Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ವಚನ ಚಿಂತನ: ೮: ಆಸೆ-ರೋಷ, ಮಗು-ತಾಯಿ

August 4, 2005 - 2:12pm — olnswamy

ಆಸೆಯೆಂಬ ಕೂಸನೆತ್ತಲು
ರೋಷವೆಂಬ ತಾಯಿ ಮುಂದೆ ಬಂದಿಪ್ಪಳು
ನೋಡಾ
ಇಂತೆರಡಿಲ್ಲದೆ ಕೂಸನೆತ್ತಬಲ್ಲಡೆ
ಆತನೆ ಲಿಂಗೈಕ್ಯನು
ಗೊಹೇಶ್ವರ

ಮನಸ್ಸಿನಲ್ಲಿ ಹುಟ್ಟುವ ಆಸೆ ಮತ್ತು ರೋಷಗಳಿಗೆ ಇರುವುದು ತಾಯಿ ಮಕ್ಕಳ ಸಂಬಂಧ. ಒಂದನ್ನು ಬಿಟ್ಟು ಒಂದಿರಲಾರವು. ಇವೆರಡೂ ಗುಣಗಳು ಇಲ್ಲವಾದಾಗ ಮನುಷ್ಯ ದೇವರಲ್ಲಿ ಒಂದಾಗಿರುತ್ತಾನೆ.
ನಮ್ಮ ದಿನ ನಿತ್ಯದ ಬದುಕಿನಲ್ಲಿ ಮನಸ್ಸಿನ ಕಾರ್ಪಣ್ಯಗಳಿಗೆ ಕಾರಣವನ್ನು ಹುಡುಕುತ್ತ ಹೊದದರೆ ಅವಕ್ಕೆಲ್ಲ ಮೂಲವಾಗಿ ಆಸೆ ಅಥವ ರೋಷಗಳೆಂಬ ಭಾವ ಇರುವುದು ತಿಳಿಯುತ್ತದೆ. ಆಸೆ ಮತ್ತು ರೋಷಗಳೆರಡೂ ನಮ್ಮ ಅಹಂಕಾರವನ್ನು ಗಟ್ಟಿಗೊಳಿಸುವ ಗುಣಗಳು.
ನಮ್ಮ ಎಲ್ಲ ಕೋಪಕ್ಕೆ ನಮ್ಮೊಳಗಿನ ಆಸೆಯೇ ಕಾರಣವಲ್ಲವೆ? ನಮ್ಮೊಳಗೆ ನಾವು ಬೆಳೆಸಿಕೊಂಡ ಆಸೆಗೆ ಧಕ್ಕೆ ಬಂದಾಗ ಕೋಪ, ರೋಷಗಳು ಮೂಡುತ್ತವೆ. ಹಾಗೆ ಹುಟ್ಟಿದ ರೋಷ ಅತೃಪ್ತವಾದ ಆಸೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಆಸೆಯಿಂದ ಕೋಪ, ಕೋಪದಿಂದ ಆಸೆ ಪರಸ್ಪರ ಬೆಳೆಯುತ್ತ ಹೋಗುತ್ತವೆ.
ದೇವರನ್ನು ನಮ್ಮಿಂದ ಬೇರೆಯಾದ ಒಂದು ಶಕ್ತಿ ಎಂದು ಸಾಮಾನ್ಯವಾಗಿ ತಿಳಿಯುತ್ತೇವೆ. ಹಾಗೆ ನಾವು ಬೇರೆ ಎಂಬ ಪ್ರತ್ಯೇಕತೆಯ ಭಾವ ಇರುವುದರಿಂದಲೇ ನನಗೆ ಅದು “ಬೇಕು” ಎಂಬ ಆಸೆ ಮತ್ತು ಸಿಗಲಿಲ್ಲವೆಂಬ ರೋಷ ಹುಟ್ಟುತ್ತವೆ. ಆಸೆ ರೋಷಗಳಿಂದ ನಾವು ನಮ್ಮ ಸುತ್ತಲವರಿಂದಲೂ ನಮ್ಮ ಕಲ್ಪನೆಯ ದೇವರಿಂದಲೂ ಬೇರೆಯಾಗುತ್ತ ದೂರವಾಗುತ್ತ ಹೋಗುತ್ತೇವೆ. ಆಸೆಬುರುಕರನ್ನೂ ಕೋಪಿಷ್ಠರನ್ನೂ ನಾವು ದೂರವಿಡಲು ಬಯಸುವುದಿಲ್ಲವೇ? ಹಾಗೆಯೇ ದೇವರು ಕೂಡ ಆಸೆ ರೋಷಗಳು ಇರುವ ವ್ಯಕ್ತಿಗಳನ್ನು ದೂರವಿಡುತ್ತಾನೆ. ಆಸೆ ರೋಷಗಳನ್ನು ನೀಗಿಕೊಂಡಾಗ ವಿಶ್ವದ ಶಕ್ತಿಯೊಡನೆ ಐಕ್ಯ ಸಾಧ್ಯವಾಗುತ್ತದೆ ಎಂಬುದು ಅಲ್ಲಮನ ಮಾತು.
ದೇವರನ್ನು ನಿರ್ಗುಣ ಅನ್ನುವುದುಂಟಲ್ಲವೆ? ಯಾಕೆಂದರೆ ದೇವರಿಗೆ ಆಸೆಯೂ ಇರಲಾರದು, ರೋಷವೂ ಇರಲಾರದು. ಇವೆರಡೂ ಗುಣಗಳನ್ನು ಇಲ್ಲವಾಗಿಸಿಕೊಂಡು ನಮ್ಮನ್ನು ನಾವು ಮಗುಗೊಳಿಸಿಕೊಂಡರೆ ಅದೇ ದೈವತ್ವ.

  • ಚಿಂತನೆ
Ornamental seperator
  • Login or register to post comments
  • 670 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ವಚನ ಚಿಂತನ: ೭: ಮನಸ್ಸು – ಆಸೆ - ಮಾಯೆ
  • ತಾಯಿಯೇ ದೇವರು..
  • ವಚನ ಚಿಂತನೆ: ಅಲ್ಲಮ: ನಾಲ್ಕು ದ್ವೀಪಗಳು
  • ಕನ್ನಡವೇ ಜಾತಿ-ಧರ್ಮ-ದೇವರು ?
  • ಜರ್ಮನ್ ಕವಿತೆ: ರಿಲ್ಕ್: ವಾಕಿಂಗ್
Syndicate content

ಲೇಖಕರು

olnswamy's picture

ಪರಿಚಯ

ಅಧ್ಯಾಪಕ, ಸಾಹಿತ್ಯ ವಿದ್ಯಾರ್ಥಿ, ಓದುಗ, ಲೇಖಕ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 16, 2008 - 10:37am
  • rameshbalaganchi
    ಉ: ನಾಡೋಜ ಎಂದರೆ.....
    May 16, 2008 - 10:31am
  • vikashegde
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 16, 2008 - 10:14am
  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 8 ಅತಿಥಿಗಳು ಆನ್ಲೈನ್ ಇರುವರು.

"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

— ಕುವೆಂಪು ('ಕನ್ನಡ ದೀಕ್ಷೆ' ಯಲ್ಲಿ)

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator