"ನೀವು ಲೋಕವನ್ನಾಗಲೋ, ಸಮಾಜವನ್ನಾಗಲೀ, ಪುರೋಹಿತಶಾಹಿಯನ್ನಾಗಲೀ ಬದಲಾಯಿಸಲು ಪ್ರಯತ್ನಿಸುವ ಅಗತ್ಯ ಖಂಡಿತ ಇಲ್ಲ. ನೀವು ಮತ್ತು ನಿಮ್ಮ ಮನಸ್ಸು ಪರಿವರ್ತನೆ ಆಗದೆ ಏನೂ ಬದಲಾಗುವುದಿಲ್ಲ"

— ಕುವೆಂಪು

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಮೈಸೂರು

KRS ನಲ್ಲಿ ತೆಗೆದ ಚಿತ್ರ

ಇದು ಮೂರ್ನಾಲ್ಕು ತಿಂಗಳ ಮುಂಚೆ KRS ನಲ್ಲಿ ತೆಗೆದ ಚಿತ್ರ. 

ಈಗ ನನ್ನ ಕ್ಯಾಮೆರಾ ಹಾಳಾಗಿದೆ, ರಿಪೇರಿಗೆ ಕೊಡಬೇಕು ಅಂದುಕೊಂಡೇ ಬಹಳ ದಿನಗಳಾಗಿವೆ...  ನಾ ತೆಗೆದ ಹಳೆಯ ಫೋಟೋಗಳನ್ನೊಮ್ಮೆ ನೋಡುತ್ತಿದ್ದಾಗ ಇದು ಸಿಕ್ಕಿತು  :)

 

 

ರಂಗಾಯಣದಲ್ಲೊಂದು ಸಂಜೆ

ಕಳೆದ ಭಾನುವಾರ, ಕೆಲ್ಸ, ಜೀವನದ ಮಧ್ಯ ತಲೆ ಕೆಡ್ಸಕೊಂಡು ಇದ್ದಾಗ ಸ್ನೇಹಿತರೊಬ್ರು
ಫೋನಾಯಿಸಿ ರಂಗಾಯಣಕ್ಕೆ ನಾನು ಹೋಗೇ ಇಲ್ಲ, ಸಂಜೆ ಹೋಗೋಣ ಅಂತಿದ್ದೀನಿ ಅಂದ್ರು. ಸರಿ,
ನಾನು ಬರ್ತೀನಿ ಅಂದೆ. ಸಂಜೆ ಹೊತ್ತಿಗೆ ಮತ್ತೊಬ್ಬ ಸ್ನೇಹಿತ ಬಂದು ನಾನು ಬರ್ತೀನಿ,
ಆದ್ರೆ ಈಗ್ಲೇ ಹೋಗ್ಬೇಕು ಕುಕ್ಕರಹಳಳಿ ಕೆರೆ ಸುತ್ತ ಒಂದು ವಾಕ್ ಮಾಡಿ ಹಾಗಿಂದಾನೇ
ಬರ್ತೀನಿ ಅಂದ್ರು.  ಮುಂದೆ ಓದಿ »

ಓಶೋ ಸನ್ನಿಧಿಯ ಮೂವರು ಧ್ಯಾನಿಗಳು

Osho Dhyana Kendra

ನಮಗೆಲ್ಲ ಅಂದರೆ ಶಿಬಿರಾರ್ಥಿಗಳಿಗೆ ಶಿಬಿರದ ಬಗ್ಗೆ, ಹೊಸದಾಗಿ ಕಟ್ಟಲಾಗಿರುವ ಧ್ಯಾನ ಸಭಾಂಗಣದ ಬಗ್ಗೆ ವಿವರಿಸಿದ ಮಹಾನುಭಾವರೇ ವೇಣುಗೋಪಾಲ್ ಎಂದು ತಿಳಿದದ್ದು ಅವರು ತಮ್ಮನ್ನು ಪರಿಚಯಿಸಿಕೊಂಡ ಮೇಲೆಯೇ.  ಮುಂದೆ ಓದಿ »

ಅಂಬಾರಿ ದಿನಚರಿ

ಆ ಇಂಜಿನೀಯರಿಂಗ್ ಕಾಲೇಜಿನ ಕಾರ್ಯಕ್ರಮ ಹೋದವರ್ಷ ತಪ್ಪಿಸಿಕೊಂಡಿದ್ದೆ. ಕೊನೆಯ ಘಳಿಗೆಯಲ್ಲಿ ಬರಲಾಗದು ಎಂದು ಹೇಳಿದ್ದರ ಅಳುಕು ಮನಸ್ಸಿನಲ್ಲಿತ್ತು. ಹೀಗಾಗಿ ಈ ಬಾರಿ ಅಲ್ಲಿಯ ಹುಡುಗರು ಎಂದಿನ enthusiasmನಲ್ಲಿಯೇ ಕರೆದಾಗ ಬರುತ್ತೇನೆ ಎಂದು ಒಪ್ಪಿಕೊಂಡದ್ದು. ಹೆಚ್ಚಿನಂತೆ ನಾನು ಕಾರ್ಯಕ್ರಮಗಳಿಗೆ ಏನಾದರೂ ಸಬೂಬು ಹೇಳಿ ಚಕ್ಕರ್ ಹೊಡೆಯೋದೇ ಹೆಚ್ಚು.  ಮುಂದೆ ಓದಿ »

ಮೈಸೂರಿನ ಓಶೋ ಸನ್ನಿಧಿಯಲ್ಲಿ "ಧ್ಯಾನಸ್ಥ" 3 ದಿನಗಳು

Osho

ಸೆಪ್ಟಂಬರ್ ತಿಂಗಳಲ್ಲೊಂದು ದಿನ ಎಂದೂ ಇಲ್ಲದವನು ಪುಸ್ತಕ ಮಳಿಗೆಯೊಂದರಲ್ಲಿ ಓಶೋ ವಚನ ಮಾಸಪತ್ರಿಕೆ ನೋಡಿದೆ. ಯಾಕೋ ಬಹಳ ದಿನಗಳ ನಂತರ ಓಶೋವನ್ನು ಓದುವ (ಅದೂ ಕನ್ನಡದಲ್ಲಿ) ಮನಸ್ಸಾಯಿತು. ಮನೆಗೆ ತಂದವನೇ ಕೆಲ ಪುಟಗಳನ್ನು ತಿರುವಿ ಹಾಕಿದೆ. Interesting ಅನ್ನಿಸ್ತು. Of course, ಓಶೋ ಬಗ್ಗೆ ಎಲ್ಲವೂ Interesting ಅಂತ ಅನ್ನಿಸಿಯೇ ಅನ್ನಿಸುತ್ತೆ. ಅಂಥಾ Interesting ವ್ಯಕ್ತಿ ಅವರು.  ಮುಂದೆ ಓದಿ »

ಹಿಮವದ್ ಗೋಪಾಲಸ್ವಾಮಿ ಬೆಟ್ಟ - ಪ್ರವಾಸ ಕಥನ

ಸುಮಾರು ೨-೩ ವರ್ಷಗಳಿಂದ ನಾವು ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹೋಗಬೇಕೆಂದುಕೊಂಡಿದ್ದರೂ, ಕಾರಣಾಂತರಗಳಿಂದ ಹೋಗಲಾಗಿರಲಿಲ್ಲ. ದಸರಾ ಸಮಯದಲ್ಲಿ, ನನ್ನ ಗೆಳೆಯನ ಮದುವೆ ಮೈಸೂರಿನಲ್ಲಿ ನಡೆಯಲಿದೆ ಎಂದು ಗೊತ್ತಾದಾಗ, ಇದೇ ಮೈಸೂರು ಮತ್ತು ಹಿಮವದ್ ಗೋಪಾಲನನ್ನು ನೋಡಲು ಸರಿ ಸಮಯ ಎಂದು ಲೆಕ್ಕ ಹಾಕಿದ ನಾವು, ಅದಕ್ಕೆ ತಕ್ಕ ಏರ್ಪಾಡುಗಳನ್ನು ಮಾಡಿದೆವು.  ಮುಂದೆ ಓದಿ »

ಸಂಗೀತ ನವರಾತ್ರಿ - ವಿಜಯ ದಶಮಿ

ಚಾಮುಂಡೇಶ್ವರಿ

ಇವತ್ತು ವಿಜಯ ದಶಮಿ.ನವರಾತ್ರಿಯ ಕಡೇ ದಿನ. ಮೈಸೂರಿನಲ್ಲಿ ಜಂಬೂಸವಾರಿಯಲ್ಲಿ  ದೇವಿ ಚಾಮುಂಡೇಶ್ವರಿಯ ಮೆರವಣಿಗೆ ಹೋಗುವ ಈ ದಿನ ಕೇಳಿಸಲು ವಾಗ್ಗೇಯಕಾರ ಮೈಸೂರು ವಾಸುದೇವಾಚಾರ್ಯರ ಬಿಲಹರಿ ರಾಗದ ಶ್ರೀ ಚಾಮುಂಡೇಶ್ವರಿ ಪಾಲಯ ಮಾಂ ಎನ್ನುವ ರಚನೆ ಈ ವರ್ಷದ ಸರಣಿಗೆ ಸರಿಯಾದ ಮಂಗಳವೆಂದು ನನ್ನ ಅನಿಸಿಕೆ.

ಮೈಸೂರು ವಾಸುದೇವಾಚಾರ್ಯರು ಅವರ ಸಂಗೀತ ಪರಂಪರೆಯಂತೆ ಸಂಸ್ಕೃತ ಮತ್ತು ತೆಲುಗು ಭಾಷೆಗಳಲ್ಲೇ ಕೃತಿಗಳನ್ನು ರಚಿಸಿದವರು. ಈ ಬಿಲಹರಿ ರಾಗದ ಕೃತಿಯಂತೂ ಸೊಗಸಾದ ರಚನೆ. ವಾಸುದೇವಾಚಾರ್ಯರ ಅತೀ ಪ್ರಸಿದ್ಧ ರಚನೆಗಲ್ಲಿದೂ ಒಂದು ಎಂದು ಖಂಡಿತ ಹೇಳಬಹುದು. ಈ ಹಾಡಿನ ಸಾಹಿತ್ಯ ಹೀಗಿದೆ.

ಶ್ರೀ ಚಾಮುಂಡೇಶ್ವರಿ ಪಾಲಯ ಮಾಂ ಕೃಪಾಕರಿ ಶಂಕರಿ
ಶೃತಜನಪಾಲಿನಿ ಮಹಾಬಲಾದ್ರಿವಾಸಿನಿ ಮಹಿಷಾಸುರ ಮರ್ದಿನಿ|| ಪಲ್ಲವಿ||  ಮುಂದೆ ಓದಿ »

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ

ನಾನು ಚಿಕ್ಕವನಿದ್ದಾಗ ನಮ್ಮೂರಲ್ಲಿ ನಮ್ಮನೇ ಹತ್ರ ಒಂದು ಮಂಟಪ ಇತ್ತು. ಅದನ್ನ ಕಟ್ಟಿಸಿದವರ್ಯಾರು ಅಂತ ಗೊತ್ತಿಲ್ಲ. ಅಂತೂ ದೇವ್ಸ್ಥಾನದ ಅಕ್ಕ ಪಕ್ಕ ಕೆಲವ್ಕಡೆ ಇರತ್ತಲ್ಲ ಆ ತರಹ ಮೂರು ಗೋಪುರದ ಮಂಟಪ. ಅಲ್ಯಾವ್ದೂ ದೇವಸ್ಥಾನ ಇಲ್ದಿದ್ರೂ,ಅಲ್ಲಿ ಆ ಮಂಟಪ ಯಾಕೆ ಕಟ್ಟಿದ್ರೋ? ಅಥವಾ ಮನೆ ಮಠ ಇಲ್ಲದೇ ಇರೋವ್ರಿಗೇ ಅಂತಲೇ ಯಾರಾದ್ರೂ ಪುಣ್ಯಾತ್ಮರು ಕಟ್ಟಿಸಿದ್ರೋ ಗೊತ್ತಿಲ್ಲ - ಅಂತೂ ಅಲ್ಲಿ ಪಾಪ ಭಿಕ್ಷೆ ಬೇಡಿ ಹೊಟ್ಟೆ ಹೊರೆದುಕೊಳ್ಳೋ ಎಷ್ಟೋ ಸಂಸಾರಗಳು ನೆಲೆ ನಿಂತಿದ್ರು.ಅವರಿಗೆ ವರ್ಷಕ್ಕೆ ಮುನ್ನೂರಅರವತ್ತೆರಡು ದಿನ ಆ ಮಂಟಪವೇ ಮನೆ. ಒಂದುವೇಳೆ ಮನೆಯಲ್ಲಿ ಏನೋ ಸಮಾರಂಭವೋ ಏನೋ ಆದಾಗ ಊಟ ತಿಂಡಿ ಮಿಕ್ಕರೆ ಅಲ್ಲಿಗೆ ಹೋಗಿ ಕರೆದು, ಮತ್ತೆ ಮಾಡಿದ ಅಡುಗೆಗೆ ಆಗೋ ದಂಡವನ್ನ ತಪ್ಪಿಸ್ತಿದ್ವಿ. ಒಂದೊಂದ್ಸಲ ಕಲಾಯ ಮಾಡೋ ಮನುಷ್ಯ ಬಂದರೂ ಅಲ್ಲೇ ಮಂಟಪದ ಪಕ್ಕದಲ್ಲೇ ಅವನ ಅಗ್ಗಿಷ್ಟಿಕೆ ಹೂಡ್ಕೋತಿದ್ದ. ಸುತ್ತ ಮುತ್ತಲಿನ ಮನೆಯವರೆಲ್ಲ ಅವರ ಕೊಡವೋ, ಕೊಳದಪ್ಪಲೆಯೋ, ಯಾವುದಕ್ಕಾದ್ರೂ ಕಲಾಯ ಮಾಡಿಸ್ಬೇಕಾಗಿದ್ರೆ ಅಲ್ಲಿಗೇ ತರ್ತಿದ್ರು. ಹಾಗೇನಾದ್ರೂ ಕೊಟ್ಟಾಗ, ನಾನೂ ಕಲಾಯದ ಮನುಷ್ಯ ತವರ ಕಾಸೋದು, ತಿದಿ ಒತ್ತೋದು ಇದೆಲ್ಲ ನೋಡ್ತಾ ಕೂತಿರ್ತಿದ್ದೆ. ಒಂದೊಂದು ಸಲ ಸಂಜೆ ಹೋಗಿ ಆ ಮಂಟಪದ ಹಿಂದಿನ ಬಯಲಲ್ಲಿ ಗೆಳೆಯರ ಜೊತೆ ಆಡ್ತಿದ್ದಿದ್ದೂ ಉಂಟು.  ಮುಂದೆ ಓದಿ »

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ

ನವರಾತ್ರಿಯ ಎಂಟನೇ ದಿನ ದುರ್ಗಾಷ್ಟಮಿ. ದುರ್ಗಿ ಎಂದರೇನು? ಕಾಳಿ ಎಂದರೇನು? ಗೌರಿ ಎಂದರೇನು? ಸರ್ವದೇವ ನಮಸ್ಕಾರಃ ಕೇಶವಂ ಪ್ರತಿ ಗಚ್ಛತಿ ಎನ್ನುವ ಭಾವನೆ ನಮಗಿದ್ದರೂ ಕೂಡ ಅದೇನೋ ನವರಾತ್ರಿಯ ಏಳನೇ ದಿನ ಸರಸ್ವತಿಗೂ, ಎಂಟನೇ ದಿನ ದುರ್ಗಿಗೂ, ಒಂಬತ್ತು ಹತ್ತನೇ ದಿನಗಳು ಚಾಮುಂಡಿಗೂ ಇರುವುದು ಹಳೇ ಮೈಸೂರಿನ ಸಂಪ್ರದಾಯವಿರಬಹುದು. ದುರ್ಗಾಷ್ಟಮಿಯ ದಿನ ಮನೆ ಚಿಕ್ಕ ಹುಡುಗಿಯರನ್ನು ಕರೆದು ಅವರನ್ನಾದರಿಸುವ ಸಂಪ್ರದಾಯವೂ ಎಷ್ಟೋ ಕುಟುಂಬಗಳಲ್ಲಿದೆ.

ನೆನ್ನೆ ಶೃಂಗೇರಿ ಶಾರದೆಯ ಮೇಲೆ ಒಂದು ಕನ್ನಡದಲ್ಲಿರುವ ಹಾಡನ್ನು ಕೇಳಿಸಿದ್ದೆ. ಹೇಗಿದ್ದರೂ ಈಗ ನವರಾತ್ರಿಯಲ್ಲವೇ, ಅದಕ್ಕೆ ಇವತ್ತು ’ನವರಸ’ಕನ್ನಡದ ಒಂದು ಹಾಡನ್ನು ಕೇಳಿಸೋಣ ಎಂದುಕೊಂಡೆ :). ಹೌದು, ನವರಸ ಕನ್ನಡ ಅನ್ನುವುದೊಂದು ರಾಗದ ಹೆಸರು. 

ಈ ರಚನೆ ಮುತ್ತಯ್ಯ ಭಾಗವತರದ್ದು. ನವರಾತ್ರಿಯ ಮೊದಲ ದಿನವೇ ಇವರದೊಂದು ದರು ವರ್ಣವನ್ನು ಕೇಳಿಸಿದ್ದೆನಲ್ಲ? ನೆನಪಿರಬಹುದು.  ಮುಂದೆ ಓದಿ »

Syndicate content