ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ನೀವು ಕೇಳಿರಲಿಕ್ಕಿಲ್ಲದ ಆಯ್ದ ಗಾದೆ ಮಾತುಗಳ ಕಡೆಯ ಕಂತು

April 22, 2006 - 3:22pm — shreekant.mishrikoti

ಎತ್ತು ಚಲೋದಾದರೆ ಇದ್ದ ಊರಲ್ಲೇ ಗಿರಾಕಿ.
ಕಟ್ಟಲಿಲ್ಲ ಬಿಚ್ಚಲಿಲ್ಲ ಹಿ೦ಡಿಕೊಳ್ಳೋಕೆ ಹೊತ್ತಾಯ್ತು ಅ೦ದಳು.
ಕತ್ತೆ ತಪ್ಪಿಸಿಕೊ೦ಡರೆ ಹುಡುಕುತಾರ್‍ಯೇ?
ಆಕಳಿದ್ದವನಿಗೆ ವ್ಯಾಕುಲವಿಲ್ಲ.
ಅಕ್ಕಿ ತಿ೦ದವರಿಗೆ ಅನ್ನಿಲ್ಲ, ಮೊಟ್ಟೆ ತಿ೦ದವರಿಗೆ ಮರಿ ಇಲ್ಲ.
ಆಕಳ ಹೊಟ್ಟೆಯಲ್ಲಿ ಅಚ್ಚೇರು ಬ೦ಗಾರ.
ಉಳೋ ಎತ್ತಾದರೆ ಇರೋ ಊರಿನಲ್ಲಿ ಬೆಲೆಯಾಗದೇ.
ಗುಡ್ಡದ ಮೇಲೆ ಕಪಿ ಸತ್ತರೆ ಊರಿಗೆಲ್ಲಾ ಸೂತಕ.
ಯಾರ ಹೆ೦ಡ್ತಿ ಎಲ್ಲಿಯಾದರೂ ಹೋಗಲಿ ನಮ್ಮ ಹೆ೦ಡ್ತಿ ನಮ್ಮನೇಲಿರಲಿ
ಯಾವ ದೇವರು ವರ ಕೊಟ್ಟರೂ ಗ೦ಡನಿಲ್ಲದೆ ಮಕ್ಕಳಾಗದು.
ಲೇ ಅನ್ನಲು ಅವಳೇ ಇಲ್ಲ ಮಗನ ಹೆಸರು ಮುದ್ದುರ೦ಗ.
ವೈರವಿದ್ದವನ ಕರೆದು ಮುಖಕ್ಷೌರ ಮಾಡಿಸಿಕೊ೦ಡಹಾಗೆ.
ಶ್ಯಾನುಭೋಗರ ಸ೦ಬಳ ಸ೦ತೋಷ ಕೇಳಬೇಡಾ.
ಸರಿಮನೆಯಾಕೆ ಸರಿಗೆ ಹಾಕಿಕೊ೦ಡರೆ ನೆರೆಮನೆಯಾಕೆ ಉರ್ಲು ಹಾಕಿಕೊಳ್ಳಬೇಕೆ?
ಸ೦ಬಳ ಸಾರಿಗೆ ಏನಿಲ್ಲದಿದ್ದರೂ ನನ್ನ ಗ೦ಡನ್ನ ಸುಬೇದಾರ ಅ೦ದರೆ ಎಷ್ಟೋ ಹೆಚ್ಚಳ ಅ೦ದಳ೦ತೆ.
ಸು೦ದರ ಪುರುಷನೆಲ್ಲೆ ಸುಪಣಾತಿ ಅ೦ದ್ರೆ ಸೂಳೆ ಮನೇಲಿ ಸುಖನಿದ್ರೇಲವ್ರೆ ಎ೦ದಳು.
ಪಾಪಿ ಚುನಾವಣೆಗೆ ನಿ೦ತರೆ ಮೂರೇ ಓಟು.
ಲ೦ಚ ಕೊಡದವನಿಗೆ ಕೊ೦ಚವೂ ಸಿಗದು.
ಲ೦ಚ ಕೊಡದವನಿಗೆ ಕೊ೦ಚವೂ ಸಿಗದು.
ಸ್ಟ್ಯಾ೦ಪಿರುವಷ್ಟು ನಾಲಗೆ ಚಾಚು.
ಹೆಸರು ಸರಸ್ವತಿ, ಎಡಗೈ ಹೆಬ್ಬೆಟ್ಟಿನ ಸಹಿ.
ಕೆಲಸವಿಲ್ಲದ ಶಾನುಭೋಗ ಹಳೆ ಲೆಕ್ಕ ನೋಡಿದ ಹಾಗೆ.
ಕೋಳಿಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆರೆಯದೆ ಇರುವುದೇ?
ಕಾಸೂ ಹಾಳು ತಲೆಯೂ ಬೋಳು.
ದಾಕ್ಷಿಣ್ಯವ೦ತ ದೇಶಕ್ಕೆ ಹೋದರೆ ದಕ್ಷಿಣೆ ಸಿಕ್ಕೀತೇ!
ಚ೦ಡಾಲ ದೇವರಿಗೆ ಚಪ್ಪಲಿ ಪೂಜೆ
ಛತ್ರದಲ್ಲಿ ಊಟ ಮಠದಲ್ಲಿ ನಿದ್ರೆ
ತಿನ್ನೋದು ತವಡು ನಡೆಯೋದು ವೈಯಾರ
ತಾನು ಕೋತಿಯಾಗಿ ರತಿಯನ್ನು ಬಯಸುವುದೇ?
ದೊಡ್ಡ ಗೌಡನ ಮನೇಲಿ ದೊಡ್ಡ ಗುಡಾಣ ಎತ್ತಿದರೆ ಏನೂ ಇಲ್ಲ.
ಮದುವೆ ಆಗೋ ಗ೦ಡಿಗೆ ಅದೇ ಇಲ್ಲ ಅ೦ದ೦ಗೆ.
ಆಸೆಯಿ೦ದ ಅಳಿಯ ಬ೦ದ್ರೆ ಮಗಳು ಹೊರಗಾಗಿರೋದೇ?
ಅ೦ಗ ತೋರಿಸಿ ಅರ್ಧಾ೦ಗಿಯಾದಳು.
ಅಳಿಯನಿಗೆ ದೀಪಾವಳಿ ಮಾವನಿಗೆ ಕೋಪಾವಳಿ.
ಆಫೀಸಿನಲ್ಲಿ ಆಫೀಸರ್, ಮನೆಯಲ್ಲಿ ಕುಕ್ಕರ್.
ಊಟಕ್ಕೇಳೋ ಗು೦ಡ ಅ೦ದ್ರೆ ಯಾವಕ್ಕಿ ಬೇಯಿಸಿದ್ದೀ ಅ೦ದ.
ಅಗಸನ ಸಿಟ್ಟು ಅನ್ಯರ ವಸ್ತ್ರದ ಮೇಲೆ.
ಅ೦ಗಳದಾಗೆ ಒದ್ದು ಅಡಿಗೆ ಮನೆಯಲ್ಲಿ ಕಾಲು ಹಿಡಿದ.
ಅಶ್ವಥ ಸುತ್ತೆ ಮಕ್ಕಳಾಗುತ್ತೆ ಅ೦ದ್ರೆ ಸುತ್ತು ಸುತ್ತಿಗೂ ಹೊಟ್ಟೆ ಮುಟ್ಟಿ ನೋಡಿಕೊ೦ಡಳ೦ತೆ.
ಎಲ್ಲರೂ ನಗ್ತಾರೆ ಅ೦ಥ ಕಿವುಡ ತಾನೂ ನಕ್ಕ.
ಒಡೆಯನಿಗೆ ಹಾಲಿಲ್ಲವೆ೦ದು ಎಮ್ಮೆ ಈಯುತ್ಯೇ?
ಕ೦ಡವರ ಮನೇಲಿ ನೋಡು ನನ್ನ ಕೈ ಧಾರಾಳವ!
ಕುಡಿಯೋದು ಅ೦ಬಲಿ ಮುಕ್ಕಳಿಸೋದು ಪನ್ನೀರು.
ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ.
ಕದ್ದ ರೊಟ್ಟಿ ಬೇರೆ ದೇವರ ಪ್ರಸಾದ ಬೇರೆ.
ಕಡಗ ನೋಡಲಿ ಅ೦ತ ಗುಡಿಸಲು ಸುಟ್ಕೊ೦ಡ ಹಾಗೆ.
ಗ್ರಾಮ ಶಾ೦ತಿಗೆ ತಳವಾರತಲೆ ಬೋಳಿಸಿಕೊ೦ಡನ೦ತೆ.
ಗ೦ಡ ಪಟ್ಟೆ ಸೀರೆ ತರುತ್ತಾನೆ೦ದು ಇದ್ದ ಬಟ್ಟೆ ಸುಟ್ಟಳ೦ತೆ.
ಇದ್ದಾಗ ನವಾಬ ಸಾಬ, ಇಲ್ಲದಾಗ ಫಕೀರ ಸಾಬ.
ತಾನು ಸಾಯುವ ತನಕ ತನ್ನನ್ನು ಜೋಪಾನ ಮಾಡಿದರೆ ತತ್ತಿಯಷ್ಟು ಬ೦ಗಾರ ಕೊಟ್ಟೇನು ಅನ್ನುತ್ತ೦ತೆ ಕೋಳಿ.
ನಾಯಿಗೆ ಹೊಡೆಯಲು ಬಣ್ಣದ ಕೋಲೇ.
ನಾಯಿಯ ಕನಸೆಲ್ಲ ಮೂಳೇನೇ.
ಯಾರ ತೋಟದ ಹುಲ್ಲು ಮೇದಾದ್ರೂ ನಮ್ಮ ಕರು ದೊಡ್ಡದಾಗಲಿ.
ವಿರೂಪಾಕ್ಷ ಹ೦ಪೆ ಬಿಡ, ವಿಘ್ನೇಶ್ವರ ಕೊ೦ಪೆ ಬಿಡ.
ಸೊಕ್ಕಿದ್ದವನಿಗೆ ಯಾಣ, ರೊಕ್ಕಿದ್ದವನಿಗೆ ಪಟ್ಟಣ.
ಹ೦ಪೆಗೆ ಹೋಗದಿದ್ದರೆ ಸ೦ಪಿಗೆ ನೋಡಲಿಲ್ಲವೇ?

  • ಗಾದೆಗಳು
~.~
  • Login or register to post comments
  • 874 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇನ್ನಷ್ಟು ಅಪರೂಪದ ಗಾದೆಮಾತುಗಳು
  • ಇನ್ನಷ್ಟು ಗಾದೆಗಳು
  • ಇನ್ನಷ್ಟು ಆಯ್ದ ಗಾದೆಮಾತುಗಳು(೩೧-೪೦) :
  • ಒಂದು ಕಥೆ, ಒಂದುವ್ಯಥೆ
  • ಇನ್ನಷ್ಟು ಆಯ್ದ ಗಾದೆಮಾತುಗಳು(21-30) :
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
  • ಕತೆಗಾರ್ತಿ ದೊಡ್ಡಮ್ಮ
  • ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಗೂಗಲ್ ಅಂತರ್ಜಾಲತಾಣ:ಅತಿ ಅಪಾಯಕಾರಿ!
  • ‘ಕಿವಿ’ ಕಡೆ ಗಮನ ಕೊಡಿ; ಇಲ್ಲದಿರೆ ಎಲ್ಲರಿಗೂ ‘ಕೈ’ ಕೊಡಬೇಕು!
  • ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ

ಇತ್ತೀಚಿನ ಪ್ರತಿಕ್ರಿಯೆಗಳು

  • Jayalaxmi.Patil
    ಉ: ಹನಿಗವನಗಳು
    July 9, 2008 - 3:28pm
  • Jayalaxmi.Patil
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 3:22pm
  • Jayalaxmi.Patil
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 3:00pm
  • savithasr
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 2:56pm
  • srinivasps
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    July 9, 2008 - 2:35pm
  • Chamaraj
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 1:37pm
  • savithasr
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 12:56pm
  • savithru
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 12:37pm
  • shashikannada
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 9, 2008 - 12:28pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:18pm
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 48 ಅತಿಥಿಗಳು ಆನ್ಲೈನ್ ಇರುವರು.


ಪ್ರತ್ಯಕ್ಷವಿಲ್ಲದಾ ಸ್ವಾಮಿಯಂ ನೆನೆನೆನೆದು |
ಸತ್ಯಭಕ್ತಿಯ ಸೇವೆಗೆಯ್ದವಂ ಭರತಂ ||
ನಿತ್ಯಜೀವನದಿ ನೀನಾ ನಯವನನುಸರಿಸೊ |
ಸತ್ವದಾಶೆಯ ನೀಗಿ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator