ ದಿನ ಬರುವ ಮಹಾನವಮಿಯಂದು ಮಾಡಿದರೆ, ಮತ್ತೆ ಕೆಲವರು, ನವರಾತ್ರಿಯಲ್ಲಿ ಎಂದು ಚಂದ್ರ
ಮೂಲಾ ನಕ್ಷತ್ರದ ಬಳಿ ಇರುತ್ತಾನೋ, ಆ ದಿನ ಮಾಡುತ್ತಾರೆ. ಇದು ಸಾಧಾರಣವಾಗಿ, ನವರಾತ್ರಿಯ ಆರನೇ ಅಥವಾ
ಏಳನೆಯ ದಿನ ಬರುತ್ತದೆ.

- hamsanandi ರವರ ಬ್ಲಾಗ್
- Login or register to post comments
- 544 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ನವರಾತ್ರಿಯ ಐದನೆಯ ದಿನ
October 17, 2007 - 2:41am — hamsanandiಇವತ್ತು ನವರಾತ್ರಿಯ ಐದನೆಯ ದಿನ. ಇಂದು ಸಂಜೆ ತಿರುವನಂತಪುರದ ಪದ್ಮನಾಭಸ್ವಾಮಿ ದೇವಾಲಯದ ಪಕ್ಕದಲ್ಲಿರುವ ನವರಾತ್ರಿ ಮಂಡಪದಲ್ಲಿ ಪ್ರಮುಖವಾಗಿ ವಿಸ್ತರಿಸುವುದು ಭೈರವಿ ರಾಗ. ಮತ್ತೆ ಅದರಲ್ಲಿ, ಸ್ವಾತಿ ತಿರುನಾಳ್ ಮಹಾರಾಜರ ಜನನೀ ಮಾಮವ ಮೇಯೆ ಎಂಬ ಕೃತಿಯನ್ನು ಹಾಡಲಾಗುತ್ತೆ. ಈ ರಚನೆಯನ್ನು ನೀವು ಮ್ಯೂಸಿಕ್ ಇಂಡಿಯಾ ತಾಣದಲ್ಲಿ, ಬಾಂಬೇ ಸಹೋದರಿಯರ ಧ್ವನಿಯಲ್ಲಿ, ಇಲ್ಲಿ ಕ್ಲಿಕ್ಕಿಸಿ ಕೇಳಬಹುದು.
ಭೈರವಿ ರಾಗ ಕರ್ನಾಟಕ ಸಂಗೀತಕ್ಕೆ ಸೀಮಿತವಾದ ರಾಗ - ಇದಕ್ಕೆ ಹತ್ತಿರವಾದ ರಾಗ, ಹಿಂದೂಸ್ಗಾನಿ ಸಂಗೀತದಲ್ಲಾಗಲಿ, ಅಥವಾ ಪ್ರಪಂಚದ ಬೇರೆ ಯಾವುದೇ ಸಂಗೀತದಲ್ಲೂ ಇದನ್ನು ಹೋಲುವ ರಾಗವಿಲ್ಲ. ನೀವು ತರಾಸು ಅವರ ಹಂಸಗೀತೆಯನ್ನು ಓದಿದ್ದರೆ, ಅದರ ಮೇಲೆ ಆಧಾರಿತವಾದ ಚಲನಚಿತ್ರವನ್ನು ನೋಡಿದ್ದರೆ, ಅದರಲ್ಲಿ ಬರುವ ಭೈರವಿ ವೆಂಕಟಸುಬ್ಬಯ್ಯನ ಪಾತ್ರ ನಿಮಗೆ ತಿಳಿದೇ ಇರುತ್ತೆ. ಇಲ್ಲಿ ಒಂದು ವಿಷಯವನ್ನು ಹೇಳಿಬಿಡುತ್ತೇನೆ. ಈ ಭೈರವಿ ವೆಂಕಟಸುಬ್ಬಯ್ಯ ತರಾಸು ಅವರ್ ಕಲ್ಪನೆಯ ಪಾತ್ರವೇ ಹೊರತು ಚಾರಿತ್ರಿಕ ವ್ಯಕ್ತಿಯಲ್ಲ. ಮುಂದೆ ಓದಿ »


RSS: