Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಝೆನ್ ಕಥೆ ೩೨: ಕೌಶಲ ಮತ್ತು ಮನಸ್ಸು

February 3, 2006 - 8:49am — olnswamy
archer
 

ಅನೇಕ ಬಿಲ್ಲುಗಾರಿಕೆಯ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿದ್ದ ಅಹಂಕಾರಿ ಯುವಕನೊಬ್ಬ  ಧನುರ್ವಿದ್ಯೆಯಲ್ಲಿ ಪರಿಣತನಾಗಿದ್ದ ಝೆನ್ ಗುರುವಿನ ಬಳಿ ಬಂದು ಪಂದ್ಯ ಕಟ್ಟಿದ.
ಯುವಕ ಚತುರ ಬಿಲ್ಲುಗಾರ. ದೂರದಲ್ಲಿದ್ದ ಗುರಿಗೆ ಸರಿಯಾಗಿ ಬಾಣ ಬಿಟ್ಟ. ಎರಡನೆಯ ಬಾಣದಿಂದ ಮೊದಲ ಬಾಣವನ್ನು ಸರಿಯಾಗಿ ಎರಡು ಭಾಗವಾಗುವಂತೆ ಸೀಳಿದ. "ನಿಮ್ಮ ಕೈಯಲ್ಲಿ ಆಗುವುದೋ ನೋಡಿ" ಎಂದ ಹೆಮ್ಮೆಯಿಂದ.
ಗುರು ವಿಚಲಿತನಾಗಲಿಲ್ಲ. ಹಾಗೆಂದು ಕೂಡಲೆ ಬಿಲ್ಲು ಎತ್ತಿ ಬಾಣ ಬಿಡಲೂ ಇಲ್ಲ. ಬಾ ನನ್ನೊಡನೆ ಎಂದು ಹೇಳಿ ಬೆಟ್ಟ ಏರ ತೊಡಗಿದ. ವೃದ್ಧನ ಉದ್ದೇಶ ಏನಿರಬಹುದೆಂದು ಅಚ್ಚರಿ ಪಡುತ್ತಾ ಯುವಕ ಹಿಂದೆಯೇ ಸಾಗಿದ.
ಬೆಟ್ಟದ ತುದಿ ಬಂದಿತು. ಅಲ್ಲೊಂದು ಆಳವಾದ ಕಮರಿ. ಅದಕ್ಕೆ ಅಡ್ಡಲಾಗಿ ಲಡ್ಡು ಹಿಡಿದಿದ್ದ ಮರದ ತುಂಡೇ ಸೇತುವೆ. ಕಾಲಿಟ್ಟರೆ ಸಾಕು ಅಲುಗಾಡುತ್ತಿತ್ತು. ಗುರು ಆ ಮರದ ದಿಮ್ಮಿಯ ಮಧ್ಯ ಭಾಗಕ್ಕೆ ನಡೆದು ಸ್ಥಿರವಾಗಿ ನಿಂತ. ದೂರ ಮರದಲ್ಲಿದ್ದ ಹಣ್ಣಿಗೆ ಗುರಿ ಇಟ್ಟು ಬಾಣ ಬಿಟ್ಟ. ಹಣ್ಣು ಬಿತ್ತು. " ಮತ್ತೆ ಹಿಂದಿರುಗಿ ಈಗ ನಿನ್ನ ಸರದಿ" ಎಂದ ಯುವಕನತ್ತ ನೋಡುತ್ತಾ.
ಆಳವಾದ ಕಮರಿಯನ್ನು ನೋಡುತ್ತ ಯುವಕ ಭಯ ಭೀತನಾಗಿದ್ದ. ಲಡ್ಡು ಹಿಡಿದ ಮರದ ದಿಮ್ಮಿಯ ಮೇಲೆ ಕಾಲಿಡುವುದಕ್ಕೇ ಅವನಿಗೆ ಧೈರ್ಯವಾಗಲಿಲ್ಲ. ಅಲ್ಲಿ ನಿಂತು ಬಾಣಬಿಡುವ ಮಾತು ದೂರವೇ ಉಳಿಯಿತು.
"ನಿನಗೆ ಬಿಲ್ಲುಗಾರಿಕೆಯ ಕೌಶಲವಿದೆ. ಆದರೆ ಬಾಣವನ್ನು ಎಸೆಯುವ ಬಿಲ್ಲನ್ನೂ, ಬಾಣವನ್ನು ಬಿಡುವ ಕೈಯನ್ನೂ ನಿಯಂತ್ರಿಸುವ ಮನಸ್ಸನ್ನು ನೀನು ಹೇಳಿದಂತೆ ಕೇಳುವಹಾಗೆ ಮಾಡುವ ಕೌಶಲ ಬಂದಿಲ್ಲ" ಎಂದ ಗುರು.

[ಕಾದುವುದು ಕೈದೋ, ಅದನ್ನು ಹಿಡಿದ ಕೈಯೋ, ಅಥವ ಮನಸ್ಸೋ ಎಂದು ಒಬ್ಬ ವಚನಕಾರ ಕೇಳುತ್ತಾನೆ. ಕೌಶಲಗಳಿಗೆ ಕೊಡುವಷ್ಟೇ ಗಮನ ಕೌಶಲವನ್ನೆಲ್ಲ ನಿಯಂತ್ರಿಸುವ ಮನಸ್ಸನ್ನು ಪಳಗಿಸಲೂ ಕೊಡಬೇಕಲ್ಲವೆ] 

  • ಝೆನ್ ಕಥೆಗಳು (ಕಥಾ ಮಾಲಿಕೆ)
Ornamental seperator
  • Login or register to post comments
  • 877 hits
  • Email this page
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 4, 2006 - 11:15pm — Sunil Jayaprakash

ಕಾದುವುದು ಕೈದೊ - ಇದರ ಅರ್ಥವೇನು

Sunil Jayaprakash's picture

ವಚನದ ಭಾವಾರ್ಥ ಅರ್ಥಮಾಡಿಕೊಂಡರೂ, ಈ "ಕಾದುವುದು ಕೈದೊ" ಸಾಲಿನ ವಾಕ್ಯರ್ಥ ತಿಳಿಯಲಿಲ್ಲ. ಸಾಧ್ಯವಾದರೆ ತಿಳಿಸಿಕೊಡಿ. ಈ ಝೆನ್ ಕಥಾಮಾಲಿಕೆ ನೀತಿಭೋದಕಗಳಾಗಿ ಚೆನ್ನಾಗಿ ಮೂಡಿಬರುತ್ತಿವೆ.

  • Login or register to post comments
  • link
  • Email this ಪ್ರತಿಕ್ರಿಯೆ
February 5, 2006 - 3:23am — gvmt

ಕೈದು

gvmt's picture

ಸಂದರ್ಭ, ಬಳಕೆ ನೋಡಿದರೆ ಕೈದು ಒಂದು ನಾಮಪದವಾಗಿ ಕಾಣುತ್ತದೆ; ಒಂದು ಬಗೆಯ ಆಯುಧವಿರಬಹುದು (ಅಥವಾ ಆಯುಧವೆಂದೇ ಇರಬಹುದು). ಕಾದುವುದು ಕೈದೋ? ಕೈಯೋ? ಮನಸ್ಸೋ? ಎನ್ನುವುದು ಪ್ರಶ್ನೆ.

  • Login or register to post comments
  • link
  • Email this ಪ್ರತಿಕ್ರಿಯೆ
February 5, 2006 - 2:13pm — olnswamy

ಕೈದು

olnswamy's picture

ಕೈದು ಎಂದರೆ ಆಯುಧ.

  • Login or register to post comments
  • link
  • Email this ಪ್ರತಿಕ್ರಿಯೆ
February 5, 2006 - 4:45pm — hpn

ಕೈದು

hpn's picture

ಕೈದು (ನಾ). ೧. ಆಯುಧ. ೨. ದಸ್ತಗಿರಿ

(ಕನ್ನಡ ಸಾಹಿತ್ಯ ಪರಿಷತ್ತಿನ "ಕನ್ನಡ ರತ್ನಕೋಶ"ದಿಂದ)

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಝೆನ್ ಕಥೆ ೩೩: ಸಾವಧಾನ!
  • ಝೆನ್ ಕಥೆ ೩೫: ನಾನು ಯಾರೋ!
  • ಝೆನ್ ಕಥೆ ೩೪: ಜ್ಞಾನೋದಯ
  • ಝೆನ ಕಥೆ ೩೬: ಛತ್ರ
  • ಝೆನ್ ಕಥೆ ೩೧: ಚೆಲುವು
Syndicate content

ಲೇಖಕರು

olnswamy's picture

ಪರಿಚಯ

ಅಧ್ಯಾಪಕ, ಸಾಹಿತ್ಯ ವಿದ್ಯಾರ್ಥಿ, ಓದುಗ, ಲೇಖಕ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ

ಇತ್ತೀಚಿನ ಪ್ರತಿಕ್ರಿಯೆಗಳು

  • madhava_hs
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 1:29pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 12:29pm
  • nag4pl
    ಉ: ಗ್ನು/ಲಿನಕ್ಸ್ ಹಬ್ಬ ತಂದ ಸಂತಸ
    May 16, 2008 - 12:26pm
  • Sunil Jayaprakash
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 16, 2008 - 10:37am
  • rameshbalaganchi
    ಉ: ನಾಡೋಜ ಎಂದರೆ.....
    May 16, 2008 - 10:31am
  • vikashegde
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 16, 2008 - 10:14am
  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 23 ಅತಿಥಿಗಳು ಆನ್ಲೈನ್ ಇರುವರು.

ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ. ವಿ. ಜಿ.

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator