ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ರಸ್ತೆ ನೀರಿನಿಂದ ಮಸ್ತ್ ಬೆಳೆ

July 19, 2008 - 9:26pm — Chamaraj
ರಸ್ತೆ ನೀರಿನಿಂದ ತುಂಬಿಕೊಂಡಿರುವ ಕೆರೆ

‘ರಸ್ತೆ ಮೇಲೆ ಬೀಳುವ ಮಳೆ ನೀರು ಸಾಮಾನ್ಯವಾಗಿ ಏನಾಗುತ್ತದೆ?’
ಇಂಥದೊಂದು ಪ್ರಶ್ನೆಯನ್ನು ನಮ್ಮ ರೈತರಿಗೆ ಹಾಕಿದರೆ, ‘ಆ ನೀರು ವ್ಯರ್ಥವಾಗಿ ಹರಿದುಹೋಗಿ ಹಳ್ಳ ಸೇರುತ್ತದೆ’ ಎಂಬ ಉತ್ತರವೇ ದೊರೆತೀತು.

ಆದರೆ ಧಾರವಾಡ ತಾಲ್ಲೂಕಿನ ರೈತರು ಮಾತ್ರ ರಸ್ತೆ ಮೇಲೆ ಬೀಳುವ ಮಳೆ ನೀರಿನಿಂದ ಮಸ್ತ್ ಬೆಳೆಯನ್ನು ಬೆಳೆದುಕೊಳ್ಳುವ ಮೂಲಕ ಇತರ ರೈತರಿಗೆ ಮಾದರಿಯಾಗಿದ್ದಾರೆ.

ರಸ್ತೆ ಮೇಲೆ ಬೀಳುವ ಮಳೆ ನೀರು ಸಾಮಾನ್ಯವಾಗಿ ಚರಂಡಿಯಂತಹ ತಗ್ಗಿನ ಮೂಲಕ ಹರಿದು, ಹಳ್ಳ ಸೇರಿ, ಅಲ್ಲಿಂದ ನದಿಗೆ ಹೋಗುವುದು ಸಾಮಾನ್ಯ ಪ್ರಕ್ರಿಯೆ. ಆದರೆ ಧಾರವಾಡ ತ್ಲಾಲೂಕಿನ ಮಲೆನಾಡಿನ ಸೆರಗಿನಲ್ಲಿರುವ ಕಲಕೇರಿ ಗ್ರಾಮದ ಸುತ್ತಮುತ್ತಲಿನ ರೈತರು ಇದೇ ನೀರಿನಿಂದ ಇಡೀ ಭತ್ತದ ಬೆಳೆಯನ್ನು ಸಮೃದ್ಧವಾಗಿ ಬೆಳೆದುಕೊಳ್ಳುತ್ತಿದ್ದಾರೆ.

ಇದೊಂದು ಸರಳ ತಂತ್ರಜ್ಞಾನ. ಇಳಿಜಾರಿನಲ್ಲಿ ಹರಿದುಹೋಗುವ ನೀರಿಗೆ ರೈತರು ತಮ್ಮ ಹೊಲದ ಬದಿ ಮಣ್ಣಿನ ಸಣ್ಣ ಒಡ್ಡು ನಿರ್ಮಿಸಿ ನಿಗದಿತ ಪ್ರಮಾಣದ ನೀರು ನಿರಂತರವಾಗಿ ಹೊಲ ಸೇರುವಂತೆ ಮಾಡುತ್ತಾರೆ. ಒಂದು ವೇಳೆ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ನೀರು ಬಂದರೆ, ಅದು ಮಣ್ಣಿನ ತಡೆ ದಾಟಿ ಹರಿದು ಮುಂದಿನ ಹೊಲಕ್ಕೆ ಹೋಗುತ್ತದೆ.

ಧಾರವಾಡದ ಮಲೆನಾಡಿನ ಪ್ರದೇಶದಲ್ಲಿ ಸಾಮಾನ್ಯವಾಗಿ ವರ್ಷದ ಮೂರು ತಿಂಗಳುಗಳ ಕಾಲ ನಿರಂತರವಾಗಿ ಮಳೆ ಬೀಳುತ್ತಲೇ ಇರುತ್ತದೆ. ಒಂದು ವೇಳೆ ಮಳೆ ಜೋರಾಗಿ, ಹೆಚ್ಚು ನೀರು ಬಂದರೆ ದಾರಿಯುದ್ದಕ್ಕೂ ಇರುವ ಮಣ್ಣಿನ ಸಣ್ಣ ಬದುಗಳು ನೀರನ್ನು ಹಿಡಿದಿಡಿದು ಮುಂದಕ್ಕೆ ಬಿಡುತ್ತವೆ. ಇದರಿಂದಾಗಿ ಸಾವಿರಾರು ಎಕರೆ ಭೂಮಿಗೆ ನೀರು ದಕ್ಕಿದಂತಾಗಿದೆ.

ಒಂದು ವೇಳೆ ನೀರು ಸಾಕೆನ್ನಿಸಿದರೆ ಮೇಲ್ಭಾಗದ ರೈತ, ನೀರು ತನ್ನ ಹೊಲ ಪ್ರವೇಶಿಸುವ ಮಾರ್ಗವನ್ನು ಮುಚ್ಚಿಬಿಡುತ್ತಾನೆ. ಆಗ ನೀರು ರಸ್ತೆಯಿಂದ ನೇರವಾಗಿ ಮುಂದಿನ ಹೊಲಕ್ಕೆ ಹೋಗುತ್ತದೆ. ಇದೊಂದು ಸರಣಿ ಕ್ರಿಯೆಯಾಗಿರುವುದರಿಂದ ರಸ್ತೆಯ ಎಡಬಲದ ಸಾವಿರಾರು ಎಕರೆ ಭೂಮಿಗೆ ಯಥೇಚ್ಛ ನೀರು ದಕ್ಕುತ್ತಿದೆ. ಒಂದು ವೇಳೆ ಹರಿವು ಅಗತ್ಯಕ್ಕಿಂತ ಹೆಚ್ಚಾದರೆ ನೀರು ರಸ್ತೆ ಬದಿಯಿಂದ ಹೊಲ ಪ್ರವೇಶಿಸುವ ಮಾರ್ಗವನ್ನೇ ಮುಚ್ಚಿಬಿಡುತ್ತಾರೆ. ಆಗ ಹೆಚ್ಚುವರಿ ನೀರು ದಾರಿಯಲ್ಲಿ ಬರುವ ಮುಂದಿನ ಹೊಲಕ್ಕೆ ಹಾಗೂ ಅಲ್ಲಿಂದದ ಸೀದಾ ಹಳ್ಳಕ್ಕೆ ಹೋಗುತ್ತದೆ.

ಈ ರೀತಿ ಹೆಚ್ಚುವರಿಯಾಗಿ ಹಳ್ಳ ಸೇರುವ ನೀರನ್ನೂ ಇಲ್ಲಿ ವ್ಯರ್ಥವಾಗಲು ಬಿಟ್ಟಿಲ್ಲ. ಹಳ್ಳದ ನೀರಿಗೆ ಮುಂದೆ ಅಳ್ನಾವರದಲ್ಲಿರುವ ಇಂದ್ರಮ್ಮನ ಕೆರೆಗೆ ಸಂಪರ್ಕ ಕೊಡಲಾಗಿದೆ. ಇದರಿಂದಾಗಿ ಅಳ್ನಾವರ ಪಟ್ಟಣದ ಇಪ್ಪತ್ತೈದು ಸಾವಿರಕ್ಕೂ ಅಧಿಕ ನಿವಾಸಿಗಳಿಗೆ ಕುಡಿಯುವ ನೀರು ಸಿಗುವಂತಾಗಿದೆ.

ಸರಳ ತಂತ್ರಜ್ಞಾನ ಉಪಯೋಗಿಸಿಕೊಂಡು, ಸಹಕಾರ ತತ್ವದಡಿ ನೀರು ಬಳಸಿಕೊಳ್ಳುತ್ತಿರುವ ಧಾರವಾಡ ತಾಲ್ಲೂಕಿನ ಗ್ರಾಮೀಣ ರೈತರು ವರ್ಷದ ಒಂದು ಬೆಳೆಯನ್ನು ಪೂರ್ತಿ ಮಳೆ ನೀರಿನಲ್ಲಿಯೇ ಬೆಳೆಯುತ್ತಿದ್ದಾರೆ. ಸಹಜ ನೀರನ್ನು ಬಳಸುತ್ತಿರುವುದರಿಂದ ಇಲಿಯ ಮಣ್ಣು ಕೆಟ್ಟಿಲ್ಲ. ಜತೆಗೆ ಅಂತರ್ಜಲ ಮಟ್ಟವೂ ಚೆನ್ನಾಗಿದೆ. ಬೇಸಿಗೆಯಲ್ಲಿ ಕೊಳವೆ ಬಾವಿಯ ನೀರು ಬಳಸಿ ಇನ್ನೊಂದು ಬೆಳೆ ಬೆಳೆದುಕೊಳ್ಳುತ್ತಾರೆ. ಆಗ ನೀರು ಕಡಿಮೆ ಬೇಡುವ ಸೂರ್ಯಕಾಂತಿ, ಹತ್ತಿ, ಈರುಳ್ಳಿ, ಎಳ್ಳು ಮುಂತಾದ ಬೆಳೆಗಳನ್ನು ಬೆಳೆಯುವುದರಿಂದ ಅಂತರ್ಜಲ ಬಳಕೆಯೂ ಮಿತ, ಬೆಳೆ ಬದಲಾವಣೆಯಿಂದ ಭೂಮಿಗೂ ಹಿತ.

ಇಂಥ ಮಾದರಿಯನ್ನು ರಾಜ್ಯದ ಎಲ್ಲೆಡೆ ಅನುಸರಿಸಲಾಗದೆ? ಜನತೆ ಜಲ ಸಾಕ್ಷರರಾಗಲು ಇದಕ್ಕಿಂತೆ ಬೇರೆ ಉದಾಹರಣೆ ಬೇಕೆ?

- ಚಾಮರಾಜ ಸವಡಿ

  • ಸುದ್ದಿ ಸ್ವಾರಸ್ಯ
~.~
  • Login or register to post comments
  • 339 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 19, 2008 - 10:23pm — yuvapremi

ಉ: ರಸ್ತೆ ನೀರಿನಿಂದ ಮಸ್ತ್ ಬೆಳೆ

yuvapremi's picture

ಇಂತಹ ಸ್ವಾರಸ್ಯಕರ ವಿಷಯವನ್ನು ನಮಗೆ ತಿಳಿಸಿಕೊಟ್ಟ ನಿಮಗೆ ನಮ್ಮ ವಂದನೆಗಳು ಚಾಮರಾಜ ರವರೆ...! Smiling

-ಯುವಪ್ರೇಮಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 22, 2008 - 9:58am — Chamaraj

ಉ: ರಸ್ತೆ ನೀರಿನಿಂದ ಮಸ್ತ್ ಬೆಳೆ

Chamaraj's picture

ಧನ್ಯವಾದ. ಇಂತಹ ವಿಷಯಗಳನ್ನು ಸಾಧ್ಯವಾದಷ್ಟೂ ಮಟ್ಟಿಗೆ ಇತರರಿಗೂ ತಿಳಿಸೋಣ. ಜಲಸಾಕ್ಷರತೆ ಹರಡಲಿ.

- ಚಾಮರಾಜ ಸವಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 21, 2008 - 5:02pm — Jayalaxmi.Patil

ಉ: ರಸ್ತೆ ನೀರಿನಿಂದ ಮಸ್ತ್ ಬೆಳೆ

Jayalaxmi.Patil's picture

ಎಲ್ಲದಕ್ಕೂ ಸರಕಾರದ ಬಾರದ ನೆರವಿಗಾಗಿ ಕಾಯುತ್ತಾ ಕೂರುವುದರ ಬದಲು ಹೀಗೆ ನಮ್ಮ ಕೈಲಾದ ಮಟ್ಟಿಗೆ ನಾವುಗಳು ಅನುಕೂಲ ಮಾಡಿಕೊಳ್ಳುವುದು ತುಂಬಾ ಓಳ್ಳೆಯದು. ಕಂಡ ಕಂಡವರ ಹಂಗಿಲ್ಲ!! ನಿಮ್ಮ ಈ ಲೇಖನ ಬಹುತೇಕ ಜನರಿಗೆ ಉಪಯುಕ್ತ. ಇದನ್ನು ಓದಿದವರೆಲ್ಲ ತಮಗೆ ಗೊತ್ತಿರೊ ರೈತರಿಗೆ ಇದರ ಬಗ್ಗೆ ಮಾಹಿತಿ ಕೊಡುವುದೊಳಿತು.
ಜಯಲಕ್ಷ್ಮೀ.ಪಾಟೀಲ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 22, 2008 - 6:29am — venkatesh

ಉ: ರಸ್ತೆ ನೀರಿನಿಂದ ಮಸ್ತ್ ಬೆಳೆ

venkatesh's picture

ನಿಮ್ಮ ಲೇಖನ ಸಮಯೋಚಿತವಾಗಿದೆ. ರೈತರಲ್ಲದೆ, ಪೇಟೆಜನರಿಗೂ ಇದನ್ನುಮಾಡದೆ ವಿಧಿಯಿಲ್ಲ. ಈಗಾಗಲೇ ತಮಿಳುನಾಡಿನ ರೈತರು, ಮಳೆಕೊಯಿಲನ್ನುಮಾಡಿ ಯಶಸ್ವಿಯಾಗಿದ್ದಾರೆ. ದಕ್ಷಿಣಕನ್ನಡದ ಹಲವಾರು ಪ್ರಗತಿಪರ ರೈತರು ಇದನ್ನು ಅನುಸರಿಸಿ ತಮ್ಮ ವ್ಯವಸಾಯದಲ್ಲಿ ಮುಂದೆಬಂದಿದ್ದಾರೆ. [ತರಂಗ ಪತ್ರಿಕೆಯನ್ನು ಓದಿ]

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 22, 2008 - 10:00am — Chamaraj

ಉ: ರಸ್ತೆ ನೀರಿನಿಂದ ಮಸ್ತ್ ಬೆಳೆ

Chamaraj's picture

ನಿಜ ಸರ್‌. ಕರ್ನಾಟಕದಲ್ಲಿಯೂ ಸಾಕಷ್ಟು ಕಡೆ ಜಲಪ್ರಜ್ಞೆ ಬೆಳೆದಿದೆ. ಆದರೆ, ಅದೊಂದು ವ್ಯಾಪಕ ನೆಲೆಗಟ್ಟನ್ನು ಇನ್ನೂ ತಲುಪಿಲ್ಲ. ಸದ್ಯಕ್ಕೆ ಇದು ಸ್ವಯಂ ಸೇವಾ ಸಂಸ್ಥೆಗಳ ಮಟ್ಟಿಗೆ ಹಾಗೂ ವೈಯಕ್ತಿಕ ಮಟ್ಟದಲ್ಲಿ ಮಾತ್ರ ಇದೆ. ಸರ್ಕಾರವೂ ಇದಕ್ಕೆ ಕೈ ಜೋಡಿಸಬೇಕು. ಜೊತೆಗೆ, ಇನ್ನಷ್ಟು ವಿಸ್ತಾರವಾಗಿ ಹರಡಬೇಕಿದೆ. ಆಗ ಮಾತ್ರ ನಮ್ಮ ಹಲವಾರು ಸಮಸ್ಯೆಗಳು ಬಗೆಹರಿಯುತ್ತವೆ.

- ಚಾಮರಾಜ ಸವಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 22, 2008 - 10:02am — Chamaraj

ಉ: ರಸ್ತೆ ನೀರಿನಿಂದ ಮಸ್ತ್ ಬೆಳೆ

Chamaraj's picture

ಸರ್ಕಾರ ಯಾವಾಗಲೂ ಪರಾವಲಂಬಿ. ಜನ ಮಾತ್ರ ಸ್ವಾವಲಂಬಿಗಳು. ಇದನ್ನು ಅರ್ಥ ಮಾಡಿಕೊಂಡರೆ ಎಲ್ಲರಿಗೂ ಅನುಕೂಲವಾಗುತ್ತದೆ. ಪ್ರತಿಯೊಂದಕ್ಕೂ ಸರ್ಕಾರವನ್ನು ಅವಲಂಬಿಸುವುದು ದೌರ್ಬಲ್ಯ ಮಾತ್ರವಲ್ಲ, ನೀಚತನವೂ ಹೌದು. ವ್ಯಕ್ತಿಯನ್ನು ಅಧಃಪತನಕ್ಕೆ ಇಳಿಸುವ ದೊಡ್ಡ ಶತ್ರು ಇದು.

ರೈತರಷ್ಟೇ ಅಲ್ಲ, ಜನ ಕೂಡ ಸರ್ಕಾರದ ಮರ್ಜಿಯಿಂದ ಹೊರಬರುವುದು ಉತ್ತಮ.

- ಚಾಮರಾಜ ಸವಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 22, 2008 - 10:59pm — Rajeshwari

ಉ: ರಸ್ತೆ ನೀರಿನಿಂದ ಮಸ್ತ್ ಬೆಳೆ

Rajeshwari's picture

ಕೆಲವೊಂದು ವಿಷಯಗಳಿಗೆ ನಾವು ಧಾರವಾಡದ ರೈತರನ್ನು ಮೆಚ್ಚಬೇಕು. ಅವರು ಗೊಬ್ಬರದ ಗಲಾಟೆಗಳಲ್ಲು ಬರಲ್ಲಿಲ್ಲ ಅದಕ್ಕೆ ಕಾರಣ ಅವರು ಸ್ವಯಂ ಪ್ರೇರಿತರಾಗಿ ಸಾವಯುವ ಗೊಬ್ಬರ ತಾವೆ ತಯಾರಿಸಿಕೊಂಡಿದ್ದರು ಮತ್ತೊಂದು ನಿದರ್ಶನ ಅಂದ್ರೆ ನಿಮ್ಮ ಲೇಖನ. ಧಾರವಾಡದ ರೈತರು ನಮ್ಮ ಇತರ ಸ್ಥಳಗಳಲ್ಲಿರುವ ರೈತರು ಅವರನ್ನು ಅನುಸರಿಸಿದರೆ ಸ್ವಲ್ಪ ಮಟ್ಟಿಗಾದರು ನೆಮ್ಮದಿಯಿಂದಿರಬಹುದು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 22, 2008 - 11:11pm — Rajeshwari

ಉ: ರಸ್ತೆ ನೀರಿನಿಂದ ಮಸ್ತ್ ಬೆಳೆ

Rajeshwari's picture

ಧಾರವಾಡದ ರೈತರು ಗೊಬ್ಬರದ ಗಲಾಟೆಯಲ್ಲಿ ತೊಡಗಿದ್ದರೆ ಅದರ ಶೇಕಡ ಕಡಿಮೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 23, 2008 - 5:43am — Chamaraj

ಉ: ರಸ್ತೆ ನೀರಿನಿಂದ ಮಸ್ತ್ ಬೆಳೆ

Chamaraj's picture

ಸಮಸ್ಯೆ ಅಲ್ಲಿಯೂ ಇದೆ. ನಾನು ಬರೆದಿದ್ದು ತಮ್ಮ ಸಮಸ್ಯೆಗಳಿಗೆ ತಾವೇ ಸ್ಥಳೀಯ ಪರಿಹಾರ ಕಂಡುಕೊಂಡವರ ಬಗ್ಗೆ. ಸರ್ಕಾರದ ಮೂರ್ಖ ಯೋಜನೆಗಳು, ಅವುಗಳ ಮೇಲೆ ಅವಲಂಬಿತರಾಗಿ ತಮ್ಮತನ ಕೊಂದುಕೊಂಡವರಿಗೆ ಇಂತಹ ಉದಾಹರಣೆಗಳು ಹೊಸ ಹೊಳಹುಗಳನ್ನು ನೀಡಲಿ ಎಂಬ ಆಶಯದಿಂದ ಇದನ್ನು ಬರೆದೆ.

- ಚಾಮರಾಜ ಸವಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ರಸ್ತೆ ನೀರಿನಿಂದ ಮಸ್ತ್ ಬೆಳೆ
  • ಮಾತು ಎಂಬ ಹೊಳೆಯ ನೀರು ಬರೀ ತೀರ್ತಕ್ಕೆ ಸಾಕೇ?
  • ದೋಣಿ
  • ಕರ್ನಾಟಕ ನೀರಿಗೆ ದುಡ್ಗು ಕೊಡಬೇಕಂತೆ!!!
  • ಕುಡಿಯುವ ನೀರನ್ನು ಕ್ಲೋ'ರಿನ್'ನಿಂದ ತೊಳೆಯಬಹುದೇ?
Syndicate content

ಲೇಖಕರು

Chamaraj's picture

ಪೂರ್ಣ ಹೆಸರು
ಚಾಮರಾಜ ಸವಡಿ

ಪರಿಚಯ

ವೃತ್ತಿಯಿಂದ ಪತ್ರಕರ್ತ. ಸದ್ಯ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ನ್ಯೂಸ್‌ ಎಡಿಟರ್‍ ಎಂದು ಕೆಲಸ ಮಾಡುತ್ತಿದ್ದೇನೆ. ಬರವಣಿಗೆ ಇಷ್ಟದ ಕೆಲಸ.
See my blog: http://chamarajsavadi@blogspot.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಪ್ರಧಾನಿಯವರ ಆರೋಗ್ಯ ಕಾಪಾಡಲು ಮನವ
  • ಬಿಡುಗಡೆಯ ನಂತರದ ಬೇಡಿಗಳು (೪)
  • ತಿಳಿ ಹಾಸ್ಯ ಮರೆತಿಲ್ಲ!
  • ನೀನು ಕಳುಹಿಸಿದ ಸ್ಮೈಲಿ ಚಾಟು ಬಾಕ್ಸಿನಲ್ಲಿ ಮಿನುಗುತ್ತಿತ್ತು!
  • ಕಾಡುಕೋಳಿಯ ಜಾಡು ಹಿಡಿದು...
  • ಅನ್ ಸೈಕ್ಲೋಪೀಡಿಯಾ - (ವಿಷಯ)ಮುಕ್ತ ವಿಶ್ವಕೋಶ
  • ಕೋಸಿ-ಬಿಹಾರದ ಕಣ್ಣೀರು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಬಾ ತಬ್ಬಿಕೋ :-)
    August 30, 2008 - 5:01pm
  • cmariejoseph
    ಉ: ಒಂದು ನಾಯಿ ಕತೆ
    August 30, 2008 - 5:00pm
  • dhanu.vijai
    ಉ: ಬಾ ತಬ್ಬಿಕೋ :-)
    August 30, 2008 - 4:49pm
  • ಸಂಗನಗೌಡ
    ಉ: ಬಾ ತಬ್ಬಿಕೋ :-)
    August 30, 2008 - 4:41pm
  • dhanu.vijai
    ಉ: ಬಾ ತಬ್ಬಿಕೋ :-)
    August 30, 2008 - 4:18pm
  • dhanu.vijai
    ಉ: ಕಾದಿರುವೆ ನಿನಗಾಗಿ
    August 30, 2008 - 4:14pm
  • ಸಂಗನಗೌಡ
    ಉ: ಕಾದಿರುವೆ ನಿನಗಾಗಿ
    August 30, 2008 - 3:36pm
  • kadakolla05
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 2:09pm
  • srinivasps
    ಉ: ಕಚೇರಿ ಎಂಬ ನರಕ-೧
    August 30, 2008 - 1:56pm
  • srinivasps
    ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
    August 30, 2008 - 1:34pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 33 ಅತಿಥಿಗಳು ಆನ್ಲೈನ್ ಇರುವರು.


ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator