ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಬದುಕು ನನಗೇನು ಕಲಿಸಿದೆ ?

April 19, 2006 - 9:03am — venkatesh

ಬದುಕು ನನಗೇನು ಕಲಿಸಿದೆ ?

ಡಾ. ಎಚ್.ಎನ್. ಹೀಗೆ ಹೇಳುತ್ತಾರೆ.

ಬುದ್ಧ, ಸ್ವಾಮೀವಿವೇಕಾನಂದ, ಗಾಂಧೀಜಿ, ಜವಹರ್ ಲಾಲ್ ನೆಹ್ರೂ ಮತ್ತು ಐನ್ ಸ್ಟೈನ್ ರ ವಿಚಾರಗಳು ನನ್ನ ಮೇಲೆ ಅಗಾಧ ಪ್ರಭಾವ ಬೀರಿವೆ. ಗುರಿಯಶ್ಟೇ ಸಾಧನಗಳೂ ಮುಖ್ಯ ಎಂಬುದನ್ನು ನಾನು ಈ ಮಹಾನ್ ವ್ಯಕ್ತಿಗಳಿಂದ ಕಲಿತೆ. ದೇವರ ಇರುವಿಕೆ, ಇಲ್ಲದಿರುವಿಕೆ, ಜೀವನ ಮೂಲ ಆಕಸ್ಮಿಕವೇ, ಬದುಕಿಗೊಂದು ಉದ್ದೇಶ್ಯ ವಿದೆಯೇ, ಸಾವು ಬದುಕಿನ ಕೊನೆಯೇ ? ಮರಣಾ ನಂತರ ವ್ಯಕ್ತಿತ್ವ ಉಳಿಯಬಲ್ಲುದೇ ? ಎನ್ನುವ ತತ್ವ ಶಾಸ್ತ್ರದ ಸಮಸ್ಯೆಗಳು ಕೇವಲ ನನ್ನ ಇಳಿಗಾಲದ ಯೋಚನೆಗಳಲ್ಲ.
"ನಾನು ನಾಸ್ತಿಕನಾದರೂ ಅಂಧ ಮೂರ್ತಿಬಂಜಕನಲ್ಲ. ಮಾನವ ಕೆಂದ್ರಿತ ಧರ್ಮಗಳಲ್ಲಿ ನನಗೆ ನಂಬಿಕೆ. ಮಾನವೀಯ ಮೌಲ್ಯಗಳಲ್ಲಿ ನಂಬಿಕೆಯಿರುವ ಸ್ವಾರ್ಥರಹಿತ ಪ್ರಾಮಾಣಿಕನಾದ ಆಸ್ತಿಕನನ್ನು-ಅಮಾನವೀಯ , ಅಪ್ರಮಾಣಿಕ ಆತ್ಮ ಕೆಂದ್ರಿತ ವಿಚಾರವಾದಿ ಅಥವಾ ನಾಸ್ತಿಕನಿಗಿಂತ ಉತ್ತಮನೆಂದು ಪರಿಗಣಿಸುತ್ತೇನೆ. ವಿಜ್ಞಾನದಲ್ಲಿ ನನಗೆ ಸಧೃಢವಾದ ನಂಬಿಕೆಯಿದೆ.
ಏಕಕೋಷಜೀವ ಅಮೀಬದಿಂದ ಮೊದಲ್ಗೊಂಡು ಮಾನವನ ವಿಕಾಸ ದಿಜ್ಞ್ಮೂಢ ಗೊಳಿಸುವಂತಹದ್ದು. ಮತ್ತು ವಿಸ್ಮಯಕಾರಿ. ಹಿಮ್ಮರಳಿ ನೋಡಿದಾಗ ನನ್ನ ಜೀವನ ನನ್ನನ್ನೇ ದಿಗ್ಭ್ರಮೆ ಗೊಳಿಸುತ್ತಾದರೂ ಈ ಎಲ್ಲಾ ವಿವಾದಗಳ, ನಿಗೂಢಗಳ, ಒಗಟುಗಳ ನಡುವೆಯೂ ಸಮಸ್ಯೆಯನ್ನು ವೈಚಾರಿಕ ದೃಶ್ಟಿ ಕೋನದಿಂದ ಗಮನಿಸುವುದರಲ್ಲಿ ನನ್ನ ಕಾಲುಗಳು ದೃಢವಾಗಿ ಬೇರೂರಿವೆ. ವೈಜ್ಞಾನಿಕ ಮನೋಭಾವ ಮತ್ತು ಮಾನವೀಯತೆ ಯನ್ನು ಶಿಕ್ಷಣದ ಅವಿಭಾಜ್ಯ ಅಂಗವನ್ನಾಗಿ ಮಾಡುವುದೇ ಕಾಲಾನು ಕಾಲದಿಂದ ನಮ್ಮ ಸಮಾಜವನ್ನು ಕಾಡುತ್ತಿರುವ ಅನೇಕ ಕೆಡಕುಗಳಿಗೆ ಪರಿಹಾರ ಎಂಬುವುದು ನನ್ನ ಬಲವಾದ ಅಭಿಪ್ರಾಯ."
ಡಾ. ಎಚ್. ನರಸಿಂಹಯ್ಯನವರು ನಮಗೆಲ್ಲಾ 'ಎಚ್.ಎನ್' ಎಂದೇ ಚಿರಪರಿಚಿತರು ! ಅವರ ಬದುಕೇ ಒಂದು ಪವಾಡ ! ಪ್ರತಿಭೆ, ಪರಿಶ್ರಮ, ಶ್ರದ್ಧೆಗಳ ತಳಹದಿಯ ಮೇಲೆ ಮೂಡಿರುವ ಸಾರ್ಥಕ ಶಿಲ್ಪ ! ಈಗ ಒಂದು ವರ್ಷದ ಹಿಂದೆ ಅವರು ನಮ್ಮನ್ನು ಅಗಲಿದರು !
ನುಡಿದಂತೆ ನಡೆದ ಅನೇಕ ಶ್ರೇಶ್ಟ ವ್ಯಕ್ತಿಗಳಲ್ಲಿ ಅವರೂ ಒಬ್ಬರು. ನಿಸ್ವಾರ್ಥ ದುಡಿಮೆಯಿಂದ ನಾಡಿಗೇ ಮಾದರಿಯಾಗಿರುವ ಶಿಕ್ಶಣ ಸಂಸ್ಥೆಗಳನ್ನು ಕಟ್ಟಿ ಬೆಳಸಿದ್ದಾರೆ. ಅಂತಹ ಪುರುಷೋತ್ತಮರಿಗೇ ನಮ್ಮ ನಮನಗಳು !

  • ಚಿಂತನೆ
~.~
  • Login or register to post comments
  • 708 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 20, 2006 - 1:31am — nimmava

ಆಗಲೇ ಒಂದು ವರ್ಷವಾಗಿ ಹೋಯಿತೇ?

nimmava's picture

ಪ್ರಿಯ ವೆಂಕಟೇಶ್,

ನಾನು ನರಸಿಂಹಯ್ಯನವರ ಜೀವನ ಚರಿತ್ರೆಯನ್ನು ಓದಿದ್ದೇನೆ, ಅಂತಹ ಸರಳ ಸಜ್ಜನರು ಇಂದು ಬಹಳ ವಿರಳ. ನುಡಿದಂತೆ ನಡೆವ ಉದಾರಶೀಲರಾಗಿ (philanthropist) ಅವರೆಂದೂ ಅಮರ.

ಇತಿ,
ನಿಮ್ಮವ
antaranga.blogspot.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
April 20, 2006 - 5:26am — venkatesh

ಡಾ. ಎಚ್. ಎನ್. ಬಗ್ಗೆ, ಒಂದುವರ್ಷ ವಾಗಿ ಹೋಯಿತೆ ?

venkatesh's picture

ಡಾ. ಎಚ್. ಎನ್. ಬಗ್ಗೆ, ಒಂದುವರ್ಷ ವಾಗಿ ಹೋಯಿತೆ ?

ನಮಸ್ಕಾರ. ಇನ್ನೂ ಇಲ್ಲ. ನಾನು ಇತ್ತೀಚೆಗೆ ಅವರ 'ತೆರೆದ ಮನ' ಎಂಬ ಪುಸ್ತಕವನ್ನು ಓದುತ್ತಿದ್ದೆ. ಅದನ್ನು ನೋಡಿದಾಗ ನೆನಪುಗಳು ಕಾಡಿ ಅವರ ಕೆಲವು ವಾಕ್ಯಗಳನ್ನು ಉಧ್ಧರಿಸಿದ್ದೇನೆ. ಅವರು ನಮ್ಮ ಅಣ್ಣ ಹಾಗೂ ತಮ್ಮ ಚಂದ್ರಶೇಖರನಿಗೆ ಮೇಸ್ಟ್ರು. ಅದೆಸ್ಟು ಜನರಿಗೆ ಮೇಸ್ಟ್ರೊ ಅವರು ! ಚಂದ್ರಶೇಖರ್ ನೆನಪಿದೆಯ ಸಾರ್ ? ಎಂದು ಪ್ರಶ್ನಿಸಿದಾಗ, ಕ್ರಿಕೆಟ್ ಚಂದ್ರಶೇಖರನೋ ಅಥವ ಎಚ್.ಆರ್ ಚಂದ್ರಶೇಖರನೊ ? ಎಂದು ಕೇಳಿದ್ದರು. ನೀವು ಅವರ ಅಣ್ಣನೋ, 'ಬಾಪ್ಪ ಕೂತ್ಗೊ' ಎಂದು ಈಗ ಹೇಳಿದಂತಿದೆ !

ವೆಂ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ತಂದೆಯ ದಿನ
  • ಏನ ಬರೆಯಲಿ
  • ಡಾ. ಎ. ಎನ್. ಮೂರ್ತಿರಾಯರು- ದೇವರ ಬಗ್ಗೆ:
  • ಸಮಾಜದ ಇಂದಿನ ರೀತಿ
  • ಏ.... ಔದು ಕಣಣ್ಣೋ, ಅಣ್ಣಾವ್ರು , ಕನಸ್ನಾಗೆ ಬಂದಿದ್ರು .......ನಿಜ್ವಾಗ್ಲು ... !
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
  • ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
  • ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಕಿರಿಮಗ, ಕೊನೆಮಗ ಇದಕ್ಕೆ ಸಂಸ್ಕ್ರುತದಲ್ಲಿ ಏನು?
    October 7, 2008 - 2:22pm
  • createam
    ಉ: ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
    October 7, 2008 - 2:21pm
  • mahesha
    ಉ: ಈ ಬ್ಲಾಗ್‌ ಪೋಸ್ಟಿಗೆ ಹೆಸರಿಲ್ಲ.
    October 7, 2008 - 2:16pm
  • savithasr
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 2:15pm
  • anivaasi
    ಉ: ಈ ಬ್ಲಾಗ್‌ ಪೋಸ್ಟಿಗೆ ಹೆಸರಿಲ್ಲ.
    October 7, 2008 - 2:08pm
  • mahesha
    ಉ: ಕಡೇಹುಟ್ಟು
    October 7, 2008 - 1:51pm
  • mahesha
    ಉ: ಕಡೇಹುಟ್ಟು
    October 7, 2008 - 1:48pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:45pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:39pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:35pm
ಇನ್ನಷ್ಟು
ಈಗಿನಂತೆ 16 ಸದಸ್ಯರು ಮತ್ತು 300 ಅತಿಥಿಗಳು ಆನ್ಲೈನ್ ಇರುವರು.


ಪ್ರಶ್ನೆಮಾಡುವುದನ್ನು ನಿಲ್ಲಿಸದಿರುವುದು ಅತ್ಯಂತ ಮುಖ್ಯ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator