ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಮರುಪೂರಣ - ಹೀಗೊಂದು Case Study

August 7, 2008 - 11:28pm — hpn

ಮರುಪೂರಣದಿಂದ ಹತ್ತಡಿ ಏರಿದ ನೀರು (ಚಿತ್ರ: ನಾ. ಕಾರಂತ ಪೆರಾಜೆ)

ಕೃಷಿಯಲ್ಲಿ ತೊಡಗಿಸಿಕೊಂಡವರಿಗೆ ತಿಳಿದಷ್ಟು ನೀರಿನ ಬೆಲೆ ಬಹುಶಃ ಬೇರೆ ಯಾರಿಗೂ ತಿಳಿದಿರಲಿಕ್ಕಿಲ್ಲ. ಮಳೆಯಾಗಿ ಬಿದ್ದ ನೀರನ್ನು ಹರೆದು ಪೋಲಾಗಲು ಬಿಡದೆ ಅದನ್ನು ಬಳಸಿಕೊಂಡು ನೀರಿನ ಸದುಪಯೋಗಪಡೆಯುವುದು ಕಜೆಯವರು ನೆನಪಿಸುವಂತೆ "ನೀರ ನಿಶ್ಚಿಂತೆ". ಅಡಿಕೆ ಪತ್ರಿಕೆಯಲ್ಲಿ ಸಹಾಯ ಸಂಪಾದಕರಾಗಿ ಕೆಲಸ ಮಾಡುತ್ತಿರುವ ನಾ. ಕಾರಂತರು ಪುತ್ತೂರಿನ ಬಳಿ ಬಾವಿಗೆ ಮರುಪೂರಣ ಮಾಡಿದ್ದರ ದೃಷ್ಟಾಂತವೊಂದನ್ನು ನಮ್ಮೊಂದಿಗೆ ವಾಟರ್ ಪೋರ್ಟಲ್ಲಿನಲ್ಲಿ ಹಂಚಿಕೊಂಡಿದ್ದಾರೆ. ಓದಿ:

ಕಡು ಬೇಸಿಗೆ. ಸುತ್ತೆಲ್ಲಾ ಭಣಭಣ. ನಲ್ಲಿಯಲ್ಲಿ ಅರ್ಧ ಗಂಟೆ ನೀರು ಬಂದರೆ ಹೆಚ್ಚು. ಇಂತಹ ಪರಿಸ್ಥಿತಿಯಲ್ಲೂ ಪುತ್ತೂರಿನ ಆದರ್ಶ ಆಸ್ಪತ್ರೆ ಬಳಿಯ ರಾಜರತ್ನಂ ಅವರ ಬಾವಿಯಲ್ಲಿ ಹತ್ತಡಿ ನೀರಿಗೆ ತೊಂದರೆಯಿಲ್ಲ. ಚಾವಣಿ ನೀರನ್ನು ಬಾವಿಗೆ ಮರುಪೂರಣ ಮಾಡಿದ್ದರ ಫಲ.

ಇವರದು ಹಳೆ ಬಾವಿ. ಮೃದು ಮಣ್ಣು. ಒರತೆ ಕಡಿಮೆ. ಕೆಲವೊದು ಸಲ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಮಳೆ ಬಂದಾಗ ಮೇ ಕೊನೆ ವರೆಗೂ ಕುಡಿಯುವ ನೀರಿಗೆ ತೊಂದರೆಯಾಗುತ್ತಿರಲಿಲ್ಲ. ಸುಮಾರು ಎಂಭತ್ತರ ಹೊತ್ತಿಗೆ ಬಾವಿ ಒಮ್ಮೆ ಬತ್ತಿತ್ತು. ಆಗ ದೂರದಿಂದ ನೀರನ್ನು ತಂದ ಸಾಹಸ ರಾಜರತ್ನಂ ಅವರಿಗೆ ನೆನಪಿದೆ. ಆಮೇಲಿನ ದಿವಸಗಳಲ್ಲಿ ಮನೆಬಳಕೆಗೆ ಬಳಸಲು ತೊಂದರೆಯಾಗುತ್ತಿರಲಿಲ್ಲ.

೨೦೦೦ ಸುಮಾರಿಗೆ ಮೇ-ಜೂನ್‌ನಲ್ಲಿ ಬಾವಿ ಪೂರ್ತಿ ಬತ್ತಿತ್ತು. ಕುಡಿನೀರಿಗೂ ತತ್ವಾರ. ನೀರಿನಾಪತ್ತಿನಲ್ಲಿ ನೀರೊದಗಿಸುತ್ತಿದ್ದ ವೆಲಾರಿಯನ್ ಡಿಸೋಜ ಅವರ ಬಾವಿಯಲ್ಲೂ ನೀರು ತಳಕಾಣುತ್ತಿತ್ತು. ಆಗ ನೆರವಿಗೆ ಬಂದವರು ಆದರ್ಶ ಆಸ್ಪತ್ರೆಯ ಡಾ.ಪ್ರಸಾದ ಭಂಡಾರಿ. ತಮ್ಮ ಆಸ್ಪತ್ರೆಯ ಕೊಳವೆ ಬಾವಿಯಿಂದ ನೀರು ಬಳಸಲು ಅವಕಾಶ. ಆಸ್ಪತ್ರೆಗೂ ಮನೆಗೂ ಸುಮಾರು ಒಂದು ಫಲಾಂಗ್ ದೂರ. ಇಷ್ಟು ದೂರ ಪೈಪ್ ತರುವುದೆಂದರೆ ದುಬಾರಿ. ಸುಮಾರು ಅರ್ಧ ದೂರದ ತನಕ ಪೈಪಲ್ಲಿ ನೀರು ತಂದು, ಅಲ್ಲಿಂದ ಮನೆಮಂದಿ ಎಲ್ಲರಿಂದಲೂ ಕರಸೇವೆ! ಪಾತ್ರೆಪಗಡಿಗಳಲ್ಲಿ ಸಂಗ್ರಹ.

ಲೇಖನದ ಉಳಿದ ಭಾಗ »

.
("ಕನ್ನಡದಲ್ಲಿ ವಾಟರ್ ಪೋರ್ಟಲ್" ಯೋಜನೆ ಸಂಪದ ಫೌಂಡೇಶನ್ನಿನ ಸಹಯೋಗದಿಂದ ಮೂಡಿ ಬರುತ್ತಿದೆ.)

  • ಚುಟುಕು ಬರಹ
~.~
  • Login or register to post comments
  • 251 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 9, 2008 - 5:54am — ASHOKKUMAR

ಉ: ಮರುಪೂರಣ - ಹೀಗೊಂದು Case Study

ASHOKKUMAR's picture

ಆಗಾಗ(ಬೇಸಗೆಯಲ್ಲೂ) ಮಳೆ ಸುರಿದರೆ ಜಲಮರುಪೂರಣ ಯಶಸ್ಸು ಕಾಣುವ ಸಾಧ್ಯತೆ ಬಹಳ ಹೆಚ್ಚು.
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಷಾಕ್ ಕೊಡಲಿದೆಯೇ ಉಚಿತ ವಿದ್ಯುತ್?
  • ಓದಿದ್ದು ಕೇಳಿದ್ದು ನೋಡಿದ್ದು-7
  • ಲೇಖನಗಳ ಆಹ್ವಾನ
  • ಆಷಾಢಕ್ಕೆ ತೌರಿಗೆ ಬರಲಿಲ್ಲ.
  • ಗೂಗಲ್‍ನ ಮತ್ತೊಂದು ಅದ್ಭುತ ಪ್ರಾಡಕ್ಟ್
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಹುಟ್ಟಿದ್ದು ದಾವಣಗೆರೆಯಲ್ಲಿ, ಬೆಳೆದಿದ್ದು ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ.
ವಿಕಿಪೀಡಿಯದ ಹುಚ್ಚು ಹಿಡಿದಾಗ ಕನ್ನಡ ವಿಕಿಪೀಡಿಯದ ಹುಚ್ಚು ಹಿಡಿಸಿಕೊಂಡು ಪ್ರಾರಂಭ ಹಂತದಿಂದ ಹೊರಡಿಸಿ ಸುಮಾರು ವರ್ಷ ಅದರಲ್ಲಿ ಬರೆಯುತ್ತಿದ್ದೆ, ನೋಡಿಕೊಳ್ಳುತ್ತಿದ್ದೆ. ಹೀಗೇ ಒಮ್ಮೆ ೨೦೦೫ರಲ್ಲಿ ಸಂಪದ ಪ್ರಾರಂಭಸಿದ್ದು. ತದನಂತರ ಸಂಪದಿಗರ ಒಡನಾಟ ಖುಷಿ ಕೊಟ್ಟಿದೆ.
ನನ್ನ ಇಷ್ಟದ ವಿಷಯಗಳು ಹಾಗು ಪ್ರಸ್ತುತ ಯೋಜನೆಗಳ ಬಗ್ಗೆ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಬರೆಯುತ್ತಿರುತ್ತೇನೆ. ಭೇಟಿ ಕೊಡಿ: ನನ್ನ ಅಂತರ್ಜಾಲ ಪುಟ, ಸಂಪದದಲ್ಲಿ ನನ್ನ ಬ್ಲಾಗ್: ಪರಿವೇಶಣ ಹಾಗು ಇಂಗ್ಲಿಷಿನಲ್ಲಿ ಬರೆಯುವ ಬ್ಲಾಗ್.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
  • ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
  • ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ
  • ಮರಳಿ ಬರಲಿ ಬಾಲ್ಯ

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 7, 2008 - 10:02am
  • amrith
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 7, 2008 - 9:58am
  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 7, 2008 - 9:45am
  • mahesha
    ಉ: ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
    October 7, 2008 - 9:45am
  • srinivasps
    ಉ: ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
    October 7, 2008 - 9:16am
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 8:48am
  • mahesha
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 8:45am
  • savithasr
    ಉ: ಗಾಂಧೀಸ್ಮರಣೆ
    October 7, 2008 - 8:28am
  • Sunil Jayaprakash
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 8:01am
  • shylaswamy
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
    October 7, 2008 - 7:58am
ಇನ್ನಷ್ಟು
ಈಗಿನಂತೆ 14 ಸದಸ್ಯರು ಮತ್ತು 91 ಅತಿಥಿಗಳು ಆನ್ಲೈನ್ ಇರುವರು.


ಮಾಡುವುದರಿಂದಲೇ ಏನಾದರೂ ಆಗುತ್ತದೆ. ಆದುದರಿಂದ ಕರ್ಮ ಮಾಡಲೇಬೇಕು. ಪ್ರಯತ್ನವನ್ನೇ ಪರಮೇಶ್ವರನೆಂದು ತಿಳಿಯಬೇಕು.

— ಸಮರ್ಥ ರಾಮದಾಸ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator