ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ

ನಾಳೆ ಎಂಬುದು ಕತ್ತಲು

August 18, 2008 - 11:47am — jp.nevara

ನಾಳೆ ಕತ್ತಲು, ಕಾಣೆ
ಏನು ಅಲ್ಲಿದೆ ಎಂದು
ನಿನ್ನೆಯದು ಬೆತ್ತಲೆಯು
ಉಳಿದಿಲ್ಲ ಒಂದು

ಮಾಡಲೇತಕೆ ನೀನು
ಅದರ ಚಿಂತೆಯನು
ಅಂದಿನ ಕೆಲಸವನು
ಮಾಡಲು ಆಂದಂದು

ಕೀಲು ಕೊಟ್ಟರೆ ಕುಣಿವ
ಗೊಂಬಿಗಳು ನಾವಲ್ಲ
ನಮ್ಮೊಳಗೂ ತುಂಬಿಹವು
ನೂವುಗಳು, ನಲಿವುಗಳು

- 1-

ಯಾರಿಗೋ ಯಾತಕೋ
ಈ ಭೂಮಿ ಬ್ರಹ್ಮಾಂಡ
ಆರೂ ಅರಿದವರಿಲ್ಲ
ಅದರ ಪೂರ್ತಿ ಮರ್ಮ

ಪ್ರೀತಿ ಪ್ರೇಮದ ಜಾತ್ರೆ
ಮಾಡುವುದು ಬಲು ಸರಳ
ಎಲ್ಲವೂ, ಎಲ್ಲದೂ
ಉತ್ತುಂಗದಲಿ ಇರುವಾಗ

ಕಷ್ಟಗಳು ಕೂಡಿರಲು
ಕತ್ತಲೆಯು ತುಂಬಿರಲು
ಎದೆಯಗುಂದದೆ, ಬೆನ್ನು ತೋರದೆ
ನಡೆಯುವುದು ನಿಜ ಧರ್ಮ
- 2 -

ನೋವುಗಳು, ನಲಿವುಗಳು
ನಮ್ಮೆರಡು ಕಣ್ಣುಗಳು
ಬೇಕು ಈ ಎರಡು
ಬದುಕ ಬಿತ್ತಾರವನು ಅರಿಯಲು

ಅಂತರಂಗದ ಕದವ
ನಾವು ತೆರೆಯಲು ಬೇಕು
ಅನಂತ ವಿಶ್ವದಜೊತೆಗೆ
ಪ್ರೀತಿಯಿಂ ಬಾಳಲು

ತಪ್ಪುಗಳು ಸಹಜ
ತದ್ದಿ ನಡೆವುದು ಜಾಣ್ಮೆ
ಅರಿತೂ ಹಠಮಾಡುವುದು
ನಮ್ಮ ಬಾಳ್ವೆಯ ಕುಲ್ಮೆ

-3-

ದೇವ ಮಾನವರು ನಾವಲ್ಲ
ಎಲ್ಲವೂ ಎಣಿಸಿದಂತಿರಲು
ಮಿತಿಯುಳ್ಳ ನರರು
ಹೊಂದಾಣಿಕೆಯೆ ನಮ್ಮ ಕರುಳು

ನಿನ್ನೆಗಳ, ನಾಳೆಗಳ
ಅಡಕತ್ತರಿಗೆ ಸಿಗದುಳಿದು
ಬರುವ ದಿನಗಳಲಿ, ಧೈರ್ಯದಿಂ ಬಾಳು
ಧೈರ್ಯವೇ ನಿಜ, ನಿಜದಿ ಬಾಳು.

-4-
ಜಯಪ್ರಕಾಶ ನೇ ಶಿವಕವಿ.

  • ಕಾವ್ಯ ಮತ್ತು ಕವನ
~.~
  • Login or register to post comments
  • 222 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 18, 2008 - 2:12pm — kadakolla05

ಉ: ನಾಳೆ ಎಂಬುದು ಕತ್ತಲು

kadakolla05's picture

ತುಂಬಾ ಚನ್ನಾಗಿದೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 19, 2008 - 11:50am — mahesha

ಉ: ನಾಳೆ ಎಂಬುದು ಕತ್ತಲು

mahesha's picture

ಚನ್ನಾಗಿವೆ...

ಬೇರೆ ಬೇರೆ ಕವನಗಳಲ್ವ!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 21, 2008 - 4:23pm — jp.nevara

ಉ: ನಾಳೆ ಎಂಬುದು ಕತ್ತಲು

jp.nevara's picture

ಜಯಪ್ರಕಾಶ ನೇ.ಶಿ.

Berebere kavanagalu allaa, idu onde kavana.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 19, 2008 - 9:16pm — Jayalaxmi.Patil

ಉ: ನಾಳೆ ಎಂಬುದು ಕತ್ತಲು

Jayalaxmi.Patil's picture

ನಿಮ್ಮ ಕವಿತೆ ಓದಿ ಎಷ್ಟು ಖುಷಿಯಾಗ್ತಿದೆಯೊ ಅಷ್ಟೆ ಖುಷಿ ನಿಮ್ಮ ಊರಿನ ಹೆಸರು ಓದಿ ಆಯ್ತು! ನಾನು ತುಂಬಾ ಚಿಕ್ಕವಳಿದ್ದಾಗ ನನ್ನಪ್ಪ ಉಜ್ಜನಿಯಲ್ಲಿ ಸರಕಾರಿ ವೈದ್ಯರಾಗಿ ಕೆಲಸ ಮಾಡಿದ್ದರು. ಅಲ್ಲಿ ನಾವಿದ್ದ ಮನೆ, ಗೌಡರ ಮನೆ ಮತ್ತು ಅಲ್ಲಿಯ ಬಸ್‍ಸ್ಟ್ಯಾಂಡಿನ ನೆನಪು ಮಸುಕು ಮಸುಕಾಗಿ ಇನ್ನೂ ನೆನಪಿನಾಳದಲ್ಲಿದೆ.
ಜಯಲಕ್ಷ್ಮೀ.ಪಾಟೀಲ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 21, 2008 - 4:27pm — jp.nevara

ಉ: ನಾಳೆ ಎಂಬುದು ಕತ್ತಲು

jp.nevara's picture

ಜಯಪ್ರಕಾಶ ನೇ.ಶಿ.

tumbaa santhosha mattu Kavana odiddakke dhanyavaadagalu.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಮ್ಮ ಬಾಳು
  • ತಪ್ಪಿದ ಲೆಕ್ಕ
  • ನಾಳೆ
  • ನೋವು ನಲಿವುಗಳು
  • ಪ್ರೇಮದ ಅಮಲು
Syndicate content

ಲೇಖಕರು

jp.nevara's picture

ಪೂರ್ಣ ಹೆಸರು
ಜಯಪ್ರಕಾಶ ನೇವಾರ ಶಿವಕವಿ

ಪರಿಚಯ

ನನ್ನ ಹೆಸರು ಜಯಪ್ರಕಾಶ ನೇವಾರ ಶಿವಕವಿ, ಊರು ಬಳ್ಳಾರಿ ಜಿಲ್ಲೆಯಲ್ಲಿರುವ ಉಜ್ಜೈನಿ ಗ್ರಾಮ, ವಾಸ ಬೆಂಗಳೂರೆಂಬ ಬೆಂದಕಾಳೂರು, ಝೈಲೋಗ್ ಇಂಡಿಯಾ ಎಲೆಕ್ಟ್ರಾನಿಕ್ಸ್ ಅನ್ನೊ ಸಂಸ್ಥೆಯಲ್ಲಿ ತಂತ್ರಾಂಷ ತಂತ್ರಜ್ಞನಾಗಿ ಕೆಲಸ, ಕವನ ಬರೆಯುವ ಮತ್ತು ಅನುವಾದಮಾಡುವುದು ನನ್ನ ಹವ್ಯಾಸ, ನನ್ನ ಜಿಮೈಲ್ ವಿಳಾಸ. jp.nevara@gmail.com
ಇದಿಷ್ಟು ನನ್ನ ಸ್ವ ಪುರಾಣ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
  • ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
  • ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
  • ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
  • ಮಕ್ಕಳ ಹಾಡು
  • ಉಗ್ರವಾದ - ಇದೊಂದು ಹಳೇ ಉದ್ಯೋಗ
  • ಹೀಗೊ೦ದು ರಸಕ್ಷಣ

ಇತ್ತೀಚಿನ ಪ್ರತಿಕ್ರಿಯೆಗಳು

  • sudhimail
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:58pm
  • sudhimail
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:54pm
  • benaka
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 1:52pm
  • Aravind M.S
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 1:16pm
  • mahesha
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 1:13pm
  • sudatta
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 1:11pm
  • kannadakanda
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:05pm
  • Achala Sethu
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 1:00pm
  • savithasr
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 12:55pm
  • mahesha
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 12:39pm
ಇನ್ನಷ್ಟು
ಈಗಿನಂತೆ 16 ಸದಸ್ಯರು ಮತ್ತು 446 ಅತಿಥಿಗಳು ಆನ್ಲೈನ್ ಇರುವರು.


ನಿಮಗೆ ಒಂದು ವೇಳೆ ಒಳ್ಳೆಯ ಸಲಹೆ ದೊರೆತರೆ ಅದನ್ನು ಕೂಡಲೆ ಬೇರೆಯವರಿಗೆ ತಲುಪಿಸಿ. ಅದರಿಂದ ನಿಮಗೆ ಉಪಯೋಗವಾಗುವುದು ಅಷ್ಟರಲ್ಲೇ ಇದೆ ಬಿಡಿ.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator